ರಿಯಲ್‌ಸ್ಟಾರ್‌ ಉಪ್ಪಿಗೆ ಬರ್ತ್‌ಡೇ ಸಂಭ್ರಮ : ಕೈಯಲ್ಲಿವೆ ಸಾಲು ಸಾಲು ಸಿನಿಮಾ

ಉಪ್ಪಿ ಕಬ್ಜ ಮೇಲೆ ಪ್ರೇಕ್ಷಕರ ಕಾತುರ

Team Udayavani, Sep 18, 2020, 5:22 PM IST

ರಿಯಲ್‌ಸ್ಟಾರ್‌ ಉಪ್ಪಿಗೆ ಬರ್ತ್‌ಡೇ ಸಂಭ್ರಮ : ಕೈಯಲ್ಲಿವೆ ಸಾಲು ಸಾಲು ಸಿನಿಮಾ

ಇದು ಅಭಿಮಾನಿಗಳ ದಿನ… ಆದರೆ, ಈ ದಿನ ನಾವೆಲ್ಲ ಜೊತೆಯಾಗಿ ಸೇರಲು ಸಾಧ್ಯವಾಗುತ್ತಿಲ್ಲ… – ಹೀಗೆ ಉಪೇಂದ್ರ ಅಭಿಮಾನಿ  ಗಳಿಗೆ ಮೊದಲೇ ಹೇಳಿಬಿಟ್ಟಿದ್ದಾರೆ. ಇದಕ್ಕೆ ಕಾರಣ, ಉಪೇಂದ್ರ ಹುಟ್ಟುಹಬ್ಬ. ಸೆ.18 ( ಇಂದು) ಎಂದರೆ ಅದು ರಿಯಲ್‌ಸ್ಟಾರ್‌ಅಭಿಮಾನಿಗಳ ಪಾಲಿಗೆ ದೊಡ್ಡ ಹಬ್ಬ. ಪ್ರತಿ ವರ್ಷ ಸೆ.17ರ ಮಧ್ಯಾಹ್ನ ದಿಂದಲೇ ಉಪೇಂದ್ರ ಅವರ ಮನೆಮುಂದೆ ಅಭಿಮಾನಿಗಳುಸೇರುತ್ತಿದ್ದರು. ಆದರೆ, ಈ ವರ್ಷಕೋವಿಡ್ ಕಾರಣದಿಂದ ಸಮೂಹ ಸಂಭ್ರಮವಿಲ್ಲ. ಹಾಗಂತ ಅಭಿಮಾನಿ ಗಳು ಸುಮ್ಮನೆ ಕುಳಿತಿಲ್ಲ. ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ತಾವು ಇದ್ದ ಜಾಗದಿಂದಲೇ ಸಂಭ್ರಮಿಸುತ್ತಿದ್ದಾರೆ. ಅದಕ್ಕೆ ಪೂರಕವಾಗಿ ಉಪೇಂದ್ರ ಕೂಡಾ ತಮ್ಮ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸಲು ಮುಂದಾಗಿದ್ದಾರೆ. ಸದ್ಯ ಉಪೇಂದ್ರ ಅವರ ಕೈಯಲ್ಲಿ ಸಾಲು ಸಾಲು ಸಿನಿಮಾಗಳಿವೆ.

