ಶೂಟಿಂಗ್‌ನತ್ತ ಸ್ಟಾರ್ಸ್

ನೋಡುವಷ್ಟು ನೋಡ್ಬುಟ್ಟು ಚಿತ್ರೀಕರಣಕ್ಕೆ ಹೊರಟೇಬಿಟ್ರು!

Team Udayavani, Sep 25, 2020, 8:04 PM IST

sUCHITRA-TDY-1

ಸಾಂದರ್ಭಿಕ ಚಿತ್ರ

ಸಿನಿಮಾ ಕ್ಷೇತ್ರದಲ್ಲಿ ಸ್ಟಾರ್ ಎಂಟ್ರಿಯಾದರೆ ಅದರ ಖದರ್ರೇ ಬೇರೆ. ಈಗ ಸ್ಟಾರ್ ಎಂಟ್ರಿಯಾಗಿದೆ. ಒಬ್ಬೊಬ್ಬರೇ ಅಖಾಡಕ್ಕೆ ಇಳಿಯುತ್ತಿದ್ದಾರೆ. ಅಷ್ಟಕ್ಕೂಯಾವ ಅಖಾಡ ಎಂದು ನೀವು ಕೇಳಬಹುದು. ಕೋವಿಡ್ ಲಾಕ್‌ಡೌನ್‌ನಿಂದ ಸ್ಥಗಿತವಾಗಿದ್ದ ಚಿತ್ರೀಕರಣ ಈಗ ಮತ್ತೆ ಆರಂಭವಾಗಿದೆ. ಆದರೆ, ಆರಂಭದಲ್ಲಿ ಚಿತ್ರೀಕರಣಕ್ಕೆ ಹೊರಟಿದ್ದು ಮಾತ್ರ ಹೊಸಬರು. ಆದರೆ, ಈಗ ಸ್ಟಾರ್ ಚಿತ್ರೀಕರಣಕ್ಕೆ ಅಣಿಯಾಗಿದ್ದಾರೆ. ನೋಡುವಷ್ಟು ನೋಡಿ ಬಿಟ್ಟು ಸೆಟ್‌ಗೆ ಎಂಟ್ರಿಕೊಡುತ್ತಿದ್ದಾರೆ. ಬಹುತೇಕ ಎಲ್ಲಾ ಸ್ಟಾರ್‌ಗಳು ತಮ್ಮ ಸಿನಿಮಾಗಳ ಚಿತ್ರೀಕರಣದತ್ತ ಮುಖಮಾಡುತ್ತಿದ್ದಾರೆ…

ಕೋವಿಡ್ ಲಾಕ್‌ ಡೌನ್‌ ನಿಯಮಗಳು ಸಡಿಲವಾಗುತ್ತಿದ್ದಂತೆ, ನಿಧಾನವಾಗಿ ಚಿತ್ರತಂಡಗಳು ಚಿತ್ರೀಕರಣದತ್ತ ಮುಖ ಮಾಡುತ್ತಿವೆ. ಅದರಲ್ಲೂ ಅರ್ಧಕ್ಕೆ ಶೂಟಿಂಗ್‌ ನಿಲ್ಲಿಸಿದ್ದ ಬಹುತೇಕ ಹೊಸಬರ ಚಿತ್ರತಂಡಗಳು ಆರ್ಥಿಕ ಹೊರೆ ಅನುಭವಿಸುತ್ತಿದ್ದು, ಆದಷ್ಟು ಬೇಗ ಚಿತ್ರೀಕರಣ ಪೂರ್ಣಗೊಳಿಸಬೇಕಾದ ಅನಿವಾರ್ಯತೆ ಎದುರಿಸುತ್ತಿವೆ. ಹೀಗಾಗಿ ಅರ್ಧಕ್ಕೆ ನಿಂತ ಚಿತ್ರೀಕರಣ ಎಷ್ಟು ಬೇಗ ಪೂರ್ಣವಾಗುತ್ತದೆಯೋ, ಅಷ್ಟು ಸೇಫ್ ಎನ್ನುವ ಲೆಕ್ಕಚಾರ ಹೊಸಬರದ್ದು.

