ಎಲ್ಲರೊಳಗೊಬ್ಬ ಸ್ವಾರ್ಥಿ


Team Udayavani, Aug 17, 2018, 6:00 AM IST

c-32.jpg

ಅದು ಗಾಲ್ಫ್ಕ್ಲಬ್‌ನ “360 ಡಿಗ್ರಿ’ ಸಭಾಂಗಣ. ಆಗಷ್ಟೇ ತುಂತುರು ಮಳೆ ಉದುರಿ ನಿಂತಿತ್ತು. ವಾತಾವರಣ ತಣ್ಣಗಿತ್ತು. ತಿಳಿಗಾಳಿ ಮತ್ತಷ್ಟು ಚಳಿಗೆ ಕಾರಣವಾಗಿತ್ತು. ಪುಟ್ಟ ವೇದಿಕೆಯ ಎಡ, ಬಲ ಚಿತ್ರದ ಸ್ಟಾಂಡಿಗಳಿದ್ದವು. ಆಗಾಗ ಬೀಸುವ ಗಾಳಿಗೆ ಆ ಸ್ಟಾಂಡಿ ನೆಲಕ್ಕೆ ಮುತ್ತಿಡುತ್ತಿದ್ದವು. ಅತ್ತ ಮೆಲ್ಲನೆ ವೆಸ್ಟ್ರನ್‌ ಸಂಗೀತದ ಸದ್ದು ಕೇಳುತ್ತಿತ್ತು. ಮೈಕ್‌ ಹಿಡಿದಿದ್ದ ನಿರೂಪಕಿ ಒಬ್ಬೊಬ್ಬರನ್ನೇ ವೇದಿಕೆಗೆ ಆಹ್ವಾನಿಸುತ್ತಿದ್ದರು. ಮಾತುಕತೆ ನಂತರ ಒಂದಲ್ಲಾ, ಎರಡಲ್ಲಾ ನಾಲ್ಕು ಟೀಸರ್‌ಗಳನ್ನು ತೋರಿಸಲಾಯಿತು. ಸಾಲದ್ದಕ್ಕೊಂದು ಹಾಡನ್ನೂ ಕೇಳಿಸಲಾಯಿತು. ಕೊನೆಗೆ ಆಡಿಯೋ ಸಿಡಿ ಬಿಡುಗಡೆ ಕ್ಷಣ ಬಂತು. ಎಲ್ಲರೂ ಆಡಿಯೋ ಸಿಡಿ ಹಿಡಿದು ಫೋಟೋಕ್ಕೊಂದು ಫೋಸ್‌ ಕೊಟ್ಟರು. ಇದಕ್ಕೆಲ್ಲಾ ಸಾಕ್ಷಿಯಾಗಿದ್ದು “ಸ್ವಾರ್ಥ ರತ್ನ’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭ.

ಅಂದು ವೇದಿಕೆಗೆ ಬಂದ ನಿರ್ದೇಶಕ ಅಶ್ವಿ‌ನ್‌ ಕೊಡಂಗಿ, “ಪ್ರತಿಯೊಬ್ಬರಲ್ಲೂ ಸ್ವಾರ್ಥ ಇದ್ದೇ ಇರುತ್ತೆ. ಅದು ವಿಪರೀತವಾದರೆ ಏನಾಗಬಹುದು ಎಂಬ ಕಾನ್ಸೆಪ್ಟ್ ಚಿತ್ರದಲ್ಲಿದೆ. ಇಲ್ಲಿ ಬೇಕಂತ ನಗಿಸಲು ಹೋಗಿಲ್ಲ. ವಿನಾಕಾರಣ ಹಾಸ್ಯ ತೂರಿಸಿಲ್ಲ. ಸನ್ನಿವೇಶಗಳೇ ನಗಿಸುತ್ತ ಹೋಗುತ್ತವೆ. ಇಲ್ಲಿ ಪ್ರತಿಯೊಬ್ಬರ ಸಾಥ್‌ನಿಂದಾಗಿ ಚಿತ್ರ ಚೆನ್ನಾಗಿ ಬಂದಿದೆ. ಫ್ಯಾಮಿಲಿ ಜೊತೆ ನೋಡಬಹುದಾದ ಮನರಂಜನೆಯ ಚಿತ್ರವಿದು. ಇಲ್ಲಿ ಸ್ವಾರ್ಥ ಸ್ವಭಾವದ ಹುಡುಗನ ಜೊತೆಗೆ ಇಬ್ಬರು ಹುಡುಗಿಯರಿದ್ದಾರೆ. ಮಾಮೂಲಿಗಿಂತ ವಿಭಿನ್ನವಾಗಿ ಕಾಣುವ ಪಾತ್ರಗಳವು. ಹಾಸ್ಯ, ರೊಮ್ಯಾನ್ಸ್‌ ಜೊತೆಗೆ ಸಾಗುತ್ತಲೇ ನಗಿಸುತ್ತ ಹೋಗುತ್ತವೆ. ಚಿತ್ರದಲ್ಲಿ “ನವರಸ’ ಮೀರಿ ಸ್ವಾರ್ಥ ರಸವೂ ಇದೆ. ಆ ಸ್ವಾರ್ಥ ರಸ ಏನು? ಎಂಬ ಪ್ರಶ್ನೆಗೆ ಸಿನಿಮಾ ನೋಡಿ’ ಅಂದರು ಅಶ್ವಿ‌ನ್‌ ಕೊಡಂಗಿ.

