ಎಲ್ಲವೂ ಶಿವಮಯ

ಸಾರ್ಥಕ ಸಮಾರಂಭದಲ್ಲಿ ಶಿವಾರ್ಜುನ ಟ್ರೇಲರ್‌ ರಿಲೀಸ್‌

Team Udayavani, Feb 28, 2020, 5:16 AM IST

ego-33

ಅಂದು ಶಿವರಾತ್ರಿ. ಆ ಸಿನಿಮಾಗೂ ತುಂಬಾನೇ ವಿಶೇಷ ದಿನ ಎನ್ನಬಹುದು. ಹೌದು. ಅದು “ಶಿವಾರ್ಜುನ’ ಚಿತ್ರ. ಆ ಚಿತ್ರ ನಿರ್ಮಿಸಿದ್ದು ಕೂಡ ಶಿವಾರ್ಜುನ. ಅಷ್ಟೇ ಅಲ್ಲ, ನಿರ್ದೇಶಿಸಿದ್ದು ಶಿವತೇಜಸ್‌. ಅಲ್ಲಿಗೆ ಅಂದು ಶಿವನ ಮಹಿಮೆ ಆ ಸಿನಿಮಾ ಮೇಲಿತ್ತು ಅಂದರೆ ತಪ್ಪಿಲ್ಲ. ಕನ್ನಡ ಚಿತ್ರರಂಗದಲ್ಲಿ ಸುಮಾರು ಮೂರುವರೆ ದಶಕಗಳ ಕಾಲ ಸೇವೆ ಸಲ್ಲಿಸಿ, ಇಂದಿಗೂ ಹಲವು ವಿಭಾಗಗಳಲ್ಲಿ ಗುರುತಿಸಿ­ಕೊಂಡಿರುವ ಶಿವಾರ್ಜುನ ಅವರ ನಿರ್ಮಾಣದ ಚಿತ್ರವಿದು. ಈಗಾಗಲೇ ಚಿತ್ರೀಕರಣ ಮುಗಿದಿದ್ದು, ಬಿಡುಗಡೆ ತಯಾರಿಯಲ್ಲಿದೆ. ಶಿವರಾತ್ರಿ ಹಬ್ಬದ ದಿನದಂದು ಚಿತ್ರದ ಟ್ರೇಲರ್‌ ಬಿಡುಗಡೆ ಮಾಡಲಾಯಿತು. ಸಂಸದ ತೇಜಸ್ವಿ ಸೂರ್ಯ ಟ್ರೇಲರ್‌ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭಹಾರೈಸಿದರು. ಅಂದು ಧ್ರುವ ಸರ್ಜಾ ಕೂಡ ಸಹೋದರನ ಸಿನಿಮಾಗೆ ಶುಭ ಹಾರೈಸಲು ಆಗಮಿಸಿದ್ದರು.

ಮಾತುಕತೆಗೂ ಮೊದಲು ಅಲ್ಲೊಂದು ಸಾರ್ಥಕ ಸಮಾರಂಭ ನಡೆಯಿತು. ನಿರ್ಮಾಪಕ ಶಿವಾರ್ಜುನ ಅವರು, ಕನ್ನಡ ಚಿತ್ರರಂಗದಲ್ಲಿ ಮೂರ್‍ನಾಲ್ಕು ದಶಕಗಳ ಕಾಲ ಪೋಸ್ಟರ್‌ ಅಂಟಿಸಿದವರು, ಲೈಟ್‌ ಹಿಡಿದವರು, ರಂಗಭೂಮಿಯಲ್ಲಿ ಸೇವೆ ಸಲ್ಲಿಸಿದವರು ಹೀಗೆ ಹಲವು ವಿಭಾಗದಲ್ಲಿ ಸೇವೆ ಸಲ್ಲಿಸುತ್ತ ಬಂದಿರುವ ಆರು ಮಂದಿಯನ್ನು ಗುರುತಿಸಿ, ಸನ್ಮಾನಿಸಿ, ಗೌರವಿಸುವ ಕಾರ್ಯ ಮಾಡಿದರು. ವೇದಿಕೆ ಮೇಲೆ ಆರು ಮಂದಿಯನ್ನು ಪ್ರೀತಿಯಿಂದ ಆಹ್ವಾನಿಸಿ ಗಣ್ಯರಿಂದ ಸನ್ಮಾನಿಸಿದರು.

ನಟ ಚಿರಂಜೀವಿ ಸರ್ಜಾ ತಮ್ಮ “ಶಿವಾರ್ಜುನ’ ಕುರಿತು ಹೇಳಿದ್ದು ಹೀಗೆ. “ಇದೊಂದು ಪಕ್ಕಾ ಕಮರ್ಷಿಯಲ್‌ ಚಿತ್ರ. ಇಂಥದ್ದೊಂದು ಸಿನಿಮಾ ಮಾಡಿದ್ದಕ್ಕೆ ಖುಷಿಯಾಗುತ್ತಿದೆ. ಈ ಚಿತ್ರ ನನಗೆ ಸ್ಪೆಷಲ್‌. ಅದು ನಾನು ಕೆಲಸ ಮಾಡಿದ್ದೇನೆ ಎಂಬ ಕಾರಣಕ್ಕೆ ಸ್ಪೆಷಲ್‌ ಅಲ್ಲ. ನಿರ್ಮಾಪಕ ಶಿವಾರ್ಜುನ್‌ ಅಂಕಲ್‌ ಮಾಡುತ್ತಿರುವ ಚಿತ್ರ ಎಂಬುದು ವಿಶೇಷ. ಅವರು ನಮ್ಮ ಫ್ಯಾಮಿಲಿಯವರು. ಅವರಿಗಾಗಿ ಮಾಡಿದ ಚಿತ್ರವಿದು. ಹಾಗಾಗಿ, ಈ ಸಿನಿಮಾ ಅವರಿಗೆ ದೊಡ್ಡ ಯಶಸ್ಸು ಕೊಡಬೇಕು. ಪ್ರತಿಭಾವಂತರು ಸೇರಿ ಮಾಡಿರುವ ಚಿತ್ರವಿದು. ಪ್ರತಿಯೊಬ್ಬರಿಗೂ ಇಷ್ಟವಾಗುತ್ತೆ’ ಅಂದರು ಚಿರಂಜೀವಿ ಸರ್ಜಾ.

