ಹಾರರ್ ಚಿತ್ರದಲ್ಲಿ ಪ್ರಿಯಾಂಕಾ
ಬೆಚ್ಚಿ ಬೀಳಿಸಲು ಪ್ರಿಯಾಮಣಿ, ಛಾಯಾಸಿಂಗ್ ಸಾಥ್
Team Udayavani, Nov 13, 2020, 1:35 PM IST
ಹಿರಿಯ ನಿರ್ದೇಶಕ ಪಿ.ವಾಸು ಕನ್ನಡ ಸಿನಿಮಾಪ್ರೇಕ್ಷಕರಿಗೆ ಚಿರಪರಿಚಿತ. ಹಲವು ಹಿಟ್ ಸಿನಿಮಾಗಳ ಮೂಲಕ ಪ್ರೇಕ್ಷಕರಿಗೆ ಹತ್ತಿರವಾಗಿದ್ದಾರೆ. ಈಗ ಅವರಕುಟುಂಬದಿಂದ ಮತ್ತೂಬ್ಬರು ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಡುತ್ತಿದ್ದಾರೆ. ಅದು ಪಿ.ವಾಸು ಅವರ ಸಹೋದರ ಪಿ.ವಿಮಲ್ ಅವರ ಪುತ್ರ ಗೌತಮ್ ವಿ.ಪಿ. ಚಿತ್ರರಂಗದ ಬಾಗಿಲು ಬಡಿದಿದ್ದಾರೆ. ಅದು “ಖೈಮರಾ’ ಚಿತ್ರದ ಮೂಲಕ.
ಹೀಗೊಂದು ವಿಭಿನ್ನ ಶೀರ್ಷಿಕೆಯ ಚಿತ್ರದ ಪಿ.ವಿಮಲ್ ನಿರ್ದೇಶನಕ್ಕಿಳಿದಿದ್ದಾರೆ. ಇದೊಂದು ಹಾರರ್ ಸಿನಿಮಾವಾಗಿದ್ದು,ಚಿತ್ರದ ಫಸ್ಟ್ಲುಕ್ ಟೀಸರ್ ಗಮನ ಸೆಳೆಯುತ್ತಿದೆ. ಈ ಚಿತ್ರದಲ್ಲಿ ಪ್ರಿಯಾಮಣಿ, ಪ್ರಿಯಾಂಕಾ ಉಪೇಂದ್ರ ಹಾಗೂ ಛಾಯಾಸಿಂಗ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಚಿತ್ರದ ಫಸ್ಟ್ಲುಕ್ ಬಿಡುಗಡೆ ಮಾಡಿದ ನಟ ಉಪೇಂದ್ರ ಚಿತ್ರಕ್ಕೆ ಶುಭಕೋರಿದರು. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾಗಿದ್ದು, ಮುಂದಿನ ತಿಂಗಳಿನಿಂದ ಚಿತ್ರೀಕರಣ ಆರಂಭವಾಗಲಿದೆ.
ಮತ್ತೂಮ್ಮೆ ಹಾರರ್ ಚಿತ್ರದಲ್ಲಿ ನಟಿಸುತ್ತಿರುವ ಬಗ್ಗೆ ಮಾತನಾಡುವ ಪ್ರಿಯಾಂಕಾ, ನಾನು “ಮಮ್ಮಿ’ ಚಿತ್ರದ ನಂತರ ಹಾರಾರ್ ಸಿನಿಮ ಮಾಡಿರಲಿಲ್ಲ. ನಿರ್ದೇಶಕ ಗೌತಮ್ ಅವರು ಹೇಳಿದಕಥೆ ನನಗೆ ಬಹಳ ಇಷ್ಟವಾಯಿತು. ಪ್ರಿಯಾಮಣಿ ಹಾಗೂ ಛಾಯಾಸಿಂಗ್ ಅವರೊಡನೆ ಒಟ್ಟಾಗಿ ಈ ಚಿತ್ರದಲ್ಲಿ ನಟಿಸುತ್ತಿರುವುದು ನನಗೆ ಸಂತಸ ತಂದಿದೆ’ ಎಂದರು. ಚಿತ್ರಕ್ಕೆ ಗುರುಕಿರಣ್ಸಂಗೀತ ನೀಡುತ್ತಿದ್ದು,ಕಥೆ ಭಿನ್ನವಾಗಿರುವುದರಿಂದ ಅದಕ್ಕೆ ಪೂರಕವಾದ ಹಾಡುಗಳನ್ನು ನೀಡಲು ಸಿದ್ಧತೆ ಮಾಡಿಕೊಂಡಿರುವುದಾಗಿ ಹೇಳಿದರು.20 ವರ್ಷಗಳ ನಂತರ ಪ್ರಿಯಾಂಕಾ ನಟಿಸುತ್ತಿರುವ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡುತ್ತಿದ್ದರಂತೆ. ಆರಂಭದಲ್ಲಿ ಪ್ರಿಯಾಂಕಾ ಅವರ ತೆಲುಗು ಚಿತ್ರವೊಂದಕ್ಕೆ ಗುರುಕಿರಣ್ ಸಂಗೀತ ನೀಡಿದ್ದರಂತೆ. ಈ ಚಿತ್ರವನ್ನು ಮತಿಯಲಗನ್ ನಿರ್ಮಿಸುತ್ತಿದ್ದು, ಚಿತ್ರದಲ್ಲೊಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ.
ಚಿತ್ರದ ಬಗ್ಗೆ ಮಾತನಾಡುವ ಅವರು, ನಿರ್ದೇಶಕರು, ತುಂಬಾ ಚೆನ್ನಾಗಿ ಕಥೆ ಮಾಡಿಕೊಂಡಿದ್ದಾರೆ. ಪ್ರಿಯಾಮಣಿ, ಪ್ರಿಯಾಂಕ ಉಪೇಂದ್ರ ಛಾಯಾಸಿಂಗ್ ಅವರಂತಹ ಕಲಾವಿದರೊಂದಿಗೆ ನಟಿಸುತ್ತಿರುವುದು ಖುಷಿ ಕೊಟ್ಟಿದೆ ಎನ್ನುವುದು ನಿರ್ಮಾಪಕರ ಮಾತು. ಚಿತ್ರಕ್ಕೆ ಕೆ.ಜಿ.ಎಫ್ ಖ್ಯಾತಿಯ ಶ್ರೀಕಾಂತ್ ಸಂಕಲನ, ವಿನೋದ್ ಸಾಹಸ ನಿರ್ದೇಶನವಿದೆ.
-ರವಿ ರೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