ರಾಜತಂತ್ರದಲ್ಲಿ ರಾಘವೇಂದ್ರ ರಾಜ್‌ಕುಮಾರ್‌


Team Udayavani, Aug 23, 2020, 10:23 AM IST

ರಾಜತಂತ್ರದಲ್ಲಿ ರಾಘವೇಂದ್ರ ರಾಜ್‌ಕುಮಾರ್‌

ರಾಘವೇಂದ್ರ ರಾಜ್‌ಕುಮಾರ್‌ ಈಗಾಗಲೇ ಒಂದಷ್ಟು ಸಿನಿಮಾಗಳನ್ನು ಒಪ್ಪಿಕೊಂಡು ಮತ್ತೆ ನಟನೆಗೆ ಮರಳಿರುವ ವಿಚಾರ ನಿಮಗೆ ಗೊತ್ತೆ ಇದೆ. ಈಗಾಗಲೇ ಅವರ ನಟನೆಯ “ಆಡಿಸಿದಾತ’ ಚಿತ್ರೀಕರಣ ಮೊದಲ ಹಂತ ಪೂರ್ಣಗೊಂಡಿದೆ. ಚಿತ್ರದ ಟೀಸರ್‌ ಗೌರಿ-ಗಣೇಶ ಹಬ್ಬದ ದಿನ ಬಿಡುಗಡೆಯಾಗಲಿದೆ.

ಈ ನಡುವೆಯೇ ರಾಘಣ್ಣ ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದಾರೆ. ಅದು “ರಾಜತಂತ್ರ’. ಹೌದು, ಹೀಗೊಂದು ಚಿತ್ರವನ್ನು ರಾಘಣ್ಣ ಒಪ್ಪಿಕೊಂಡಿದ್ದಾರೆ. ಈ ಚಿತ್ರವನ್ನು ಪಿ.ವಿ.ಆರ್‌.ಸ್ವಾಮಿ ಈ ಚಿತ್ರದ ನಿರ್ದೇಶಕರು. ವಿಶ್ವಂ ಡಿಜಿಟಲ್‌ ಮೀಡಿಯಾ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬರಲಿದೆ. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕರು, ರಾಜತಂತ್ರ ಚಿತ್ರ ದೇಶವನ್ನು ಅಸ್ಥಿರಗೊಳಿಸುವ ವಿವಿಧ ಶಕ್ತಿಗಳ ವಿರುದ್ಧ ಸಾಮಾನ್ಯ ಮತ್ತು ಅಸಾಮಾನ್ಯರ ಸಂಘರ್ಷ ಮತ್ತು ಹೋರಾಟಗಳ ಅನಾವರಣ ಎನ್ನುತ್ತಾರೆ.

ರಾಘವೆಂದ್ರ ರಾಜ್‌ಕುಮಾರ್‌ ಇಲ್ಲಿ ನಾಯಕರಾಗಿ ನಟಿಸುತ್ತಿದ್ದು, ಹೊಸ ಬಗೆಯ ಪಾತ್ರವಿದೆಯಂತೆ. ಚಿತ್ರದ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯ ಜವಾಬ್ದಾರಿ ಯನ್ನು ಜೆ.ಎಮ್‌ .ಪ್ರಹ್ಲಾದ್‌ ವಹಿಸಿಕೊಂಡಿದ್ದಾರೆ. ನಿರ್ದೇಶಕ ಪಿ.ವಿ.ಆರ್‌. ಸ್ವಾಮಿಯವರೇ ಈ ಚಿತ್ರದ ಛಾಯಾಗ್ರಹಣ ವನ್ನು ವಹಿಸಿಕೊಂಡಿದ್ದಾರೆ. ಇದುವರೆಗೆ 30 ಸಿನಿಮಾ ಗಳಿಗೆ ಛಾಯಾ ಗ್ರಾಹಕರಾಗಿ ದುಡಿದ ಅನುಭವ ಸ್ವಾಮಿಯವರಿಗಿದೆ. ­

………………………………………………………………………………………………………………………………………………..

ಸ್ವಾಮಿ ವಿವೇಕಾನಂದರ ಸಂದೇಶಸಾರುವ ಮ್ಯೂಸಿಕ್‌ ಆಲ್ಬಂ : ತನ್ನ ಚಿಂತನೆಗಳ ಮೂಲಕವೇ ವಿಶ್ವದಾದ್ಯಂತ ಅಸಂಖ್ಯಾತ ಯುವಕರನ್ನು ಸೂಜಿಗಲ್ಲಿನಂತೆ ಸೆಳೆದವರು ಸ್ವಾಮಿ ವಿವೇಕಾನಂದರು. ಇಂದಿಗೂ ಅದೆಷ್ಟೋ ಯುವಕರಿಗೆ ನಿರಂತರ ಪ್ರೇರಣೆ ನೀಡುವ ಸ್ವಾಮಿ ವಿವೇಕಾನಂದರ ಸಂದೇಶವನ್ನು ಇಲ್ಲೊಂದು ಯುವಕರ ತಂಡ ಮ್ಯೂಸಿಕ್‌ ಆಲ್ಬಂ ಮೂಲಕ ಹೇಳಲು ಹೊರಟಿದೆ. ಅಂದಹಾಗೆ, ಆ ಮ್ಯೂಸಿಕ್‌ ಆಲ್ಬಂ ಹೆಸರು “ಜೈ ಜೈ ಸ್ವಾಮಿ ವಿವೇಕಾನಂದ’. ಕನ್ನಡ, ಇಂಗ್ಲೀಷ್‌, ಹಿಂದಿ ಹಾಗೂ ತುಳು ಹೀಗೆ ನಾಲ್ಕು ಭಾಷೆಗಳಲ್ಲಿ ಏಕ ಕಾಲಕ್ಕೆ ಈ ಮ್ಯೂಸಿಕ್‌ ಆಲ್ಬಂ ತಯಾರಾಗಿದ್ದು, ಇದೇ ಆಗಸ್ಟ್‌ 15 ಸ್ವತಂತ್ರ ದಿನದಂದು ಬಿಡುಗಡೆಯಾಗಿದೆ. ಗಾಯಕಿ ಐರಾ ಉಡುಪಿ ಅವರ ಸುಮಧುರ ಧ್ವನಿಯಲ್ಲಿ ನಾಲ್ಕು ಭಾಷೆಯ ಹಾಡುಗಳು ಮೂಡಿಬಂದಿವೆ. ಈ ಮ್ಯೂಸಿಕ್‌ ಆಲ್ಬಂನ ಹಾಡುಗಳಿಗೆ ಸುರೇಶ್‌ ಬಾಬು ಸಂಗೀತ ಸಂಯೋಜಿಸಿದ್ದಾರೆ. ಹಾಡುಗಳಿಗೆ ದೇರಳಕಟ್ಟೆ ಸುರೇಶ್‌ ಅವರ ಛಾಯಾಗ್ರಹಣ, ಸುಹಾಸ್‌ ಸಂಕಲನವಿದೆ. ಸಿ. ಜಯಪ್ರಕಾಶ್‌ “ಜೈ ಜೈ ಸ್ವಾಮಿ ವಿವೇಕಾನಂದ’ ಮ್ಯೂಸಿಕ್‌ ಆಲ್ಬಂ ನಿದೇìಶನ ಮಾಡಿದ್ದಾರೆ.­

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.