ಹಳ್ಳಿ ಸುತ್ತಲಿರುವ ಹೊಸಬರು


Team Udayavani, Mar 8, 2019, 12:30 AM IST

q-26.jpg

ಸಾಮಾನ್ಯವಾಗಿ ಹಿರಿಯರನ್ನು, ಪ್ರತಿಷ್ಠಿತ ವ್ಯಕ್ತಿಗಳನ್ನು ಗೌರವ ಸೂಚಕವಾಗಿ “ಸನ್ಮಾನ್ಯ ‘ಎಂಬ ಪದದಿಂದ ಸಂಬೋಧಿಸುವುದನ್ನು ಕೇಳಿದ್ದೇವೆ. ಕೆಲವೊಮ್ಮೆ ಇದೇ “ಸನ್ಮಾನ್ಯ’ ಎಂಬ ಪದ ಹಲವರ ಕಾಲೆಳೆಯಲೂ ಬಳಕೆಯಾಗುವು­ದುಂಟು. ಈಗೇಕೆ “ಸನ್ಮಾನ್ಯ’ನ ಬಗ್ಗೆ ಮಾತು ಅಂತೀರಾ? ಅದಕ್ಕೊಂದು ಕಾರಣವಿದೆ. ಕನ್ನಡದಲ್ಲಿ “ಸನ್ಮಾನ್ಯ’ ಎಂಬ ಅಪ್ಪಟ ಕನ್ನಡ ಶೀರ್ಷಿಕೆಯನ್ನು ಇಟ್ಟುಕೊಂಡ ಚಿತ್ರವೊಂದು ಇತ್ತೀಚೆಗೆ ಸೆಟ್ಟೇರಿದೆ. 

ನಟ ಪ್ರಜ್ವಲ್‌ ದೇವರಾಜ್‌ “ಸನ್ಮಾನ್ಯ’ ಚಿತ್ರದ ಪ್ರಥಮ ದೃಶ್ಯಕ್ಕೆ ಕ್ಲಾಪ್‌ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿ, ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಹಿಂದೆ “ಸ್ಟೈಲ್‌ ರಾಜ’ ಎನ್ನುವ ಚಿತ್ರವನ್ನು ನಿರ್ದೇಶಿಸಿದ್ದ ಹರೀಶ್‌ “ಸನ್ಮಾನ್ಯ’ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಇದೇ ವೇಳೆ ಚಿತ್ರದ ಕಥಾಹಂದರದ ಬಗ್ಗೆ ಮಾತನಾಡಿದ ನಿರ್ದೇಶಕ ಹರೀಶ್‌, “ಇದೊಂದು ಪಕ್ಕಾ ಹಳ್ಳಿ ಸೊಗಡಿನ ಚಿತ್ರವಾಗಿದೆ. ಹಳ್ಳಿಯಲ್ಲಿ ಪ್ರತಿದಿನ ನಡೆಯುವ ಸಾಮಾನ್ಯ ಘಟನೆಗಳ ಸುತ್ತ ಚಿತ್ರದ ಕಥೆ ಹೆಣೆಯಲಾಗಿದೆ. ಹಳ್ಳಿಯಲ್ಲಿ ಯಾವಾಗಲೂ ಕಿರಿಕ್‌ ಮಾಡಿಕೊಂಡಿರುವ ಒರಟ ಹುಡುಗನೊಬ್ಬನ ಕಥೆ ಚಿತ್ರದಲ್ಲಿದೆ. ಅವನು ಎದುರಿಗೆ ಬಂದರೆ ಎಲ್ಲರೂ “ಸನ್ಮಾನ್ಯ’ ಎಂದು ಗೌರವದಿಂದ ಮಾತನಾಡಿಸುತ್ತಾರೆ. ಅವನು ಹೋದರೆ, ಅವನ ಹಿಂದೆ ಅವನಿಗೆ ಹಿಡಿಶಾಪ ಹಾಕುತ್ತಾರೆ. ಇಡೀ ಚಿತ್ರವನ್ನು ಕಾಮಿಡಿ, ಆ್ಯಕ್ಷನ್‌ ಶೈಲಿಯಲ್ಲಿ ತೆರೆಮೇಲೆ ತರುತ್ತಿದ್ದೇವೆ. ಜೊತೆಗೆ ಕಮರ್ಷಿಯಲ್‌ ಚಿತ್ರದಲ್ಲಿ ಇರಬೇಕಾದ ಎಲ್ಲಾ ಅಂಶಗಳೂ ಚಿತ್ರದಲ್ಲಿ ಇರಲಿವೆ’ ಎಂದರು. 

