ಬದಲಾವಣೆಯ ಆ ಒಂದು ದಿನ


Team Udayavani, Oct 6, 2017, 11:43 AM IST

06-13.jpg

ಈ ದೇಶಕ್ಕೆ ಏನಾದರೂ ವಾಪಸ್ಸು ಕೊಡಬೇಕು ಅಂತ ಅನನಿಸುತ್ತಲೇ ಇತ್ತಂತೆ ರವೀಂದ್ರ ಗೌಡ ಪಾಟೀಲ್‌. ಉತ್ತರ ಕರ್ನಾಟಕದಲ್ಲಿ ದ್ರಾಕ್ಷಿ ಬೆಳೆಗಾರರಾಗಿರುವ ಅವರು, ತಮ್ಮ ಮನಸ್ಸಿನಲ್ಲಿರುವ ಒಂದಿಷ್ಟು ಅಂಶಗಳನ್ನು ಹೇಳಿಕೊಳ್ಳಬೇಕು, ತಾನು ಹುಟ್ಟಿದ ಈ ದೇಶಕ್ಕೆ ಏನಾದರೂ ಕೊಡಬೇಕು ಎಂದು ಯೋಚಿಸುತ್ತಿದ್ದಾಗ ಅವರಿಗೆ ಹೊಳೆದಿದ್ದು ಸಿನಿಮಾ ಮಾಡುವ ಐಡಿಯಾ. ಹೀಗೆ ಶುರುವಾದ “ಆ ಒಂದು ದಿನ’ ಎಂಬ ಚಿತ್ರ ಇದೀಗ ಹಾಡುಗಳ ಬಿಡುಗಡೆಯವರೆಗೂ ಬಂದು ನಿಂತಿದೆ. ಇತ್ತೀಚೆಗೆ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಲಾಯಿತು. ಹಿರಿಯ ಸಾಹಿತಿ ಪ್ರೊ ದೊಡ್ಡರಂಗೇ ಗೌಡ ಅವರು ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದರು. “ಆ ಒಂದು ದಿನ’ ಚಿತ್ರವನ್ನು ಹರ್ಷ ಮತ್ತು ಸಂಜಯ್‌ ಜೊತೆಯಾಗಿ ನಿರ್ದೇಶಿಸಿದ್ದಾರೆ.

ಇನ್ನು ಹರ್ಷ ಈ ಚಿತ್ರಕ್ಕೆ ಹಾಡುಗಳನ್ನು ಸಹ ಸಂಯೋಜಿಸಿದ್ದಾರೆ. ಈ ಚಿತ್ರಕ್ಕಾಗಿ ಎರಡು ಐಟಂ ಹಾಡುಗಳು ಜೊತೆಗೆ ಒಂದು ದೇಶಭಕ್ತಿ ಸಾರುವ ಹಾಡು ಇದೆಯಂತೆ. ಆ ಹಾಡನ್ನು ವಿಜಯಪ್ರಕಾಶ್‌ ಹಾಡಿರುವುದು ವಿಶೇಷ. ಈ ಚಿತ್ರದಲ್ಲಿ ರವೀಂದ್ರ ಗೌಡ ಪಾಟೀಲ್‌ ಅವರು, ದೇಶ ಎದುರಿಸುತ್ತಿರುವ ಹಲವು ಸಮಸ್ಯೆಗಳ ಬಗ್ಗೆ ಹೇಳುವುದಕ್ಕೆ ಹೊರಟಿದ್ದಾರಂತೆ. “ಕಳೆದ ಮೂರು  ವರ್ಷಗಳಿಂದ ನನ್ನನ್ನು ಕಾಡಿದ ಹಲವು ವಿಷಯಗಳನ್ನಿಟ್ಟುಕೊಂಡು ಕಥೆ ಮಾಡಿದ್ದೇನೆ. ಈ ಚಿತ್ರದಲ್ಲಿ ಸಮಾಜ ಎದುರಿಸುತ್ತಿರುವ ಹಲವು ಸಮಸ್ಯೆಗಳು ಮತ್ತು ಸಮಾಜಕ್ಕೆ ಪೂರಕವಾದ ಹಲವು ವಿಷಯಗಳನ್ನು ಹೇಳುವ ಪ್ರಯತ್ನ ಮಾಡಿದ್ದೇನೆ. ಒಂದು ದಿನ ಬದಲಾವಣೆಯಾದರೆ ಏನಾಗುತ್ತದೆ ಎಂಬುದನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನವನ್ನು ಮಾಡಿದ್ದೇನೆ’ ಎನ್ನುತ್ತಾರೆ ಅವರು. ದೊಡ್ಡರಂಗೇಗೌಡರು ಮಾತನಾಡಿ, “ಜನ ತಮ್ಮ ಮತಗಳನ್ನು ಮಾರಿಕೊಳ್ಳುವ ಹಂತಕ್ಕೆ ಬಂದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅವರನ್ನು ಎಚ್ಚರಿಸುವಂತಹ ಕೆಲಸಗಳು ಆಗಬೇಕು. ಅಂತಹ ಸೂಕ್ಷ್ಮ ವಿಚಾರಗಳು “ಆ ಒಂದು ದಿನ’ ಚಿತ್ರದಲ್ಲಿದೆ ಎಂದು ಕೇಳಿದ್ದೇನೆ. ಇದು ಸಂಪೂರ್ಣ 
ಹೊಸಬರೇ ಮಾಡಿರುವ ಚಿತ್ರ. ಇಂಥ ಚಿತ್ರಗಳು ಗೆಲ್ಲಬೇಕು’ ಎಂದು ಅವರು ಹಾರೈಸಿದರು.

ಈ ಚಿತ್ರದ ಎರಡು ಐಟಂ ಸಾಂಗ್‌ಗಳ ಪೈಕಿ, ಒಂದರಲ್ಲಿ ಸಿಮ್ರಾನ್‌ ಎನ್ನುವವರು ಕಾಣಿಸಿಕೊಂಡಿದ್ದಾರೆ. ಮೂಲತಃ ಧಾರವಾಡದವರಾದ ಸಿಮ್ರಾನ್‌, ಈಗ ಮುಂಬೈನಲ್ಲಿದ್ದಾರಂತೆ. ಇದು ಅವರ ಮೊದಲನೆಯ ಚಿತ್ರ. ಈ ಚಿತ್ರದ ಮೂಲಕ ಇನ್ನಷ್ಟು ಚಿತ್ರಗಳಲ್ಲಿ ನಟಿಸುವ ಅವಕಾಶ ಸಿಗಲಿ ಎಂದು ಅವರು ಮಾತು ಮುಗಿಸಿದರು.

ಟಾಪ್ ನ್ಯೂಸ್

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

lLondon sword attack

London; ಬೇಕಾಬಿಟ್ಟಿ ಖಡ್ಗ ಬೀಸಿದ ಯುವಕ: ಬಾಲಕ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.