ಭಾನು ಭೂಮಿ ಗಾನ ಲಹರಿ


Team Udayavani, Jul 5, 2019, 5:00 AM IST

30

ಕನ್ನಡ ಚಿತ್ರರಂಗದಲ್ಲಿ ಮೊದಲು ನಟ-ನಟಿಯರಾಗಿ ಗುರುತಿಸಿಕೊಂಡವರು ನಂತರ ಗಾಯಕರಾದ ಉದಾಹರಣೆ ಸಾಕಷ್ಟಿದೆ. ಈಗ ಈ ಸಾಲಿಗೆ ನಟ ರಂಗಾಯಣ ರಘು ಹೆಸರು ಕೂಡ ಸೇರ್ಪಡೆಯಾಗುತ್ತಿದೆ. ಹೌದು, ಇಲ್ಲಿಯವರೆಗೆ ಹತ್ತಾರು ಪಾತ್ರಗಳನ್ನು ಲೀಲಾಜಾಲವಾಗಿ ನಿರ್ವಹಿಸಿ ಸಿನಿಪ್ರಿಯರ ಮನ ಗೆದ್ದಿರುವ ನಟ ರಂಗಾಯಣ ರಘು ಈಗ ಗಾಯಕರಾಗುತ್ತಿದ್ದಾರೆ. ರಂಗಾಯಣ ರಘು ಇದೇ ಮೊದಲ ಬಾರಿಗೆ ‘ಭಾನು ವೆಡ್ಸ್‌ ಭೂಮಿ’ ಚಿತ್ರದ ಗೀತೆಯೊಂದಕ್ಕೆ ಧ್ವನಿ ನೀಡುವ ಮೂಲಕ ಗಾಯಕರಾಗಿದ್ದಾರೆ. ‘ಭಾನು ವೆಡ್ಸ್‌ ಭೂಮಿ’ ಚಿತ್ರದಲ್ಲಿ ಬರುವ ಗೌಸ್‌ಪೀರ್‌ ಸಾಹಿತ್ಯದ ‘ಕಲರ್‌ ಕಲರ್‌ ಕನಸುಗಳು…’ ಎಂಬ ಗೀತೆಯನ್ನು ರಘು ಹಾಡಿದ್ದು, ಎ.ಎಂ ನೀಲ್ ಈ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ.

ಸದ್ಯ ತನ್ನ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳನ್ನು ಪೂರ್ಣಗೊಳಿಸಿರುವ ‘ಭಾನು ವೆಡ್ಸ್‌ ಭೂಮಿ’ ಚಿತ್ರತಂಡ ಚಿತ್ರದ ಪ್ರಮೋಶನ್‌ ಕೆಲಸಗಳಿಗೆ ಚಾಲನೆ ನೀಡಿದ್ದು, ಇತ್ತೀಚೆಗೆ ತನ್ನ ಹಾಡುಗಳನ್ನು ಬಿಡುಗಡೆಗೊಳಿಸಿದೆ. ‘ಭಾನು ವೆಡ್ಸ್‌ ಭೂಮಿ’ ಚಿತ್ರದ ನಾಯಕ ನಟ ಸೂರ್ಯಪ್ರಭು, ನಾಯಕಿ ರಶ್ಮಿತಾ ಮಲ್ನಾಡ್‌, ರಂಗಾಯಣ ರಘು, ಶೋಭರಾಜ್‌ ಸೇರಿದಂತೆ ಚಿತ್ರದ ಕಲಾವಿದರು ಮತ್ತು ತಂತ್ರಜ್ಞರ ಸಮ್ಮುಖದಲ್ಲಿ ಚಿತ್ರದ ಹಾಡುಗಳು ಬಿಡುಗಡೆಗೊಂಡವು.

