ರೀ-ರಿಲೀಸ್‌ ಆಗ್ತಿದೆ ರಂಗಿತರಂಗ, ಜಂಟಲ್‌ಮೆನ್‌


Team Udayavani, Oct 30, 2020, 3:16 PM IST

ರೀ-ರಿಲೀಸ್‌ ಆಗ್ತಿದೆ ರಂಗಿತರಂಗ, ಜಂಟಲ್‌ಮೆನ್‌

2015ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ ಭರ್ಜರಿ ಕಮಾಲ್‌ ಮಾಡಿದ್ದ ಬಹುತೇಕ ಹೊಸಪ್ರತಿಭೆಗಳ “ರಂಗಿತರಂಗ’ ಚಿತ್ರ ಈ ವಾರ ಮತ್ತೆ ಬಿಡುಗಡೆಯಾಗುತ್ತಿದೆ. ಕಳೆದ ಎರಡು ವಾರದಿಂದ ಥಿಯೇಟರ್‌ ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾಗಳ ಪ್ರದರ್ಶನ ಆರಂಭವಾಗಿದ್ದು, ಈ ಹಿಂದೆ ಜನಮನ್ನಣೆ ಪಡೆದು ಸೂಪರ್‌ ಹಿಟ್‌ ಆಗಿದ್ದ ಅನೇಕ ಸಿನಿಮಾಗಳು ರೀ-ರಿಲೀಸ್‌ ಆಗುತ್ತಿದ್ದು, ಈ ಸಾಲಿಗೆ ಈ ವಾರ “ರಂಗಿತರಂಗ’ ಚಿತ್ರ ಕೂಡ ಸೇರ್ಪಡೆಯಾಗುತ್ತಿದೆ.

“ಸದ್ಯ ರೀ-ರಿಲೀಸ್‌ ಆಗುತ್ತಿರುವ ಸಿನಿಮಾಗಳಿಗೆ ನಿಧಾನವಾಗಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅಲ್ಲದೆ “ರಂಗಿತರಂಗ’ವನ್ನು ರೀ-ರಿಲೀಸ್‌ ಮಾಡುವಂತೆ ಪ್ರೇಕ್ಷಕರಿಂದಲೂ ಒತ್ತಾಯ ಬಂದಿದ್ದರಿಂದ, ಅ. 30 ರಿಂದ ರಾಜ್ಯಾದ್ಯಂತ 20ಕ್ಕೂ ಹೆಚ್ಚು ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ರೀ-ರಿಲೀಸ್‌ ಮಾಡಲು ಪ್ಲಾನ್‌ ಮಾಡಿಕೊಂಡಿದ್ದೇವೆ’ ಎಂದಿದ್ದಾರೆ

ನಿರ್ಮಾಪಕ ಹೆಚ್‌.ಕೆ ಪ್ರಕಾಶ್‌. ಸಸ್ಪೆನ್ಸ್‌-ಥ್ರಿಲ್ಲರ್‌ ಕಥಾಹಂದರ ಹೊಂದಿದ್ದ “ರಂಗಿತರಂಗ’ ಚಿತ್ರದಲ್ಲಿ ನಿರೂಪ್‌ ಭಂಡಾರಿ, ಆವಂತಿಕಾ ಶೆಟ್ಟಿ, ರಾಧಿಕಾ ನಾರಾಯಣ್‌, ಸಾಯಿಕುಮಾರ್‌ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದರು. “ಶ್ರೀದೇವಿ ಎಂಟರ್‌ ಟೈನರ್’ ಬ್ಯಾನರ್‌ನಲ್ಲಿ ನಿರ್ಮಾಣವಾದ ಚಿತ್ರಕ್ಕೆ ಅನೂಪ್‌ ಭಂಡಾರಿ ಆ್ಯಕ್ಷನ್‌-ಕಟ್‌ ಹೇಳಿದ್ದರು.

