ಬದಲಾದವು ರೆಮೋ ಹಾಡುಗಳು

ಪವನ್‌ ಒಡೆಯರ್‌ ನಿರ್ದೇಶನದ ಚಿತ್ರ

Team Udayavani, Aug 14, 2020, 4:13 PM IST

ಬದಲಾದವು ರೆಮೋ ಹಾಡುಗಳು

ಕೋವಿಡ್ ಸದ್ಯ ಎಲ್ಲ ಕ್ಷೇತ್ರಗಳ ಮೇಲೂ ಸಾಕಷ್ಟು ಪ್ರತಿಕೂಲ ಪರಿಣಾಮವನ್ನು ಬೀರುತ್ತಿದೆ. ಹಾಗೇ ಚಿತ್ರರಂಗದ ಮೇಲೂ ಕೋವಿಡ್ ದಿಂದಾಗಿರುವ ಸಂಕಷ್ಟ ಹೇಳಿದಷ್ಟು ಇದೆ. ಇನ್ನು “ರೆಮೋ’ ಚಿತ್ರದ ಮೇಲೆ ಕೋವಿಡ್ ಎಫೆಕ್ಟ್ ಹೇಗಿದೆ ಎಂದರೆ, ಕೋವಿಡ್ ದಿಂದಾಗಿ ಈಗಾಗಲೇ ರೆಕಾರ್ಡಿಂಗ್‌ ಆಗಿದ್ದ ತನ್ನೆಲ್ಲ ಹಾಡುಗಳನ್ನೇ ಮತ್ತೆ ಬದಲಾಯಿಸಲು “ರೆಮೋ’ ಚಿತ್ರತಂಡ ಮುಂದಾಗಿದೆ. ಈ ನಿಟ್ಟಿನಲ್ಲಿ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯಾ ಹಾಗೂ ಪವನ್‌ ತೊಡಗಿದ್ದಾರೆ.

ಹೌದು, ಸ್ಯಾಂಡಲ್‌ವುಡ್‌ನ‌ ಯಂಗ್‌ ಆ್ಯಂಡ್‌ ಎನರ್ಜಿಟಿಕ್‌ ನಿರ್ದೇಶಕ ಪವನ್‌ ಒಡೆಯರ್‌ ನಿರ್ದೇಶನದ “ರೆಮೋ’ ಚಿತ್ರ ಇಷ್ಟೊತ್ತಿಗಾಗಲೇ ತೆರೆಗೆ ಬರಬೇಕಿತ್ತು. ಆರಂಭದಲ್ಲಿ ಇದೇ ಏಪ್ರಿಲ್‌ – ಮೇ ವೇಳೆಗೆ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಪ್ಲಾನ್‌ ಹಾಕಿಕೊಂಡಿತ್ತು ಚಿತ್ರತಂಡ. ಆದರೆ ಈ ವರ್ಷದ ಆರಂಭದಲ್ಲಿಯೇ, ಅನಿರೀಕ್ಷಿತವಾಗಿ ಬಂದೆರಗಿದ ಕೋವಿಡ್ ಮಹಾಮಾರಿ, “ರೆಮೋ’ ಚಿತ್ರದ ಕೆಲಸಕ್ಕೆ ಬ್ರೇಕ್‌ ಹಾಕಿದೆ. ಅದಾಗಲೇ ಬಹುತೇಕ ಮಾತಿನ ಭಾಗದ ಚಿತ್ರೀಕರಣ ಮುಗಿಸಿ, ಇನ್ನೇನು ಬಾಕಿಯಿರುವ ಹಾಡುಗಳ ಶೂಟಿಂಗ್‌ ಗೆ ಹೊರಡಬೇಕು ಎನ್ನುವಷ್ಟರಲ್ಲಿ ಬಂದೆರಗಿದ ಕೋವಿಡ್, “ರೆಮೋ’ ಚಿತ್ರತಂಡದ ಪ್ಲಾನ್‌ ಎಲ್ಲವನ್ನೂ ತಲೆಕೆಳಗಾಗುವಂತೆ ಮಾಡಿತು.

ಆನಂತರ ಲಾಕ್‌ಡೌನ್‌, ಸೀಲ್‌ಡೌನ್‌, ಶೂಟಿಂಗ್‌ಗೆ ಅನುಮತಿ ಸಿಗದ ಕಾರಣ ಚಿತ್ರತಂಡಕ್ಕೆ ಅಂದುಕೊಂಡಂತೆ ತಮ್ಮ ಹಾಡನ್ನು ಶೂಟಿಂಗ್‌ ಮಾಡುವುದೇ ದೊಡ್ಡ ಸಮಸ್ಯೆಯಾಯಿತು. ಈ ಬಗ್ಗೆ ಸಾಕಷ್ಟು ಯೋಚಿಸಿದ ಚಿತ್ರತಂಡ, ಈಗ ಇಡೀ ಚಿತ್ರದ ಹಾಡುಗಳನ್ನು ಸಂಪೂರ್ಣವಾಗಿ ಬದಲಾವಣೆ ಮಾಡುವ ನಿರ್ಧಾರಕ್ಕೆ ಬಂದಿದೆ. ಈಗಾಗಲೇ ರೆಕಾರ್ಡಿಂಗ್‌ ಮಾಡಲಾಗಿದ್ದ ಹಾಡುಗಳು ವಿಭಿನ್ನ ಹಿನ್ನೆಲೆ ಮತ್ತು ವಿದೇಶಿ ಲೊಕೇಶನ್‌ ಗಳು ಮತ್ತು ನೂರಾರು ಸಂಖ್ಯೆಯ ಸಹ ಕಲಾವಿದರನ್ನು ಡಿಮ್ಯಾಂಡ್‌ ಮಾಡುತ್ತಿದ್ದವು. ಆದರೆ ಈಗಿನ ಪರಿಸ್ಥಿತಿಯಲ್ಲಿ ಈ ಹಾಡುಗಳನ್ನು ಇಟ್ಟುಕೊಂಡು ಶೂಟಿಂಗ್‌ ಮಾಡುವುದು ನಿಜಕ್ಕೂ ಸವಾಲಿನ ಕೆಲಸ. ಹೀಗಾಗಿ ಚಿತ್ರದ ಹಾಡುಗಳಲ್ಲಿ ಒಂದಷ್ಟು ಬದಲಾವಣೆ ಮಾಡಿಕೊಂಡಿರುವ ಚಿತ್ರತಂಡ, ಹೊಸದಾಗಿ ಆರು ಹಾಡುಗಳ ಮರು ಮುದ್ರಣಕ್ಕೆ ಮುಂದಾಗಿದೆ. ­

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.