ನಾರಾಯಣನ ತೃಪ್ತಿ ಮತ್ತು ಚಾರ್ಲಿಯ ಕನಸು

ರಕ್ಷಿತ್‌ ಬ್ಯಾಕ್‌ ಟು ಬ್ಯಾಕ್‌ ಸಿನ್ಮಾ

Team Udayavani, Mar 13, 2020, 5:41 AM IST

rakshith-shetty

ರಕ್ಷಿತ್‌ ಶೆಟ್ಟಿ ಈಗ ಹೊಸ ಕನಸು ಕಟ್ಟಿಕೊಂಡು ತಮ್ಮ ಸಿನಿಪಯಣ ಶುರುವಿಟ್ಟುಕೊಂಡಿದ್ದಾರೆ. ಸದ್ಯಕ್ಕೆ ಅವರ ಫೋಕಸ್‌ “777 ಚಾರ್ಲಿ’. ಇದು ರಕ್ಷಿತ್‌ ಶೆಟ್ಟಿಯವರ ಹೊಸ ಸಿನಿಮಾ. ಇದು ಕೂಡಾ ರೆಗ್ಯುಲರ್‌ ಪ್ಯಾಟರ್ನ್ ಬಿಟ್ಟು ಮಾಡುತ್ತಿರುವ ಮತ್ತೂಂದು ಸಿನಿಮಾ….

“ಅವನೇ ಶ್ರೀಮನ್ನಾರಾಯಣ ನನಗೆ ತೃಪ್ತಿ ಕೊಟ್ಟಿದೆ. ನಾನು ಆ ವಿಚಾರದಲ್ಲಿ ಪೂರ್ಣ ತೃಪ್ತ’
-ಹೀಗೆ ಹೇಳಿ ಒಂದು ಕ್ಷಣ ಮೌನವಾದರು ರಕ್ಷಿತ್‌ ಶೆಟ್ಟಿ. ಮಾತು ಮತ್ತೆ ಮುಂದುವರೆಯಿತು. “ಕನ್ನಡದಲ್ಲಿ ಆ ಚಿತ್ರ ಚೆನ್ನಾಗಿ ಹೋಯಿತು. ಕಲೆಕ್ಷನ್‌ನಿಂದ ಹಿಡಿದು ಪ್ರತಿಯೊಂದು ವಿಚಾರದಲ್ಲೂ ಆ ಚಿತ್ರಕ್ಕೆ ಒಳ್ಳೆಯ ಮೈಲೇಜ್‌ ಇತ್ತು. ಆದರೆ ಬೇರೆ ಭಾಷೆಗಳಲ್ಲಿ ಮತ್ತಷ್ಟು ಚೆನ್ನಾಗಿ ಹೋಗಬೇಕಿತ್ತು’ ಎಂದರು ರಕ್ಷಿತ್‌ ಶೆಟ್ಟಿ. ಹೌದು, “ಅವನೇ ಶ್ರೀಮನ್ನಾರಾಯಣ’ ರಕ್ಷಿತ್‌ ಶೆಟ್ಟಿಯವರ ಬಹುನಿರೀಕ್ಷಿತ ಸಿನಿಮಾ. ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದ ಈ ಸಿನಿಮಾ ಬಿಡುಗಡೆಯಾದ ಮೇಲೆ ಒಂದಷ್ಟು ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾದವು. ಅದೇನೇ ಮಿಶ್ರಪ್ರತಿಕ್ರಿಯೆ ಬಂದರೂ ಆ ಚಿತ್ರ ಕನ್ನಡದಲ್ಲಿ ದೊಡ್ಡ ಮಟ್ಟದ ಕಲೆಕ್ಷನ್‌ ಮಾಡಿದ್ದು ಸುಳ್ಳಲ್ಲ. ಸಿನಿಮಾ ಬಗ್ಗೆ “ಏನೋ’ ಅಂದುಕೊಂಡಿದ್ದ ಮಂದಿಯೇ ಆರಂಭದ ವಾರಗಳಲ್ಲಿ ಆ ಚಿತ್ರದ ಕಲೆಕ್ಷನ್‌ ನೋಡಿ ಅಚ್ಚರಿಪಟ್ಟಿದ್ದರು. ಆದರೆ, ಕನ್ನಡದಲ್ಲಿ ಆದಂತೆ ಆ ಚಿತ್ರಕ್ಕೆ ಬೇರೆ ಭಾಷೆಗಳಲ್ಲಿ ಅಷ್ಟೇನೂ “ಸ್ವಾಗತ’ ಸಿಗಲಿಲ್ಲ. ಈ ಬೇಸರ ರಕ್ಷಿತ್‌ ಶೆಟ್ಟಿಯವರಿಗಿದೆ. ಬೇರೆ ಭಾಷೆಗಳಲ್ಲಿ ಆ ಸಿನಿಮಾ ಮತ್ತಷ್ಟು ರೀಚ್‌ ಆಗಬೇಕಿತ್ತು ಎಂಬ ಸಣ್ಣ ಬೇಸರ ರಕ್ಷಿತ್‌ ಶೆಟ್ಟಿಯವರದು. ಹಾಗಾದರೆ ಬೇರೆ ಭಾಷೆಗಳಲ್ಲಿ ತೊಡಕಾಗಿದ್ದು ಏನು ಎಂದು ನೀವು ಕೇಳಬಹುದು. ರಕ್ಷಿತ್‌ ಗಮನಕ್ಕೆ ಬಂದಂತೆ ಅಲ್ಲಿ ಮತ್ತಷ್ಟು ಪ್ರಚಾರ ಬೇಕಿತ್ತು. ಜೊತೆಗೆ ಆ ಚಿತ್ರರಂಗದ ಮಂದಿಯ ಬೆಂಬಲ ಕೂಡಾ ಬೇಕಿತ್ತು. ಹಾಗಂತ ರಕ್ಷಿತ್‌ ಶೆಟ್ಟಿ ಈಗ ಅದನ್ನೇ ಮೆಲುಕು ಹಾಕುತ್ತಾ ಕುಳಿತಿಲ್ಲ. ಹೊಸ ಕನಸು ಕಟ್ಟಿಕೊಂಡು ತಮ್ಮ ಸಿನಿಪಯಣ ಶುರುವಿಟ್ಟು­ಕೊಂಡಿದ್ದಾರೆ. ಸದ್ಯಕ್ಕೆ ಅವರ ಫೋಕಸ್‌ “777 ಚಾರ್ಲಿ’. ಇದು ರಕ್ಷಿತ್‌ ಶೆಟ್ಟಿಯವರ ಹೊಸ ಸಿನಿಮಾ. ಇದು ಕೂಡಾ ರೆಗ್ಯುಲರ್‌ ಪ್ಯಾಟರ್ನ್ ಬಿಟ್ಟು ಮಾಡುತ್ತಿರುವ ಸಿನಿಮಾ. ಶ್ವಾನ ಹಾಗೂ ಮನುಷ್ಯ ಸಂಬಂಧವೊಂದರ ಸುತ್ತ ಈ ಸಿನಿಮಾ ಸಾಗಲಿದೆ.

