ಗಮನಿಸಬೇಕಾದ ಅಂಶ


Team Udayavani, Oct 27, 2017, 12:43 PM IST

27-28.jpg

ಚಿತ್ರ ಗೆದ್ದಿದೆ ಎಂಬ ಖುಷಿಯಲ್ಲಿ ಚಿತ್ರತಂಡವಿದೆ ರೋಹಿತ್‌ ಪದಕಿ ನಿರ್ದೇಶನದ “ದಯವಿಟ್ಟು ಗಮನಿಸಿ’ ಚಿತ್ರತಂಡ ಕೂಡ ಖುಷಿಯ ಮೂಡ್‌ನ‌ಲ್ಲಿದೆ. ಕಾರಣ ಜನ ಚಿತ್ರವನ್ನು ಮೆಚ್ಚಿಕೊಂಡಿದ್ದಾರಂತೆ. ಸಂತೋಷ ಕೂಟದ ನೆಪದಲ್ಲಿ ಮಾಧ್ಯಮ ಹಾಗೂ ಚಿತ್ರತಂಡಕ್ಕೆ ಥ್ಯಾಂಕ್ಸ್‌ ಹೇಳಲೆಂದೇ ನಿರ್ದೇಶಕ ಮತ್ತು ನಿರ್ಮಾಪಕರು ಮಾಧ್ಯಮ ಮುಂದೆ ಬಂದಿದ್ದರು. 

ಮೊದಲು ಮಾತು ಶುರುಮಾಡಿದ್ದು ನಿರ್ದೇಶಕ ರೋಹಿತ್‌ ಪದಕಿ. “ನಿರೀಕ್ಷೆಯಂತೆ ಚಿತ್ರಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ಸಿಕ್ಕಿದೆ. ಈ ಯಶಸ್ಸು ಮತ್ತು ಇಡೀ ಸಿನಿಮಾವನ್ನು ನನ್ನ ಕಲಾವಿದರು, ತಂತ್ರಜ್ಞರಿಗೆ ಅರ್ಪಿಸುತ್ತೇನೆ. ಇಲ್ಲಿ ಪ್ರತಿಯೊಬ್ಬರೂ ನನ್ನದು ಅಂತಾನೇ ಹಗಲಿರುಳು ದುಡಿದಿದ್ದಾರೆ. ಸಿನಿಮಾ ನೋಡಿದವರು ಚರ್ಚೆ ಮಾಡುತ್ತಿದ್ದಾರೆ. ಬಟ್ಟೆಯಿಂದ ಹಿಡಿದು ಭಾಷೆವರೆಗೂ ಮಾತಾಡುತ್ತಿದ್ದಾರೆ. ಒಂದೊಳ್ಳೆಯ ಸಿನಿಮಾ ಮಾಡಿದ ತೃಪ್ತಿ ನನಗಿದೆ. ಜನರು ನಮ್ಮ ಪ್ರಯತ್ನ ಒಪ್ಪಿಕೊಂಡ ಖುಷಿಯೂ ಇದೆ’ ಎಂದರು ಪದಕಿ. ರಾಜೇಶ್‌ ನಟರಂಗ ಅವರಿಗೆ ಇದೊಂದು ಒಳ್ಳೆಯ ಬದಲಾವಣೆಯಂತೆ. “ಈ ರೀತಿಯ ಪ್ರಯತ್ನವನ್ನು ಮೆಚ್ಚಿಕೊಂಡ ಪ್ರೇಕ್ಷಕ ವರ್ಗಕ್ಕೆ ಚಿತ್ರತಂಡದಿಂದ ಕೃತಜ್ಞತೆ ಸಲ್ಲಿಸುತ್ತೇನೆ. ನಾನು ಮೊದಲು ಚಿತ್ರ ನೋಡಿದಾಗ, ಇದು ಯಾವ ಜಾನರ್‌ ಸಿನಿಮಾ, ಜನ ಸ್ವೀಕರಿಸುತ್ತಾರಾ ಎಂಬ ಗೊಂದಲವಿತ್ತು. ಆದರೆ, ಈಗ ಸಿಗುತ್ತಿರುವ ಪ್ರ ತಿಕ್ರಿಯೆ ನೋಡಿದರೆ ಖುಷಿಯಾಗುತ್ತಿದೆ. ಬರೀ ಇನ್ಸ್‌ಪೆಕ್ಟರ್‌ ಪಾತ್ರ ಮಾಡಿ ಬೇಜಾರಾಗಿತ್ತು. ಇಲ್ಲೊಂದಷ್ಟು ಬದಲಾವಣೆಯ ಪಾತ್ರ ಸಿಕ್ಕಿದೆ. ಬದಲಾವಣೆ ಬಯಸುವ ಜನರಿಗೆ ಈ ಚಿತ್ರ ಖುಷಿ ಕೊಡುತ್ತೆ ಎಂಬುದು ರಾಜೇಶ್‌ ನಟರಂಗ ಮಾತು. 

