ಶ್ರೇಷ್ಠರ ಕುರಿತ ಕಿರುಚಿತ್ರ


Team Udayavani, Sep 29, 2017, 6:40 AM IST

Shreshtaru_(112).jpg

ಒಂದು ಸಿನಿಮಾ ನಿರ್ದೇಶನ ಮಾಡುವುದಕ್ಕೆ ಮೊದಲ ವೇದಿಕೆ ಅಂದರೆ, ಯಾವುದಾದರೊಂದು ಶಾರ್ಟ್‌ಫಿಲ್ಮ್ ಮಾಡುವುದು. ಇದು ಈಗಿನ ಟ್ರೆಂಡ್‌. ಈಗಾಗಲೇ ಹೊಸಬರು ಅಂಥದ್ದೊಂದು ಸಾಹಸಕ್ಕೆ ಕೈ ಹಾಕುವ ಮೂಲಕ ಅದರಲ್ಲಿ ಎಷ್ಟೋ ಮಂದಿ ಸಕ್ಸಸ್‌ ಆಗಿದ್ದೂ ಉಂಟು. ಇದೀಗ ಅಂಥದ್ದೇ ಯುವ ತಂಡವೊಂದು ಕಿರುಚಿತ್ರ ಮಾಡುವ ಮೂಲಕ ಅದನ್ನೀಗ ಯೂಟ್ಯೂಬ್‌ಗ ಅಪ್‌ಲೋಡ್‌ ಮಾಡಿ, ತಮ್ಮ ಪ್ರತಿಭೆಯನ್ನು ಹೊರ ಹಾಕಿದೆ. ಅಂದಹಾಗೆ, ಆ ಕಿರುಚಿತ್ರದ ಹೆಸರು “ಶ್ರೇಷ್ಟರು’. ಶೀರ್ಷಿಕೆಯೇ ಹೇಳುವಂತೆ, ಇದೊಂದು ದೇಶ ಕಾಯುವ ಸೈನಿಕ ಹಾಗೂ ದೇಶಕ್ಕೆ ಅನ್ನ ಕೊಡುವ ರೈತಾಪಿ ವರ್ಗದ ಚಿತ್ರ.

ಈ ಕಿರುಚಿತ್ರವನ್ನು ನಿರ್ದೇಶಿಸಿರುವುದು ತ್ಯಾಗರಾಜ್‌. ಇದು ಇವರ ಮೊದಲ ಪ್ರಯತ್ನ. ಕಥೆ, ಚಿತ್ರಕಥೆ ಅವರೇ ಬರೆದಿದ್ದಾರೆ. ಹೊಸಬರ ಪ್ರಯತ್ನವನ್ನು ಮೆಚ್ಚಿಕೊಂಡು ಅವರಿಗೆ ಸಾಥ್‌ ಕೊಡುವ ಮೂಲಕ ಕಿರುಚಿತ್ರವನ್ನು ನಿರ್ಮಾಣ ಮಾಡಿರುವುದು ರಾಜೇಶ್ವರಿ. ಇವರ ಪ್ರೋತ್ಸಾಹ ಸಿಕ್ಕಿದ್ದರಿಂದಲೇ ತ್ಯಾಗರಾಜ್‌, ಒಳ್ಳೆಯ ಕಥೆ ಹೆಣೆದು, ಹೊಸ ತಂಡ ಕಟ್ಟಿಕೊಂಡು 27 ನಿಮಿಷದ ಕಿರುಚಿತ್ರವನ್ನು ನಿರ್ದೇಶಿಸಿದ್ದಾರೆ. ಈಗಾಗಲೇ “ಶ್ರೇಷ್ಟರು’ ಕಿರುಚಿತ್ರವನ್ನು ನಿರ್ದೇಶಕರು ಯೂಟ್ಯೂಬ್‌ಗ ಅಪ್‌ಲೋಡ್‌ ಮಾಡಿದ್ದಾರೆ.

