ಪಲ್ಲಕ್ಕಿ ಉತ್ಸವ; ಸಿಂಧೂರ ಲಕ್ಷ್ಮಣ ಸಾಹಸಗಾಥೆ


Team Udayavani, Oct 26, 2018, 6:00 AM IST

suchitra-page-4-1.jpg

ಕನ್ನಡದಲ್ಲಿ ಈಗಾಗಲೇ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಸಾಕಷ್ಟು ಚಿತ್ರಗಳು ಬಂದಿವೆ. ಈಗ ಸಿಂಧೂರ ಲಕ್ಷ್ಮಣ ಕುರಿತ ಚಿತ್ರವೊಂದು ಸೆಟ್ಟೇರುತ್ತಿದೆ.

ಪಲ್ಲಕ್ಕಿ ರಾಧಾಕೃಷ್ಣ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ “ಶೂರ ಸಿಂಧೂರ ಲಕ್ಷ್ಮಣ’ ಎಂದು ಹೆಸರಿಟ್ಟಿದ್ದಾರೆ. ಹದಿನೆಂಟನೆ ಶತಮಾನದ ಅಂತ್ಯದಲ್ಲಿ ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದ ಆರಂಭದಲ್ಲಿರುವ ಸಿಂಧೂರ ಊರಿನ ಲಕ್ಷ್ಮಣ ಎಂಬ ದೇಶಭಕ್ತನ ಕುರಿತಾದ ಚಿತ್ರವಿದು. ಈ ಚಿತ್ರ ಮಾಡುವ ಮುನ್ನ,ನಿರ್ದೇಶಕ ಪಲ್ಲಕ್ಕಿ ರಾಧಾಕೃಷ್ಣ, ಕಳೆದ ಹತ್ತು ವರ್ಷಗಳಿಂದಲೂ ರಾಜ್ಯಾದ್ಯಂತ ಸಂಚರಿಸಿ,ಲಕ್ಷ್ಮಣನ ಕುರಿತು ಅನೇಕ ವಿಷಯ ಸಂಗ್ರಹಿಸಿ, ಸಂಶೋಧನೆ ನಡೆಸಿ, ಇದೀಗ ಚಿತ್ರ ಮಾಡಲು ತಯಾರಾಗಿದ್ದಾರೆ. ಈ ಚಿತ್ರದಲ್ಲಿ ಕಿಶೋರ್‌ ಸಿಂಧೂರ ಲಕ್ಷ್ಮಣನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು, ಚಿತ್ರಕ್ಕೆ ನಾನಾ ಶಿವಶಂಕರ್‌ ದೇವನಹಳ್ಳಿ ನಿರ್ಮಾಪಕರು.

ಚಿತ್ರದ ಬಗ್ಗೆ ಹೇಳಿಕೊಳ್ಳುವ ಪಲ್ಲಕ್ಕಿ ರಾಧಾಕೃಷ್ಣ, “ಜನವರಿಯಲ್ಲಿ ಚಿತ್ರೀಕರಣ ಶುರುವಾಗಲಿದೆ. ಬಾಗೇಪಲ್ಲಿ ಗಡಿಭಾಗ ಸೇರಿದಂತೆ ಉತ್ತರಕರ್ನಾಟಕದ ಹಲವು ಸ್ಥಳಗಳಲ್ಲಿ ಚಿತ್ರೀಕರಿಸಲಾಗುವುದು.

ಸಿಂಧೂರ ಲಕ್ಷ್ಮಣ ಅವರನ್ನು ಮಹಾರಾಷ್ಟ್ರ ಸರ್ಕಾರ ದರೋಡೆಕೋರ ಎಂದು ಬಿಂಬಿಸಿದೆ. ಆದರೆ, ಕರ್ನಾಟಕ ಸರ್ಕಾರ ಅವನೊಬ್ಬ ದೇಶಭಕ್ತ ಎಂಬುದನ್ನು ಸಾರಿದೆ. ಇಲ್ಲಿ ಕ್ರಾಂತಿಕಾರಿ ವಿಷಯಗಳೊಂದಿಗೆ,ದೇಶಪ್ರೇಮ ಎಷ್ಟಿತ್ತು ಎಂಬುದನ್ನು ಹೇಳಹೊರಟಿದ್ದೇನೆ.ಇಲ್ಲಿ ಕಮರ್ಷಿಯಲ್‌ ಅಂಶಗಳ ಜೊತೆಗೆ ಮನರಂಜನೆಯೂ ಇರಲಿದೆ.