ಮತ್ತೆ ಬರ್ತಿದ್ದಾನೆ ಜಂಟಲ್‌ಮೆನ್‌ : ಇದೇ ವೇಳೆ ಪ್ರಜ್ವಲ್‌ ದೇವರಾಜ್‌, ನಿಶ್ವಿ‌ಕಾ ನಾಯ್ಡು ಅಭಿನಯದ “ಜಂಟಲ್‌ಮೆನ್‌’ ಚಿತ್ರ ಕೂಡ ಈ ವಾರ ರೀ-ರಿಲೀಸ್‌ ಆಗುತ್ತಿದೆ. ಗುರುದೇಶಪಾಂಡೆ ನಿರ್ಮಾಣದ ಈ ಚಿತ್ರಕ್ಕೆ ಜಡೇಶ್‌ ಹಂಪಿ ನಿರ್ದೇಶನ ಮಾಡಿದ್ದಾರೆ.­

5 ಅಡಿ  7 ಅಂಗುಲಗೆ ಮೆಚ್ಚುಗೆ : ಚಿತ್ರಮಂದಿರ ತೆರೆದ ನಂತರ ಮರುಬಿಡುಗಡೆಯಾದ ಚಿತ್ರಗಳು ನಿಧಾನವಾಗಿ ಪ್ರೇಕ್ಷಕರನ್ನು ಸೆಳೆಯುತ್ತಿವೆ. ಸ್ಟಾರ್‌ಗಳ ಚಿತ್ರಗಳು ಸ್ಟಾರ್‌ ಕ್ರೇಜ್‌ ಹಾಗೂ ಮಾಸ್‌ ಅಂಶಗಳಿಂದ ಸೆಳೆದರೆ, ಹೊಸಬರ ಸಿನಿಮಾಗಳು ಕಂಟೆಂಟ್‌ನಿಂದ ಸೆಳೆಯುತ್ತಿವೆ. ಹೀಗೆ ಕಂಟೆಂಟ್‌ ಮೂಲಕ ಗಮನ ಸೆಳೆಯುತ್ತಿರುವ ಚಿತ್ರಗಳಲ್ಲಿ “5 ಅಡಿ 7 ಅಂಗುಲ’ ಎಂಬ ಥ್ರಿಲ್ಲರ್‌ ಚಿತ್ರವೂ ಸೇರುತ್ತದೆ.

ಈಗಾಗಲೇ ಮರುಬಿಡುಗಡೆಯಾಗಿ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಈಚಿತ್ರವನ್ನು ನಂದಳಿಕೆ ನಿತ್ಯಾನಂದ ಪ್ರಭು ನಿರ್ಮಿಸಿ, ನಿರ್ದೇಶಿಸಿದ್ದಾರೆ. ಚಿತ್ರಮಂದಿರಗಳು ಕೂಡಾ ಪ್ರದರ್ಶನ ಹೆಚ್ಚಿಸುತ್ತಿರುವುದು ನಿರ್ಮಾಪಕರಿಗೆ ಖುಷಿ ನೀಡಿದೆ. ಜೊತೆಗೆ ಇತ್ತೀಚೆಗೆ ಚಿತ್ರ ನೋಡಿಕೊಂಡು ಬಂದ ಪ್ರೇಕ್ಷಕರೊಬ್ಬರು ಜೇಬಿನಿಂದ 100 ರೂಪಾಯಿ ತೆಗೆದು ನಿಮ್ಮ ಚಿತ್ರ ಡಬಲ್‌ ಟಿಕೆಟ್‌ಗೆ ಹಣಕ್ಕೆ ಅರ್ಹ ತೆಗೆದುಕೊಳ್ಳಿ ಎಂದು ನಿರ್ಮಾಪಕರಿಗೆ ನೀಡಲು ಬಂದರಂತೆ. ಇದರಿಂದ ಇಡೀ ತಂಡ ಖುಷಿಯಾಗಿದೆ. ಚಿತ್ರರಂಗದ ಮಂದಿ ಕೂಡಾ ಸಿನಿಮಾ ನೋಡಿ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಚಿತ್ರದ ಕಥಾ ನಾಯಕಿ ಅದಿತಿ, ನಾಯಕರಾದ ಭುವನ್‌ ಹಾಗೂ ರಾಸಿಕ್‌ ಕುಮಾರ್‌, ಸಂಗೀತ ನಿರ್ದೇಶಕ ಆರ್‌.ಎಸ್‌.ನಾರಾಯಣ್‌ ಎಲ್ಲರೂ ಚಿತ್ರಕ್ಕೆ ಸಿಗುತ್ತಿರುವ ಪ್ರೋತ್ಸಾಹದಿಂದ ಸಂತಸಗೊಂಡಿದ್ದಾರೆ. ­

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.