ದೇಶ ಪ್ರೇಮದ ರಾಜತಂತ್ರ
Team Udayavani, Oct 9, 2020, 1:34 PM IST
ರಾಘವೇಂದ್ರ ರಾಜ್ಕುಮಾರ್ ಈಗಾಗಲೇ ಒಂದಷ್ಟು ಸಿನಿಮಾಗಳನ್ನು ಒಪ್ಪಿಕೊಂಡು ಮತ್ತೆ ನಟನೆಗೆ ಮರಳಿರುವ ವಿಚಾರ ನಿಮಗೆ ಗೊತ್ತೆ ಇದೆ. ಈಗ ಅವರು ಹೊಸ ಚಿತ್ರ “ರಾಜತಂತ್ರ’ದ ಚಿತ್ರೀಕರಣಕ್ಕೆಅಣಿಯಾಗುತ್ತಿದ್ದಾರೆ. ಮೊದಲ ಹಂತವಾಗಿ ಇತ್ತೀಚೆಗೆ ಚಿತ್ರದ ಮುಹೂರ್ತ ಸಮಾರಂಭ ನಡೆಯಿತು.
ಈ ಚಿತ್ರವನ್ನು ಪಿ.ವಿ.ಆರ್.ಸ್ವಾಮಿ ಈ ಚಿತ್ರದನಿರ್ದೇಶಕರು. ವಿಶ್ವಂ ಡಿಜಿಟಲ್ ಮೀಡಿಯಾನಿರ್ಮಾಣದಲ್ಲಿ ಈ ಚಿತ್ರ ಮೂಡಿಬರಲಿದೆ. ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕರು, ರಾಜತಂತ್ರ ಚಿತ್ರ ದೇಶವನ್ನುಅಸ್ಥಿರಗೊಳಿಸುವ ವಿವಿಧ ಶಕ್ತಿಗಳ ವಿರುದ್ಧ ಸಾಮಾನ್ಯ ಮತ್ತುಅಸಾಮಾನ್ಯರ ಸಂಘರ್ಷ ಮತ್ತು ಹೋರಾಟಗಳ ಅನಾವರಣ ಎನ್ನುತ್ತಾರೆ. ರಾಘವೆಂದ್ರ ರಾಜ್ಕುಮಾರ್ ಇಲ್ಲಿ ನಾಯಕರಾಗಿ ನಟಿಸುತ್ತಿದ್ದು, ಚಿತ್ರದಲ್ಲಿ ಅವರು ನಿವೃತ್ತ ಸೈನಿಕರಾಗಿ ಕಾಣಿಸಿಕೊಳ್ಳಲಿದ್ದಾರೆ. ತಮ್ಮ ಚಾಣಕ್ಯತನದಿಂದ ದುಷ್ಟಶಕ್ತಿಗಳನ್ನ ಹೇಗೆ ಮಣಿಸುತ್ತಾರೆ ಎಂಬ ಅಂಶದೊಂದಿಗೆ ಚಿತ್ರ ಸಾಗುತ್ತದೆಯಂತೆ. ಚಿತ್ರದ ಬಗ್ಗೆ ರಾಘವೇಂದ್ರ ರಾಜ್ ಕುಮಾರ್ ಕೂಡಾ ಖುಷಿಯಿಂದ ಮಾತನಾಡಿದರು.
“ಒಳ್ಳೆಯ ಪಾತ್ರ ಸಿಕ್ಕಿದೆ. ದೇಶಪ್ರೇಮಿವಿರುವ ಪಾತ್ರ’ ಎಂದರು. ಹೊಸ ಬಗೆಯ ಪಾತ್ರವಿದೆಯಂತೆ. ಚಿತ್ರದಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯ ಜವಾಬ್ದಾರಿಯನ್ನು ಜೆ.ಎಮ್.ಪ್ರಹ್ಲಾದ್ ವಹಿಸಿಕೊಂಡಿದ್ದಾರೆ. ಅವರ ಪ್ರಕಾರ, “ರಾಜತಂತ್ರ’ ಕನ್ನಡಕ್ಕೊಂದು ಹೊಸ ಬಗೆಯ ಸಿನಿಮಾವಾಗಲಿದೆ.
ಕಮರ್ಷಿಯಲ್ ಅಂಶಗಳೊಂದಿಗೆ ಚಿತ್ರ ಪ್ರೇಕ್ಷಕರನ್ನು ಸೆಳೆಯಲಿದೆ ಎಂಬ ವಿಶ್ವಾಸ ಪ್ರಹ್ಲಾದ್ ಅವರದು. ನಿರ್ದೇಶಕ ಪಿ.ವಿ.ಆರ್.ಸ್ವಾಮಿಯವರೇ ಈ ಚಿತ್ರದ ಛಾಯಾಗ್ರಹಣವನ್ನು ವಹಿಸಿಕೊಂಡಿದ್ದಾರೆ. ಇದುವರೆಗೆ 30 ಸಿನಿಮಾಗಳಿಗೆ ಛಾಯಾಗ್ರಾಹಕರಾಗಿ ದುಡಿದ ಅನುಭವ ಸ್ವಾಮಿಯವರಿಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ
Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್
Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್ ನಿರ್ದೇಶನದ ಸಿನಿಮಾ