ಡಿ. 31ಕ್ಕೆ ಒಂಬತ್ತನೇ ದಿಕ್ಕು
Team Udayavani, Dec 3, 2021, 11:13 AM IST
ದಯಾಳ್ ಪದ್ಮನಾಭನ್ ಹೇಳಿದ ಕಮರ್ಷಿಯಲ್ ಸ್ಟೋರಿ ಸಾಮಾನ್ಯವಾಗಿ ನಾವೆಲ್ಲ ಎಂಟು ದಿಕ್ಕು ಅಂತಾನೋ, ಹತ್ತು ದಿಕ್ಕು ಅಂತಾನೋ ಮಾತಾಡುವುದನ್ನ ಕೇಳಿದ್ದೇವೆ. ಆದರೆ ನಿರ್ದೇಶಕ ದಯಾಳ್ ಪದ್ಮನಾಭನ್ “ಒಂಬತ್ತನೇ ದಿಕ್ಕು ’ಎನ್ನುವ ಹೊಸ ದಿಕ್ಕನ್ನು ಅನ್ವೇಷಿಸಿ ಅದನ್ನು ತೆರೆಮೇಲೆ ಹೇಳಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ.
ಹೌದು, ಕಳೆದ ಬಾರಿ “ರಂಗನಾಯಕಿ’ ಚಿತ್ರವನ್ನು ತೆರೆಮೇಲೆ ತಂದಿದ್ದ ದಯಾಳ್, ಈ ತಮ್ಮ ಹೊಸ ಚಿತ್ರಕ್ಕೆ “ಒಂಬತ್ತನೇ ದಿಕ್ಕು ’ ಎಂದು ಹೆಸರಿಟ್ಟಿದ್ದಾರೆ. ಈಗಾಗಲೇ ಸದ್ದಿಲ್ಲದೆ ಈ ಚಿತ್ರವನ್ನು ಪೂರ್ಣಗೊಳಿಸಿರುವ ದಯಾಳ್, ತಮ್ಮ ಪ್ಲಾನ್ ಪ್ರಕಾರ ಇಷ್ಟೊತ್ತಿಗಾಗಲೇ ಆ ಚಿತ್ರವನ್ನು ತೆರೆಗೆ ಕೂಡ ತರಬೇಕಿತ್ತು.
ಇದೊಂದು ಇಂದಿನ ಸ್ಟೈಲ್ನ ಪಕ್ಕಾ ಕಮರ್ಶಿಯಲ್ ಎಲಿಮೆಂಟ್ಸ್ ಇರುವ ಆ್ಯಕ್ಷನ್ ಕಂ ಕ್ರೈಂ-ಥ್ರಿಲ್ಲರ್ ಸಬ್ಜೆಕ್ಟ್ ಸಿನಿಮಾ. ಅದೇನು ಅನ್ನೋದನ್ನ ಸ್ಕ್ರೀನ್ ಮೇಲೆ ನೋಡ್ಬೇಕು. 1 ದಿನದಲ್ಲಿ ಬೆಳಿಗ್ಗೆಯಿಂದ ಸಂಜೆಯವರೆಗೆ ನಡೆಯುವ ಕಥೆಯನ್ನ ಸ್ಕ್ರೀನ್ ಮೇಲೆ ಹೇಳಿದ್ದೇವೆ’ ಎಂದು ಚಿತ್ರದ ಕಥಾಹಂದರದ ಬಗ್ಗೆ ವಿವರಣೆ ಕೊಡುತ್ತಾರೆ.
ಚಿತ್ರದಲ್ಲಿ ಲೂಸ್ ಮಾದ ಯೋಗಿ, ಅದಿತಿ ಪ್ರಭುದೇವ, ಡೈಲಾಗ್ ಕಿಂಗ್ ಸಾಯಿಕುಮಾರ್, ಸಂಪತ್, ಅಶೋಕ್, ರಮೇಶ್ ಭಟ್, ಪ್ರಶಾಂತ್ ಸಿದ್ಧಿ ಅಭಿನಯಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್