ಇವನ್ಯಾರ ಮಗನೋ ಹಿಂಗವ್ನಲ್ಲ…

ಪಿಕ್ಚರ್‌ ಅಬಿ ಬಾಕಿ ಹೈ...

Team Udayavani, May 17, 2019, 6:00 AM IST

16

ಸಾಮಾನ್ಯವಾಗಿ ಹೀರೋಗಳನ್ನ ಸಿನಿಮಾಗಳಲ್ಲಿ ಭರ್ಜರಿ ಬಿಲ್ಡಪ್‌ ಸೀನ್‌ಗಳ ಮೂಲಕ, ಅದ್ಧೂರಿ ಸಾಂಗ್ಸ್‌ ಮೂಲಕ ಇಂಟ್ರಡ್ನೂಸ್‌ ಮಾಡುವುದನ್ನು ನೀವೆಲ್ಲ ನೋಡಿರುತ್ತೀರಿ. ಆದರೆ ಇಲ್ಲೊಂದು ಚಿತ್ರತಂಡ ಚಿತ್ರ ಬಿಡುಗಡೆಗೂ ಮೊದಲೇ ಹೀರೋಗಾಗಿಯೇ ವಿಶೇಷ ಮ್ಯೂಸಿಕ್‌ ಅಲ್ಬಂ ಒಂದನ್ನು ಮಾಡಿ ಆ ಮೂಲಕ ಹೀರೋ ಇಂಟ್ರೋಡಕ್ಷನ್‌ ಕೊಟ್ಟು ಬಳಿಕ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುತ್ತಿದೆ.

ಅಂದಹಾಗೆ, ಆ ಮ್ಯೂಸಿಕ್‌ ಅಲ್ಬಂ ಹೆಸರು “ಏ ಸೋನಾ…’ ಹಲವು ವರ್ಷಗಳಿಂದ ಕನ್ನಡಪರ ಹೋರಾಟಗಳಲ್ಲಿ ಗುರುತಿಸಿಕೊಂಡಿರುವ ಬಸವರಾಜ್‌ ಪಡಕೋಟೆ ಈ ಮ್ಯೂಸಿಕ್‌ ಅಲ್ಬಂ ಅನ್ನು ನಿರ್ಮಿಸಿದ್ದು, ಈ ಅಲ್ಬಂ ಮೂಲಕ ತಮ್ಮ ಪುತ್ರ ರಘು ಪಡಕೋಟೆ ಅವರನ್ನು ಹೀರೋ ಆಗಿ ಪ್ರೇಕ್ಷಕರಿಗೆ ಪರಿಚಯಿಸಿದ್ದಾರೆ. “ಏ ಸೋನಾ…’ ಅಲ್ಬಂನ ಹಾಡಿನಲ್ಲಿ ರಘು ಪಡಕೋಟೆ ಅವರಿಗೆ ನಾಯಕಿಯಾಗಿ ಶಾಲಿನಿ ಗೌಡ ಹೆಜ್ಜೆ ಹಾಕಿದ್ದಾರೆ. ಸರಿಗಮಪ ಖ್ಯಾತಿಯ ಸುನೀಲ್‌, ಈ ಅಲ್ಬಂನ ಹಾಡಿಗೆ ಸಂಗೀತ ಸಂಯೋಜಿಸಿ, ಹಾಡಿಗೆ ಧ್ವನಿಯಾಗಿದ್ದಾರೆ. ಜೊತೆ ಹಾಡಿನಲ್ಲಿ ತೆರೆಮೇಲೆ ಕೂಡ ಕಾಣಿಸಿಕೊಂಡಿದ್ದಾರೆ.

