ಈವರೆಗೆ ಒಂದ್‌ ಲೆಕ್ಕ ಇನ್ಮುಂದೆ ಒಂದ್‌ ಲೆಕ್ಕ..

ವರ್ಷದ ಕೊನೆಗೆ ಕಾದು ಕುಳಿತಿವೆ ಬಿಗ್‌ ಬಜೆಟ್‌ ಚಿತ್ರಗಳು

Team Udayavani, Oct 25, 2019, 6:00 AM IST

q-80

ಕಳೆದ ಜನವರಿಯಿಂದ ಇಲ್ಲಿಯವರೆಗೆ ಒಂದು ಲೆಕ್ಕವಾದರೆ, ಇನ್ನು ಮುಂದಿನ ಎರಡು ತಿಂಗಳಲ್ಲಿ ಮತ್ತೂಂದು ಲೆಕ್ಕ ಎನ್ನಬಹುದು. ಈಗಾಗಲೇ ಬಿಡುಗಡೆಯಾಗಿರುವಷ್ಟೇ ದೊಡ್ಡ ಸಂಖ್ಯೆಯಲ್ಲಿ, ಇನ್ನು ಬಾಕಿಯಿರುವ ಎರಡು ತಿಂಗಳಲ್ಲಿ ದಶಕೋಟಿ ಬಜೆಟ್‌ ದಾಟುವ ಚಿತ್ರಗಳು ತೆರೆಗೆ ಬರುತ್ತಿವೆ ಅನ್ನೋದು ಗಮನಿಸಬೇಕಾದ ಸಂಗತಿ. ಇನ್ನು ವರ್ಷದ ಕೊನೆಗೆ ಈ ವರ್ಷದ ಬಹುನಿರೀಕ್ಷಿತ ಚಿತ್ರಗಳು ಬಿಡುಗಡೆ ಆಗಲಿವೆ…

ವರ್ಷದ ಕೊನೆಗೆ ಇನ್ನು ಕೇವಲ ಎರಡು ತಿಂಗಳುಗಷ್ಟೇ ಬಾಕಿ ಇದೆ. ವರ್ಷದ ಆರಂಭದಲ್ಲಿಯೇ ಭರ್ಜರಿಯಾಗಿ ಓಪನಿಂಗ್‌ ಪಡೆದುಕೊಂಡ ಸ್ಯಾಂಡಲ್‌ವುಡ್‌ನ‌ಲ್ಲಿ ನಿರೀಕ್ಷೆಯಂತೆಯೇ, ಈ ವರ್ಷ ಚಿತ್ರಗಳ ಸಂಖ್ಯೆ ಮತ್ತು ಅವುಗಳ ಬಜೆಟ್‌ ಎರಡರಲ್ಲೂ ಏರಿಕೆಯಾಗಿದೆ. ಅಂಕಿ-ಅಂಶಗಳನ್ನು ಎದುರಿಗಿಟ್ಟುಕೊಂಡು ನೋಡುವುದಾದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಇಲ್ಲಿಯವರೆಗೆ ಬಿಡುಗಡೆಯಾದ ಚಿತ್ರಗಳ ಸಂಖ್ಯೆ ಮತ್ತು ಅವುಗಳ ಬಜೆಟ್‌ ಎರಡೂ ದುಪ್ಪಟ್ಟಾಗಿದೆ.

ಇನ್ನು ಚಿತ್ರರಂಗದ ಮೂಲಗಳ ಪ್ರಕಾರ, ನಿರ್ಮಾಪಕರು, ವಿತರಕರು, ಪ್ರದರ್ಶಕರು ಮತ್ತು ವಾಣಿಜ್ಯ ಮಂಡಳಿಯ ಅಂಕಿ-ಅಂಶಗಳ ಪ್ರಕಾರ ಅಕ್ಟೋಬರ್‌ ಎರಡನೇ ವಾರದ ಹೊತ್ತಿಗೆ ಕನ್ನಡದಲ್ಲಿ ಸುಮಾರು 165ಕ್ಕೂ ಹೆಚ್ಚು ಚಿತ್ರಗಳು ತೆರೆಕಂಡಿವೆ. ಇದರೊಂದಿಗೆ ತುಳು, ಕೊಂಕಣಿ, ಕೊಡವ, ಲಂಬಾಣಿ ಹೀಗೆ ಸುಮಾರು 22 ಪ್ರಾದೇಶಿಕ ಭಾಷಾವಾರು ಚಿತ್ರಗಳು ಬಿಡುಗಡೆಯಾಗಿವೆ. ಇನ್ನು ಕನ್ನಡಕ್ಕೆ ಡಬ್ಬಿಂಗ್‌ ಆಗಿ ತೆರೆಕಂಡಿರುವ 20ಕ್ಕೂ ಹೆಚ್ಚು ಚಿತ್ರಗಳನ್ನು ಕೂಡ ಈ ಪಟ್ಟಿಯಲ್ಲಿ ಸೇರಿಸಿದರೆ, ಇಲ್ಲಿಯವರೆಗೆ ಬಿಡುಗಡೆಯಾದ ಒಟ್ಟು ಚಿತ್ರಗಳ ಸಂಖ್ಯೆ ಬರೋಬ್ಬರಿ 210ರ ಗಡಿ ದಾಟುತ್ತದೆ!

