ಒಂದೇ ಮನೆ ಒಬ್ಬನೇ ಕಲಾವಿದ


Team Udayavani, Dec 1, 2017, 11:25 AM IST

01-22.jpg

ಈ ಹಿಂದೆ “ಪುಟಾಣಿ ಸಫಾರಿ’ ಎಂಬ ಮಕ್ಕಳ ಚಿತ್ರವನ್ನು ನಿರ್ದೇಶನ ಮಾಡಿದ್ದ ರವೀಂದ್ರ ವಂಶಿ ಈಗ ಮತ್ತೂಂದು ಚಿತ್ರವನ್ನು ನಿರ್ದೇಶಿಸಿ ತೆರೆಗೆ ತರುತ್ತಿದ್ದಾರೆ. ಈ ಚಿತ್ರಕ್ಕೆ “ಕೈವಲ್ಯ’ ಎಂಬ ಹೆಸರನ್ನು ಇಟ್ಟಿದ್ದು, ಈಗಾಗಲೇ ಚಿತ್ರದ ಚಿತ್ರೀಕರಣವನ್ನು ಮುಗಿಸಲಾಗಿದೆ. ಇನ್ನೇನು ಕೆಲವೇ ತಿಂಗಳುಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಮಾಧ್ಯಮದವರ ಎದುರು ಚಿತ್ರದ ಕುರಿತು ನಾಲ್ಕು ಮಾತು ಹೇಳ್ಳೋಕೆ ಅವರು ಚಿತ್ರತಂಡದವರೊಂದಿಗೆ ಬಂದಿದ್ದರು.

ಅಂದ ಹಾಗೆ, ಇದೊಂದು ಪ್ರಯೋಗಾತ್ಮಕ ಸಿನಿಮಾ. ಇಡೀ ಚಿತ್ರದಲ್ಲಿ ಒಂದೇ ಒಂದು ಪಾತ್ರವಿದ್ದು 15 ವರ್ಷಗಳ ಅವಧಿಯಲ್ಲಿ ಕಥೆ ನಡೆಯತ್ತದೆ. ಒಂದೇ ಮನೆಯಲ್ಲಿ 15 ವರ್ಷಗಳ ಕಾಲ ಇರಬೇಕೆಂಬ ಸವಾಲನ್ನು ಸ್ವೀಕರಿಸುವ ನಾಯಕ ಆ ಒಂದೇ ಮನೆಯಲ್ಲಿ ಹೇಗೆಲ್ಲಾ ಕಾಲ ಕಳೆಯುತ್ತಾನೆ ಎಂಬುದನ್ನು “ಕೈವಲ್ಯ’ ಚಿತ್ರದ ಮೂಲಕ ಹೇಳುವುದಕ್ಕೆ ಹೊರಟಿದ್ದಾರೆ ರವೀಂದ್ರ ವಂಶಿ. 1889ನಲ್ಲಿ ರಷ್ಯನ್‌ ಲೇಖಕ ಆ್ಯಂಟನ್‌ ಚೆಕಾವ್‌ ಬರೆದ “ದಿ ಬೆಟ್‌’ ಎಂಬ ಕಥೆಯನ್ನಾಧರಿಸಿ ಈ ಚಿತ್ರವನ್ನು ಮಾಡಲಾಗಿದೆ. ನಟ ಕೈಲಾಷ್‌ ಆ ಪಾತ್ರವನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ಅವರು 3 ಗೆಟಪ್‌ಗ್ಳನ್ನು ಕೂಡ ಹಾಕಿದ್ದಾರೆ.

“ಕನ್ನಡದಲ್ಲಿ ಈಗಾಗಲೇ “ಶಾಂತಿ’ ತರಹದ ಒಂದೇ ಪಾತ್ರವಿರುವ ಚಿತ್ರ ಬಂದಿದೆ. ಆದರೆ, ಕಮರ್ಷಿಯಲ್‌ ಆಗಿ ಯಾರೂ ಪ್ರಯತ್ನ ಮಾಡಿರಲಿಲ್ಲ. ಇಲ್ಲಿ ಒಂದೇ ಪಾತ್ರವಲ್ಲ, ನಾಯಕನ ಪಾತ್ರದ ಜೊತೆ ಐದಾರು ಪಾತ್ರಗಳು ಬಂದುಹೋಗುತ್ತವೆ. ಆದರೆ, ಪ್ರೇಕ್ಷರ ಕಣ್ಣಿಗೆ ಕಾಣುವುದಿಲ್ಲ. ಅವರ ಧ್ವನಿ ಮಾತ್ರ ಕೇಳುತ್ತದೆ. ಈ ಕಥೆಯು ಈಗಾಗಲೇ ಹಲವಾರು ಭಾಷೆಗಳಲ್ಲಿ ಸಿನಿಮಾ ಆಗಿ ಹೊರಬಂದಿದೆ. ನಾಯಕನಿಗೆ ಮೂರು ಶೇಡ್‌ಗಳು ಇರಲಿದು,ಒಂದೇ ಮನೆಯಲ್ಲಿ ಇಡೀ ಕಥೆ ನಡಯುತ್ತದೆ’ ಎಂದು
ಹೇಳಿದರು.

ನಂತರ ಮಾತನಾಡಿದ್ದು ಕೈಲಾಶ್‌ ನೀನಾಸಂ. “ರವೀಂದ್ರ ಅವರು ಆರಂಭದಲ್ಲಿ ಈ ಕಥೆ ಹೇಳಿದಾಗ ನಾನೇ ಆಕ್ಟ್ ಮಾಡಬೇಕು ಅನ್ನಿಸಿತು. ಅಷ್ಟರಲ್ಲಿ ನಾಯಕನ ಪಾತ್ರಕ್ಕೆ ನಿನ್ನನ್ನೇ ಸೆಲೆಕ್ಟ್ ಮಾಡಿದ್ದೇನೆ ಎಂದು ಹೇಳಿದಾಗ ಖುಷಿ ಆಯ್ತು. ಒಬ್ಬನೇ ನಟನೆ ಮಾಡುವುದು ಸ್ವಲ್ಪ ಸುಸ್ತಾಯಿತು. ಈಗ ಜನ ಮೆಚ್ಚಿದಾಗ ಶ್ರಮ ಸಾರ್ಥಕ ಎನಿಸುತ್ತದೆ’ ಎಂದು ಹೇಳಿದರು. ಚಿತ್ರದಲ್ಲಿ ಮೇಕಪ್‌ ಪ್ರಧಾನ ಪಾತ್ರ ವಹಿಸುತ್ತದೆ ಮತ್ತು ಉಮಾಮಹೇಶ್ವರ್‌ವೆುಕಪ್‌ ಮಾಡಿದ್ದಾರೆ. ವೀರ್‌ ಸಮರ್ಥ್ ಸಂಗೀತ ಸಂಯೋಜಿಸಿದ್ದು, ಪರಂ ಗುಬ್ಬಿ ಎನ್ನುವವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.