ಭಟ್ಟರ ಕಥೆಗೆ ತಲೆದೂಗಿದ ಪ್ರೇಕ್ಷಕರು..

ಪಂಚತಂತ್ರದಲ್ಲಿ ಮಂಡ್ಯ ಎಲೆಕ್ಷನ್‌ ರಿಸಲ್ಟ್ !

Team Udayavani, Apr 5, 2019, 6:00 AM IST

Suchi-Panchatantra-726

‘ಒಂದು ಕಡೆ ಮಂಡ್ಯ ಎಲೆಕ್ಷನ್‌, ಇನ್ನೊಂದು ಕಡೆ ಎಸ್ಸೆಸೆಲ್ಸಿ ಎಕ್ಸಾಂ, ಜೊತೆಗೆ ಐಪಿಎಲ್‌ ಮ್ಯಾಚ್‌, ಟಿವಿಯಲ್ಲಿ ಕೆ.ಜಿ.ಎಫ್ ಸಿನಿಮಾ, ಇದಲ್ಲದೆ ನಮ್ಮ ಜೊತೆಗೆ ಬಿಡುಗಡೆಯಾದ ಹತ್ತು ಸಿನಿಮಾಗಳು. ಇಷ್ಟೆಲ್ಲಾ ಇರುವಾಗಲೇ ನಮ್ಮ ಸಿನಿಮಾ ಥಿಯೇಟರ್‌ಗೆ ಬಂದಿತ್ತು. ಎಲ್ಲಿ ಹತ್ತರ ಜೊತೆ ನಮ್ದು ಒಂದ್‌ ಸಿನಿಮಾ ಆಗುತ್ತೇನೋ ಎಂಬ ಭಯವಿತ್ತು. ಆದ್ರೆ ಅವೆಲ್ಲಾ ಇದ್ರೂ, ಅದರಿಂದ ನಮಗಂತೂ ಯಾವುದೇ ತೊಂದರೆಯಾಗಿಲ್ಲ. ಹಿರಿಯರು, ಕಿರಿಯರು ಎಲ್ರೂ ಬಂದು ಸಿನಿಮಾ ನೋಡ್ತಿದ್ದಾರೆ. ಜನ ಸಿನಿಮಾನ ಗೆಲ್ಲಿಸಿದ್ದಾರೆ.’ ಆರಂಭದಲ್ಲಿ ಹೀಗೆ ಹೇಳುತ್ತಾ ಮಾತಿಗಿಳಿದರು ನಿರ್ದೇಶಕ ಯೋಗರಾಜ್‌ ಭಟ್‌. ಕಳೆದ ವಾರವಷ್ಟೇ ಭಟ್ಟರ ಬಹು ನಿರೀಕ್ಷಿತ “ಪಂಚತಂತ್ರ’ ತೆರೆಗೆ ಬಂದಿದೆ. ಚಿತ್ರ ಹಿರಿಯರು, ಕಿರಿಯರು ಎನ್ನದೇ ಎಲ್ಲಾ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗುತ್ತಿದೆ. ಇದೇ ಖುಷಿಯನ್ನು ಹಂಚಿಕೊಳ್ಳಲು ಯೋಗರಾಜ್‌ ಭಟ್ಟರು ತಂಡದ ಜೊತೆ ಪತ್ರಕರ್ತರ ಮುಂದೆ ಬಂದಿದ್ದರು.


