ಅಧ್ಯಕ್ಷನ ಸಮ್ಮುಖದಲ್ಲಿ ಒಂದಾದ ರಾಜ್‌-ವಿಷ್ಣು


Team Udayavani, Jul 21, 2017, 5:20 AM IST

Ban21071702SSch.gif

ಅಧ್ಯಕ್ಷ’ ಚಿತ್ರದ ಮೈಸೂರು ವಿತರಣೆಯ ಹಕ್ಕನ್ನು ನಿರ್ಮಾಪಕ ರಾಮು ಪಡೆದಿದ್ದರಂತೆ. ಆ ಚಿತ್ರದ ಕಲೆಕ್ಷನ್‌ ನೋಡಿ ಅವರಿಗೆ ಆಶ್ಚರ್ಯವಾಯಿತಂತೆ. ಆ ಮಟ್ಟಕ್ಕೆ ಜನ ಶರಣ್‌ ಹಾಗೂ ಚಿಕ್ಕಣ್ಣ ಅವರ ಕಾಂಬಿನೇಶನ್‌ ಅನ್ನು ಇಷ್ಟಪಟ್ಟಿದ್ದರಂತೆ. ಆಗಲೇ ರಾಮು ತಲೆಯಲ್ಲಿ ಅವರಿಬ್ಬರನ್ನು ಹಾಕಿಕೊಂಡು ಸಿನಿಮಾ ಮಾಡುವ ಆಲೋಚನೆ ಬಂದಿದ್ದು. ಶರಣ್‌ ಹಾಗೂ ಚಿಕ್ಕಣ್ಣ ಅವರಿಗೆ ಹೊಂದುವಂತಹ ಕಥೆಗಾಗಿ ಎದುರು ನೋಡುತ್ತಿದ್ದಾಗ ರಾಮು ಅವರ ಕಣ್ಣಿಗೆ ಬಿದ್ದಿದ್ದು ತಮಿಳಿನ “ರಜನಿ ಮುರುಗನ್‌’ ಚಿತ್ರ. ಈ ಚಿತ್ರ ಶರಣ್‌ ಹಾಗೂ ಚಿಕ್ಕಣ್ಣ ಅವರಿಗೆ ಹೊಂದುತ್ತದೆಂದು ರೈಟ್ಸ್‌ ತಗೊಂಡ ರಾಮು ಈಗ ಸಿನಿಮಾ ಮಾಡಿಯೇ ಬಿಟ್ಟಿದ್ದಾರೆ. ಅದೇ “ರಾಜ್‌-ವಿಷ್ಣು’.

ಸುಮಾರು ಮೂರು ವರ್ಷಗಳ ನಂತರ ಶರಣ್‌ ಹಾಗೂ ಚಿಕ್ಕಣ್ಣ ಕಾಂಬಿನೇಶನ್‌ನಲ್ಲಿ ಬರುತ್ತಿರುವ ಈ ಚಿತ್ರ ಆಗಸ್ಟ್‌ 4
ರಂದು ತೆರೆಕಾಣುತ್ತಿದೆ.

“ಅಧ್ಯಕ್ಷ ಚಿತ್ರದ ಕಲೆಕ್ಷನ್‌ ನೋಡಿ ನನಗೆ ಆಶ್ಚರ್ಯವಾಯಿತು. ಆ ಚಿತ್ರ ತುಂಬಾ ಚೆನ್ನಾಗಿ ಕಲೆಕ್ಷನ್‌ ಮಾಡಿತು. ಈಗ “ರಾಜ್‌ ವಿಷ್ಣು’ ಚಿತ್ರವನ್ನು ಕೂಡಾ ಇಷ್ಟಪಡುತ್ತಾರೆಂಬ ವಿಶ್ವಾಸವಿದೆ. ಮೂಲ ಚಿತ್ರದ ಒಂದೆಳೆಯನ್ನಷ್ಟೇ ತಗೊಂಡು, ಉಳಿದಂತೆ ಸಂಪೂರ್ಣವಾಗಿ ಬದಲಾಯಿಸಿಕೊಂಡಿದ್ದೇವೆ.