ಆದರ್ಶ್‌ ಚಿತ್ರದ ನಾಯಕ. ಸಿನಿಮಾ ರಂಗಕ್ಕೆ ಬರುವ ಮುನ್ನ ಸಾಕಷ್ಟು ತಯಾರಿ ಮಾಡಿಕೊಂಡೇ ಬಂದಿದ್ದಾರೆ. ಹಿಂದಿ, ತಮಿಳು ಚಿತ್ರದಲ್ಲಿ ಮಾಡಿರುವ ಆದರ್ಶ್‌, ಸ್ವಾರ್ಥ ಸ್ವಭಾವ ಹುಡುಗನಾಗಿ ಅವರಿಲ್ಲಿ ನಟಿಸಿದ್ದಾರಂತೆ. ಎಲ್ಲಾ ಪಾತ್ರ ನಿರ್ವಹಿಸುವುದು ಸುಲಭ. ಆದರೆ, ಸ್ವಾರ್ಥ ವ್ಯಕ್ತಿ ಅಂತ ಹೇಗೆ ತೋರ್ಪಡಿಸಿಕೊಳ್ಳಬೇಕೆಂಬ ಗೊಂದಲಕ್ಕೆ ನಿರ್ದೇಶಕರು ತೆರೆ ಎಳೆಯುತ್ತಿದ್ದರಂತೆ. ಇಲ್ಲಿ ನಿರ್ಮಾಣದಲ್ಲೂ ತೊಡಗಿಸಿಕೊಂಡಿರುವ ಆದರ್ಶ್‌, ಸಿನಿಮಾ ನಿರ್ಮಾಣದ ಕಷ್ಟ ಅರಿತಿದ್ದಾರಂತೆ. ಈಗಿನ ಕಾಲಕ್ಕೆ ತಕ್ಕಂತಹ ಕಥೆ ಇಲ್ಲಿದೆ. ಭರಪೂರ ಮನರಂಜನೆಯೂ ಇದೆ. ಇಡೀ ಚಿತ್ರ ನಗುವಿನಲ್ಲೇ ಸಾಗಿಸುತ್ತದೆ’ ಎಂದು ವಿವರ ಕೊಡುತ್ತಾರೆ ಆದರ್ಶ್‌.

ಅಂದು ಜಯಂತ್‌ ಕಾಯ್ಕಿಣಿ ಚಿತ್ರತಂಡಕ್ಕೆ ಶುಭಕೋರಿದರು. “ಆಶ್ವಿ‌ನ್‌ ಕೊಡಂಗಿ ನನ್ನ ಸಹೋದರನಿದ್ದಂತೆ. ಇಷ್ಟು ವರ್ಷಗಳ ಕಾಲ ಸಿನಿಮಾಗಳಲ್ಲಿ ಕೆಲಸ ಮಾಡಿ, ಈಗ ನಿರ್ದೇಶಕನಾಗಿದ್ದಾನೆ. ಈ ಚಿತ್ರ ಗೆಲುವು ತಂದುಕೊಡಲಿ ‘ ಅಂತ ಹಾರೈಸಿದರು. ಸಂಗೀತ ನಿರ್ದೇಶಕ ಬಿ.ಜೆ. ಭರತ್‌, ನಾಲ್ಕು ಹಾಡುಗಳಿಗೆ ಸಂಗೀತ ನೀಡಿದ್ದಾಗಿ ಹೇಳಿಕೊಂಡರು. “ರೆಟ್ರೋ ಶೈಲಿ ಗೀತೆಯೂ ಇಲ್ಲಿದೆ. ಜಯಂತ್‌ ಕಾಯ್ಕಿಣಿ ಅವರು ಬರೆದ ಅದ್ಭುತ ಹಾಡೂ ಇದೆ. ಒಂದೊಳ್ಳೆಯ ಚಿತ್ರದಲ್ಲಿ ನಾನಿದ್ದೇನೆ ಅಂತ ಹೇಳಿಕೊಳ್ಳೋಕೆ ಹೆಮ್ಮೆ ಎನಿಸುತ್ತದೆ’ ಅಂದರು ಅವರು.

ಇಶಿತಾ, ವರ್ಷ ಚಿತ್ರದ ಇಬ್ಬರು ನಾಯಕಿಯರಲ್ಲೊಬ್ಬರು. ರಿಷಿಕಾಗೆ ಇದು ಮೊದಲ ಚಿತ್ರ. ಅವರಿಲ್ಲಿ ಕವನ ಎಂಬ ಪಾತ್ರ ಮಾಡಿದ್ದಾರಂತೆ. ಅದೊಂದು ರೀತಿ ಗಂಡುಬೀರಿ ಹುಡುಗಿ ಪಾತ್ರ. ಸೆಲ್ಫ್ಲೆಸ್‌ ಹುಡುಗಿಯೊಬ್ಬಳು ಸೆಲ್ಫಿಶ್‌ ಹುಡುಗನನ್ನು ಭೇಟಿ ಮಾಡಿದಾಗ ಏನೆಲ್ಲಾ ಆಗಿಹೋಗುತ್ತೆ ಅನ್ನೋದೇ ಕಥೆಯಂತೆ. ಇನ್ನು, ಸ್ನೇಹಾಸಿಂಗ್‌ ಕೂಡ ಪಾತ್ರ ಬಗ್ಗೆ ಖುಷಿಯಿಂದ ಹೇಳಿಕೊಂಡರು. ಅಮಿತ್‌ ಇಲ್ಲಿ ಹಾಸ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರಿಗಿಲ್ಲಿ ಮೂರು ಹೆಸರುಗಳಿವೆಯಂತೆ. 

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.