“ಶ್ರೇಷ್ಟರು’ ಕಿರುಚಿತ್ರದ ಮೂಲಕ ನಿರ್ದೇಶಕರು ಹೇಳಿರುವ ವಿಷಯವಿಷ್ಟೇ. ದೇಶಕ್ಕಾಗಿ, ದೇಶದ ಜನರ ಹಿತಕ್ಕಾಗಿ ಬಿಸಿಲು, ಮಳೆ, ಛಳಿ ಎನ್ನದೆ ಗಡಿಭಾಗದಲ್ಲಿ ರಾತ್ರಿ, ಹಗಲು ಗಡಿ ಕಾಯುವ ಸೈನಿಕರ ನೋವು, ನಲಿವು ಹಾಗೂ ಇಡೀ ದೇಶಕ್ಕೆ ಅನ್ನ ಕೊಡುವ ರೈತಾಪಿ ವರ್ಗದ ನೂರಾರು ಸಮಸ್ಯೆಗಳ ನಡುವೆಯೂ, ಮುಂದುವರೆಸುವ ತಮ್ಮ ಕಾಯಕ ಎಂಥದ್ದು ಎಂಬುದನ್ನು ಈ ಕಿರುಚಿತ್ರ ಮೂಲಕ ಹೇಳಹೊರಟಿದ್ದಾರಂತೆ ನಿರ್ದೇಶಕರು. ಇಷ್ಟೆಲ್ಲಾ ಆಗಿದ್ದರೂ, ದೇಶ ಕಾಯುವ ಯೋಧರಿಗೆ, ದೇಶಕ್ಕೇ ಅನ್ನ ಕೊಡುವ ರೈತರಿಗೆ ಈಗಲೂ ಸಿಗಬೇಕಾದ ಸೌಲಭ್ಯ ಸಿಕ್ಕಿದೆಯಾ? ಎಂಬುದನ್ನಿಲ್ಲಿ ಹೇಳಿದ್ದಾರಂತೆ.  ಅಂದಹಾಗೆ, ತ್ಯಾಗರಾಜ್‌, ತಮ್ಮ ಕಿರುಚಿತ್ರದಲ್ಲಿ ಹಲವು ಹೊಸ ಪ್ರತಿಭೆಗಳನ್ನು ಪರಿಚಯಿಸಿದ್ದಾರೆ. ನವೀನ್‌, ರಾಜ್‌, ಗಿರೀಶ್‌ ಬಿಜ್ಜಲ್‌, ಭಾರ್ಗವ ಮಹೇಶ್‌, ಅಶ್ವಿ‌ನಿ.ಕೆ.ಎನ್‌.ಕಣ್ಣನ್‌ ಸೇರಿದಂತೆ ಹಲವು ಯುವ ನಟ,ನಟಿಯರು ಇಲ್ಲಿ ನಟಿಸಿದ್ದಾರೆ. ಇನ್ನು, ಈ ಚಿತ್ರಕ್ಕೆ “ರಾಮಾ ರಾಮಾರೇ’ಗೆ ಹಿನ್ನಲೆ ಸಂಗೀತ ನೀಡಿದ್ದ ನೋಬಿಲ್‌ಪೌಲ್‌ ಸಂಗೀತವಿದೆ. ಅಜಿತ್‌ ಅವರ ಛಾಯಾಗ್ರಹಣವಿದೆ. ಕಿರಣ್‌ ಸಂಕಲನ ಮಾಡಿದ್ದಾರೆ. ಅಂದು ಪ್ರತಿಯೊಬ್ಬರೂ ತಮ್ಮ “ಶ್ರೇಷ್ಟರು’ ಕುರಿತು ಪ್ರೀತಿಯಿಂದ ಮಾತನಾಡಿದರು. ಈ ಪ್ರಯತ್ನದ ಮೂಲಕ ಹೊಸ ಹೆಜ್ಜೆ ಇಡುವ ಭರವಸೆಯೊಂದಿಗೆ ಅಂದಿನ ಮಾತುಕತೆಗೆ ಇತಿಶ್ರೀ ಹಾಡಿದರು.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

yuva rajkumar

Yuva Rajkumar; ಫ್ಯಾಮಿಲಿ ಡ್ರಾಮಾದಲ್ಲಿ ಯುವ ಕನಸು

lineman and dilkush cinema releasing today

Kannada Cinema; ಇಂದು ತೆರೆಗೆ ಬರುತ್ತಿದೆ ಲೈನ್ ಮ್ಯಾನ್, ದಿಲ್ ಖುಷ್

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

Somu Sound Engineer,Kerebete ; ಸಿನಿಜಾತ್ರೆಯಲ್ಲಿ ನೆಲದ ಸೊಗಡು

karataka damanaka movie

Karataka Damanaka; ಶಿವಣ್ಣ ಪ್ರಭುದೇವ ಜೊತೆಯಾಟ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.