ಸಿನಿಮಾ ಮಂದಿಯ 100 ಕನಸು: ಹೊಸದೇನಿಲ್ಲ, ಹಳೆಯದೇ ಎಲ್ಲಾ …


Team Udayavani, Aug 27, 2021, 9:02 AM IST

ಸಿನಿಮಾ ಮಂದಿಯ 100 ಕನಸು: ಹೊಸದೇನಿಲ್ಲ, ಹಳೆಯದೇ ಎಲ್ಲಾ …

ಆಗಸ್ಟ್‌ ಕೊನೆಯ ತಿಂಗಳಿನಲ್ಲಾದರೂ ಒಂದಷ್ಟು ಸಿನಿಮಾಗಳು ಬಿಡುಗಡೆಯಾಗಬಹುದೆಂಬ ನಿರೀಕ್ಷೆ ಸುಳ್ಳಾಗಿದೆ. ಈ ವಾರ ಯಾವುದೇ ಹೊಸ ಸಿನಿಮಾ ಬಿಡುಗಡೆ ಯಾಗುತ್ತಿಲ್ಲ. ಈ ಮೂಲಕ ಸಿನಿಮಾ ಮಂದಿ ರಿಲೀಸ್‌ನಿಂದ ದೂರ ಉಳಿದಿದ್ದಾರೆ. ಇದಕ್ಕೆಕಾರಣ ಶೇ50 ಸೀಟು ಭರ್ತಿ ಅವಕಾಶ. ಹೌದು, ಶೇಕಡಾ 50ರಷ್ಟು ಪ್ರೇಕ್ಷಕರ ಪ್ರವೇಶಾವಕಾಶದಲ್ಲಿ ತೆರೆಗೆ ಬರಲು ಈ ತಿಂಗಳ ಆರಂಭದಲ್ಲಿ ಒಂದಷ್ಟು ಹೊಸಬರ ಸಿನಿಮಾಗಳು ಆಸಕ್ತಿ ತೋರಿಸಿದ್ದವು.

ಅದರಂತೆಕಳೆದ ವಾರ “ಗ್ರೂಫಿ’, “ಶಾರ್ದೂಲ’, “ಜೀವ್ನಾನೆ ನಾಟ್ಕ ಸ್ವಾಮಿ’ ಸೇರಿದಂತೆ ಮೂರು ಸಿನಿಮಾಗಳು ಬಿಡುಗಡೆಯಾಗಿ ತೆರೆಗೆ ಬಂದಿದ್ದವು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಶೇಕಡಾ 50ರಷ್ಟು ಪ್ರೇಕ್ಷಕರ ಪ್ರವೇಶಾವಕಾಶದಲ್ಲಿ ಸಿನಿಮಾಗಳ ಪ್ರಮೋಶನ್‌ ಮಾಡಿ, ರಿಲೀಸ್‌ ಮಾಡುವುದು ನಿರ್ಮಾಪಕರು, ವಿತರಕರು ಮತ್ತು ಪ್ರದರ್ಶಕರಿಗೂ ಹೊರೆಯಾಗಿ ಪರಿಣಮಿಸಿದೆ.

ಅಲ್ಲದೆ ನಿಯಮಿತ ಪ್ರವೇಶಾವಕಾಶವಿರುವುದರಿಂದ ಸಿನಿಮಾದ ಗಳಿಕೆ ಲೆಕ್ಕಚಾರ ಕೂಡ ತಲೆಕೆಳಗಾಗುತ್ತಿದೆ. ಹೀಗಾಗಿ ಈ ವಾರ ಕೂಡ ಹೊಸ ಸಿನಿಮಾಗಳು ಬಿಡುಗಡೆಯಾಗುತ್ತಿಲ್ಲ. ಥಿಯೇಟರ್‌ ಗಳಲ್ಲಿ100% ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಈ ವಾರಕೂಡ ಹುಸಿಯಾಗಿದ್ದರಿಂದ, ಬಹುತೇಕ ಈ ವಾರ ಬಿಡುಗಡೆಗೆ ರೆಡಿಯಾಗಿದ್ದ ಲೂಸ್‌ಮಾದ ಯೋಗಿ ಅಭಿನಯದ “ಲಂಕೆ’ ಸೇರಿದಂತೆ, ಇನ್ನೂ ಎರಡು-ಮೂರು ಸಿನಿಮಾಗಳು ಮತ್ತು ಅನಿರ್ಧಿಷ್ಟವಧಿಗೆ ತಮ್ಮ ಬಿಡುಗಡೆಯನ್ನು ಮುಂದೂಡಿಕೊಂಡಿವೆ

