ಎಸ್ಟೇಟ್‌ನಲ್ಲಿ ಹಾಡು-ಪಾಡು


Team Udayavani, Jul 13, 2018, 6:00 AM IST

b-30.jpg

“ಇಲ್ಲಿ ನಂದೇನು ಇಲ್ಲ. ಎಲ್ಲವೂ ಚಿತ್ರತಂಡದ್ದೇ …’
ಹಾಗಂತ ಚಿತ್ರದ ಸಂಪೂರ್ಣ ಕ್ರೆಡಿಟ್‌ನ್ನು ಚಿತ್ರತಂಡದವರಿಗೇ ನೀಡಿಬಿಟ್ಟರು ನಿರ್ಮಾಪಕ ಕುಮಾರ್‌. “ಮೂರ್ಕಲ್‌ ಎಸ್ಟೇಟ್‌’ ಎಂಬ ಚಿತ್ರ ಮಾಡಿದ್ದಾರೆ ಅವರು. ಚಿತ್ರದ ಕೆಲಸಗಳೆಲ್ಲಾ ಮುಗಿದಿದ್ದು, ಇತ್ತೀಚೆಗೆ ಟ್ರೇಲರ್‌ ಮತ್ತು ಹಾಡುಗಳನ್ನು ಬಿಡುಗಡೆ ಮಾಡಲಾಯಿತು. ಟ್ರೇಲರ್‌ ಮತ್ತು ಹಾಡುಗಳನ್ನು ಬಿಡುಗಡೆ ಮಾಡುವುದಕ್ಕೆ ಹಿರಿಯ ನಟ ದೊಡ್ಡಣ್ಣ ಮತ್ತು “ಟಗರು’ ನಿರ್ಮಾಪಕ ಕೆ.ಪಿ. ಶ್ರೀಕಾಂತ್‌ ಬಂದಿದ್ದರು. ಜೊತೆಗೆ “ಮೆರವಣಿಗೆ’ ನಿರ್ಮಾಪಕ ಕಾಂತರಾಜ್‌ ಸೇರಿದಂತೆ ಇನ್ನಷ್ಟು ಜನ ವೇದಿಕೆಯ ಮೇಲಿದ್ದರು. ಅವರೆಲ್ಲರ ಸಮ್ಮುಖದಲ್ಲಿ ಟ್ರೇಲರ್‌ ಮತ್ತು ಹಾಡುಗಳು ಬಿಡುಗಡೆಗೊಂಡವು.

