ಥ್ರಿಲ್ಲರ್ ಹಾದಿಯಲ್ಲಿ ಹರಿಪ್ರಿಯಾ

ಸೆಂಟಿಮೆಂಟ್‌ಗೂ ಇಲ್ಲಿ ಜಾಗವಿದೆ ...

Team Udayavani, May 17, 2019, 7:00 AM IST

147

ಕನ್ನಡದಲ್ಲಿ ತಾಯಿ-ಮಗಳ ಸಂಬಂಧ ಕುರಿತು ಅನೇಕ ಚಿತ್ರಗಳು ಬಂದಿವೆ. ಆ ಸಾಲಿಗೆ “ಡಾಟರ್‌ ಆಫ್ ಪಾರ್ವತಮ್ಮ’ ಹೊಸ ಸೇರ್ಪಡೆ. ಹಾಗಂತ, ಇದು ರೆಗ್ಯುಲರ್‌ ಪ್ಯಾಟ್ರನ್‌ ಸಿನಿಮಾವಲ್ಲ. ನಾಯಕಿ ಪ್ರಧಾನವಾಗಿರುವ ಚಿತ್ರದಲ್ಲಿ ಸಸ್ಪೆನ್ಸ್‌, ಥ್ರಿಲ್ಲರ್‌ ಹೈಲೈಟ್‌. ಚಿತ್ರ ಮೇ.24 ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಚಿತ್ರತಂಡ ಚಿತ್ರದ ಟ್ರೇಲರ್‌ ಹಾಗೂ ಆಡಿಯೋ ಬಿಡುಗಡೆ ಮಾಡಿದೆ. ಟ್ರೇಲರ್‌ ಬಿಡುಗಡೆ ಮಾಡಿ ಶುಭ ಹಾರೈಸಿದ ನಟ “ಡಾಲಿ’ ಧನಂಜಯ್‌,”ಒಳ್ಳೆಯ ತಂಡವಿದ್ದರೆ, ಒಳ್ಳೆಯ ಚಿತ್ರ ಆಗುವುದರಲ್ಲಿ ಸಂಶಯವಿಲ್ಲ. ಟ್ರೇಲರ್‌ ನೋಡಿದಾಗ, ಒಳ್ಳೆಯ ಥ್ರಿಲ್ಲರ್‌ ನಿರೀಕ್ಷಿಸಬಹುದು. ನಾನು ಸಾಹಿತಿ ಅಲ್ಲ. ಕೆಲವೊಮ್ಮೆ ಖುಷಿಯಾದಾಗ, ಗೊಂದಲ ಇದ್ದಾಗ, ತನ್ನೊಳಗಿನ ಭಾವನೆಗಳನ್ನು ಪೇಪರ್‌ ಮೇಲೆ ಅಕ್ಷರ ರೂಪದಲ್ಲಿ ತೋರಿಸಿಕೊಳ್ಳುತ್ತಿದ್ದೆ. ಗೆಳೆಯರು ಹಾಡು ಬರೆದುಕೊಡು ಅಂದಾಗ, ಭಯವಾಯ್ತ. ಆದರೂ, ಟ್ಯೂನ್‌ ಚೆನ್ನಾಗಿದ್ದರಿಂದ ಹಾಡು ಬರೆದುಕೊಟ್ಟೆ. ಹರಿಪ್ರಿಯಾ ಅವರ 25 ನೇ ಚಿತ್ರವಿದು. ಅವರು ರೊಚ್ಚಿಗೆದ್ದು, ಸಿನಿಮಾ ಮೇಲೆ ಸಿನಿಮಾ ಮಾಡುತ್ತಿದ್ದಾರೆ. ಮೇ.23 ಕ್ಕೆ ಸುಮಮ್ಮ ಮಿಂಚಲಿ, ಮೇ.24 ರಂದು “ಪಾರ್ವತಮ್ಮ’ ಮಾತಾಡಲಿ’ ಅಂದರು ಧನಂಜಯ್‌.