ಮತ್ತೂಂದೆಡೆ, ಸರ್ಕಾರ ಥಿಯೇಟರ್‌ಗಳಲ್ಲಿ ಶೇಕಡಾ ನೂರರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶಕೊಡುವವರೆಗೆ ತಮ್ಮ ಸಿನಿಮಾಗಳ ಬಿಡುಗಡೆ ಬಗ್ಗೆ ಯೋಚಿಸುವುದಿಲ್ಲ ಎಂದು ಬಹುತೇಕ ಬಿಗ್‌ ಬಜೆಟ್‌ ಮತ್ತು ಸ್ಟಾರ್ ಸಿನಿಮಾಗಳ ನಿರ್ಮಾಪಕರು ನಿರ್ಧಾರಕ್ಕೆ ಬಂದಿದ್ದಾರೆ. ಈಗಾಗಲೇ ಹಲವು ನಿರ್ಮಾಪಕರು ಈ ಬಗ್ಗೆ ಅಧಿಕೃತ ಘೋಷಣೆಯನ್ನೂ ಮಾಡಿದ್ದಾರೆ. ಹೀಗಾಗಿ ಶೇಕಡಾ ನೂರರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶ ಸಿಗುವವರೆಗೂ ಬಹುತೇಕ ದೊಡ್ಡ ಸಿನಿಮಾಗಳು ತೆರೆಗೆ ಬರುವ ಸಾಧ್ಯತೆ ತೀರಾ ಕಡಿಮೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಅಡ್ಡಕತ್ತರಿಗೆ ಸಿಕ್ಕಿದಂತಾಗಿರುವುದು ಹೊಸಬರ ಸಿನಿಮಾಗಳು.

ಇತ್ತ ಶೇಕಡಾ 50ರಷ್ಟು ಪ್ರೇಕ್ಷಕರ ಪ್ರವೇಶಾವಕಾಶದಲ್ಲಿ ತೆರೆಗೆ ಬರಲು ಸಾಧ್ಯವಾಗದೇ, ಅತ್ತ 100% ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶ ಸಿಗುವವರೆಗೂ ಕಾಯಲೂ ಆಗದೆ, ಸಿನಿಮಾ ಬಿಡುಗಡೆ ಮಾಡುವುದು ಒಂಥರಾ ಬಾಯಲ್ಲಿ ಬಿಸಿ ತುಪ್ಪವಿಟ್ಟುಕೊಂಡಂತೆ ಎಂಬಂತಾಗಿದೆ!

ಇದನ್ನೂ ಓದಿ:ಮೈಸೂರು ದೋಸೆವಾಲನಿಂದ ಲಕ್ಷಾಂತರ ವಂಚನೆ!: ಒಂಬತ್ತು ವರ್ಷದಿಂದ ಮನೆಗೇ ಬಾರದ ಈ ವಂಚಕ!

ಇನ್ನು ಥಿಯೇಟರ್‌ಗಳಲ್ಲಿ ಶೇಕಡಾ ನೂರರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶ ಕೊಡಿಸಲು ಸರ್ಕಾರದ ಮನ ಒಲಿಸುವ ಸಿನಿಮಂದಿಯ ಕಸರತ್ತು ಮುಂದುವರೆದಿದ್ದು, ಸೆಪ್ಟೆಂಬರ್‌ ಮೊದಲ ವಾರದ ಬಳಿಕ ಚಿತ್ರರಂಗದ ಬೇಡಿಕೆಯನ್ನು ಸರ್ಕಾರ ಈಡೇರಿಸಬಹುದು ಎಂಬ ನಿರೀಕ್ಷೆ ಇದೆ. ಹಾಗೇನಾದರೂ ಆದರೆ ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌ ಅಭಿನಯದ “ಭಜರಂಗಿ-2′ ಸೇರಿದಂತೆ ಒಂದಷ್ಟು ಬಿಗ್‌ ಬಜೆಟ್‌ನ, ಸ್ಟಾರ್‌ ನಟರ ಸಿನಿಮಾಗಳು ಬಿಡುಗಡೆಯಾಗಬಹುದು ಎಂಬ ಮಾತುಗಳೂ ಚಿತ್ರರಂಗದಲ್ಲಿ ಕೇಳಿಬರುತ್ತಿದೆ.

ಅದೇನೆ ಇರಲಿ, ಸದ್ಯದ ಮಟ್ಟಿಗಂತೂ ಥಿಯೇಟರ್‌ಗಳಲ್ಲಿ ಶೇಕಡಾ ನೂರರಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶ ಯಾವಾಗ ಅನ್ನೋದು ದೊಡ್ಡ ಪ್ರಶ್ನೆಯಾಗಿದ್ದು, ಸರ್ಕಾರದ ನಿರ್ಧಾರಕ್ಕಾಗಿ ನಿರ್ಮಾಪಕರಿಂದ, ಪ್ರೇಕ್ಷಕರಾದಿಯಾಗಿ ಎಲ್ಲರೂ ಕಾಯುತ್ತಿರುವುದಂತೂ ಸುಳ್ಳಲ್ಲ.

ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

nenapirali prem as police in new movie

Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

Harshika Poonachha ದಂಪತಿ ಮೇಲೆ ಹಲ್ಲೆ; ಇಬ್ಬರ ವಿರುದ್ಧ ಕೇಸ್‌ ದಾಖಲು

ramarasa kannada movie

Kannada Cinema; ‘ರಾಮರಸ’ ಹಿಂದೆ ಗುರು ಆ್ಯಂಡ್‌ ಟೀಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.