ಸದ್ಯ ಉಪೇಂದ್ರ ಏಕಕಾಲಕ್ಕೆ ಕನ್ನಡ ಐದಾರು ಸಿನಿಮಾಗಳಲ್ಲಿ ಬ್ಯುಸಿ ಯಾಗಿದ್ದಾರೆ. ಅಲ್ಲದೆ ತೆಲುಗಿನಲ್ಲಿ ಅಲ್ಲು ಅರ್ಜುನ್‌ ನಿರ್ಮಾಣ ಸಂಸ್ಥೆಯ “ಬಾಕ್ಸರ್‌’ ಚಿತ್ರದಲ್ಲೂ ಅಭಿನಯಿಸುತ್ತಿದ್ದಾರೆ. ಕನ್ನಡದಲ್ಲಿ ಉಪೇಂದ್ರ ನಾಯಕ ನಟನಾಗಿ ಅಭಿನಯಿಸಿರುವ “ಹೋಮ್‌ ಮಿನಿಸ್ಟರ್‌’ ಚಿತ್ರ ತೆರೆಗೆ ಬರೋದಕ್ಕೆ ಸಿದ್ಧವಾಗಿದೆ. ಈಗಾಗಲೇ ಸೆನ್ಸಾರ್‌ ನಿಂದ ಗ್ರೀನ್‌ ಸಿಗ್ನಲ್‌ ಪಡೆದುಕೊಂಡಿರುವ “ಹೋಮ್‌ ಮಿನಿಸ್ಟರ್‌’ ಥಿಯೇಟರ್‌ಗಳು ತೆರೆಯುತ್ತಿದ್ದಂತೆ, ಬಿಡುಗಡೆಯಾಗ ಲಿದೆ. ಇನ್ನು ಉಪೇಂದ್ರ ಅಭಿನಯದ “ಕಬj’ ಚಿತ್ರ ಕೂಡ ಬಹುಭಾಷೆಗಳಲ್ಲಿ ನಿರ್ಮಾಣವಾಗುತ್ತಿದ್ದು, ಆರ್‌. ಚಂದ್ರು ಈ ಚಿತ್ರವನ್ನು ನಿರ್ದೇಶಿ ಸುತ್ತಿದ್ದಾರೆ. ಈಗಾಗಲೇ ಈ ಚಿತ್ರದ ಒಂದಷ್ಟು ಭಾಗ ಚಿತ್ರೀಕರಣ ಪೂರ್ಣಗೊಂಡಿದ್ದು, ಬಾಕಿಯಿರುವ ಚಿತ್ರೀ ಕರಣ ಶುರು ವಾಗಲಿದೆ. ಜೊತೆಗೆ “ಬುದ್ಧಿವಂತ-2′ ಕೂಡಾ ಸಿದ್ಧವಾಗುತ್ತಿದೆ.

ಇದರೊಂದಿಗೆ ರವಿಚಂದ್ರನ್‌ ಅವರೊಂದಿಗೆ ಅಭಿನಯಿಸುತ್ತಿರುವ ತ್ರಿಶೂಲಂ ಚಿತ್ರದ ಚಿತ್ರೀಕರಣ ಕೂಡ ನಡೆಯುತ್ತಿದ್ದು, ಆ ಚಿತ್ರ ಕೂಡ ಈ ವರ್ಷದ ಕೊನೆಗೆ ತೆರೆಗೆ ಬರುವ ಸಾಧ್ಯತೆಯಿದೆ. ಇನ್ನು ಶಶಾಂಕ್‌ ಮತ್ತು ಮಂಜು ಮಾಂಡವ್ಯ ನಿರ್ದೇಶನದ ಎರಡು ಚಿತ್ರಗಳಲ್ಲಿ ಉಪೇಂದ್ರ ಅಭಿನಯಿಸುತ್ತಿದ್ದಾರೆ. ಇದಲ್ಲದೇ ಕೆ.ಮಾದೇಶ್‌ ನಿರ್ದೇಶನದ ಚಿತ್ರವೂ ಉಪ್ಪಿ ಕೈಯಲ್ಲಿದೆ.