ಇಂತಹ ಚಿತ್ರ ಮಾಡುವಾಗ, ಅವಧಿ ಹೆಚ್ಚು ಇರಲೇಬೇಕು. 2.50 ಗಂಟೆ ಅವಧಿಯೊಳಗೆ ಸಾಧ್ಯವಾದಷ್ಟು ಸಿಂಧೂರ ಲಕ್ಷ್ಮಣನ ಸಾಹಸವನ್ನು ತೋರಿಸುವ ಪ್ರಯತ್ನ ಮಾಡುತ್ತೇನೆ. ಚಿತ್ರದಲ್ಲಿ ಸಾಯಿಕುಮಾರ್‌, ರವಿಶಂಕರ್‌, ಗಿರೀಶ್‌ ಗಲಿವರ್‌, ಸೀನು ಮಾಕಾಳಿ,
ಸೀಮಾ ಬಿಸ್ವಾಸ್‌, ಅನುಪಮ್‌ ಖೇರ್‌,ದೊಡ್ಡಣ್ಣ ಮತ್ತು ಚರಣ್‌ರಾಜ್‌ ಇತರರು ನಟಿಸಲಿದ್ದಾರೆ’ ಎಂದು ವಿವರ ಕೊಡುತ್ತಾರೆ ಪಲ್ಲಕ್ಕಿ.
ನಿರ್ಮಾಪಕ ಶಿವಶಂಕರ್‌ ಅವರಿಗೆ ಕಥೆ ಕೇಳಿ, ರಾಜ್ಯದ ಜನರಿಗೆ ಆ ವೀರನ ಪರಿಚಯ ಮಾಡಿಕೊಡಬೇಕು ಎಂಬ ಆಸೆಯಿಂದ ನಿರ್ಮಾಣಕ್ಕಿಳಿದಿದ್ದಾರಂತೆ.ಚಿತ್ರಕ್ಕೆ ಗಂಗಾಧರ್‌ ಕೂಡ ಸಾಥ್‌ ಕೊಡುತ್ತಿದ್ದಾರೆ. ಇನ್ನು, ಈ ಹಿಂದೆ “ದೇವನಹಳ್ಳಿ’ ಚಿತ್ರದಲ್ಲಿ ನಟಿಸಿದ್ದ ಜಗ್ಗಿ ಕೂಡ ಇಲ್ಲೊಂದು ಪಾತ್ರ ನಿರ್ವಹಿಸುತ್ತಿದ್ದಾರೆ. ಅಂದು ಗುಂಡು ಎಂಬ ಕಲಾವಿದ ರಚಿಸಿದ ಕುದುರೆ ಮೇಲಿರುವ ಶೂರ ಸಿಂಧೂರ ಲಕ್ಷ್ಮಣನ ಭಾವಚಿತ್ರ ಅನಾವರಣ ಮಾಡಲಾಯಿತು. ಅಂದು ಚಿತ್ರತಂಡಕ್ಕೆ ಶುಭಹಾರೈಸಲು ವಾಣಿಜ್ಯ ಮಂಡಳಿ ಅಧ್ಯಕ್ಷ ಎಸ್‌.ಎ.ಚಿನ್ನೇಗೌಡ ಅವರು ಆಗಮಿಸಿದ್ದರು. ಚಿತ್ರಕ್ಕೆ ಅರ್ಜುನ್‌ ಜನ್ಯ ಸಂಗೀತವಿದೆ. ಥ್ರಿಲ್ಲರ್‌ ಮಂಜು ಸಾಹಸ, ಗೌತಮ್‌ ಸಂಕಲನವಿದೆ. 

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.