ಇತ್ತೀಚೆಗೆ “ಏ ಸೋನಾ…’ ಮ್ಯೂಸಿಕ್‌ ಅಲ್ಬಂ ಅದ್ಧೂರಿಯಾಗಿ ಬಿಡುಗಡೆಯಾಯಿತು. ಕನ್ನಡಪರ ಹೋರಾಟಗಾರ ಟಿ. ಎ. ನಾರಾಯಣ ಗೌಡ, ಲಹರಿ ಸಂಸ್ಥೆಯ ಮುಖ್ಯಸ್ಥ ವೇಲು, ನಟ ರಾಮ್‌, ಗಣೇಶ್‌ ರಾವ್‌ ಕೇಸರ್ಕರ್‌ ಸೇರಿದಂತೆ ಚಿತ್ರರಂಗ ಮತ್ತು ರಾಜಕೀಯ ರಂಗದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದು, “ಏ ಸೋನಾ…’ ಮ್ಯೂಸಿಕ್‌ ಅಲ್ಬಂ ಮತ್ತು ರಘು ಪಡಕೋಟೆ ನಾಯಕನಾಗಿ ಅಭಿನಯಿಸುತ್ತಿರುವ ಚೊಚ್ಚಲ ಚಿತ್ರ “ಯಾರ್‌ಮಗ’ ಚಿತ್ರದ ಟೈಟಲ್‌ ಪೋಸ್ಟರ್‌ ಅನ್ನು ಅನಾವರಣಗೊಳಿಸಿ, ಚಿತ್ರತಂಡಕ್ಕೆ ಶುಭ ಕೋರಿದರು. ಇದೇ ವೇಳೆ ಮಾತನಾಡಿದ ನವನಟ ರಘು ಪಡಕೋಟೆ, “ಬಾಲ್ಯದಿಂದಲೂ ಚಿತ್ರರಂಗದತ್ತ ಆಸಕ್ತಿ ಬೆಳೆಸಿಕೊಂಡಿರುವ ನಾನು ಇಲ್ಲೇ ಏನಾದರೂ ಸಾಧನೆ ಮಾಡಬೇಕು ಎಂಬ ಉದ್ದೇಶದಿಂದ ಇದೇ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡಿದ್ದೇನೆ. ಚಿತ್ರರಂಗಕ್ಕೆ ಬರುವುದಕ್ಕೆ ಮುಂಚೆ ಬಹಳ ವರ್ಷಗಳಿಂದ ನೃತ್ಯ ಕಲಿಕೆ, ಅಭಿನಯದ ತರಬೇತಿ ಪಡೆದುಕೊಳ್ಳುತ್ತಿದ್ದೇನೆ. ಏ ಸೋನಾ… ಮ್ಯೂಸಿಕ್‌ ಅಲ್ಬಂ ಮೂಲಕ ನನ್ನ ಪ್ರತಿಭೆಯನ್ನು ಪ್ರೇಕ್ಷಕರಿಗೆ ಪರಿಚಯ ಮಾಡಿ ನಂತರ ಚಿತ್ರದಲ್ಲಿ ಅಭಿನಯಿಸುವ ನಿರ್ಧಾರಕ್ಕೆ ಬಂದೆ’ ಎಂದರು.

ಚಿತ್ರರಂಗ ಮತ್ತು ಅಭಿನಯದ ಕಡೆಗೆ ರಘು ಅವರಿಗಿದ್ದ ಆಸಕ್ತಿಯನ್ನು ನೋಡಿ ರಘು ಅವರ ತಂದೆ ಬಸವರಾಜ್‌ ಪಡಕೋಟೆ ತಮ್ಮ “ಪಡಕೋಟೆ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ ಚೊಚ್ಚಲ ಬಾರಿಗೆ “ಯಾರ್‌ಮಗ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸುರೇಶ್‌ ರಾಜು ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದ ಹಾಡುಗಳಿಗೆ ಲೋಕಿ ಸಂಗೀತ ಸಂಯೋಜಿಸುತ್ತಿದ್ದು, ಚಿತ್ರಕ್ಕೆ ಸತೀಶ್‌ ಛಾಯಾಗ್ರಹಣವಿದೆ. ಯಾರ್‌ಮಗ’ ಚಿತ್ರದಲ್ಲಿ ನಾಯಕ ರಘು ಪಡಕೋಟೆಗೆ ನವನಟಿ ವಿದ್ಯಾ ಪ್ರಭು ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಉಳಿದಂತೆ ಚಿತ್ರದಲ್ಲಿ ಹಲವು ಹಿರಿಯ, ಕಿರಿಯ ಕಲಾವಿದರ ತಾರಾಗಣ ಇರಲಿದೆ ಎಂದಿದೆ ಚಿತ್ರತಂಡ.

ಸದ್ಯ “ಯಾರ್‌ಮಗ’ ಚಿತ್ರದ ಚಿತ್ರೀಕರಣಕ್ಕೆ ಅಣಿಯಾಗಿರುವ ಚಿತ್ರತಂಡ, ಇದೇ ವರ್ಷಾಂತ್ಯಕ್ಕೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ. “ಯಾರ್‌ಮಗ’ ಚಿತ್ರದ ಮೂಲಕ ಬೆಳ್ಳಿತೆರೆ ಪ್ರವೇಶಿಸಲು ಸಿದ್ಧತೆ ಮಾಡಿಕೊಂಡಿರುವ ನವನಟ ರಘು ತೆರೆಮೇಲೆ ಎಷ್ಟರ ಮಟ್ಟಿಗೆ ಕಮಾಲ್‌ ಮಾಡಲಿದ್ದಾರೆ ಅನ್ನೋದಕ್ಕೆ ಚಿತ್ರ ತೆರೆಗೆ ಬಂದ ಮೇಲಷ್ಟೇ ಉತ್ತರ ಸಿಗಲಿದೆ.

ಜಿ.ಎಸ್‌.ಕೆ ಸುಧನ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.