ನಿರ್ದೇಶಕ ಶಿವತೇಜಸ್‌ ಅವರು ಅಂದು ಅವಕಾಶ ಕಲ್ಪಿಸಿದ ನಿರ್ಮಾಪಕರಿಗೆ ಥ್ಯಾಂಕ್ಸ್‌ ಹೇಳಿದರು. “ಎಲ್ಲರ ಬೆಂಬಲ, ಸಹಕಾರ ಇದ್ದುದರಿಂದ ಒಳ್ಳೆಯ ಸಿನಿಮಾ ಮಾಡಲು ಸಾಧ್ಯವಾಗಿದೆ. ಇದೊಂದು ಪಕ್ಕಾ ಮನರಂಜನೆಯ ಚಿತ್ರ. ಎಲ್ಲಾ ವರ್ಗಕ್ಕೂ ಇಷ್ಟವಾಗುವ ಅಂಶಗಳಿವೆ’ ಎಂದರು ಶಿವತೇಜಸ್‌.

ನಟಿ ತಾರಾ ಅವರಿಗೂ ಇಲ್ಲೊಂದು ವಿಶೇಷ ಪಾತ್ರವಿದೆಯಂತೆ. ಈ ಚಿತ್ರದಲ್ಲಿ ಅವರು ತಮ್ಮ ಪುತ್ರ ಕೃಷ್ಣ ಜೊತೆ ನಟಿಸಿದ್ದಾರೆ. ಅಷ್ಟೇ ಅಲ್ಲ, ಪತಿ ವೇಣು ಛಾಯಾಗ್ರಹಣ ಮಾಡಿದ್ದನ್ನು ನೆನಪಿಸಿಕೊಂಡರು. ಶಿವಾರ್ಜುನ ಅವರ ಒಳ್ಳೆಯತನಕ್ಕೆ ಎಲ್ಲರೂ ಪ್ರೀತಿಯಿಂದ ಕೆಲಸ ಮಾಡಿದ್ದಾರೆ. ಸಿನಿಮಾ ಪಕ್ಕಾ ಮನರಂಜನಾತ್ಮಕವಾಗಿದೆ. ಎಲ್ಲಾ ಪ್ಯಾಕೇಜ್‌ ಇರುವ ಚಿತ್ರವಿದು’ ಎಂದರು ತಾರಾ.

ಹಾಸ್ಯ ನಟ ಶಿವರಾಜ್‌ ಕೆ.ಆರ್‌.ಪೇಟೆ, “ಅವರಿಗೆ ಚಿರು ಜೊತೆ ಇದು ಎರಡನೇ ಚಿತ್ರವಂತೆ. ಅವರು-ನಯನಾ ಕಾಂಬಿನೇಷನ್‌ ಪಾತ್ರವಿದ್ದು, ಈ ಚಿತ್ರ ಗೆಲ್ಲಲೇಬೇಕು. ಕಾರಣ, ಶಿವಾರ್ಜುನ ಅವರು ಇಷ್ಟು ವರ್ಷ ಚಿತ್ರರಂಗದಲ್ಲಿ ದುಡಿದು, ಅದೇ ಹಣವನ್ನೇ ಚಿತ್ರಕ್ಕೆ ಹಾಕಿದ್ದಾರೆ. ಹಾಗಾಗಿ ಚಿತ್ರ ಗೆಲ್ಲಬೇಕು’ ಎಂದರು.

ಅಮೃತಾ ಅಯ್ಯಂಗಾರ್‌ ಅವರಿಗೆ ಮಾಸ್‌ ಸಿನಿಮಾದಲ್ಲಿ ನಟಿಸಬೇಕು ಎಂಬ ಆಸೆ “ಶಿವಾರ್ಜುನ’ ಮೂಲಕ ಈಡೇರಿದೆಯಂತೆ. ಮತ್ತೂಬ್ಬ ನಾಯಕಿ ಅಕ್ಷತಾ ಶ್ರೀನಿವಾಸ್‌ ಅವರು ಸಿಕ್ಕ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡ ತೃಪ್ತಿ ಇದೆಯಂತೆ. ಅಕ್ಷತಾ ಬೋಪಯ್ಯ ಅವರಿಗೂ ಇಲ್ಲಿ ಮುಖ್ಯ ಪಾತ್ರವಿದೆಯಂತೆ. ಮೊದಲ ಸಲ ಸ್ಟಾರ್‌ಗಳ ಜೊತೆ ಕೆಲಸ ಮಾಡಿದ ಅನುಭವ ಅನನ್ಯ ಎಂದರು ಅವರು.

ಅಂದು ಶಿವಾರ್ಜುನ್‌, ಮಂಜುಳಾ ಶಿವಾರ್ಜುನ್‌, ರಾಮು, ಉದಯ್‌ ಮೆಹ್ತಾ ಇತರರು ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.