ಹೀರೋ ಇಲ್ಲ ಕಥೆಯೇ ಎಲ್ಲಾ… 


Team Udayavani, Nov 2, 2018, 6:00 AM IST

s-26.jpg

ನೀವೇನಾದರೂ ಆಹಾರಪ್ರಿಯರಾಗಿದ್ದರೆ “ಕುಷ್ಕ’ ಎಂಬ ಪದವನ್ನು ಕೇಳಿರುತ್ತೀರಿ. ಈಗ ಯಾಕೆ ಈ “ಕುಷ್ಕ’ದ ಬಗ್ಗೆ ಮಾತು ಅಂತೀರಾ? ಅದಕ್ಕೂ ಒಂದು ಕಾರಣವಿದೆ. ಕನ್ನಡದಲ್ಲಿ “ಕುಷ್ಕ’ ಎಂಬ ಹೆಸರಿನ ಚಿತ್ರವೊಂದು ತಯಾರಾಗುತ್ತಿದೆ. ಇತ್ತೀಚೆಗೆ ಈ ಚಿತ್ರದ ಬಗ್ಗೆ ಒಂದಷ್ಟು ಮಾಹಿತಿ ನೀಡಲು ಪತ್ರಕರ್ತರ ಮುಂದೆ ಬಂದಿದ್ದ ಚಿತ್ರತಂಡ, “ಕುಷ್ಕ’ದ ಹಿಂದಿನ ವಿಶೇಷತೆಗಳ ಬಗ್ಗೆ ಮಾತನಾಡಿತು. 

“ಕುಷ್ಕ’ ಪಕ್ಕಾ ಮನೋರಂಜನಾತ್ಮಕ ಚಿತ್ರ. ಮನರಂಜನೆಯ ಒಂದಷ್ಟು ಎಳೆಯನ್ನು ಇಟ್ಟುಕೊಂಡು ಅದನ್ನು ನವಿರಾದ ಹಾಸ್ಯದ ಜೊತೆಗೆ ತೆರೆ ಮೇಲೆ ಹೇಳುತ್ತಿದ್ದೇವೆ ಎನ್ನುತ್ತದೆ “ಕುಷ್ಕ’ ಚಿತ್ರತಂಡ. ಯಾವುದೇ ಪಾತ್ರದ ವೈಭವೀಕರಣವಿಲ್ಲದೆ ನಮ್ಮ ನಡುವೆಯೇ ನಡೆಯಬಹುದಾದ ಒಂದಷ್ಟು ಘಟನೆಗಳನ್ನು ಆಧರಿಸಿ ಚಿತ್ರವನ್ನು ತೆರೆಮೇಲೆ ತೆರೆದಿಡಲಿದೆಯಂತೆ. ಇನ್ನು ಈ ಚಿತ್ರದಲ್ಲಿ ಯಾವುದೋ ಒಂದು ಪಾತ್ರ ಹೀರೋ ಅಂತ ಇಲ್ಲವಂತೆ. ಕಥೆಗೆ ಮತ್ತು ಸನ್ನಿವೇಶಕ್ಕೆ ತಕ್ಕಂತೆ ಪ್ರತಿಯೊಂದು ಪಾತ್ರಗಳು ತಮ್ಮದೇ ಆದ ಮಹತ್ವನ್ನು ಪಡೆದುಕೊಳ್ಳಲಿವೆಯಂತೆ. ಆದರೆ ಇನ್ನೊಂದು ವಿಶೇಷವೆಂದರೆ, ಚಿತ್ರದಲ್ಲಿ ಖಳನಾಯಕನ ಪಾತ್ರವೊಂದು ಇರಲಿದ್ದು ಅದನ್ನು ಮಠ ಗುರು ಪ್ರಸಾದ್‌ ನಿರ್ವಹಿಸುತ್ತಿದ್ದಾರೆ. ಈಗಾಗಲೇ ಕನ್ನಡದಲ್ಲಿ ಒಂದಷ್ಟು ವೆಬ್‌ ಸೀರಿಸ್‌ಗಳನ್ನು ನಿರ್ದೇಶಿಸುವ ಮೂಲಕ ಸೋಷಿಯಲ್‌ ಮೀಡಿಯಾಗಳಲ್ಲಿ ಪರಿಚಿತರಾಗಿರುವ ನವ ಪ್ರತಿಭೆ ವಿಕ್ರಮ್‌ ಯೋಗಾನಂದ್‌ “ಕುಷ್ಕ’ ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.  “ಸ್ಮಾರ್ಟ್‌ ಸ್ಕ್ರೀನ್‌ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ ಪ್ರತಾಪ್‌ ರೆಡ್ಡಿ, ಮಧು ಗೌಡ, ಕೈಲಾಶ್‌ ಪಾಲ್‌ ಮತ್ತು ವಿಕ್ರಮ್‌ ಯೋಗಾನಂದ್‌ ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. 