ಪ್ಯಾನ್‌ ಇಂಡಿಯಾ ಕಬ್ಜ  : ಸದ್ಯ ಉಪೇಂದ್ರ ಅವರ ಪಟ್ಟಿಯಲ್ಲಿರುವ ಸಿನಿಮಾಗಳಲ್ಲಿ ಅತಿ ಹೆಚ್ಚು ನಿರೀಕ್ಷೆ ಹುಟ್ಟಿಸಿರುವ ಚಿತ್ರವೆಂದರೆ ಅದು “ಕಬ್ಜ’. ಅದಕ್ಕೆ ಕಾರಣ ಪ್ಯಾನ್‌ ಇಂಡಿಯಾ. ಹೌದು, ಆರ್‌.ಚಂದ್ರು ನಿರ್ಮಾಣ, ನಿರ್ದೇಶನದ”ಕಬ್ಜ’ ಚಿತ್ರ ಈಗಾಗಲೇ ಕೆಲವು ದಿನಗಳ ಚಿತ್ರೀಕರಣ ಪೂರೈಸಿದೆ. ಚಿತ್ರದ ಫೋಟೋಶೂಟ್‌ ಹಾಗೂ ಝಲಕ್‌ ನೋಡಿದವರು ಸಿನಿಮಾ ಬಗ್ಗೆ ಖುಷಿಯಾಗಿದ್ದಾರೆ. ಪ್ಯಾನ್‌ ಇಂಡಿಯಾ ಸಿನಿಮಾವಾಗಿ “ಕಬ್ಜ’ ದೊಡ್ಡ ಮಟ್ಟದಲ್ಲಿ ಹಿಟ್‌ ಆಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಸೆಂಟಿಮೆಂಟ್‌, ಲವ್‌ ಸ್ಟೋರಿ ಚಿತ್ರಗಳ ಮೂಲಕ ಗಮನ ಸೆಳೆದಿರುವ ಚಂದ್ರು, ಈ ಬಾರಿ ಔಟ್‌ ಅಂಡ್‌ ಔಟ್‌ ಆ್ಯಕ್ಷನ್‌ ಸಿನಿಮಾ ಮಾಡಲು ಹೊರಟಿದ್ದಾರೆ. ಚಿತ್ರದಲ್ಲಿ ಉಪೇಂದ್ರ 80ರ ದಶಕದ ಡಾನ್‌ ಆಗಿ ಕಾಣಿಸಿಕೊಳ್ಳುತ್ತಿದ್ದು, ಇಡೀ ಸಿನಿಮಾ ರೆಟ್ರೋ ಶೈಲಿಯಲ್ಲೇ ಮೂಡಿ ಬರಲಿದೆ. ಬಹುತೇಕ ಸಿನಿಮಾ ಸೆಟ್‌ನಲ್ಲೇ ನಡೆಯುವ ಸಾಧ್ಯತೆ ಇದ್ದು, ಅದ್ಧೂರಿ ಬಜೆಟ್‌ನ ಸಿನಿಮಾ ಎಂದು ಈಗಾಗಲೇ ಗಾಂಧಿ ನಗರದಲ್ಲಿ ಮಾತುಗಳು ಕೇಳಿಬರುತ್ತಿವೆ.

ಕುತೂಹಲ ಹೆಚ್ಚಿಸಿದ ಶೋ ರೀಲ್‌ :  ನಿರ್ದೇಶಕ ಆರ್‌. ಚಂದ್ರು ಈಗಾಗಲೇ ಮಾಡಿರುವ ಚಿತ್ರೀಕರಣದ ತುಣುಕುಗಳನ್ನೆಲ್ಲಾ ಸೇರಿಸಿ ಒಂದು ಶೋ ರೀಲ್‌ ಮಾಡಿದ್ದಾರೆ. ಈಗಾಗಲೇ ಬೇರೆ ಬೇರೆ ಭಾಷೆಯ ಸಿನಿಮಾ ಮಂದಿ ಈ ಶೋ ರೀಲ್‌ ನೋಡಿ ಥ್ರಿಲ್‌ ಆಗಿದ್ದಾರೆ. ಜೊತೆಗೆ ಈ ಚಿತ್ರ ಬ್ಲಾಕ್‌ ಬ್ಲಿಸ್ಟರ್‌ ಆಗಲಿದೆ ಎಂದು ಭವಿಷ್ಯ ಕೂಡಾ ನುಡಿದಿದ್ದಾರೆ. ಉಪೇಂದ್ರ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ನಿರ್ದೇಶಕ ಆರ್‌.ಚಂದ್ರು ಚಿತ್ರದ ಥೀಮ್‌ ಪೋಸ್ಟರ್‌ ರಿಲೀಸ್‌ ಮಾಡಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ರಾಮ್‌ಗೊàಪಾಲ್‌ ವರ್ಮಾ ಈ ಥೀಮ್‌ ಪೋಸ್ಟರ್‌ ಬಿಡುಗಡೆ ಮಾಡಿದ್ದು, ಮಾಸ್‌ ಅಭಿಮಾನಿ  ಗಳು ಖುಷಿಯಾಗಿದ್ದಾರೆ. ಚಿತ್ರದ ಕಥೆಗೆ ಪೂರಕವಾಗಿ ಈ ಥೀಮ್‌ ಪೋಸ್ಟರ್‌ ಅನ್ನು ಡಿಸೈನ್‌ ಮಾಡಲಾಗಿದೆ.­