ಇನ್ನು ಲಾಕ್‌ಡೌನ್‌ ಸಡಿಲವಾಗುತ್ತಿದ್ದಂತೆ ಸ್ಟಾರ್‌ ನಟರ ಪೈಕಿ ಮೊದಲು ಶೂಟಿಂಗ್‌ಗೆ ಇಳಿದವರು ನಟ ಸುದೀಪ್‌. ಭರ್ಜರಿಯಾಗಿ ನಡೆಯುತ್ತಿದ್ದ ಸುದೀಪ್‌ ಅವರ ಬಹುನಿರೀಕ್ಷಿತ “ಫ್ಯಾಂಟಮ್‌’ ಚಿತ್ರ ಕೋವಿಡ್ ದಿಂದ ಅರ್ಧಕ್ಕೆ ಬ್ರೇಕ್‌ ತೆಗೆದುಕೊಂಡಿತ್ತು. ಲಾಕ್‌ಡೌನ್‌ ವೇಳೆಯಲ್ಲೂ “ಫ್ಯಾಂಟಮ್‌’ನ ಪ್ಲಾನಿಂಗ್‌, ತೆರೆಮರೆಯ ಕೆಲಸಗಳಲ್ಲಿ ನಿರತವಾಗಿದ್ದ ಸುದೀಪ್‌ ಆ್ಯಂಡ್‌ಟೀಮ್‌, ಲಾಕ್‌ ಡೌನ್‌ ಸಡಿಲವಾಗುತ್ತಿದ್ದಂತೆ ಶೂಟಿಂಗ್‌ಗಾಗಿ ಹೈದರಾಬಾದ್‌ನತ್ತ ಮುಖ ಮಾಡಿತ್ತು. ಆನಂತರ ಪವರ್‌ ಸ್ಟಾರ್‌ ಪುನೀತ್‌ ರಾಜಕುಮಾರ್‌, ದುನಿಯಾ ವಿಜಯ್‌, ಹೀಗೆ ಒಬ್ಬೊಬ್ಬರಾಗಿ ಸ್ಟಾರ್‌ ನಟರು ಚಿತ್ರೀಕರಣದತ್ತ ಮುಖ ಮಾಡುತ್ತಿದ್ದಾರೆ.

ಯುವರತ್ನ ಶೂಟಿಂಗ್‌ನಲ್ಲಿ ಪುನೀತ್‌ ರಾಜಕುಮಾರ್‌ : ಪವರ್‌ಸ್ಟಾರ್‌ ಪುನೀತ್‌ ರಾಜಕುಮಾರ್‌ ಅಭಿನಯದ “ಯುವರತ್ನ’ ಚಿತ್ರದ ಚಿತ್ರೀಕರಣ ಲಾಕ್‌ಡೌನ್‌ ಬಳಿಕ ಶರವೇಗ ಪಡೆದುಕೊಂಡಿದೆ. ಲಾಕ್‌ಡೌನ್‌ಗೂ ಮೊದಲು ಚಿತ್ರದ ಬಹುತೇಕ ಟಾಕಿ ಭಾಗದ ಚಿತ್ರೀಕರಣ ಪೂರ್ಣಗೊಳಿಸಿದ್ದ “ಯುವರತ್ನ’ ಚಿತ್ರತಂಡ, ಈಗ ಬಾಕಿ ಉಳಿಸಿಕೊಂಡಿರುವ ಚಿತ್ರದ ಹಾಡಿನ ಭಾಗಗಳ ಚಿತ್ರೀಕರಣದಲ್ಲಿ ನಿರತವಾಗಿದೆ. ಇತ್ತೀಚೆಗಷ್ಟೇ “ಯುವರತ್ನ’ ಚಿತ್ರದ ಟೈಟಲ್‌ ಸಾಂಗ್ ಅನ್ನು ಚಿತ್ರತಂಡ, ಅದ್ಧೂರಿಯಾಗಿ ಚಿತ್ರೀಕರಿಸಿ ಕೊಂಡಿದೆ.

ಭರದಿಂದ ಸಾಗಿದ ಶ್ರೀಮುರಳಿ ಮದಗಜ : ನಟ ರೋರಿಂಗ್‌ ಸ್ಟಾರ್‌ ಶ್ರೀಮುರಳಿ ಅಭಿನಯದ “ಮದಗಜ’ ಚಿತ್ರದ ಆರಂಭದ ಚಿತ್ರೀಕರಣವನ್ನು ಚಿತ್ರತಂಡಕಾಶಿ ಸೇರಿದಂತೆ ಉತ್ತರ ಭಾರತದ ಹಲವುಕಡೆಗಳಲ್ಲಿ ನಡೆಸಿದೆ. ಅದಾದ ಬಳಿಕ ಲಾಕ್‌ಡೌನ್‌ನಿಂದಾಗಿ ಚಿತ್ರೀಕರಣದಿಂದ ಬ್ರೇಕ್‌ ತೆಗೆದುಕೊಂಡಿದ್ದ ಚಿತ್ರತಂಡ, ಈಗ ಮತ್ತೆ “ಮದಗಜ’ನ ಚಿತ್ರೀಕರಣ ಶುರು ಮಾಡಿದೆ. ಸದ್ಯ ಮೈಸೂರು ಸುತ್ತಮುತ್ತ “ಮದಗಜ’ ಚಿತ್ರೀಕರಣ ನಡೆಯುತ್ತಿದ್ದು, ಶ್ರೀಮುರಳಿ, ನಟಿ ಆಶಿಕಾ ರಂಗನಾಥ್‌ ಸೇರಿದಂತೆ ಅನೇಕಕಲಾವಿದರು ಚಿತ್ರೀಕರಣದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