“ಮಠ’ ಗುರು ಪ್ರಸಾದ್‌, ಕೈಲಾಶ್‌ ಪಾಲ್‌, ಚಂದನ್‌ ಗೌಡ, ಶೋಭರಾಜ್‌, ಅರುಣ್‌ ಕುಮಾರ್‌, ಟೋನಿ ವೇವ್‌, ರಾಕ್‌ಲೈನ್‌ ಸುಧಾಕರ್‌, ಜೀವನ್‌ ಲೈಫಿ, ಅರುಣ್‌, ಕಿರಣ್‌ ಆದಿತ್ಯ ಚಿತ್ರದ ಇತರೆ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಮಾಧುರಿ ಬ್ರಗಾಂಜ, ಸಂಜನಾ ಡಿ.ಎ ಎಂಬ ಇಬ್ಬರು ಅಚ್ಚ ಕನ್ನಡದ ಹುಡುಗಿಯರು ಈ ಚಿತ್ರದ ಮೂಲಕ ನಾಯಕ ನಟಿಯರಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಚಿತ್ರಕ್ಕೆ ಬಾಲರಾಜ್‌ ಚಿತ್ರಕಥೆ ಬರೆದಿದ್ದಾರೆ. ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು, ಅಭಿಲಾಶ್‌ ಗುಪ್ತ ಸಂಗೀತ ಸಂಯೋಜನೆಯ ಹಾಡುಗಳಿಗೆ ರಾಮಕೃಷ್ಣ ರಣಗಟ್ಟಿ ಸಾಹಿತ್ಯವಿದೆ. ಇನ್ನು ಚಿತ್ರಕ್ಕೆ ಸ್ವತಃ ನಿರ್ದೇಶಕ ವಿಕ್ರಮ್‌ ಯೋಗಾನಂದ್‌ ಅವರೇ ಛಾಯಾಗ್ರಹಣ ಮತ್ತು ಸಂಕಲನವನ್ನು ಮಾಡಿದ್ದಾರೆ. ಸದ್ಯ “ಕುಷ್ಕ’ ಚಿತ್ರದ ಕೆಲಸಗಳು ಆರಂಭವಾಗಿದ್ದು, ಚಿತ್ರತಂಡದ ಯೋಜನೆಯ ಪ್ರಕಾರ ಮುಂದಿನ ಮಾರ್ಚ್‌ ಅಥವಾ ಏಪ್ರಿಲ್‌ ವೇಳೆಗೆ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Movies: ಹಿಟ್‌ ರೇಟ್‌ ಮೇಲೆ; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Kannada Movies: ಹಿಟ್‌ ಮೇಲೆ ರೇಟ್‌; ಸ್ಯಾಟಲೈಟ್‌, ಓಟಿಟಿಯ ಹೊಸ ಧೋರಣೆ

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Sandalwood; ಕನ್ನಡದಲ್ಲಿ ಇಂದು ತೆರೆಗೆ ಬರುತ್ತಿದೆ ನಾಲ್ಕು ಚಿತ್ರಗಳು

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Raj B Shetty; ಚಂದನವನಕ್ಕೆ ರಾಜ್‌ ಶೆಟ್ಟಿ ‘ಪಂಚ ಮಂತ್ರ’

Kannada Movie: ಅಖಾಡಕ್ಕೆ ‘ಬ್ಯಾಕ್‌ ಬೆಂಚರ್ಸ್‌’: ನಗುವೇ ಪರಮ ಉದ್ದೇಶ

Kannada Movie: ಅಖಾಡಕ್ಕೆ ‘ಬ್ಯಾಕ್‌ ಬೆಂಚರ್ಸ್‌’: ನಗುವೇ ಪರಮ ಉದ್ದೇಶ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.