ಇದೇ ವೇಳೆ ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ಜಿ.ಕೆ ಆದಿ, ‘ನಮ್ಮ ಸುತ್ತಮುತ್ತ ನಡೆಯುವ ಪಾತ್ರಗಳನ್ನೇ ಗಮನದಲ್ಲಿ ಇಟ್ಟುಕೊಂಡು ಈ ಚಿತ್ರವನ್ನು ಮಾಡಲಾಗಿದೆ. ಇಲ್ಲಿನ ಪಾತ್ರಗಳಿಗೆ ಯಾವುದೇ ಅಡಿಪಾಯವಿಲ್ಲ. ನಾವುಗಳು ಹೊರಗಡೆ ಬಂದಾಗ ಏನೇನು ಸಮಸ್ಯೆ ಎದುರಿಸುತ್ತೇವೆ ಅನ್ನೋದನ್ನೆ ಚಿತ್ರದಲ್ಲಿ ಹೇಳಿದ್ದೇವೆ. ಇದರಲ್ಲಿ ನವಿರಾದ ಪ್ರೇಮಕಥೆ ಇದೆ. ಎಮೋಶನ್‌ ಅಂಶಗಳಿವೆ. ಅದೆಲ್ಲ ಹೇಗೆ ಬಂದಿದೆ ಅನ್ನೋದನ್ನ ಥಿಯೇಟರ್‌ನಲ್ಲೇ ನೋಡಬೇಕು’ ಎಂದರು.

ಚಿತ್ರದ ನಾಯಕ ಪ್ರಭು ಸೂರ್ಯ ಸಭ್ಯ ಕುಟುಂಬದ ಹುಡುಗನಾಗಿ ಇಲ್ಲಿ ಕಾಣಿಸಿಕೊಂಡಿದ್ದಾರೆ. ತಮ್ಮ ಪಾತ್ರದ ಬಗ್ಗೆ ಮಾತನಾಡಿದ ಪ್ರಭು ಸೂರ್ಯ, ‘ಚಿತ್ರದಲ್ಲಿ ನಾನೊಬ್ಬ ಒಳ್ಳೆಯ ಮನೆತನದ ಹುಡುಗ, ಮದುವೆ ಬಗ್ಗೆ ಆಸಕ್ತಿ ಇರದ ನನಗೆ ಭೂಮಿ ಎನ್ನುವ ಹುಡುಗಿಯ ಪರಿಚಯವಾಗುತ್ತದೆ. ಮುಂದೆ ಅವಳು ನನಗೆ ದಕ್ಕುತ್ತಾಳಾ, ಇಲ್ಲವಾ ಎಂಬುದೇ ಚಿತ್ರದ ಒನ್‌ಲೈನ್‌ ಸ್ಟೋರಿ’ ಎಂದು ಪಾತ್ರ ಪರಿಚಯ ಮಾಡಿಕೊಟ್ಟರು. ಚಿತ್ರದ ನಾಯಕಿ ರಶ್ಮಿತಾ ಮಲ್ನಾಡ್‌ ಮಾತನಾಡಿ, ‘ಊರು ಬಿಟ್ಟು ಇನ್ನೊಂದು ಸ್ಥಳಕ್ಕೆ ಬಂದು, ತನ್ನ ಪ್ರೀತಿಯನ್ನು ಹುಡುಕಿಕೊಂಡು ಬಂದಾಗ ಅದು ಸಿಗುತ್ತದಾ ಎನ್ನುವುದು ನನ್ನ ಪಾತ್ರ’ ಎಂದು ತನ್ನ ಪಾತ್ರದ ಬಗ್ಗೆ ವಿವರಣೆ ಕೊಟ್ಟರು.

ಬೆಳಗಾವಿ ಮೂಲದ ಕಿಶೋರ್‌ ಶೆಟ್ಟಿ ‘ಭಾನು ವೆಡ್ಸ್‌ ಭೂಮಿ’ ಚಿತ್ರವನ್ನು ನಿರ್ಮಿಸುತ್ತಿದ್ದು, ಚಿತ್ರಕ್ಕೆ ಗಣೇಶ್‌ ಹೆಗಡೆ ಛಾಯಾಗ್ರಹಣ, ಶ್ರೀನಿವಾಸ್‌ ಬಾಬು ಸಂಕಲನ ಕಾರ್ಯವಿದೆ. ಸದ್ಯ ಬಿಡುಗಡೆಯಾಗಿರುವ ‘ಭಾನು ವೆಡ್ಸ್‌ ಭೂಮಿ’ ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು, ಚಿತ್ರವು ಆಗಸ್ಟ್‌ ವೇಳೆಗೆ ತೆರೆಕಾಣುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.