ಹಾಗಾದರೆ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಚಿತ್ರಗಳು ತಯಾರಾಗಿ ಬಿಡುಗಡೆಯಾಗುತ್ತಿರುವಾಗ, ಇಲ್ಲಿಯವರೆಗೆ ತೆರೆಕಂಡಿರುವ ಚಿತ್ರಗಳ ಒಟ್ಟು ಬಜೆಟ್‌ ಎಷ್ಟಿರಬಹುದು ಅನ್ನೋ ಕುತೂಹಲ ಕೂಡ ಪ್ರೇಕ್ಷಕರಲ್ಲಿ ಸಹಜವಾಗಿಯೇ ಮೂಡುತ್ತದೆ. ಚಿತ್ರೋದ್ಯಮದ ಮೂಲಗಳ ಪ್ರಕಾರವೇ ಹೇಳುವುದಾದರೆ, ಡಬ್ಬಿಂಗ್‌ ಚಿತ್ರಗಳನ್ನು ಹೊರತುಪಡಿಸಿ ಕಳೆದ ಹತ್ತು ತಿಂಗಳಲ್ಲಿ ಬಿಡುಗಡೆಯಾಗಿರುವ ಒಟ್ಟು ಚಿತ್ರಗಳ ಸರಾಸರಿ ಬಜೆಟ್‌ ಸುಮಾರು 600 ರಿಂದ 700 ಕೋಟಿಗಳಾಗಬಹುದು ಎಂದು ಅಂದಾಜಿಸಲಾಗುತ್ತಿದೆ. ಆದರೆ ಇಲ್ಲಿಯವರೆಗೆ ಬಿಡುಗಡೆಯಾಗಿರುವ ಚಿತ್ರಗಳಲ್ಲಿ ಎಂಟತ್ತು ಚಿತ್ರಗಳನ್ನು ಹೊರತುಪಡಿಸಿದರೆ, ಯಾವ ಚಿತ್ರಗಳು ಹತ್ತುಕೋಟಿ ಬಜೆಟ್‌ ದಾಟಿಲ್ಲ. ಹಾಗೆಯೇ ಗಮನಿಸಬೇಕಾದ ಇನ್ನೊಂದು ಪ್ರಮುಖ ಸಂಗತಿಯೆಂದರೆ, ತನ್ನ ಟೈಟಲ್‌, ಬಜೆಟ್‌, ಸಬ್ಜೆಕ್ಟ್ ಮತ್ತು ಕಾಸ್ಟಿಂಗ್‌ ಮೂಲಕ ಸೆಟ್ಟೇರಿದಾಗಿನಿಂದಲೂ ಸುದ್ದಿ ಮಾಡುತ್ತಿರುವ ಸ್ಟಾರ್ಗಳ ಡಜನ್‌ಗೂ ಹೆಚ್ಚು ಚಿತ್ರಗಳು ಈ ವರ್ಷದ ಕೊನೆಗೆ ಬಿಡುಗಡೆಗಾಗಿ ಕಾದು ಕುಳಿತಿವೆ ಅನ್ನೋದು ವಿಶೇಷ.

ಮುಂದಿನ ಎರಡು ತಿಂಗಳ ಲೆಕ್ಕದ ಕಾತುರ
ಹಾಗಾಗಿ ಗಾಂಧಿನಗರದ ಮಟ್ಟಿಗೆ ಹೇಳುವುದಾದರೆ, ಕಳೆದ ಜನವರಿಯಿಂದ ಇಲ್ಲಿಯವರೆಗೆ ಒಂದು ಲೆಕ್ಕವಾದರೆ, ಇನ್ನು ಮುಂದಿನ ಎರಡು ತಿಂಗಳಲ್ಲಿ ಮತ್ತೂಂದು ಲೆಕ್ಕ ಎನ್ನಬಹುದು. ಈಗಾಗಲೇ ಬಿಡುಗಡೆಯಾಗಿರುವಷ್ಟೇ ದೊಡ್ಡ ಸಂಖ್ಯೆಯಲ್ಲಿ, ಇನ್ನು ಬಾಕಿಯಿರುವ ಎರಡು ತಿಂಗಳಲ್ಲಿ ದಶಕೋಟಿ ಬಜೆಟ್‌ ದಾಟುವ ಚಿತ್ರಗಳು ತೆರೆಗೆ ಬರುತ್ತಿವೆ ಅನ್ನೋದು ಗಮನಿಸಬೇಕಾದ ಸಂಗತಿ. ಇನ್ನು ವರ್ಷದ ಕೊನೆಗೆ ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಾದ ಶಿವರಾಜಕುಮಾರ್‌ ಅಭಿನಯದ “ಆಯುಷ್ಮಾನ್‌ಭವ’, “ದ್ರೋಣ’, ಪುನೀತ್‌ ರಾಜಕುಮಾರ್‌ ಅಭಿನಯದ “ಯುವರತ್ನ’, ದರ್ಶನ್‌ ಅಭಿನಯದ “ಒಡೆಯ’, ಧ್ರುವ ಸರ್ಜಾ ಅಭಿನಯದ “ಪೊಗರು’, ಸುದೀಪ್‌ ಅಭಿನಯದ “ಕೋಟಿಗೊಬ್ಬ-3′, ರಕ್ಷಿತ್‌ ಶೆಟ್ಟಿ ಅಭಿನಯದ “ಅವನೇ ಶ್ರೀಮನ್ನಾರಾಯಣ’ ಚಿತ್ರಗಳು ಈ ಪಟ್ಟಿಯಲ್ಲಿ ಮೊದಲಿಗೆ ಬರುತ್ತವೆ.

