![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಪ್ರಾಯಶಃ ಎಂಬ ಕಿಲ್ಲಿಂಗ್ ಸ್ಟೋರಿ: ಕೃಷ್ಣಾ ಭಟ್, ಶೈನ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ
Team Udayavani, Jul 9, 2021, 8:10 AM IST
![shine Shetty, Krishna Bhat in new Kannada film Prayashah](https://www.udayavani.com/wp-content/uploads/2021/07/krish-shine-620x342.jpg)
ಸುಮಾರು ಎರಡು ವರ್ಷಗಳ ಹಿಂದೆ “ಸವರ್ಣ ದೀರ್ಘ ಸಂಧಿ’ ಎಂಬ ಚಿತ್ರದ ಮೂಲಕ ಹಿರಿಯ ನಟಿ ವಿನಯಾ ಪ್ರಸಾದ್ ಅವರ ಅಣ್ಣನ ಮಗಳು ಕೃಷ್ಣಾ ಭಟ್, ಕನ್ನಡ ಚಿತ್ರರಂಗಕ್ಕೆ ನಾಯಕಿಯಾಗಿ ಪರಿಚಯವಾಗಿದ್ದು ನಿಮಗೆ ಗೊತ್ತಿರಬಹುದು. ಆ ಚಿತ್ರದ ಬಳಿಕ ಇದೀಗ ಕೃಷ್ಣಾ ಭಟ್ “ಪ್ರಾಯಶಃ’ ಎಂಬ ಮತ್ತೂಂದು ಚಿತ್ರದ ಮೂಲಕ ಸಿನಿಪ್ರಿಯರ ಮುಂದೆ ಬರುವ ತಯಾರಿಯಲ್ಲಿದ್ದಾರೆ.
ಅಂದಹಾಗೆ, “ಪ್ರಾಯಶಃ’ ಹೆಸರೇ ಹೇಳುವಂತೆ ಒಂದು ಸಸ್ಪೆನ್ಸ್-ಥ್ರಿಲ್ಲರ್, ಮರ್ಡರ್ ಮಿಸ್ಟ್ರಿ ಕಥಾಹಂದರ ಹೊಂದಿರುವ ಸಿನಿಮಾ. ಯುವ ನಿರ್ದೇಶಕ ರಂಜಿತ್ ರಾವ್ ಈ ಚಿತ್ರಕ್ಕೆ ಕಥೆ, ಚಿತ್ರ ಬರೆದು ನಿರ್ದೇಶಿಸಿದ್ದಾರೆ. “ಅರ್ಹ ಕ್ರಿಯೇಷನ್ಸ್’ ಬ್ಯಾನರ್ನಡಿ ಈ ಚಿತ್ರದ ನಿರ್ಮಾಣ ಕೂಡ ಮಾಡಿದ್ದಾರೆ.
ತಮ್ಮ ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ರಾವ್, “ನಾವು ಏನು ನೋಡುತ್ತೇವೋ? ಅದು ಆ ಕ್ಷಣದ ಸತ್ಯ ಮಾತ್ರ. ಈ ವಿಷಯವನ್ನಿಟ್ಟುಕೊಂಡು ಈ ಚಿತ್ರದ ಕಥೆ ಮಾಡಲಾಗಿದೆ. ಚಿತ್ರದ ಕಥೆಯಲ್ಲೊಂದು ಕೊಲೆ ನಡೆಯುತ್ತದೆ. ಆ ಕೊಲೆಯ ಸುತ್ತ ಏನೆಲ್ಲ ಆಗುತ್ತದೆ ಎಂಬುದರ ಸುತ್ತ ಇಡೀ ಚಿತ್ರ ಸಾಗುತ್ತದೆ. ಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಸಿನಿಮಾ’ ಎನ್ನುತ್ತಾರೆ.
ಇನ್ನು “ಪ್ರಾಯಶಃ’ ಚಿತ್ರದಲ್ಲಿ ಕೃಷ್ಣಾ ಅವರೊಂದಿಗೆ ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಶೈನ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಶೈನ್ ಶೆಟ್ಟಿ ಚಿತ್ರದಲ್ಲಿ ತೆರೆಮೇಲೆ ಚಿತ್ರ ನಿರ್ದೇಶಕನ ಪಾತ್ರ ಮಾಡಿದ್ದು, ಈ ಕಥೆಯ ನಿರೂಪಣೆ ಮಾಡುತ್ತಾರಂತೆ
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.