ಮುಖ್ಯವಾಗಿ “777 ಚಾರ್ಲಿ’ ಒಂದು ಜರ್ನಿ ಸಬೆjಕ್ಟ್. ಅದೇ ಕಾರಣದಿಂದ ರಕ್ಷಿತ್‌ ಹಲವು ರಾಜ್ಯಗಳನ್ನು ಈ ರಕ್ಷಿತ್‌ ಸುತ್ತುತ್ತಿದ್ದಾರೆ. “777 ಚಾರ್ಲಿ’ ಒಂದು ಜರ್ನಿ ಸಬೆjಕ್ಟ್. ಹಾಗಾಗಿ, ಬೇರೆ ಬೇರೆ ರಾಜ್ಯಗಳನ್ನು ಸುತ್ತಾಡಿಕೊಂಡೇ ಬರಬೇಕಾದ ಅನಿವಾರ್ಯತೆ ಕತೆಯಲ್ಲಿರುವ ಕಾರಣ ಚಿತ್ರೀಕರಣ ದಿನಗಳ ಕೂಡಾ ಹೆಚ್ಚಾಗುತ್ತಿವೆ ಎನ್ನುವುದು ರಕ್ಷಿತ್‌ ಶೆಟ್ಟಿ ಮಾತು.

ಗೋವಾ, ಗುಜರಾತ್‌, ರಾಜಸ್ತಾನ್‌, ಪಂಜಾಬ್‌, ಹಿಮಾಚಲ ಪ್ರದೇಶ, ಕಾಶ್ಮೀರಗಳಲ್ಲಿ “777 ಚಾರ್ಲಿ’ ಚಿತ್ರೀಕರಣ ನಡೆಯಲಿದೆ. ಇದು ಮನುಷ್ಯ ಮತ್ತು ಶ್ವಾನವೊಂದರ ನಡುವಿನ ಬಾಂಧವ್ಯದ ಕಥೆಯ ಜೊತೆಗೆ ಹಲವು ಅಂಶಗಳನ್ನು ಹೊಂದಿರುವುದರಿಂದ ಬೇರೆ ಬೇರೆ ರಾಜ್ಯಗಳನ್ನು ಸುತ್ತಾಡಬೇಕಿದೆ

“777′ ಚಾರ್ಲಿ’ 100 ದಿನಗಳ ಚಿತ್ರೀಕರಣ ದಾಟಿ ಮುನ್ನಡೆಯುತ್ತಿದೆ. ಇನ್ನೂ ಸಾಕಷ್ಟು ದಿನಗಳ ಚಿತ್ರೀಕರಣ ಬಾಕಿ ಇದೆ. ರಕ್ಷಿತ್‌ ಶೆಟ್ಟಿ ಹೇಳುವಂತೆ “ಚಾರ್ಲಿ’ಗೆ 140ಕ್ಕೂ ಹೆಚ್ಚು ದಿನಗಳ ಚಿತ್ರೀಕರಣ ಆಗುವ ಸಾಧ್ಯತೆ ಇದೆ. . ಈ ಹಿಂದೆ ರಕ್ಷಿತ್‌ ಶೆಟ್ಟಿಯವರ “ಅವನೇ ಶ್ರೀಮನ್ನಾರಾಯಣ’ ಚಿತ್ರ 200ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಣವಾಗಿತ್ತು. ಕಿರಣ್‌ ರಾಜ್‌ ಈ ಚಿತ್ರದ ನಿರ್ದೇಶಕರು.

ಪುಣ್ಯಕೋಟಿ ಮೊದಲು ರಿಚ್ಚಿ: ರಕ್ಷಿತ್‌ ಸದ್ಯ “777 ಚಾರ್ಲಿ’ಯಲ್ಲಿ ಬಿಝಿ. ಅದು ಮುಗಿಸಿಕೊಂಡು ಹೊಸ ಸಿನಿಮಾದಲ್ಲಿ ತೊಡಗಲಿದ್ದಾರೆ. ಅನೇಕರು ರಕ್ಷಿತ್‌ ಶೆಟ್ಟಿ “ಪುಣ್ಯಕೋಟಿ’ ಚಿತ್ರವನ್ನು ಕೈಗೆತ್ತಿಕೊಳ್ಳಲಿದ್ದಾರೆ. ಈ ಚಿತ್ರವನ್ನು ರಾಹುಲ್‌ ಎನ್ನುವವರು ನಿರ್ದೇಶಿಸಲಿದ್ದಾರೆ. ಈ ಹಿಂದೆ ರಕ್ಷಿತ್‌ ಅವರ ಹಲವು ಚಿತ್ರಗಳಲ್ಲಿ ಸಹಾಯಕರಾಗಿದ್ದ ರಾಹುಲ್‌ “ರಿಚ್ಚಿ’ ಮೂಲಕ ಸ್ವತಂತ್ರ ನಿರ್ದೇಶಕರಾಗು ತ್ತಿದ್ದಾರೆ. ಇನ್ನು, ಇತ್ತೀಚೆಗಷ್ಟೇ ರಕ್ಷಿತ್‌ ಕೊಡೈಕೆನಾಲ್‌ನ ಸುಂದರ ಪರಿಸರದಲ್ಲಿ ತಮ್ಮ ಹೊಸ ಚಿತ್ರ “ಪುಣ್ಯಕೋಟಿ’ಯ ಕಥೆ ಬರೆಯಲು ಹೋಗಿದ್ದರು. ಈ ಬಗ್ಗೆ ಮಾತನಾಡುವ ರಕ್ಷಿತ್‌, “10 ದಿನಗಳ ಕಾಲ ಕೊಡೈಕೆನಾಲ್‌ನಲ್ಲಿ “ಪುಣ್ಯಕೋಟಿ’ಗಾಗಿ ಕಥೆ ಬರೆದೆ. ಇನ್ನು ಸಾಕಷ್ಟು ಕೆಲಸವಿದೆ. ಈಗ ರಾಜಸ್ತಾನದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಬಿಡುವಿನ ವೇಳೆಯಲ್ಲಿ ಇಲ್ಲಿ ಬರೆಯುತ್ತಿದ್ದೇನೆ’ ಎನ್ನುತ್ತಾರೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.