ರಾಜಾ ಸಿಂಹನಿಗಿದು ಸರಿಯಾದ ಸಮಯ


Team Udayavani, Feb 2, 2018, 10:46 AM IST

20-11.jpg

ಅನಿರುದ್ಧ್ ಅಭಿನಯದ “ರಾಜಾ ಸಿಂಹ’ ಈ ವಾರ ಬಿಡುಗಡೆಯಾಗುತ್ತಿದೆ. ಅನಿರುದ್ಧ್ ಇದೇ ಮೊದಲ ಬಾರಿಗೆ ಆ್ಯಕ್ಷನ್‌ ಪಾತ್ರವೊಂದರಲ್ಲಿ ಕಾಣಿಸಿಕೊಂಡಿರುವ ಚಿತ್ರ ಅದು. ಈ ಚಿತ್ರವನ್ನು ಸಿ.ಡಿ. ಬಸಪ್ಪ ನಿರ್ಮಿಸುತ್ತಿದ್ದು, ರವಿರಾಮ್‌ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ಅನಿರುದ್ಧ್ ಎದುರು ನಿಖೀತಾ ನಾಯಕಿಯಾಗಿ ನಟಿಸಿದ್ದು, ಭಾರತಿ ವಿಷ್ಣುವರ್ಧನ್‌, ಅಂಬರೀಶ್‌, ಶರತ್‌ ಲೋಹಿತಾಶ್ವ ಮುಂತಾದವರು ನಟಿಸಿದ್ದಾರೆ. ಈ ಚಿತ್ರವು “ಸಿಂಹಾದ್ರಿಯ ಸಿಂಹ’ ಚಿತ್ರದ ಮುಂದುವರೆದ ಭಾಗವಾಗಿದ್ದು, ಇದರಲ್ಲಿ ವಿಷ್ಣುವರ್ಧನ್‌ ಅವರ ಪಾತ್ರವೂ ಇರುತ್ತದಂತೆ. ಚಿತ್ರದ ಬಗ್ಗೆ ಮಾತನಾಡುವುದಕ್ಕೆ ಅಂದು ಅನಿರುದ್ಧ್ ಮತ್ತು ಚಿತ್ರತಂಡದವರು ಮಾಧ್ಯಮದವರೆದು ಕುಳಿತಿದ್ದರು.

ಎಂಟು ಚಿತ್ರಗಳು ಬಿಡುಗಡೆಯಾಗುತ್ತಿರುವ ಈ ಸಂದರ್ಭದಲ್ಲಿ, ಅರ್ಜೆಂಟ್‌ ಆಗಿ ಈ ಚಿತ್ರ ಮಾಡುವ ಅವಶ್ಯಕತೆ ಇತ್ತಾ? ಎಂಬ ಪ್ರಶ್ನೆಯೊಂದು ಆರಂಭದಲ್ಲೇ ಬಂತು. ಈ ಕುರಿತು ಮಾತನಾಡಿದ ಅನಿರುದ್ಧ್, “ನಾವು ಅರ್ಜೆಂಟ್‌ ಮಾಡುತ್ತಿಲ್ಲ, ಕಳೆದ ಮೂರು ವರ್ಷಗಳಿಂದ ಚಿತ್ರ ಬಿಡುಗಡೆ ಮಾಡುವುದಕ್ಕೆ ಕಾಯುತ್ತಿದ್ದೇವೆ. ಡಿಸೆಂಬರ್‌ನಲ್ಲೇ ಚಿತ್ರ ಬಿಡುಗಡೆ ಮಾಡಬೇಕಿತ್ತು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ. ಇನ್ನು ಮುಂದೆ ಪರೀಕ್ಷೆ, ಕ್ರಿಕೆಟ್‌ ಅಂತೆಲ್ಲಾ ಕಷ್ಟವಾಗುತ್ತದೆ. ಇದು ಸರಿಯಾದ ಸಮಯ. ಸ್ಪರ್ಧೆ ಇರಬಹುದು, ಎಲ್ಲರಿಗೂ ಒಳ್ಳೆಯದಾಗಲಿ’ ಎಂದು ಹೇಳಿದರು.

