ಸಿಂಗನ ಹಬ್ಬದೂಟ

ಶ್ಯಾನೆ ಖುಷಿಯಲ್ಲಿ ಚಿತ್ರತಂಡ

Team Udayavani, Jul 12, 2019, 5:00 AM IST

u-25

ಅಂದು ಇಡೀ ಚಿತ್ರತಂಡದ ಮೊಗದಲ್ಲಿ ಸಂತಸ ಎದ್ದು ಕಾಣುತ್ತಿತ್ತು. ಜೊತೆಗೆ ಇನ್ನೊಂದು ಸಂಭ್ರಮಕ್ಕಾಗಿ ಸಾಕ್ಷಿಯಾಗುವ ಕಾತರ ಕೂಡಾ ಇತ್ತು. ಅದೇ ಕಾರಣದಿಂದ ಎಲ್ಲರೂ ಕಣ್ಣು ಸಭಾಂಗಣದ ಬಾಗಿಲತ್ತ ನೆಟ್ಟಿತ್ತು. ಅಷ್ಟೊತ್ತಿಗೆ ಮ್ಯೂಸಿಕ್‌ ಆನ್‌ ಆಯಿತು. “ಬಂದ ಚಕ್ರವರ್ತಿ ….’ ಹಾಡಿನ ಸದ್ದು. ಅತ್ತ ಕಡೆಯಿಂದ ದರ್ಶನ್‌ ಎಂಟ್ರಿ. ಇದು “ಸಿಂಗ’ ಚಿತ್ರದ ಆಡಿಯೋ ಸಕ್ಸಸ್‌ಮೀಟ್‌ನಲ್ಲಿ ಕಂಡುಬಂದಿದ್ದು. ಚಿರಂಜೀವಿ ಸರ್ಜಾ ನಾಯಕರಾಗಿರುವ “ಸಿಂಗ’ ಚಿತ್ರ ಮುಂದಿನ ವಾರ (ಜುಲೈ 19) ತೆರೆಕಾಣುತ್ತಿದೆ.

ಚಿತ್ರ ತೆರೆಕಾಣುವ ಮೊದಲೇ ಚಿತ್ರತಂಡ ಖುಷಿಯಾಗಿರಲು ಕಾರಣ, ಚಿತ್ರದ ಹಾಡು ಹಿಟ್‌ ಆಗಿರೋದು. ಚಿತ್ರದ “ಶ್ಯಾನೆ ಟಾಪಾಗವೆ …’ ಹಾಡು ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿದೆ. ಆ ಸಂಭ್ರಮದ ಜೊತೆಗೆ ಚಿತ್ರದ ಮತ್ತೂಂದು ಹಾಡು “ಬ್ಯೂಟಿಪುಲ್‌ ಹುಡುಗಿ’ ಹಾಡಿನ ಬಿಡುಗಡೆಯ ಸಮಾರಂಭಕ್ಕೆ ದರ್ಶನ್‌ ಅತಿಥಿಯಾಗಿ ಬಂದಿದ್ದರು. ಚಿತ್ರದ ಹಾಡು ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭಕೋರುವ ಜೊತೆಗೆ ಹಾಡಿಗೆ ಮೆಚ್ಚುಗೆ ಸೂಚಿಸಿದರು.

ಈ ಚಿತ್ರವನ್ನು ಉದಯ್‌ ಮೆಹ್ತಾ ನಿರ್ಮಿಸಿದ್ದಾರೆ. ನಿರ್ಮಾಣದಿಂದ ಒಂದೆರಡು ವರ್ಷ ಗ್ಯಾಪ್‌ ತೆಗೆದುಕೊಂಡಿದ್ದ ಮೆಹ್ತಾ ಈಗ “ಸಿಂಗ’ ಮೇಲೆ ನಂಬಿಕೆ ಇಟ್ಟಿದ್ದು, ಒಂದು
ಕಮರ್ಷಿಯಲ್‌ ಸಿನಿಮಾವಾಗಿ ಎಲ್ಲರಿಗೂ ಇಷ್ಟವಾಗುತ್ತದೆ ಎಂಬ ವಿಶ್ವಾಸವಿದೆ. ಚಿತ್ರವನ್ನು ವಿಜಯ್‌ ಕಿರಣ್‌ ನಿರ್ದೇಶಿಸಿದ್ದಾರೆ. ಈ ಹಿಂದೆ “ರಾಮ್‌ಲೀಲಾ’ ಚಿತ್ರ
ಮಾಡಿದ್ದ ವಿಜಯ್‌ ಕಿರಣ್‌ ಈಗ “ಸಿಂಗ’ ಮಾಡಿದ್ದಾರೆ. ನಾಯಕ ಚಿರಂಜೀವಿ ಸರ್ಜಾ ಅವರಿಗೂ ಈ ಚಿತ್ರ ದೊಡ್ಡ ಮಟ್ಟದಲ್ಲಿ ಹಿಟ್‌ ಆಗುವ ವಿಶ್ವಾಸ. ಚಿರು ಹೇಳುವಂತೆ ಇದು
ಅಭಿಮಾನಿಗಳಿಗೆ ಹಬ್ಬದ ಊಟವಿದ್ದಂತೆ. ಎಲ್ಲಾ ಅಂಶಗಳು ಇರುವ ಸಿನಿಮಾವಾಗಿ ಇಷ್ಟವಾಗಲಿದೆಯಂತೆ. ಚಿತ್ರದ ಹಾಡೊಂದನ್ನು ಮೇಘನಾರಾಜ್‌ ಹಾಡಿದ್ದಾರೆ. ಚಿತ್ರದಲ್ಲಿ
ಅದಿತಿ ಪ್ರಭುದೇವ ನಾಯಕಿಯಾಗಿದ್ದು, ಒಳ್ಳೆಯ ಬ್ಯಾನರ್‌ನಲ್ಲಿ ಕೆಲಸ ಮಾಡಿದ ಖುಷಿ ಇದೆಯಂತೆ. ಚಿತ್ರದಲ್ಲಿ ತಾರಾ ತಾಯಿ ಪಾತ್ರ ಮಾಡಿದ್ದು, ಸೆಟ್‌ನಲ್ಲಿ
ಒಳ್ಳೆಯ ವಾತಾವರಣವಿತ್ತಂತೆ. ಚಿತ್ರದಲ್ಲಿ ಶಿವರಾಜ್‌ ಕೆ.ಆರ್‌.ಪೇಟೆ, ರವಿಶಂಕರ್‌ ಸೇರಿದಂತೆ ಅನೇಕರು ನಟಿಸಿದ್ದಾರೆ. ಚಿತ್ರಕ್ಕೆ ಕಿರಣ್‌ ಹಂಪಾಪುರ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.