ಸ್ವಮೇಕ್‌ ಸಿನಿಮಾಕ್ಕೆ ಯಾವ ರೀತಿ ಸ್ಕ್ರಿಪ್ಟ್ ಕೆಲಸ ನಡೆಯುತ್ತೋ ಅದೇ ರೀತಿ ಎಲ್ಲಾ ತಯಾರಿ ಮಾಡಿಕೊಂಡು
ಆ ನಂತರ ಚಿತ್ರೀಕರಣ ಆರಂಭಿಸಿದ್ದು’ ಎಂದು ಚಿತ್ರದ ಬಗ್ಗೆ ಹೇಳಿಕೊಂಡರು ರಾಮು. ಅಂದಹಾಗೆ, ಇದು ರಾಮು ಅವರ ಬ್ಯಾನರ್‌ನಲ್ಲಿ ತಯಾರಾಗುತ್ತಿರುವ 37ನೇ ಚಿತ್ರ. “ರಾಜ್‌ ವಿಷ್ಣು’ ಚಿತ್ರವನ್ನು ಮಾದೇಶ ನಿರ್ದೇಶಿಸಿದ್ದಾರೆ. ಈಗಾಗಲೇ ಹಲವು ರೀಮೇಕ್‌ ಸಿನಿಮಾಗಳನ್ನು ನಿರ್ದೇಶಿಸಿರುವ ಮಾದೇಶ ಅಕೌಂಟ್‌ಗೆ ಇದು ಮತ್ತೂಂದು ರೀಮೇಕ್‌ ಸಿನಿಮಾ. ಎಂದಿನಂತೆ ಮಾದೇಶ ಅವರು ಚಿತ್ರದ ಬಗ್ಗೆ ಹೆಚ್ಚೇನು ಮಾತನಾಡಲಿಲ್ಲ. “ಸಿನಿಮಾ ಚೆನ್ನಾಗಿ ಬಂದಿದೆ, ಬೆಂಬಲಿಸಿ’ ಎಂದಷ್ಟೇ ಹೇಳಿದರು. ನಾಯಕ ಶರಣ್‌ ಅವರಿಗೆ “ಅಧ್ಯಕ್ಷ’ ನಂತರ ಎಲ್ಲೇ ಹೋದರೂ “ನಿಮ್ಮ ಹಾಗೂ ಚಿಕ್ಕಣ್ಣ ಕಾಂಬಿನೇಶನ್‌ ಸಿನಿಮಾ ಮತ್ತೆ ಯಾವಾಗ’ ಎಂದು ಕೇಳುತ್ತಿದ್ದರಂತೆ. ಅದಕ್ಕೆ ಸರಿಯಾಗಿ ಈಗ “ರಾಜ್‌-ವಿಷ್ಣು’ ತಯಾರಾಗಿದೆ. “ನಾನು ಚಿತ್ರರಂಗಕ್ಕೆ ಬಂದು ಇಷ್ಟು ವರ್ಷವಾದರೂ ರಾಮು ಅವರ ಬ್ಯಾನರ್‌ನಲ್ಲಿ ನಾನು ನಟಿಸಿರಲಿಲ್ಲ. ಈಗ ನಟಿಸುವ ಅವಕಾಶ ಸಿಕ್ಕಿದೆ.

ಸಹಜವಾಗಿಯೇ ಜವಾಬ್ದಾರಿ ಜಾಸ್ತಿ ಇದೆ. ನಮ್ಮಿಬ್ಬರ ಕಾಂಬಿನೇಶನ್‌ನ “ಅಧ್ಯಕ್ಷ’ ಹಿಟ್‌ ಆಗಿರುವುದರಿಂದ ಈಗ ಈ
ಸಿನಿಮಾದ ನಿರೀಕ್ಷೆ ಹೆಚ್ಚಿದೆ. ಟ್ರೇಲರ್‌ ಕೂಡಾ ದೊಡ್ಡ ಹಿಟ್‌ ಆಗಿದೆ. ಸಿನಿಮಾವನ್ನು ಜನ ಇಷ್ಟಪಡುತ್ತಾರೆಂಬ ವಿಶ್ವಾಸವಿದೆ’ ಎನ್ನುವುದು ಶರಣ್‌ ಮಾತು.

ಚಿಕ್ಕಣ್ಣ ಕೂಡಾ “ಅಧ್ಯಕ್ಷ’ ನಂತರ ಮತ್ತೆ ಶರಣ್‌ ಜೊತೆ ನಟಿಸುತ್ತಿರುವ ಖುಷಿ ಹಂಚಿಕೊಂಡರು. ಚಿತ್ರದಲ್ಲಿ
ವೈಭವಿ ಶಾಂಡಿಲ್ಯ ನಾಯಕಿ. ಕನ್ನಡದಲ್ಲಿ ನಟಿಸುತ್ತಿರುವ ಮೊದಲ ಚಿತ್ರವೇ ದೊಡ್ಡ ಬ್ಯಾನರ್‌ನಲ್ಲಿ ಸಿಕ್ಕಿರುವುದರಿಂದ
ಖುಷಿಯಾಗಿದ್ದಾರಂತೆ. ಎಲ್ಲರಿಗೂ ಇಷ್ಟವಾಗುವಂತಹ ಪಾತ್ರ ಸಿಕ್ಕಿದೆ ಎನ್ನುವುದು ಅವರ ಮಾತು. ಚಿತ್ರದಲ್ಲಿ ಲೋಕಿ
ವಿಲನ್‌ ಆಗಿ ನಟಿಸಿದ್ದಾರಂತೆ. ತುಂಬಾ ಸೆಟಲ್ಡ್‌ ಆದ ಪಾತ್ರ ಸಿಕ್ಕ ಖುಷಿ ಅವರದು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.