ಇನ್ನು ನಿರ್ದೇಶಕ ರವಿರಾಮ್‌ ಮಾತನಾಡಿ, “ಇದುವರೆಗೂ ಅನಿರುದ್ಧ್ ಅವರನ್ನು ಲವ್ವರ್‌ ಬಾಯ್‌ ಪಾತ್ರಗಳಲ್ಲಿ ನೋಡಿದ್ದೆ. ಅವರನ್ನು ಬೇರೆ ತರಹ ತೋರಿಸಬೇಕು ಎಂದು ಹೊರಟಿದ್ದೇನೆ. ಇದೊಂದು ಆ್ಯಕ್ಷನ್‌ ಚಿತ್ರ. ಫ್ಯಾಮಿಲಿ ಡ್ರಾಮಾ ಸಹ ಇದೆ. ಡಾ ವಿಷ್ಣುವರ್ಧನ್‌ ಅವರ ಟ್ರಾಕ್‌ ಇದೆ. ನಾಲ್ಕು ಫೈಟುಗಳು, ಆರು ಹಾಡುಗಳು ಇವೆ. ಸುಮಾರು 200 ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ’ ಎಂದು ಹೇಳಿದರು.

ನಿರ್ಮಾಪಕ ಸಿ.ಡಿ. ಬಸಪ್ಪ ಅವರಿಗೆ ಚಿತ್ರ ಬಗ್ಗೆ ಬಹಳ ಖುಷಿಯಾಗಿದೆ. “ಇದೊಂದು ಒಳ್ಳೆಯ ಕಮರ್ಷಿಯಲ್‌ ಚಿತ್ರ. ಮೂವರು ನಾಯಕಿಯರು, ಐವರು ವಿಲನ್‌ಗಳು, ಹೊಡೆದಾಟ ಎಲ್ಲವೂ ಇದೆ. ನಮ್ಮ ನಿರ್ದೇಶಕರು ಏನು ಹೇಳಿದರೋ, ಅದರಂತೆ ಚಿತ್ರ ಮಾಡಿದ್ದಾರೆ. ಅವರು ಹೇಳಿದ ಬಜೆಟ್‌ಗಿಂತ ಐದು ಪಟ್ಟು ಹೆಚ್ಚಾದರೂ, ಚಿತ್ರವನ್ನು ನೀಟ್‌ ಆಗಿ ಮಾಡಿಕೊಟ್ಟಿದ್ದಾರೆ’ ಎಂದು ಹೇಳಿದರು.

ಚಿತ್ರದಲ್ಲಿ ಒಂದು ಪಾತ್ರ ಮಾಡಿರುವ ಸಂಜನಾಗೆ ನಿರ್ಮಾಪಕ ಫೋನ್‌ ಮಾಡಿ ಒಂದು ಪಾತ್ರ ಮಾಡುತ್ತೀರಾ ಎಂದು ಕೇಳಿದಾಗ, ರಾಂಗ್‌ ನಂಬರ್‌ ಅಂತ ಫೋನ್‌ ಇಟ್ಟರಂತೆ. “ಆ ನಂತರ ಅನಿರುದ್ಧ್ ಫೋನ್‌ ಮಾಡಿ, ಚಿತ್ರದ ಬಗ್ಗೆ ಹೇಳಿದರು. ಈ ಬಾರಿ ನಿರ್ಮಾಪಕರು ಮತ್ತು ನಿರ್ದೇಶಕರು ಒಟ್ಟಿಗೆ ಬಂದು ಹೇಳಿದರು. ನನ್ನದು ನಾಯಕನನ್ನು ಪ್ರೇರೇಪಿಸುವ ಪಾತ್ರ. ಸೆಕೆಂಡ್‌ ಹಾಫ್ನಲ್ಲಿ ಬರುತ್ತೇನೆ. ಚಿತ್ರದಲ್ಲಿ ನಟಿಸಿದ್ದು ಒಂದೊಳ್ಳೆಯ ಅನುಭವ’ ಎಂದು ಸಂಜನಾ ಖುಷ್‌ ಆಗುವಲ್ಲಿ ಪತ್ರಿಕಾಗೋಷ್ಠಿ ಮುಗಿಯಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.