“ರೋಹಿತ್‌ಗೆ ಮತ್ತೆ ಈ ರೀತಿಯ ಸಿನಿಮಾ ಮಾಡೋಕೆ ಆಗಲ್ಲ’ ಎಂದು ಮಾತಿಗಿಳಿದರು ರಘು ಮುಖರ್ಜಿ. ಈ ಚಿತ್ರದ ಕಥೆ ಮತ್ತು ಪಾತ್ರ ನೋಡಿದವರಿಗೆ ಆ ಎಲ್ಲಾ ಪಾತ್ರಗಳೊಳಗೆ ಹೋಗಿ ವಾಪಾಸ್‌ ಬರ್ತಾರೆ. ಇಲ್ಲಿ ಯಾರೂ ಹೀರೋ ಇಲ್ಲ. ಕಥೆಯೇ ನಾಯಕ. ಎಷ್ಟೋ ಜನ ಕಾಲ್‌ ಮಾಡಿ, ನಮ್ಮಲ್ಲಿರುವ ಆಸೆಯನ್ನು ನೀವು ಪಾತ್ರ ಮೂಲಕ ವ್ಯಕ್ತಪಡಿಸಿದ್ದೀರ ಅಂತ ಹೇಳಿದ್ದಾರೆ. ಒಳ್ಳೇ ಚಿತ್ರ ಮಾಡಿದ್ದು ತೃಪ್ತಿ ಕೊಟ್ಟಿದೆ’ ಎಂದರು ರಘು ಮುಖರ್ಜಿ. ಭಾವನಾ ರಾವ್‌ಗೆ ಎಲ್ಲಾ ಕಡೆಯಿಂದಲೂ ಮೆಚ್ಚುಗೆ ಸಿಕ್ಕಿದೆಯಂತೆ. ಕನ್ನಡದಲ್ಲಿ ಒಳ್ಳೆಯ ಚಿತ್ರ ಬರಲ್ಲ, ಅನ್ನೋರು ಇತ್ತ ಕಡೆ ಗಮನಿಸಿ ಅಂದರು ಭಾವನಾ ರಾವ್‌. ನಿರ್ಮಾಪಕ ಕೃಷ್ಣ ಸಾರ್ಥಕ್‌ಗೆ ಇಂಥದ್ದೊಂದು ಚಿತ್ರ ಮಾಡಿದ್ದಕ್ಕೂ ಸಾರ್ಥಕ ಎನಿಸಿದೆಯಂತೆ. ಅನೂಪ್‌ ಸೀಳಿನ್‌ಗೆ ಒಳ್ಳೆಯ ಚಿತ್ರ ಕೊಟ್ಟರೆ, ಜನರು ಮೆಚ್ಚಿಕೊಳ್ಳುತ್ತಾರೆ ಎಂಬ
ನಂಬಿಕೆ ಮೊದಲೇ ಇತ್ತಂತೆ. ಅದು ಈಗ ನಿಜವಾಗಿದೆ ಅಂದರು ಅವರು. ಚಿತ್ರ ಕುರಿತು ಸಂಯುಕ್ತಾ ಹೊರನಾಡು, ಅವಿನಾಶ್‌ ಶತಮರ್ಷನ್‌ ಮಾತಾಡಿದರು.

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.