Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್


Team Udayavani, Apr 12, 2024, 2:13 PM IST

Shivanna in lawyer look in Bhairathi Ranagal

ನಟ ಶಿವರಾಜ್‌ಕುಮಾರ್‌ ನಾಯಕನಾಗಿ ಅಭಿನಯಿಸಿದ್ದ “ಮಫ್ತಿ’ ಸಿನಿಮಾದ ಪ್ರೀಕ್ವೆಲ್‌ ಆಗಿ “ಭೈರತಿ ರಣಗಲ್‌’ ಸಿನಿಮಾ ಆಗಸ್ಟ್‌ 15ಕ್ಕೆ ತೆರೆಗೆ ಬರುತ್ತಿರುವುದು ನಿಮಗೆ ಗೊತ್ತಿರಬಹುದು. “ಮಫ್ತಿ’ ಸಿನಿಮಾ ನಿರ್ದೇಶಿಸಿದ್ದ ನರ್ತನ್‌ ಅವರೇ “ಭೈರತಿ ರಣಗಲ್‌’ ಸಿನಿಮಾಕ್ಕೆ ಆ್ಯಕ್ಷನ್‌-ಕಟ್‌ ಹೇಳುತ್ತಿದ್ದು, ಕಳೆದ ವರ್ಷ ಮಧ್ಯ ಭಾಗದಲ್ಲಿ ಸಿನಿಮಾದ ಚಿತ್ರೀಕರಣಕ್ಕೆ ಅಧಿಕೃತ ಚಾಲನೆ ಸಿಕ್ಕಿತ್ತು.

ಈಗಾಗಲೇ ಸದ್ದಿಲ್ಲದೆ “ಭೈರತಿ ರಣಗಲ್‌’ ಸಿನಿಮಾದ ಬಹುತೇಕ ಚಿತ್ರೀಕರಣದ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಯುಗಾದಿ ಹಬ್ಬದ ಪ್ರಯುಕ್ತ ಹೊಸ ಲುಕ್‌ ವೊಂದನ್ನು ಬಿಡುಗಡೆ ಮಾಡಿದೆ. ಇದು ಸಿನಿಮಾದ ಬಗೆಗಿನ ಕುತೂಹಲ ಹೆಚ್ಚಿಸಿದೆ.

ಇಷ್ಟು ದಿನ ಚಿತ್ರತಂಡ ಬಿಟ್ಟ ಪೋಸ್ಟರ್‌ನಲ್ಲಿ ಶಿವಣ್ಣ, ಸಖತ್‌ ರಗಡ್‌ ಆಗಿ, ಆ್ಯಕ್ಷನ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದರು. ಆದರೆ, ಈಗ ಬಿಟ್ಟಿರುವ ಲುಕ್‌ ಮತ್ತಷ್ಟು ವಿಭಿನ್ನವಾಗಿದೆ. ಶಿವಣ್ಣ ಲಾಯರ್‌ ಗೆಟಪ್‌ನಲ್ಲಿರುವ ಪೋಸ್ಟರ್‌ ಬಿಡುಗಡೆ ಮಾಡಿದೆ. ಕರಿಕೋಟು ಹಾಕಿ, ಕೈಯಲ್ಲಿ ಬಿಳಿ ಹಾಳೆ ಹಿಡಿದು ಕೋರ್ಟ್‌ನಲ್ಲಿ ವಕಾಲತ್ತು ಮಾಡುವಂತಹ ಪೋಸ್ಟರ್‌ ಇದಾಗಿದ್ದು, ಸಿನಿಮಾದಲ್ಲೊಂದು ಹೊಸ ಟ್ವಿಸ್ಟ್‌ ಸಿಗುವುದು ಗ್ಯಾರಂಟಿ ಎಂದು ಅಭಿಮಾನಿಗಳು ಖುಷಿಯಾಗಿದ್ದಾರೆ.

ಇನ್ನು “ಮಫ್ತಿ’ ಸಿನಿಮಾದಲ್ಲಿ ಶಿವರಾಜ್‌ಕುಮಾರ್‌ ಭೈರತಿ ರಣಗಲ್‌ ಎಂಬ ಪಾತ್ರ ಮಾಡಿದ್ದರು. ಈಗ ಅದೇ ಹೆಸರನ್ನು ಸಿನಿಮಾದ ಟೈಟಲ್‌ನ್ನಾಗಿ ಮಾಡಲಾಗಿದೆ. “ಭೈರತಿ ರಣಗಲ್‌’ ಸಿನಿಮಾವನ್ನು “ಗೀತಾ ಪಿಕ್ಚರ್’ನಡಿ ಗೀತಾ ಶಿವರಾಜ್‌ಕುಮಾರ್‌ ನಿರ್ಮಿಸುತ್ತಿದ್ದಾರೆ.

ಸಿನಿಮಾದ ಹಾಡುಗಳಿಗೆ ರವಿ ಬಸ್ರೂರು ಸಂಗೀತ ಸಂಯೋಜಿಸುತ್ತಿದ್ದು, ನವೀನ್‌ ಛಾಯಾಗ್ರಹಣವಿದೆ.  “ಮಫ್ತಿ’ ಸಿನಿಮಾದ ಬಗ್ಗೆ ಮಾತನಾಡುವ ನಟ ಶಿವರಾಜಕುಮಾರ್‌, “”ಮಫ್ತಿ’ ಸಿನಿಮಾದ ಭೈರತಿ ರಣಗಲ್‌ ನನಗೆ ಇಷ್ಟವಾದ ಪಾತ್ರ. ಈ ಸಿನಿಮಾವನ್ನು ನಮ್ಮ ಸಂಸ್ಥೆಯಿಂದ ನಿರ್ಮಾಣ ಮಾಡುತ್ತಿರುವುದಕ್ಕೆ ಖುಷಿಯಾಗುತ್ತಿದೆ. “ಮಫ್ತಿ’ ಸಿನಿಮಾ ಬಂದು ಸುಮಾರು ಆರೇಳು ವರ್ಷಗಳಾದರೂ, ಈಗಲೂ ನಾನು ಹಾಗೆ ಇದ್ದೀನಿ. ಹಾಗಾಗಿ ಈ ಪಾತ್ರ ಮಾಡಲು ಅನುಕೂಲವಾಗುತ್ತದೆ. ಪ್ರೀಕ್ವೆಲ್‌ ಆಗಿರುವುದರಿಂದ ಡಿಫ‌ರೆಂಟ್‌ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತೇನೆ. ನರ್ತನ್‌ ತುಂಬ ಚೆನ್ನಾಗಿ ಕಥೆ ಮಾಡಿಕೊಂಡಿದ್ದಾರೆ’ ಎನ್ನುತ್ತಾರೆ.

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.