ಪ್ರಾಯಶಃ ಎಂಬ ಕಿಲ್ಲಿಂಗ್ ಸ್ಟೋರಿ: ಕೃಷ್ಣಾ ಭಟ್, ಶೈನ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ
Team Udayavani, Jul 9, 2021, 8:10 AM IST
ಸುಮಾರು ಎರಡು ವರ್ಷಗಳ ಹಿಂದೆ “ಸವರ್ಣ ದೀರ್ಘ ಸಂಧಿ’ ಎಂಬ ಚಿತ್ರದ ಮೂಲಕ ಹಿರಿಯ ನಟಿ ವಿನಯಾ ಪ್ರಸಾದ್ ಅವರ ಅಣ್ಣನ ಮಗಳು ಕೃಷ್ಣಾ ಭಟ್, ಕನ್ನಡ ಚಿತ್ರರಂಗಕ್ಕೆ ನಾಯಕಿಯಾಗಿ ಪರಿಚಯವಾಗಿದ್ದು ನಿಮಗೆ ಗೊತ್ತಿರಬಹುದು. ಆ ಚಿತ್ರದ ಬಳಿಕ ಇದೀಗ ಕೃಷ್ಣಾ ಭಟ್ “ಪ್ರಾಯಶಃ’ ಎಂಬ ಮತ್ತೂಂದು ಚಿತ್ರದ ಮೂಲಕ ಸಿನಿಪ್ರಿಯರ ಮುಂದೆ ಬರುವ ತಯಾರಿಯಲ್ಲಿದ್ದಾರೆ.
ಅಂದಹಾಗೆ, “ಪ್ರಾಯಶಃ’ ಹೆಸರೇ ಹೇಳುವಂತೆ ಒಂದು ಸಸ್ಪೆನ್ಸ್-ಥ್ರಿಲ್ಲರ್, ಮರ್ಡರ್ ಮಿಸ್ಟ್ರಿ ಕಥಾಹಂದರ ಹೊಂದಿರುವ ಸಿನಿಮಾ. ಯುವ ನಿರ್ದೇಶಕ ರಂಜಿತ್ ರಾವ್ ಈ ಚಿತ್ರಕ್ಕೆ ಕಥೆ, ಚಿತ್ರ ಬರೆದು ನಿರ್ದೇಶಿಸಿದ್ದಾರೆ. “ಅರ್ಹ ಕ್ರಿಯೇಷನ್ಸ್’ ಬ್ಯಾನರ್ನಡಿ ಈ ಚಿತ್ರದ ನಿರ್ಮಾಣ ಕೂಡ ಮಾಡಿದ್ದಾರೆ.
ತಮ್ಮ ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ರಾವ್, “ನಾವು ಏನು ನೋಡುತ್ತೇವೋ? ಅದು ಆ ಕ್ಷಣದ ಸತ್ಯ ಮಾತ್ರ. ಈ ವಿಷಯವನ್ನಿಟ್ಟುಕೊಂಡು ಈ ಚಿತ್ರದ ಕಥೆ ಮಾಡಲಾಗಿದೆ. ಚಿತ್ರದ ಕಥೆಯಲ್ಲೊಂದು ಕೊಲೆ ನಡೆಯುತ್ತದೆ. ಆ ಕೊಲೆಯ ಸುತ್ತ ಏನೆಲ್ಲ ಆಗುತ್ತದೆ ಎಂಬುದರ ಸುತ್ತ ಇಡೀ ಚಿತ್ರ ಸಾಗುತ್ತದೆ. ಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಸಿನಿಮಾ’ ಎನ್ನುತ್ತಾರೆ.
ಇನ್ನು “ಪ್ರಾಯಶಃ’ ಚಿತ್ರದಲ್ಲಿ ಕೃಷ್ಣಾ ಅವರೊಂದಿಗೆ ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಶೈನ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶೈನ್ ಶೆಟ್ಟಿ ಚಿತ್ರದಲ್ಲಿ ತೆರೆಮೇಲೆ ಚಿತ್ರ ನಿರ್ದೇಶಕನ ಪಾತ್ರ ಮಾಡಿದ್ದು, ಈ ಕಥೆಯ ನಿರೂಪಣೆ ಮಾಡುತ್ತಾರಂತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್