ಸಿದ್ಧವಾಗುತ್ತಿದೆ ಬುದ್ಧಿವಂತ 2 :  ಉಪೇಂದ್ರ ಈ ಹಿಂದೆ “ಬುದ್ಧಿವಂತ’ ಸಿನಿಮಾದಲ್ಲಿ ನಟಿಸಿರೋದು ನಿಮಗೆ ಗೊತ್ತೇ ಇದೆ. ಈಗ “ಬುದ್ಧಿವಂತ-2′ ಎಂಬ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರವನ್ನು ಕ್ರಿಸ್ಟಲ್‌ ಪಾರ್ಕ್‌ ಬ್ಯಾನರ್‌ನಡಿ ಟಿ.ಆರ್‌.ಚಂದ್ರಶೇಖರ್‌ ನಿರ್ಮಿಸುತ್ತಿದ್ದು, ಜಯರಾಮ್‌ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಸೋನಾಲ್‌ ಮೊಂತೆರೋ ನಾಯಕಿ. ಈಗಾಗಲೇ ಬಹುತೇಕ ಚಿತ್ರೀಕರಣವಾಗಿದೆ. ಈ ಚಿತ್ರದಲ್ಲೂ ಉಪೇಂದ್ರ ಹೊಸ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ನಡುವೆಯೇ ಜಯರಾಂ ನಿರ್ದೇಶನದಲ್ಲಿ ಹೊಸ ಚಿತ್ರವೊಂದರಲ್ಲೂ ಉಪೇಂದ್ರ ನಟಿಸುತ್ತಿದ್ದಾರೆ.

ನಿರ್ದೇಶನದತ್ತ ಉಪೇಂದ್ರ :  ಉಪೇಂದ್ರ ಎಲ್ಲೇ ಹೋದರೂ ಅವರ ಅಭಿಮಾನಿಗಳು ಕೇಳುವ ಒಂದೇ ಒಂದು ಪ್ರಶ್ನೆ ಎಂದರೆ ಅದು ನಿರ್ದೇಶನ ಯಾವಾಗ ಎಂಬುದು. ಈಗ ಅದಕ್ಕೆ ಉಪೇಂದ್ರ ಉತ್ತರಿಸಿದ್ದಾರೆ. “ನಿರ್ದೇಶನಕ್ಕೆ ಬೇಕಾದ ಕಥೆ ಸಿದ್ಧವಾಗಿದೆ. ಶೀಘ್ರದಲ್ಲೇ ಅದರ ಟೈಟಲ್‌, ಫ‌ಸ್ಟ್‌ಲುಕ್‌ ಲಾಂಚ್‌ ಆಗಲಿದೆ’ ಎನ್ನುವ ಮೂಲಕ ಅಭಿಮಾನಿಗಳ ಕುತೂಹಲ ಹೆಚ್ಚಿಸಿದ್ದಾರೆ.

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.