ಮನಸಲಾಜಿಕಲ್‌ ಹಾರರ್‌


Team Udayavani, Jan 5, 2018, 10:19 AM IST

05-13.jpg

“ನಾಗವಲ್ಲಿ ವರ್ಸಸ್‌ ಆಪ್ತಮಿತ್ರರು’ ಎಂಬ ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಇತ್ತೀಚೆಗೆ ಚಿತ್ರದ ಆಡಿಯೋ ಬಿಡುಗಡೆಯಾಗಿದೆ. ಈ ಚಿತ್ರವಾದರೂ ತನ್ನ ಕೈ ಹಿಡಿಯುತ್ತದೆ, ಹಿಂದಿನ ಚಿತ್ರದ ಸೋಲನ್ನು ಮರೆಸುತ್ತದೆ ಎಂಬ ವಿಶ್ವಾಸ ಶಂಕರ್‌ ಅರುಣ್‌ ಅವರಿಗಿದೆ. 

ಹೌದು, ಅರುಣ್‌ ಅವರು ಈ ಹಿಂದೆ “ಸಪ್ನೊàಂಕಿ ರಾಣಿ’ ಎಂಬ ಸಿನಿಮಾ ನಿರ್ಮಿಸಿದ್ದರು. ಆದರೆ, ಆ ಚಿತ್ರ ಇವರಿಗೆ ಲಾಭ ತಂದುಕೊಂಡಲಿಲ್ಲ. ಮೊದಲ ಚಿತ್ರದಲ್ಲೇ ನಷ್ಟ ಅನುಭವಿಸಿದ ಅರುಣ್‌ ಅವರಿಗೆ ಅವರ ತಂದೆ-ತಾಯಿ, “ಸಾಕಪ್ಪ ಸಿನಿಮಾ ಸಹವಾಸ. ಬೇರೇನಾದರೂ ನೋಡಿಕೋ’ ಎಂದರಂತೆ. ಆದರೆ, ಅರುಣ್‌ಗೆ ತಾನು ಎಲ್ಲಿ  ಕಳೆದುಕೊಂಡಿದ್ದೇನೋ ಅಲ್ಲೇ ಪಡೆದಕೊಳ್ಳಬೇಕೆಂಬ ಹಠ. ಆ ಹಠದ ಪರಿಣಾಮ “ನಾಗವಲ್ಲಿ ವರ್ಸಸ್‌ ಆಪ್ತಮಿತ್ರರು’ ಎಂಬ ಸಿನಿಮಾ ಮಾಡಿದ್ದಾರೆ. ನಿರ್ಮಾಣ ಮಾಡಲು ಹಿಂದೇಟು ಹಾಕಿದ್ದ ಅವರ ತಂದೆಯನ್ನು ಒಪ್ಪಿಸಿ, ಅವರ ಸಹಕಾರದೊಂದಿಗೆ ಈ ಸಿನಿಮಾ ಮಾಡಿದ್ದಾರೆ. 