ಭಜರಂಗಿ-2 ನತ್ತ ಶಿವಣ್ಣ : ನಟ ಹ್ಯಾಟ್ರಿಕ್‌ ಹೀರೋ ಶಿವರಾಜಕುಮಾರ್‌ ಅಭಿನಯದ ಮುಂಬರುವ ಚಿತ್ರ “ಭಜರಂಗಿ-2′ ಚಿತ್ರೀಕರಣ ಕೂಡ ಕೋವಿಡ್ ಕಾರಣದಿಂದ ಅರ್ಧಕ್ಕೆ ನಿಂತುಕೊಂಡಿತ್ತು. ಇತ್ತೀಚೆಗೆ ಚಿತ್ರದ ಟೀಸರ್‌ ಬಿಡುಗಡೆ ಮಾಡಿದ್ದ ಚಿತ್ರತಂಡ, ಚಿತ್ರದ ಬಾಕಿಯಿರುವ ಹಾಡುಗಳು ಮತ್ತುಕೆಲ ದೃಶ್ಯಗಳ ಚಿತ್ರೀಕರಣಕ್ಕೆ ಮುಂದಾಗಿದೆ

 ಪೊಗರು ಸೆಟ್‌ಗೆ ಧ್ರುವ : ನಟ ಧ್ರುವ ಸರ್ಜಾ ಅಭಿನಯದ “ಪೊಗರು’ ಚಿತ್ರದ ಬಾಕಿಯಿರುವ ದೃಶ್ಯಗಳ ಚಿತ್ರೀಕರಣ ಕೂಡ ಚಿತ್ರತಂಡ ಮತ್ತೆ ಶುರು ಮಾಡಿದೆ. ಈಗಾಗಲೇ “ಪೊಗರು’ ಚಿತ್ರದ ಹಾಡೊಂದನ್ನು ಬಿಡುಗಡೆ ಮಾಡಿ ಚಿತ್ರದ ಪ್ರಮೋಶನ್‌ಕೆಲಸಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಈಗ ಬಾಕಿಯಿರುವ ಚಿತ್ರದ ಚಿತ್ರೀಕರಣವನ್ನು ಪೂರ್ಣಗೊಳಿಸಿ ಆದಷ್ಟು ಬೇಗ ಚಿತ್ರವನ್ನು ತೆರೆಗೆ ತರುÊ ಯೋಚನೆಯಲ್ಲಿದೆ.

ಶೂಟಿಂಗ್‌ನಲ್ಲಿ ಬ್ಯುಸಿಯಾದ ಉಪ್ಪಿ  : ನಟ ಕಂ ನಿರ್ದೇಶಕ ರಿಯಲ್‌ ಸ್ಟಾರ್‌ ಉಪೇಂದ್ರಕೂಡ ಸದ್ಯ ಒಂದರ ಹಿಂದೊಂದು ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಉಪೇಂದ್ರ ಅಭಿನಯದ “ತ್ರಿಶೂಲ’ ಮತ್ತು “ಕಬj’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಉಪ್ಪಿ ಈ ಎರಡೂ ಚಿತ್ರಗಳ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ.

ಕೆಜಿಎಫ್-2ನಲ್ಲಿ ರಾಕಿಂಗ್‌ ಸ್ಟಾರ್‌ಯಶ್‌ : ನಟ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ “ಕೆಜಿಎಫ್-2′ ಚಿತ್ರದ ಚಿತ್ರೀಕರಣ ಕೂಡಕೊರೊನಾದಿಂದ ಅರ್ಧಕ್ಕೆ ಸ್ಥಗಿತಗೊಂಡಿತ್ತು. ಲಾಕ್‌ಡೌನ್‌ ಬಳಿಕ ಮತ್ತೆ “ಕೆಜಿಎಫ್-2′ ಚಿತ್ರದ ಚಿತ್ರೀಕರಣಕ್ಕೆ ಚಾಲನೆ ನೀಡಿರುವ ಚಿತ್ರತಂಡ, ಭರದಿಂದ ಚಿತ್ರದ ಬಾಕಿಯಿರುವ ಚಿತ್ರೀಕರಣ ನಡೆಸುತ್ತಿದೆ.

ಉಳಿದಂತೆ ನಟ ಕಂ ನಿರ್ದೇಶಕ ರಕ್ಷಿತ್‌ ಶೆಟ್ಟಿ “ಚಾರ್ಲಿ’ ಚಿತ್ರದಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಮತ್ತೂಬ್ಬ ನಟ ಕಂ ನಿರ್ದೇಶಕ ರಿಷಭ್‌ ಶೆಟ್ಟಿ ಸದ್ಯ “ಹರಿಕಥೆ ಅಲ್ಲಾ ಗಿರಿಕಥೆ’ ಚಿತ್ರದ ಶೂಟಿಂಗ್‌ನಲ್ಲಿ ನಿರತರಾಗಿದ್ದಾರೆ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.