ಅರ್ಥವಾಗುವವರಿಗೆ ಮಾತ್ರ


Team Udayavani, Jul 7, 2018, 6:00 AM IST

u-28.jpg

“ಪಾರ್ಲೆಜಿಯಿಂದ ಗೂಗಲ್‌ ಜಿ ವರೆಗೆ ಇಲ್ಲಿ ಹೇಳಿದ್ದೇವೆ …’

– ನಿರ್ದೇಶಕ ಶಿವು ಸರಳಬೆಟ್ಟು ಹೀಗೆ ಹೇಳಿದರು. ಅವರ ಮಾತು ಅಲ್ಲಿಗೆ ನಿಲ್ಲಲಿಲ್ಲ. ಪಂಚಭೂತಗಳಿಂದ ಹಿಡಿದು ಹಿಂದಿನ ಕಾಲದ ಮೌಲ್ಯ, ಆದರ್ಶ, ಬದಲಾಗುತ್ತಿರುವ ಪ್ರವೃತ್ತಿ ಸೇರಿದಂತೆ ಅನೇಕ ವಿಚಾರಗಳನ್ನು ಮಾತನಾಡುತ್ತಾ ಬಂದರು. “ಇದು ನಾನು ಮಾಡಿದ ಕಥೆ ಎನ್ನುವುದಕ್ಕಿಂತ ನಮ್ಮ ಪೂರ್ವಿಕರು ಹೇಳಿದ ಕಥೆ ಎನ್ನಬಹುದು’ ಎಂದರು. ಚಿತ್ರದಲ್ಲಿ ಹೊಸತನವಿದೆ. ಆಧ್ಯಾತ್ಮವಿದೆ, ಮನರಂಜನೆ ಇದೆ … ಹೀಗೆ ಒಂದೇ ಸಮನೆ ಹೇಳುತ್ತಾ ಹೋದರು. ಅವರು ಹೇಳಿದ್ದು “ಜೀವನ ಯಜ್ಞ’ ಸಿನಿಮಾದ ಬಗ್ಗೆ. ಇದು ಶಿವು ಅವರ ಚೊಚ್ಚಲ ಸಿನಿಮಾ. ಸಿನಿಮಾ ಟೈಟಲ್‌ನಲ್ಲಿ “ಜಿ’ಯನ್ನು ದೊಡ್ಡದಾಗಿ ಬರೆದು ಅದರ ಮುಂದೆ “ವನ ಯಜ್ಞ’ ಎಂದು ಸೇರಿಸಲಾಗಿದೆ. ಅದಕ್ಕೆ ಕಾರಣ ನಿರ್ದೇಶಕರು ಈ ಚಿತ್ರದಲ್ಲಿ ಪಾರ್ಲೆಜಿಯಿಂದ ಹಿಡಿದು ಗೂಗಲ್‌ ಜಿ ವರೆಗೆ ಹೇಳಿದ್ದಾರಂತೆ. ನಿರ್ದೇಶಕ ಶಿವು ಅವರಿಗೆ ತನ್ನ ಸಿನಿಮಾ ಬಗ್ಗೆ ತುಂಬಾನೇ ಹೇಳಿಕೊಳ್ಳಬೇಕು, ಕಥೆ ಸಾರವನ್ನು ಪತ್ರಕರ್ತರಿಗೆ ಬಿಚ್ಚಿಡಬೇಕೆಂಬ ಹಂಬಲವೇನೋ ಇತ್ತು. ಆದರೆ, ಅವರು ಅದನ್ನು ಹೇಳುವಲ್ಲಿ ಎಡವುತ್ತಿದ್ದರು. ಸುತ್ತಿಬಳಸಿ, ಪಂಚಭೂತ, ಆಧ್ಯಾತ್ಮ, ಕಲಾತ್ಮಕ, ಕಮರ್ಷಿಯಲ್‌, ಪಾರ್ಲೆ-ಜಿ, ಗೂಗಲ್‌ ಜಿ … ಹೀಗೆ ಅನೇಕ ಅಂಶಗಳನ್ನು ಮಧ್ಯೆ ತಂದು ಸಾಕಷ್ಟು ಗೊಂದಲಮಯವಾಗಿಯೇ ಮಾತನಾಡಿದರು. ಅಂತಿಮವಾಗಿ ಈ ಸಿನಿಮಾದಲ್ಲಿ ಏನು ಹೇಳಲು ಹೊರಟಿರಬಹುದೆಂದು ಅರ್ಥಮಾಡಿಕೊಂಡವರಿಗೆ ಸಿಕ್ಕಿದ್ದಿಷ್ಟು, ಇಂದಿನ ಆಧುನಿಕ ಯುಗದಲ್ಲಿ ಹಳೆಯ ಮೌಲ್ಯಗಳನ್ನು ಮರೆಯುತ್ತಿದ್ದೇವೆ. ಅದನ್ನು ಮರೆಯದೇ ಹಿಂದಿನ ಕಾಲದ ಆದರ್ಶ, ಮೌಲ್ಯಗಳ ಜೊತೆ ಸಾಗಬೇಕೆಂಬುದನ್ನು ಹೇಳಲಾಗಿದೆ ಎಂದು. ಈ ಚಿತ್ರದಲ್ಲಿ 60ರಿಂದ 70 ಪಾತ್ರಗಳಿವೆಯಂತೆ. ಆದರೆ, ಚಿತ್ರದ ಪ್ರಮುಖ ನಾಲ್ಕು ಪಾತ್ರಗಳಿಗಷ್ಟೇ ಹೆಸರಿದೆಯಂತೆ. 

ಚಿತ್ರದಲ್ಲಿ ಶೈನ್‌ ಶೆಟ್ಟಿ, ಮನೋಜ್‌ ಪುತ್ತೂರು, ರಮೇಶ್‌ ಭಟ್‌, ಸೌಜನ್ಯ ಹೆಗ್ಡೆ, ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರದಲ್ಲೊಂದು ಪ್ರಮುಖ ಪಾತ್ರ ಮಾಡಿರುವ ಶೈನ್‌ ಶೆಟ್ಟಿಗೆ, ನಿರ್ದೇಶಕರು ಏನು ಕಥೆ ಹೇಳಿದರೆಂದು ಅರ್ಥವಾಗಲೇ ಇಲ್ಲವಂತೆ. ಕೊನೆಗೆ ಅವರ ಪಾತ್ರವನ್ನಷ್ಟೇ ಕೇಳಿಕೊಂಡು, ಅದನ್ನು ಅರ್ಥೈಸಿ ನಟಿಸಿದರಂತೆ. ಮತ್ತೂಬ್ಬ ನಟ ಮನೋಜ್‌ ಪುತ್ತೂರು ಕೂಡಾ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಚಿತ್ರವನ್ನು ಕಿರಣ್‌ ರೈ ಹಾಗೂ ರಂಜನ್‌ ಶೆಟ್ಟಿ ಸೇರಿ ನಿರ್ಮಿಸಿದ್ದಾರೆ. ಚಿತ್ರಕ್ಕೆ ಆಸ್ಲೆ ಮೈಕೆಲ್‌ ಸಂಗೀತ, ಸುರೇಂದ್ರ ಪಣಿಯೂರು ಛಾಯಾಗ್ರಹಣವಿದೆ. 

ಟಾಪ್ ನ್ಯೂಸ್

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.