“ನಾನು ಎಲ್ಲಿ ಕಳೆದುಕೊಂಡಿದ್ದೇನೋ ಅಲ್ಲೇ ಪಡೆಯಬೇಕೆಂಬ ಛಲದಿಂದ ಈ ಸಿನಿಮಾ ಮಾಡಿದ್ದೇನೆ. ಇಲ್ಲಿ ಗೆಲ್ಲಬೇಕಾದರೆ ಹೊಸದೇನಾದರೂ ಮಾಡಬೇಕು. ಅದೇ ಕಾರಣದಿಂದ ಬೇರೆ ರೀತಿಯ ಕಥೆ ಮಾಡಿಕೊಂಡಿದ್ದೇನೆ. ಇದು ರೆಗ್ಯುಲರ್‌ ಪ್ಯಾಟರ್ನ್ ಸಿನಿಮಾವಲ್ಲ’ ಎಂದು ಚಿತ್ರದ ಬಗ್ಗೆ ವಿವರ ಕೊಟ್ಟರು. ಈ ಚಿತ್ರ ಮತ್ತೆ ನಾಗವಲ್ಲಿ ಸುತ್ತ ಸುತ್ತಲಿದೆಯಂತೆ. ವಿಷ್ಣುವರ್ಧನ್‌ ಹಾಗೂ ಸೌಂದರ್ಯ ಸಾವಿಗೆ ನಾಗವಲ್ಲಿ ಕಾರಣನಾ ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ. ಜೊತೆಗೆ ಚಿತ್ರತಂಡ ನಾಗವಲ್ಲಿಯನ್ನು ಹುಡುಕಿಕೊಂಡು ಆಕೆಯ ಅರಮನೆಗೆ ಹೋಗಿದೆ. ತಿರುವನಂತಪುರದ ನಾಗವಲ್ಲಿ ಪ್ಯಾಲೇಸ್‌ನಲ್ಲೂ ಚಿತ್ರೀಕರಣ ಮಾಡಿದೆ. ಕೇರಳ ಸರ್ಕಾರದ ಅನುಮತಿ ಪಡೆದು ಐದು ದಿನಗಳ ಕಾಲ ಅರಮನೆಯಲ್ಲಿ ಚಿತ್ರೀಕರಣ ಮಾಡಲಾಗಿದೆಯಂತೆ. ಈ ಸಿನಿಮಾಕ್ಕಾಗಿ ಅರುಣ್‌ ಸಾಕಷ್ಟು ಅಧ್ಯಯನ ಕೂಡಾ ಮಾಡಿದ್ದಾರಂತೆ. “ಮನೋವೈದ್ಯರ ಮೇಲೆ ಆತ್ಮ ಬರುತ್ತಾ ಎಂಬ ಅಂಶವೂ ಈ ಚಿತ್ರದಲ್ಲಿದೆ. ಅದಕ್ಕಾಗಿ ಅಧ್ಯಯನ ಕೂಡಾ ಮಾಡಿದ್ದೇನೆ’ ಎನ್ನುತ್ತಾರೆ ಅರುಣ್‌. ಅರುಣ್‌ ಅವರು ಈ ಚಿತ್ರವನ್ನು ಮನಸಾಲಜಿಕಲ್‌ ಹಾರರ್‌ ಎಂದು ಕರೆಯಯತ್ತಾರೆ. ಇನ್ನು, ಈ ಚಿತ್ರಕ್ಕೆ ನಾಯಕಿ ವೈಷ್ಣವಿ ಹಾಗೂ ಅವರ ತಾಯಿ ನೀಡಿದ ಸಹಕಾರವನ್ನು ನೆನೆಯಲು ಮರೆಯಲಿಲ್ಲ ಅರುಣ್‌.

ಚಿತ್ರದಲ್ಲಿ ವಿಕ್ರಮ್‌ ಕಾರ್ತಿಕ್‌ ನಾಯಕರಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ಎರಡು ಶೇಡ್‌ನ‌ಲ್ಲಿ ಕಾಣಿಸಿಕೊಂಡಿದ್ದಾರಂತೆ. ರಾಜ ಹಾಗೂ ಪತ್ರಕರ್ತನಾಗಿ ನಟಿಸಿದ್ದಾರೆ. ಈ ಚಿತ್ರಕ್ಕಾಗಿ ಸಾಕಷ್ಟು ಪೂರ್ವತಯಾರಿ ಮಾಡಿಕೊಂಡಿದ್ದಾಗಿ ಹೇಳಿಕೊಂಡರು ವಿಕ್ರಮ್‌ ಕಾರ್ತಿಕ್‌. ಚಿತ್ರದಲ್ಲಿ ವೈಷ್ಣವಿ ನಾಯಕಿಯಾಗಿ ನಟಿಸಿದ್ದಾರೆ. “ಆಪ್ತಮಿತ್ರ’ದಲ್ಲಿ ಸೌಂದರ್ಯ ಅವರು ಮಾಡಿದಂತಹ ಪಾತ್ರವೇ ಇಲ್ಲಿ ಸಿಕ್ಕಿದೆಯಂತೆ. ವೈಷ್ಣವಿ ದೇವರನ್ನು ನಂಬುತ್ತಿರಲಿಲ್ಲವಂತೆ. ಈ ಸಿನಿಮಾದ ನಂತರ ದೇವರನ್ನು ನಂಬಲು ಶುರು ಮಾಡಿದರಂತೆ. ಅದಕ್ಕೆ ಕಾರಣ ಈ ಸಿನಿಮಾದಲ್ಲಿ ಅವರಿಗಾದ ಕೆಲವು ಅನುಭವಗಳು. ಚಿತ್ರದ ಸಹ ನಿರ್ಮಾಪಕ ಪ್ರಬಿಕ್‌, ಸಂಗೀತ ನಿರ್ದೇಶಕ ಉತ್ತಮ್‌ ರಾಜ್‌ ಕೂಡಾ ತಮ್ಮ ಅನಿಸಿಕೆ ಹಂಚಿಕೊಂಡರು. ಮಗನ ಸಿನಿಮಾ ಪ್ರಯತ್ನ ಬಗ್ಗೆ ಅರುಣ್‌ ತಂದೆ ಗೋವಿಂದ ರಾಜು ಕೂಡಾ ಮಾತನಾಡಿದರು. ಚಿತ್ರ ಈ ತಿಂಗಳ ಕೊನೆ ಅಥವಾ ಮುಂದಿನ ತಿಂಗಳ ಆರಂಭದಲ್ಲಿ ತೆರೆಕಾಣಲಿದೆ. 

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.