ದೊಡ್ಡಣ್ಣ ಅವರನ್ನು ಅಂದು ಸಮಾರಂಭಕ್ಕೆ ಬರುವಂತೆ ಮಾಡಿದ್ದು ಭದ್ರಾವತಿ ಎಂಬ ಊರು. ನಿರ್ಮಾಪಕರು ಅದೇ ಊರಿನವರು. ಇನ್ನು ದೊಡ್ಡಣ್ಣ ಸಹ ಅಲ್ಲೇ ಕೆಲಸ ಮಾಡಿದ್ದವರು. ಅದೇ ಪ್ರೀತಿಯಿಂದ ಬಂದಿದ್ದ ದೊಡ್ಡಣ್ಣ, “ಇವತ್ತು ಹೊಸ ಪೀಳಿಗೆ ಹೊಸ ಹೊಸ ಚಿತ್ರಗಳನ್ನು ಮಾಡುತ್ತಿದೆ. ಅನಕೃ ಅವರು ಹೇಳಿದಂತೆ, ಕಲೆ ಎಲ್ಲರನ್ನೂ ಕೈಬೀಸಿ ಕರೆಯುತ್ತದೆ, ಕೆಲವರನ್ನು ಮಾತ್ರ ಅಪ್ಪಿಕೊಳ್ಳುತ್ತದೆ. ಇವತ್ತು ಬಹಳಷ್ಟು ಹೊಸಬರು ಚಿತ್ರರಂಗದಲ್ಲಿ ಏನೋ ಸಾಧನೆ ಮಾಡಬೇಕು ಅಂತ ಆಕಾಂಕ್ಷೆ ಇಟ್ಟುಕೊಂಡು ಬರುತ್ತಾರೆ. ಬರೀ ಆಕಾಂಕ್ಷೆ ಇದ್ದರೆ ಗುರಿ ಮುಟ್ಟುವುದಕ್ಕೆ ಸಾಧ್ಯವಿಲ್ಲ. ಸಹನೆ ಮತ್ತು ಸಾಧನೆ ಇದ್ದರೆ ಮಾತ್ರ ಗುರಿ ಮುಟ್ಟೋಕೆ ಸಾಧ್ಯ. ಡಾ ರಾಜಕುಮಾರ್‌ ಅವರಿಂದ ಪ್ರತಿಯೊಬ್ಬರೂ ಸರಳತೆ ಮತ್ತು ವಿನಯವನ್ನು ಕಲಿಯಬೇಕು. ಹಣ ಮತ್ತು ಕೀರ್ತಿ ಬಂದಾಗ ಬೀಗಬೇಡಿ, ಬಗ್ಗಿ ನಡಿಯಿರಿ’ ಎಂದು ಹಿತವಚನ ನುಡಿದರು. ಮಾತು ಮುಗಿಸುವ ಮುನ್ನ, “ಚಿತ್ರ ಚೆನ್ನಾಗಿ ಓಡಿ, ಇದೇ ಕಲಾವಿದರ ಸಂಘದ ಸಭಾಂಗಣದಲ್ಲೇ ನೂರು ದಿನದ ಸಂಭ್ರಮವಾಚರಿಸಿ’ ಎಂದರು. ಕೆ.ಪಿ. ಶ್ರೀಕಾಂತ್‌ ಮತ್ತು ಕಾಂತರಾಜ್‌ ಸಹ ಚಿತ್ರತಂಡದವರಿಗೆ ಶುಭ ಕೋರಿದರು. ನಿರ್ದೇಶಕ ಪ್ರಮೋದ್‌ ಕುಮಾರ್‌ಗೆ ಇದು ಮೊದಲ ಚಿತ್ರ. ಇಡೀ ತಂಡದ ಸಹಕಾರದಿಂದ ಚಿತ್ರ ಮಾಡಿದ್ದೇವೆ. “ಇದೊಂದು ದೆವ್ವದ ಸಿನಿಮಾ ಅನ್ನೋಕ್ಕಿಂತ, ಎನರ್ಜಿ ಕುರಿತ ಸಿನಿಮಾ. ಕೆಟ್ಟ ಎನರ್ಜಿಯಿಂದ ಏನೆಲ್ಲಾ ಆಗುತ್ತದೆ ಎನ್ನುವ ಸಿನಿಮಾ. ನಿರ್ಮಾಪಕ ಕುಮಾರ್‌ ಅವರಿಗೆ ಕಥೆ ಹೇಳಿದೆ. ಅವರು ಇಷ್ಟಪಟ್ಟು ಚಿತ್ರ ಮಾಡೋದಕ್ಕೆ ಮುಂದೆ ಬಂದರು. ಚಿತ್ರದಲ್ಲಿ ನಾಲ್ಕು ಹೊಸ ಪ್ರತಿಭೆಗಳನ್ನು ಪರಿಚಯಿಸುತ್ತಿದ್ದೇನೆ. ಎರಡು ಗಂಟೆ ಅವಧಿಯ ಸಿನಿಮಾ ಇದು’ ಎಂದು ಚಿತ್ರದ ಬಗ್ಗೆ ಹೇಳಿದರು.

ನಿರ್ಮಾಪಕ ಕುಮಾರ್‌ ಕೆಲವು ವಿಷಯಗಳನ್ನು ನಂಬುತ್ತಿರಲಿಲ್ಲವಂತೆ. ಆದರೆ, ಈ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಾದ ಘಟನೆಗಳಿಂದ ನಂಬಬೇಕಾಯಿತಂತೆ. “ಚಿತ್ರೀಕರಣ ಸಮಯದಲ್ಲಿ ತುಂಬಾ ಸಮಸ್ಯೆ ಎದುರಿಸಿದ್ದೇವೆ. ಬ್ಲಾಸ್ಟ್‌ ಆಗಿ ನಾಯಕಿಗೆ ಗಾಯವಾಗಿತ್ತು. ಆದರೂ ಚಿತ್ರ ಚೆನ್ನಾಗಿ ಬಂದಿದೆ. ಇಲ್ಲಿ ನಂದೇನೂ ಇಲ್ಲ. ಎಲ್ಲಾ ಕ್ರೆಡಿಟ್ಟು ಚಿತ್ರತಂಡಕ್ಕೇ ಹೋಗಬೇಕು’ ಎಂದು ಮಾತು ಮುಗಿಸಿದರು.

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.