ಅಧ್ಯಕ್ಷೀಯ ಭಾಷಣ

ಶರಣ್‌ ಹೊಸ ನಿರೀಕ್ಷೆ ...

Team Udayavani, Jun 28, 2019, 5:00 AM IST

26

ಯೋಗಾ­ನಂದ ಮುದ್ದಾನ್‌ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನಕ್ಕಾಗಿ ನಿಂತಿದ್ದಾಗ, ಅವರಿಗೊಂದು ಫೋನ್‌ ಬಂತಂತೆ. ಫೋನ್‌ ಮಾಡಿದ ವ್ಯಕ್ತಿ “ಈ ಸಿನಿಮಾವನ್ನು ನೀವೇ ನಿರ್ದೇಶನ ಮಾಡಿ’ ಎಂದರಂತೆ. ಯೋಗಾನಂದ್‌ ಮುಖದಲ್ಲಿ ನಗು. ದೇವರ ಆಶೀರ್ವಾದ ಪಡೆದು ಬೆಂಗಳೂರಿಗೆ ಬಂದ ಯೋಗಾನಂದ್‌, ಆ ಸಿನಿಮಾವನ್ನು ಕೈಗೆತ್ತಿಕೊಳ್ಳುತ್ತಾರೆ. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಹೀಗೆ ಯೋಗಾನಂದ್‌ ನಿರ್ದೇಶಿಸಿದ ಚಿತ್ರ “ಅಧ್ಯಕ್ಷ ಇನ್‌ ಅಮೆರಿಕ’. ಅಷ್ಟಕ್ಕೂ ಯಾರು ಈ ಯೋಗಾನಂದ್‌ ಎಂದು ನೀವು ಕೇಳಬಹುದು. ಇಲ್ಲಿವರೆಗೆ ಅನೇಕ ಕಮರ್ಷಿಯಲ್‌ ಸಿನಿಮಾಗಳಿಗೆ ಸಂಭಾಷಣೆ ಜೊತೆಗೆ ಸಹ ನಿರ್ದೇಶಕರಾಗಿ ಕೆಲಸ ಮಾಡಿರುವವರು ಯೋಗಾನಂದ್‌. ಈಗ “ಅಧ್ಯಕ್ಷ ಇನ್‌ ಅಮೆರಿಕ’ ಮೂಲಕ ನಿರ್ದೇಶಕರಾಗಿದ್ದಾರೆ.

“ಅಧ್ಯಕ್ಷ’ ಎಂಬ ಪದ ಕೇಳಿದ ಕೂಡಲೇ ನಿಮಗೊಂದು ಹೆಸರು ಖಂಡಿತಾ ನೆನಪಿಗೆ ಬರುತ್ತದೆ. ಅದು ನಟ ಶರಣ್‌ ಅವರದು. ಶರಣ್‌ಗೆ “ಅಧ್ಯಕ್ಷ’ ಚಿತ್ರ ದೊಡ್ಡ ಯಶಸ್ಸು ತಂದುಕೊಟ್ಟಿದ್ದು ನಿಮಗೆ ಗೊತ್ತೇ ಇದೆ. ಈಗ “ಅಧ್ಯಕ್ಷ ಇನ್‌ ಅಮೆರಿಕ’ ಚಿತ್ರದಲ್ಲೂ ಶರಣ್‌ ನಾಯಕರಾಗಿ ನಟಿಸಿದ್ದಾರೆ. ಇವರಿಗೆ ಜೋಡಿಯಾಗಿ ರಾಗಿಣಿ ಕಾಣಿಸಿಕೊಂಡಿದ್ದಾರೆ. ಅಂದಹಾಗೆ, ಇದು ಮಲಯಾಳಂನ “ಟು ಸ್ಟೇಟ್ಸ್‌’ ಚಿತ್ರದಿಂದ ಸ್ಫೂರ್ತಿ ಪಡೆದ ಚಿತ್ರ. ಹಾಗಂತ ನಿರ್ದೇಶಕ ಯೋಗಾನಂದ್‌ ಯಥಾವತ್‌ ಅದನ್ನೇ ಭಟ್ಟಿ ಇಳಿಸಿಲ್ಲವಂತೆ. ಮೂಲ ಅಂಶವನ್ನಿಟ್ಟುಕೊಂಡು ಉಳಿದಂತೆ ಶರಣ್‌ ಮ್ಯಾನರಿಸಂಗೆ ತಕ್ಕಂತೆ ಬದಲಿಸಲಾಗಿದೆಯಂತೆ. ಹೆಸರಿಗೆ ತಕ್ಕಂತೆ ಚಿತ್ರದ ಶೇ. 70ರಷ್ಟು ಭಾಗವನ್ನು ಅಮೆರಿಕದ ಸಿಯಾಟಲ್‌ ಎಂಬ ಜಾಗದಲ್ಲಿ ಚಿತ್ರೀಕರಿಸಲಾಗಿದೆ. ಚಿತ್ರದ ಮೂರು ಹಾಡುಗಳನ್ನು ಕೂಡಾ ಅಲ್ಲಿನ ಸುಂದರ ತಾಣಗಳಲ್ಲಿ ಚಿತ್ರೀಕರಿಸಲಾಗಿದೆ. ಅಧ್ಯಕ್ಷ ಆದ ನಂತರ ಅಮೆರಿಕಾಕ್ಕೆ ಹೋಗಿ ಏನು ಮಾಡುತ್ತಾನೆಂಬ ಅಂಶದೊಂದಿಗೆ ಸಿನಿಮಾ ಸಾಗುತ್ತದೆ ಎನ್ನುವುದು ಯೋಗಾನಂದ್‌ ಮಾತು.

