ತೆರೆ ಹಿಂದೆ ಪಳನಿ ಸೌಂಡ್


Team Udayavani, May 31, 2019, 6:00 AM IST

v-26

ಚಿತ್ರರಂಗದಲ್ಲಿ ತೆರೆಮೇಲೆ ಸಿಗುವಷ್ಟು ಮನ್ನಣೆ, ತೆರೆಮರೆಯಲ್ಲಿ ಕೆಲಸ ಮಾಡುವ ತಂತ್ರಜ್ಞರಿಗೆ ಸಿಗುವುದಿಲ್ಲ ಎನ್ನುವುದು ವಾಸ್ತವ ಸತ್ಯ. ಒಂದು ಚಿತ್ರ ಯಶಸ್ವಿಯಾಗಬೇಕಾದರೆ, ಅದರ ಕಲಾವಿದರಷ್ಟೇ, ತೆರೆಯ ಹಿಂದೆ ಕೆಲಸ ಮಾಡಿರುವ ತಂತ್ರಜ್ಞರೂ ಮುಖ್ಯವಾಗುತ್ತಾರೆ ಎಂಬ ವಾಸ್ತವ ಸತ್ಯವನ್ನು ಅನೇಕ ವೇಳೆ ಚಿತ್ರರಂಗಕ್ಕಾಗಲಿ, ಪ್ರೇಕ್ಷಕರ ಗಮನಕ್ಕಾಗಲಿ ಬರುವುದೇ ಇಲ್ಲ.

ಕಳೆದ ಎರಡು ದಶಕಗಳಿಂದ ಚಿತ್ರರಂಗ­ದಲ್ಲಿ ಸದ್ದಿಲ್ಲದೆ ತಾನಾಯಿತು, ತನ್ನ ಕೆಲಸವಾಯಿತು ಅಂತಿರುವ ಚಿತ್ರರಂಗದ ಸಂಗೀತ ಮಾಂತ್ರಿಕರೊಬ್ಬರು ತನ್ನ ಕೆಲಸಗ ಳಿಂದಲೇ ಗುರುತಿಸಿಕೊಳ್ಳುತ್ತಿದ್ದಾರೆ. ಅಂದ ಹಾಗೆ, ಅವರ ಹೆಸರು ಪಳನಿ ಸೇನಾಪತಿ.

ಸೌಂಡ್‌ ಇಂಜಿನಿಯರ್‌ ಆಗಿ ಚಿತ್ರರಂಗದಲ್ಲಿ ವೃತ್ತಿ ಜೀವನವನ್ನು ಆರಂಭಿಸಿದ ಪಳನಿ ಸೇನಾಪತಿ ಇಂದು ಕನ್ನಡ ಚಿತ್ರರಂಗದ ಬೇಡಿಕೆಯ ಸಂಗೀತ ನಿರ್ದೇಶಕ ಮತ್ತು ಹಿನ್ನೆಲೆ ಸಂಗೀತ ನಿರ್ದೇಶಕರಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಇಲ್ಲಿಯವರೆಗೆ ಕನ್ನಡ, ಇಂಗ್ಲೀಷ್‌, ಹಿಂದಿ, ಬೆಂಗಾಲಿ, ಮರಾಠಿ, ಮಲೆಯಾಳಂ, ತೆಲುಗು, ತುಮಿಳು ಹೀಗೆ ಬೇರೆ ಬೇರೆ ಭಾಷೆಗಳ ಸುಮಾರು 900ಕ್ಕೂ ಹೆಚ್ಚು ಸಿನಿಮಾಗಳಿಗೆ ಸೌಂಡ್‌ ಇಂಜಿನಿಯರ್‌ ಆಗಿ ಕೆಲಸ ಮಾಡಿರುವ ಪಳನಿ ಸೇನಾಪತಿ, ಬಾಲಿವುಡ್‌ನ‌ ಲಕ್ಷೀಕಾಂತ್‌ ಪ್ಯಾರಲಾಲ್, ಇಸ್ಮೆ ೖಲ್ ದರ್ಬಾರ್‌, ಟಾಲಿವುಡ್‌ನ‌ ಇಳಯರಾಜ, ದೇವ, ಕೀರವಾಣಿ, ರಾಜ್‌ ಕೋಟಿ, ಹಂಸಲೇಖಾ ಸೇರಿದಂತೆ ಭಾರತೀಯ ಚಿತ್ರರಂಗದ ಈಗಿನ ಬಹುತೇಕ ಎಲ್ಲಾ ಸಂಗೀತ ದಿಗ್ಗಜರೊಂದಿಗೆ ಕೆಲಸ ಮಾಡಿದ ಹೆಗ್ಗಳಿಕೆ ಇದೆ.