ಹರಿಪ್ರಿಯಾ ಅವರಿಗೆ ಇದು 25 ನೇ ಚಿತ್ರ. ಸಹಜವಾಗಿಯೇ ಅವರಿಗೆ ಖುಷಿ. “ನಾಯಕಿ ಮೇಲೆ ನಂಬಿಕೆ ಇಟ್ಟು, ಈ ರೀತಿಯ ಸಿನಿಮಾ ಮಾಡುವ ನಿರ್ಮಾಪಕರು ಕಮ್ಮಿ. ಇಲ್ಲಿ ನಂಬಿಕೆ ಇಟ್ಟು ಚಿತ್ರ ಮಾಡಿದ್ದಾರೆ. ಚಿತ್ರದ ಶೀರ್ಷಿಕೆಯೇ ಅರ್ಧ ಗೆಲುವು ಕೊಟ್ಟಿದೆ. ಇನ್ನರ್ಧ ಜನರು ನೋಡಿ ಗೆಲ್ಲಿಸಬೇಕು. ಇದು ಅಮ್ಮ-ಮಗಳ ಕುರಿತಾದ ಕಥೆ ಹೊಂದಿದ್ದರೂ, ಸಾಕಷ್ಟು ಥ್ರಿಲ್ಲಿಂಗ್‌ ಅಂಶಗಳಿವೆ. ಸುಮಲತಾ ಅಮ್ಮನ ಜೊತೆ ನಟಿಸಿದ್ದು ಮರೆಯದ ಅನುಭವ. ನಾನಿಲ್ಲಿ ವೈದೇಹಿ ಎಂಬ ತನಿಖಾಧಿಕಾರಿ ಪಾತ್ರ ಮಾಡಿದ್ದೇನೆ. ಫೈಟ್ಸ್‌ ಕೂಡ ಇದೆ. ಹಾಗಂತ, ಬಿಲ್ಡಪ್ಸ್‌ ಇಲ್ಲ. ಎಲ್ಲವೂ ನ್ಯಾಚ್ಯುರಲ ಆಗಿದೆ’ ಅಂದರು ಹರಿಪ್ರಿಯಾ.

ನಿರ್ಮಾಪಕ ಶಶಿಧರ್‌ ಕೆ.ಎಂ. ಅವರಿಗೆ ಇದು ಮೊದಲ ಚಿತ್ರ. ಹಲವು ಚಿತ್ರಗಳಲ್ಲಿ ನಟನೆ ಮಾಡುತ್ತಿದ್ದ ಅವರಿಗೆ ಸಾಕಷ್ಟು ಅನುಭವ ಇದೆ. ಆ ಕಾರಣದಿಂದ “ಡಾಟರ್‌ ಆಫ್ ಪಾರ್ವತಮ್ಮ’ ನಿರ್ಮಾಣಕ್ಕಿಳಿದಿದ್ದಾರೆ. ಈ ಚಿತ್ರ ಮಾಡಿದ್ದು ಅವರಿಗೆ ಹೆಮ್ಮೆಯ ವಿಷಯವಂತೆ. ಆ ಬಗ್ಗೆ ಹೇಳುವ ಅವರು, “ಸುಮಲತಾ ಅವರು ಕಥೆ ಒಪ್ಪಿದ್ದು ಮೊದಲ ಗೆಲುವು, ಶೀರ್ಷಿಕೆ ಇಟ್ಟಾಗ ಸಿಕ್ಕ ಮೆಚ್ಚುಗೆಯೇ ಚಿತ್ರತಂಡದ ಹುಮ್ಮಸ್ಸನ್ನು ಹೆಚ್ಚಿಸಿತ್ತು. ಅಂಬರೀಶ್‌ ಅಣ್ಣ ಅವರ ಜೊತೆ ಒಮ್ಮೆ ಮಾತನಾಡಿ­ದಾಗ, ಚೆನ್ನಾಗಿ ಸಿನಿಮಾ ಮಾಡಿ, ನನ್ನ ಆಶೀರ್ವಾದ ಸದಾ ಇರುತ್ತೆ ಅಂದಿದ್ದರು. ಅವರ ಆಶೀರ್ವಾದದಿಂದ ಚಿತ್ರಕ್ಕೆ ಒಳ್ಳೆಯದಾಗುತ್ತೆ ಎಂಬ ನಂಬಿಕೆ ಇದೆ. ನಾವು ಎಷ್ಟೇ ಪ್ರೀತಿಯಿಂದ ಕಷ್ಟ ಪಟ್ಟು ಸಿನಿಮಾ ಮಾಡಿದರೂ, ಅದು ಎಲ್ಲರನ್ನೂ ತಲುಪಲು ಮಾಧ್ಯಮ, ಪತ್ರಕರ್ತರು ಕಾರಣ. ನಿಮ್ಮ ಸಹಕಾರ ಬೇಕು’ ಅಂದರು ಶಶಿಧರ್‌.

