ರಾಜ-ರಾಧೆಯ ತ್ರಿವೇಣಿ ಸಂಗಮ


Team Udayavani, May 11, 2018, 7:20 AM IST

12.jpg

“ತ್ರಿವೇಣಿ ಅಂದರೆ ನನಗೇನೋ ಒಂದು ಸೆಂಟಿಮೆಂಟ್‌. ಆ ತ್ರಿವೇಣಿಗೋಸ್ಕರವೇ ನಾನು ಇಷ್ಟು ದಿನ ಕಾದಿದ್ದೆ. ಕೊನೆಗೂ ತ್ರಿವೇಣಿ ಸಿಕ್ಕಾಯ್ತು…’
– ಹೀಗೆ ಹೇಳಿ ಹಾಗೊಂದು ನಗೆ ಬೀರಿದರು ನಿರ್ಮಾಪಕ ಎಚ್‌.ಎಲ್‌.ಎನ್‌. ರಾಜ್‌. ಅವರೇಕೆ ತ್ರಿವೇಣಿ ಹೆಸರು ಹೇಳುತ್ತಿದ್ದಾರೆ. ಅಷ್ಟಕ್ಕೂ ಯಾರು ಆ ತ್ರಿವೇಣಿ ಅನ್ನೋ ಪ್ರಶ್ನೆ ಎದುರಾಗಬಹುದು. ಆ ತ್ರಿವೇಣಿ ಬೇರಾರೂ ಅಲ್ಲ, ಮೆಜೆಸ್ಟಿಕ್‌ನಲ್ಲಿರುವ ಚಿತ್ರಮಂದಿರದ ಹೆಸರು. ಅಷ್ಟಕ್ಕೂ ‘ತ್ರಿವೇಣಿ’ ಬಗ್ಗೆ ಅಷ್ಟೊಂದು ಪೀಠಿಕೆ ಯಾಕೆಂದರೆ, ಆ ಚಿತ್ರಮಂದಿರದಲ್ಲಿ ವಿಜಯ್‌ ರಾಘವೇಂದ್ರ ಅವರ “ನಿನಗಾಗಿ’ ಚಿತ್ರ ಭರ್ಜರಿ ಯಶಸ್ಸು ಕಂಡಿತ್ತು. ಈಗ “ರಾಜ ಲವ್ಸ್‌ ರಾಧೆ’ ಚಿತ್ರದಲ್ಲೂ ವಿಜಯ್‌ ರಾಘವೇಂದ್ರ ಹೀರೋ. ಈ ಚಿತ್ರ ಕೂಡ “ತ್ರಿವೇಣಿ’ ಚಿತ್ರಮಂದಿರದಲ್ಲೇ ಬಿಡುಗಡೆಯಾಗಬೇಕು ಎಂಬ ಉದ್ದೇಶ ಅವರದು. ಹಾಗಾಗಿ, ಮೇ 18 ರಂದು ತ್ರಿವೇಣಿಯಲ್ಲೇ ಬಿಡುಗಡೆ ಮಾಡುತ್ತಿರುವುದಾಗಿ ಹೇಳಿಕೊಂಡರು ಎಚ್‌.ಎಲ್‌.ಎನ್‌.ರಾಜ್‌.

“ಈ ಹಿಂದೆ ಚಿತ್ರ ಮಾಡಿ ಸೋಲು ಕಂಡೆ. ಈಗ ಮಾಡಿದ ಚಿತ್ರವನ್ನು ಎಚ್ಚರದಿಂದ ಮಾಡಿದ್ದೇನೆ. ಕಥೆ ಆಯ್ಕೆ, ಪಾತ್ರಗಳ ಆಯ್ಕೆಯಿಂದ ಹಿಡಿದು, ಪ್ರತಿಯೊಂದರಲ್ಲೂ ಎಚ್ಚರ ವಹಿಸಿದ್ದರಿಂದ “ರಾಜ ಲವ್ಸ್‌ ರಾಧೆ’ ಅಚ್ಚುಕಟ್ಟಾಗಿ ಮೂಡಿಬಂದಿದೆ. ಮನರಂಜನೆಗೆ ಏನೆಲ್ಲಾ ಇರಬೇಕೋ ಎಲ್ಲವೂ ಇಲ್ಲಿದೆ. ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕನಿಗೆ ಮಜ ಎನಿಸುವಷ್ಟು ಕಂಟೆಂಟ್‌ ಇಲ್ಲಿದೆ. ಎಕ್ಸಾಂ, ಚುನಾಣವೆಯಲ್ಲಿ ತಲೆಬಿಸಿ ಮಾಡಿಕೊಂಡವರಿಗೆ ರಿಫ್ರೆಶ್‌ ಆಗಲು ಮನರಂಜನೆ ಮಾಧ್ಯಮ ಸಿನಿಮಾ. ಹಾಗಾಗಿ “ರಾಜ ಲವ್ಸ್‌ ರಾಧೆ’ ನೋಡಲು ಬಂದವರಿಗೆ ಮೋಸ ಆಗಲ್ಲ. ಸುಮಾರು 150 ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ’ ಎಂದು ವಿವರ ಕೊಟ್ಟರು.