ಇನ್ನು ಕಳೆದ ವರ್ಷ ತೆಲುಗಿನಲ್ಲಿ ‘ಅನುಕೋನಿ ಓ ಕಥಾ’ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದ ಪಳನಿ ಅಲ್ಲಿಯೂ ಸೈ ಎನಿಸಿಕೊಂಡಿದ್ದರು. ಈ ಚಿತ್ರದ ಹಾಡುಗಳು ಟಾಲಿವುಡ್‌ನ‌ಲ್ಲಿ ಸಾಕಷ್ಟು ಸದ್ದು ಮಾಡಿದ್ದು, ತೆಲುಗಿನಲ್ಲಿ ಹಲವು ಅವಕಾಶಗಳನ್ನು ತಂದುಕೊಡುತ್ತಿವೆ. ಈಗಾಗಲೇ ಪಳನಿ ಸೇನಾಪತಿ ಸಂಗೀತ ಸಂಯೋಜಿಸಿರುವ ಎಡೆಯೂರು ಸಿದ್ದಲಿಂಗೇಶ್ವರ ಸ್ವಾಮಿ ಮ್ಯೂಸಿಕ್‌ ಆಲ್ಬಂ ಮತ್ತು ಜೀಸಸ್‌ ಆಲ್ಬಂಗಳಿಗೆ ಕೇಳುಗರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಸದ್ಯ ಶಿರಡಿ ಸಾಯಿಬಾಬ ಕುರಿತಂತೆ 45 ನಿಮಿಷದ 108 ಶ್ಲೋಕಗಳ ಧ್ವನಿಸಾಂದ್ರಿಕೆಯನ್ನು ಸಿದ್ದಪಡಿಸಲು ಯೋಜನೆ ಹಾಕಿಕೊಂಡಿ­ದ್ದಾರೆ. ಇದರಿಂದಿಗೆ ಕನ್ನಡದಲ್ಲಿ ಮುಂಬರಲಿರುವ ‘ಸದ್ಗುಣ ಸಂಪನ್ನ ಮಾದವ’ ಸೇರಿದಂತೆ ಐದು ಚಿತ್ರಗಳು, ಮೂರು ಮರಾಠಿ ಭಾಷೆಯ ಚಿತ್ರಗಳಿಗೂ ಪಳನಿ ಅವರ ಸಂಗೀತ ಸಂಯೋಜನೆಯಿದೆ. ಈ ವರ್ಷಾಂತ್ಯದಲ್ಲಿ ಪಳನಿ ಸಂಗೀತದ ಎರಡು-ಮೂರು ಚಿತ್ರಗಳು ತೆರೆಗೆ ಬರಲಿದ್ದು, ಕೇಳುಗರಿಗೆ ಪಳನಿ ಸಂಗೀತ ಎಷ್ಟರ ಮಟ್ಟಿಗೆ ಇಷ್ಟವಾಗಲಿದೆ ಅನ್ನೋದು ಹಾಡುಗಳು ಹೊರಬಂದ ಮೇಲಷ್ಟೇ ಗೊತ್ತಾಗಲಿದೆ.•

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.