ಸಂಗೀತ ನಿರ್ದೇಶಕ ಮಿದುನ್‌ ಮುಕುಂದನ್‌, “ಒಂದು ಮೊಟ್ಟೆಯ ಕಥೆ’ ಬಳಿಕ ಖುಷಿಯಿಂದ ಮಾಡಿದ ಚಿತ್ರವಿದು. ಸಾಕಷ್ಟು ಪ್ರಯೋಗ ಇಲ್ಲಿ ಮಾಡಲಾಗಿದೆ. ಎರಡು ಹಾಡು ಚೆನ್ನಾಗಿ ಮೂಡಿಬಂದಿವೆ. ನಿರ್ದೇಶಕ, ನಿರ್ಮಾಪಕರು ಕೊಟ್ಟ ಫ್ರೀಡಮ್‌ನಿಂದಾಗಿ, ಕೆಲಸ ಚೆನ್ನಾಗಿ ಮಾಡಲು ಸಾಧ್ಯವಾಗಿದೆ’ ಅಂದರು ಅವರು.

ನಿರ್ದೇಶಕ ಶಂಕರ್‌, “ಥ್ರಿಲ್ಲರ್‌ ಜೊತೆ ಅಮ್ಮ, ಮಗಳ ಸಂಬಂಧ ಚಿತ್ರದ ಹೈಲೈಟ್‌. ನಾಯಕಿ ಪ್ರಧಾನ ಚಿತ್ರ ಇದಾಗಿದ್ದರೂ, ಪಕ್ಕಾ ಕಮರ್ಷಿಯಲ್‌ ಚಿತ್ರವಾಗಿ ಮೂಡಿಬಂದಿದೆ. ಬೆಂಗಳೂರಲ್ಲೇ ಚಿತ್ರೀಕರಣ ನಡೆದಿದೆ. ನನ್ನ ಕಥೆ ಒಪ್ಪಿ ಮಾಡಿದ ಸುಮಮ್ಮ, ಹರಿಪ್ರಿಯಾ ಹಾಗೂ ಅವಕಾಶ ಕೊಟ್ಟ ನಿರ್ಮಾಪಕರು, ಹಾಡು ಬರೆದುಕೊಟ್ಟ ಧನಂಜಯ್‌ ಮತ್ತು ಚಿತ್ರ ಚೆನ್ನಾಗಿ ಮೂಡಿಬರಲು ಹಗಲಿರುಳು ಶ್ರಮಿಸಿದ ಚಿತ್ರತಂಡಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು ಶಂಕರ್‌. ಅಂದು ಸೂರಜ್‌ಗೌಡ, ಪ್ರಭು, “ತರಂಗ’ ವಿಶ್ವ ಸಿನಿಮಾ ಕುರಿತು ಮಾತನಾಡಿದರು. ನಿರ್ಮಾಪಕರಾದ ಕೃಷ್ಣ, ಮಧು, ಸಂದೀಪ್‌ ಇತರರು ಇದ್ದರು.

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.