ನಿರ್ದೇಶಕ ರಾಜಶೇಖರ್‌ಗೆ ಇದು ಎರಡನೇ ಚಿತ್ರ. ಕಥೆ ಮಾಡಿಕೊಂಡು ನಿರ್ಮಾಪಕರನ್ನು ಹುಡುಕುವ ವೇಳೆ ಸಿಕ್ಕಿದ್ದು ಎಚ್‌.ಎಲ್‌.ಎನ್‌.ರಾಜ್‌ ಅವರಂತೆ. “ಕೆಲಸವಿಲ್ಲದೆ, ವರ್ಷಗಟ್ಟಲೆ ಮನೆಯಲ್ಲಿದ್ದಾಗ, ಈ ಕಥೆ ಬರೆದು, ಪಕ್ಕಾ ಮಾಡಿಕೊಂಡಿದ್ದೆ. ನಿರ್ಮಾಪಕರು ಕಥೆ ಕೇಳಿ ಒಳ್ಳೆಯ ಅವಕಾಶ ಕೊಟ್ಟಿದ್ದಾರೆ. ಇದೊಂದು ಲವ್‌ಸ್ಟೋರಿ ಇರುವ ಚಿತ್ರ. ಹಾಸ್ಯಕ್ಕಂತೂ ಕೊರತೆ ಇಲ್ಲ. ಚಿತ್ರದಲ್ಲಿ ಕಾಮಿಡಿ ಕಲಾವಿದರ ದಂಡೇ ಇದೆ. ಮುಖ್ಯವಾಗಿ ವಿಜಯ್‌ ರಾಘವೇಂದ್ರ ಅವರು ಪಾತ್ರಕ್ಕೆ ಸರಿಹೊಂದಿದ್ದಾರೆ. ಅವರಲ್ಲಿ ನಗಿಸುವ ಗುಣವಿದೆ. ರವಿಶಂಕರ್‌ ಇಲ್ಲಿ ಎಲ್ಲರಿಗೂ ಇಷ್ಟವಾಗುತ್ತಾರೆ. ಅಂಥದ್ದೊಂದು ಪಾತ್ರ ಅವರಿಗೆ ಸಿಕ್ಕಿದೆ. ಪ್ರತಿಯೊಬ್ಬರ ಸಹಕಾರದಿಂದ “ರಾಜ ಮತ್ತು ರಾಧೆ’ ಚೆನ್ನಾಗಿ ಕಾಣುತ್ತಾರೆ. ನಿಮ್ಮ ಪ್ರೋತ್ಸಾಹ ಬೇಕೆಂದರು’ ರಾಜಶೇಖರ್‌.

ವಿಜಯ ರಾಘವೇಂದ್ರ ಅವರಿಲ್ಲಿ ಗ್ಯಾರೇಜ್‌ ಮೆಕಾನಿಕ್‌ ಪಾತ್ರ ನಿರ್ವಹಿಸಿದ್ದಾರಂತೆ. ಅವರ ಪ್ರಕಾರ, “ಒಂದು ನಗಿಸುವ ಚಿತ್ರದಲ್ಲಿ ಏನೆಲ್ಲಾ ಇರಬೇಕೋ ಅದೆಲ್ಲವೂ ಇಲ್ಲಿದೆ. ಹಾಸ್ಯ ಕಲಾವಿದರ ದಂಡೇ ಇಲ್ಲಿದೆ. ಮುಖ್ಯವಾಗಿ ಇಲ್ಲಿ ಕಥೆ, ಪಾತ್ರ ಮತ್ತು ಹಾಡುಗಳು ಚೆನ್ನಾಗಿವೆ. ಸಿಂಪಲ್‌ ಕಥೆಯನ್ನು ಅಷ್ಟೇ ಶ್ರೀಮಂತ ಚಿತ್ರವನ್ನಾಗಿಸಿದ್ದಾರೆ’ ಎಂದರು ವಿಜಯ್‌ ರಾಘವೇಂದ್ರ.

ನಾಯಕಿ ರಾಧಿಕಾ ಪ್ರೀತಿ, ಅವಕಾಶ ಕೊಟ್ಟ ನಿರ್ಮಾಪಕ, ನಿರ್ದೇಶಕರನ್ನು ಹೊಗಳಿದರು. ಸೆಟ್‌ನಲ್ಲಿ ಹೀರೋ ಕೊಟ್ಟ ಸಲಹೆಗಳನ್ನು ಮೆಲುಕು ಹಾಕಿದರು. ಸಂಗೀತ ನಿರ್ದೇಶಕ ವೀರ್‌ಸಮರ್ಥ್,  ಐದು ವಿವಿಧ ಹಾಡುಗಳನ್ನು ಕೊಟ್ಟಿದ್ದನ್ನು ಹೇಳಿಕೊಂಡರು. ಎಲ್ಲಾ ಹಾಡುಗಳನ್ನೂ ಚೆನ್ನಾಗಿಯೇ ಸೆರೆಹಿಡಿಯಲಾಗಿದೆ ಎಂದರು ಅವರು. ಚಿತ್ರದಲ್ಲಿ ನಟಿಸಿರುವ “ಮಜಾ ಟಾಕೀಸ್‌’ ಖ್ಯಾತಿಯ ಪವನ್‌ಕುಮಾರ್‌, ಡ್ಯಾನಿ ಕುಟ್ಟಪ್ಪ, ನಿರಂಜನ್‌ ದಾವಣಗೆರೆ ಪಾತ್ರದ ಕುರಿತು ಹೇಳಿಕೊಂಡರು. ಛಾಯಾಗ್ರಾಹಕ ಕೆ.ಎಚ್‌. ಚಿದಾನಂದ್‌ ಚಿತ್ರದ ಸೊಬಗನ್ನು ಹೊಗಳಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.