ಇನ್ನು, ಮಂಡ್ಯ ಚುನಾವಣೆ ಕಾವು ಜೋರಾಗುತ್ತಿದ್ದು, ನೀನಾ.. ನಾನಾ? ಅನ್ನೋ ಹಣಾಹಣಿ ಜೋರಾಗಿದೆ. ಎಲ್ಲಾದಕ್ಕೂ ಏಪ್ರಿಲ್‌ 18ರಂದು ಚುನಾವಣೆ ಮುಗಿದ ಬಳಿಕ ಉತ್ತರ ಸಿಗಲಿದೆ. ಆದರೆ, ಭಟ್ಟರ “ಪಂಚತಂತ್ರ’ ಚಿತ್ರದ ಕ್ಲೈಮ್ಯಾಕ್ಸ್‌ನಲ್ಲೇ ಮಂಡ್ಯ ಎಲೆಕ್ಷನ್‌ ರಿಸೆಲ್ಟ್ ಏನಾಗಬಹುದು ಅಂತ ಗೊತ್ತಾಗಲಿದೆಯಂತೆ! ಹೌದು, “ಪಂಚತಂತ್ರ’ ಚಿತ್ರದ ಸಾರಾಂಶ ಇಂದಿನ ರಾಜಕೀಯ ಸನ್ನಿವೇಶಕ್ಕೆ ಕನೆಕ್ಟ್ ಆಗುವಂತಿದ್ದು, ಚಿತ್ರವನ್ನು ನೋಡಿದ ಅನೇಕರು “ಮಂಡ್ಯದಲ್ಲಿ ಎಲೆಕ್ಷನ್‌ ನಡೆಯುತ್ತಿರುವಾಗಲೇ ಕಾದು ನೋಡಿ ಚಿತ್ರವನ್ನು ಬಿಡುಗಡೆ ಮಾಡಿದ್ದೀರಾ?’ ಎಂದು ಭಟ್ಟರನ್ನು ಕೇಳುತ್ತಿದ್ದಾರಂತೆ. ಅಲ್ಲದೆ, ಸೋಷಿಯಲ್‌ ಮೀಡಿಯಾಗಳಲ್ಲಿ “ಮಂಡ್ಯ ಎಲೆಕ್ಷನ್‌ ಯಾರ್‌ ಗೆಲ್ತಾರೆ ಅಂತ ಪೋಲಿ ಭಟ್ರಾ ಪಂಚತಂತ್ರ ಫಿಲಂ ಕ್ಲೈಮ್ಯಾಕ್ಸ್‌ನಲ್ಲಿ ಮೊದ್ಲೇ ಹೇಳವ್ರೆ’ ಎಂದು ಟ್ರೋಲ್‌ ಮಾಡುತ್ತಿದ್ದಾರೆ. ಈ ಬಗ್ಗೆ ಮಾತನಾಡುವ ಯೋಗರಾಜ್‌ ಭಟ್‌, “ಚಿಕ್ಕವರು ತಮ್ಮ ಯೋಚನೆಯಲ್ಲಿ ದೊಡ್ಡವರಾಗುತ್ತಾರೆ. ಇನ್ನು ದೊಡ್ಡವರು, ಚಿಕ್ಕವರು ಗೆಲ್ಲಲು ಹೃದಯವಂತರಾಗುತ್ತಾರೆ. ಸಿನಿಮಾದಲ್ಲಿ ಹಿರಿಯರು ಮತ್ತು ಕಿರಿಯರ ನಡುವಿನ ಜುಗಲ್‌ಬಂದಿ ಅದೆಲ್ಲವನ್ನೂ ತೋರಿಸುತ್ತದೆ. ಗೆಲ್ಲಬಲ್ಲೆ ಹೃದಯವನ್ನು… ನಿತ್ಯ ಬಾಳ ಸಮರವನ್ನು… ಮಮತೆಯಿಂದ ಮಾತ್ರ, ಇದೇ ಪಂಚತಂತ್ರ ಎನ್ನುವ ಜಯಂತ ಕಾಯ್ಕಿಣಿ ಅವರ ಸಾಲುಗಳೇ ಪಂಚತಂತ್ರದ ಕ್ಲೈಮ್ಯಾಕ್ಸ್‌ಗೆ ಪ್ರೇರಣೆಯಾಗಿದ್ದು, ಅದಕ್ಕೆ ಹೊಂದಿಕೊಂಡಂತೆ ಉಳಿದೆಲ್ಲವೂ ಬಂದಿರುವುದು ಕಾಕತಾಳೀಯವಷ್ಟೇ’ ಎನ್ನುತ್ತಾರೆ. ಇವೆಲ್ಲದರ ನಡುವೆ ‘ಪಂಚತಂತ್ರ’ದ ರಿಮೇಕ್‌ ಮತ್ತು ಡಬ್ಬಿಂಗ್‌ ರೈಟ್ಸ್‌ ಉತ್ತಮ ಬೆಲೆಗೆ ಮಾರಾಟವಾಗಿವೆಯಂತೆ. ಅಲ್ಲದೆ “ಈ ಚಿತ್ರವನ್ನು ತೆಲುಗಿನಲ್ಲಿ ರಿಮೇಕ್‌ ಮಾಡಲು ಅಲ್ಲಿನ ಹಲವು ಹಿರಿಯ ನಿರ್ಮಾಪಕರು ಉತ್ಸುಕರಾಗಿದ್ದು, ಆ ಬಗ್ಗೆ ಕೂಡ ಮಾತುಕತೆ ಶುರುವಾಗಿದೆ’ ಎನ್ನುತ್ತಾರೆ ಭಟ್ಟರು. ಇದೇ ವೇಳೆ ಹಾಜರಿದ್ದ ಚಿತ್ರದ ನಾಯಕ ನಟ ವಿಹಾನ್‌, ನಾಯಕಿ ಸೋನಾಲ್‌, ನಟ ಕಂ ನಿರ್ಮಾಪಕ ಕರಿಸುಬ್ಬು, ಸಾಗರ್‌, ನಂದು, ಛಾಯಾಗ್ರಹಕ ಜ್ಞಾನ ಮೂರ್ತಿ, ನಿರ್ಮಾಪಕರು ಮತ್ತು ಚಿತ್ರದ ಕಲಾವಿದರು, ತಂತ್ರಜ್ಞರು “ಪಂಚತಂತ್ರ’ದ ಅನುಭವಗಳನ್ನು ಹಂಚಿಕೊಂಡರು.

— ಜಿ.ಎಸ್‌.ಕಾರ್ತಿಕ್‌ ಸುಧನ್‌

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.