ನಾಯಕ ಶರಣ್‌ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ ಸಿನಿಮಾ ಮೂಡಿಬಂದಿರುವ ರೀತಿ. “ಇದು ದೊಡ್ಡ ಬಜೆಟ್‌ನ ಚಿತ್ರ. ನಿರ್ಮಾಪಕರು ಯಾವುದಕ್ಕೂ ಕೊರತೆ ಮಾಡದೇ ಚಿತ್ರದ ಟೈಟಲ್‌ಗೆ ತಕ್ಕಂತೆ ಸಿನಿಮಾ ಮಾಡಿದ್ದಾರೆ. ಇಲ್ಲಿ ಶರಣ್‌ ಇಷ್ಟಪಡುವವರಿಗೆ ಬೇಕಾದ ಎಲ್ಲಾ ಅಂಶಗಳು ಇವೆ. ನಿರ್ದೇಶಕ ಯೋಗಾನಂದ್‌ ಬರಹಗಾರರಾಗಿರುವುದರಿಂದ ಒಳ್ಳೆಯ ಸಂಭಾಷಣೆ ಇದೆ’ ಎಂಬುದು ಶರಣ್‌ ಮಾತು. ಚಿತ್ರದಲ್ಲಿ ರಾಗಿಣಿ ಎನ್‌ಆರ್‌ಐ ಆಗಿ ಕಾಣಿಸಿಕೊಂಡಿದ್ದಾರೆ. ಸಖತ್‌ ಬೋಲ್ಡ್‌ ಅಂಡ್‌ ಗ್ಲಾಮರಸ್‌ ಪಾತ್ರ ಸಿಕ್ಕಿದೆಯಂತೆ. ಸಾಮಾನ್ಯವಾಗಿ ಶರಣ್‌ ಸಿನಿಮಾಗಳಿಗೆ ಅರ್ಜುನ್‌ ಜನ್ಯಾ ಸಂಗೀತವಿರುತ್ತದೆ. ಆದರೆ, ಈ ಬಾರಿ “ಅಧ್ಯಕ್ಷ ಇನ್‌ ಅಮೆರಿಕ’ ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನೀಡಿದ್ದಾರೆ. ಚಿತ್ರವನ್ನು ಪೀಪಲ್‌ ಮೀಡಿಯಾ ಫ್ಯಾಕ್ಟರಿ ನಿರ್ಮಿಸಿದ್ದು, ಶೈಲೇಂದ್ರ ಬಾಬು ವಿತರಣೆಯ ಹಕ್ಕು ಪಡೆದಿದ್ದಾರೆ. ಮುಂದಿನ ತಿಂಗಳು ಚಿತ್ರ ಬಿಡುಗಡೆಯಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.