ಈ ಚಿತ್ರದ ಮೂಲಕ ನವನಟ ಉತ್ಸವ್‌ ನಾಯಕ ನಟರಾಗಿ ಪರಿಚಯವಾಗುತ್ತಿದ್ದಾರೆ. ಉಳಿದಂತೆ ಬುಲೆಟ್‌ ಪ್ರಕಾಶ್‌, ಶೋಭರಾಜ್‌, ಹರಿ, ಅಚ್ಯುತ ಕುಮಾರ್‌, ತುಳಸಿ ಶಿವಮಣಿ, ಅಮಿತ್‌, ಸಂಜು ಬಸಯ್ಯ, ಮಾಸ್ಟರ್‌ ಹೇಮಂತ್‌, ಉಮೇಶ್‌ ಪುಂಗ, ಗಡ್ಡಪ್ಪ ಮೊದಲಾದ ಕಲಾವಿದರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ಸದ್ಯ ಚಿತ್ರದ ನಾಯಕಿಯ ಹುಡುಕಾಟದಲ್ಲಿರುವ ಚಿತ್ರತಂಡ, ಇದೇ ತಿಂಗಳಾಂತ್ಯಕ್ಕೆ “ಸನ್ಮಾನ್ಯ’ನ ಶೂಟಿಂಗ್‌ ಅರಂಭಿಸಲು ಪ್ಲಾನ್‌ ಮಾಡಿಕೊಂಡಿದೆ. 

“ಸನ್ಮಾನ್ಯ’ ಚಿತ್ರಕ್ಕೆ ಎಸ್‌.ಎ ಚಂದ್ರಶೇಖರ್‌, ಜ್ಞಾನೇಂದ್ರ ಕುಮಾರ್‌, ದಯಾನಂದ್‌ ಮತ್ತು ಎಂ. ನಾಗರಾಜ್‌ ಜಂಟಿಯಾಗಿ ನಿರ್ಮಿಸುತ್ತಿದ್ದಾರೆ. ಕುಣಿಗಲ್‌, ಹುಲಿಯೂರು ದುರ್ಗ, ಟಿ. ನರಸೀಪುರ, ಮಡಿಕೇರಿ, ಮಂಗಳೂರು ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲು ಚಿತ್ರತಂಡ ಪ್ಲಾನ್‌ ಹಾಕಿಕೊಂಡಿದೆ. ಚಿತ್ರದಲ್ಲಿ ಒಟ್ಟು 4 ಹಾಡುಗಳಿದ್ದು, ಎ.ಟಿ ರವೀಶ್‌, ಸುರೇಶ್‌ ಚಂದ್‌, ಶ್ರೀಧರ್‌ ಕಶ್ಯಪ್‌, ಸನ್ನಿ ಮಾಧವನ್‌ ಚಿತ್ರದ ತಲಾ ಒಂದೊಂದು ಹಾಡನ್ನು ಸಂಯೋಜಿಸುತ್ತಿದ್ದಾರೆ. ಚಿತ್ರಕ್ಕೆ ಎಂ.ಬಿ ಅಳ್ಳಿಕಟ್ಟಿ ಛಾಯಾಗ್ರಹಣವಿದೆ. 

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.