ಇವುಗಳ ನಂತರ ಕೃಷ್ಣ ಅಜೇಯರಾವ್‌ ಅಭಿನಯದ “ಕೃಷ್ಣ ಟಾಕೀಸ್‌’, ಮದರಂಗಿ ಕೃಷ್ಣ ಅಭಿನಯದ “ಲವ್‌ ಮಾಕ್ಟೇಲ್‌’, ನೀನಾಸಂ ಸತೀಶ್‌ ಅಭಿನಯದ “ಬ್ರಹ್ಮಚಾರಿ’, ಚಿರಂಜೀವಿ ಸರ್ಜಾ ಅಭಿನಯದ “ಶಿವಾರ್ಜುನ’, ವಸಿಷ್ಟ ಸಿಂಹ ಅಭಿನಯದ “ಕಾಲಚಕ್ರ’ ಧನಂಜಯ್‌ ಅಭಿನಯದ “ಪಾಪ್‌ಕಾರ್ನ್ ಮಂಕಿ ಟೈಗರ್‌’, ಪಾರೂಲ್‌ ಯಾದವ್‌ ಅಭಿನಯದ “ಬಟರ್‌ಫ್ಲೈ’, “ಭೀಮಸೇನ ನಳಮಹರಾಜ’, ಹೀಗೆ ಹೇಳುತ್ತ ಹೋದ್ರೆ ದೊಡ್ಡ ಪಟ್ಟಿಯೇ ಆಗುತ್ತದೆ. ಅಷ್ಟೇ ಅಲ್ಲದೆ ಈಗಾಗಲೇ ಸುಮಾರು 60ಕ್ಕೂ ಹೆಚ್ಚು ಹೊಸಬರ ಚಿತ್ರಗಳು ಈಗಾಗಲೇ ಸೆನ್ಸಾರ್‌ ಅನುಮತಿ ಪಡೆದುಕೊಂಡು ಬಿಡುಗಡೆಗೆಗಾಗಿ ಕಾದು ಕುಳಿತಿವೆ. ಇಲ್ಲಿವರೆಗೆ ಬಿಡುಗಡೆಯಾದ ಸಿನಿಮಾಗಳದ್ದು ಒಂದು ಲೆಕ್ಕವಾದರೆ ಇನ್ನೆರಡು ತಿಂಗಳಲ್ಲಿ ಬಿಡುಗಡೆಯಾಗುತ್ತಿರುವ ಚಿತ್ರಗಳ ಬಜೆಟ್‌ ಲೆಕ್ಕವೇ ಬೇರೆ. ಅದಕ್ಕೆ ಕಾರಣ, ವರ್ಷದ ಕೊನೆಯಲ್ಲಿ ಒಂದಷ್ಟು ಬಿಗ್‌ ಬಜೆಟ್‌ ಚಿತ್ರಗಳು ಬಿಡುಗಡೆಯಾಗುತ್ತಿವೆ. “ಅವನೇ ಶ್ರೀಮನ್ನಾರಾಯಣ’, “ಒಡೆಯ’, “ಪೊಗರು’, “ಕೋಟಿಗೊಬ್ಬ-3′, “ಆಯುಷ್ಮಾನ್‌ ಭವ’ ಸೇರಿದಂತೆ ಇನ್ನೂ ಹಲವು ಬಿಗ್‌ ಬಜೆಟ್‌ ಚಿತ್ರಗಳು ಪಟ್ಟಿಯಲ್ಲಿವೆ. ಇದರ ಜೊತೆಗೆ ಸಾಕಷ್ಟು ಹೊಸಬರು ಕೂಡಾ 2019ರಲ್ಲೇ ಬಿಡುಗಡೆಯಾಗಲು ತುದಿಗಾಲಿನಲ್ಲಿ ನಿಂತಿವೆ. ಇವೆಲ್ಲದರ ಬಜೆಟ್‌ ಅನ್ನು ಅಂದಾಜಿಸಿ ಹೇಳುವುದಾದರೆ 250 ಕೋಟಿ ದಾಟಲಿದೆ.

– ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.