ಹೀರೋ ನಿರೀಕ್ಷೆಯಲ್ಲಿ ‘ಅಂಬುಜಾ’: ಶುಭಾ ಪೂಂಜಾ ನಾಯಕಿ
Team Udayavani, Apr 16, 2021, 12:43 PM IST
ಅಂಬುಜಾ – ಹೀರೋ ನಿರೀಕ್ಷೆಯಲ್ಲಿದ್ದಾಳೆ!
– ಹೀಗೆಂದರೆ ನಿಮಗೆ ಆಶ್ಚರ್ಯವಾಗಬಹುದು. “ಅಂಬುಜಾ ’ ಸಿನಿಮಾದ ಹೆಸರನ್ನು ನೀವು ಕೇಳಿರುತ್ತೀರಿ. ಶುಭಾ ಪೂಂಜಾ ಒಪ್ಪಿಕೊಂಡಿರುವ ಹೊಸ ಸಿನಿಮಾ. ಸದ್ಯ ಈ ಚಿತ್ರ ತನ್ನ ಪ್ರಿ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿಕೊಂಡಿದ್ದು, ಚಿತ್ರೀಕರಣಕ್ಕೆ ಅಣಿಯಾಗಿದೆ.
ಆದರೆ, “ಅಂಬುಜಾ’ ನಿಗೆ ಹೊಂದಿಕೆಯಾಗುವಂತಹ ಹೀರೋನನ್ನು ಚಿತ್ರ ತಂಡ ಹುಡುಕುತ್ತಿದೆ. ಈಗಾಗಲೇ ಒಂದಷ್ಟು ನಟರ ಆಡಿಷನ್ ಆಗಿದ್ದು, ಶೀಘ್ರದಲ್ಲಿಯೇ ಹೀರೋ ಫೈನಲ್ ಆಗಲಿದ್ದಾರೆ. ಸದ್ಯ ಶುಭಾ ಪೂಂಜಾ ಬಿಗ್ ಬಾಸ್ನಲ್ಲಿದ್ದು, ಅಲ್ಲಿಂದ ಬಂದ ಕೂಡಲೇ ಚಿತ್ರೀಕರಣ ಆರಂಭವಾಗಲಿದೆ.
ಕಾಶೀನಾಥ್ ಡಿ ಮಡಿವಾಳ್ “ಅಂಬುಜಾ’ ಎಂಬ ಸಿನಿಮಾ ಮೂಲಕ ನಿರ್ಮಾಪಕರಾಗುತ್ತಿದ್ದಾರೆ. ಕೇವಲ ನಿರ್ಮಾಪಕರಷ್ಟೇ ಅಲ್ಲ, ಕಥೆ, ಸಾಹಿತ್ಯ ಕೂಡಾ ಇವರದೇ. ಶ್ರೀನಿ ಹನುಮಂತ ರಾಜು ಈ ಚಿತ್ರದ ನಿರ್ದೇಶಕರು. ಈ ಹಿಂದೆ “ಕೆಲವು ದಿನಗಳ ನಂತರ’ ಎಂಬ ಸಿನಿಮಾ ಮಾಡಿದ್ದ ನಿರ್ದೇಶಕನ ಜೊತೆ ಸೇರಿ ಈಗ “ಅಂಬುಜಾ’ ಮಾಡುತ್ತಿದ್ದಾರೆ.
ಇದನ್ನೂ ಓದಿ:ಅಜೇಯ ವಿಜಯ: ಕೃಷ್ಣ ಟಾಕೀಸ್ ಬಗ್ಗೆ ಕೃಷ್ಣನ್ ಟಾಕ್!
“ಅಂಬುಜಾ ನಾನೇ ಬರೆದ ಕಥೆ. ಲಂಬಾಣಿ ಕುಟುಂಬದಲ್ಲಿ ನಡೆದ ನೈಜ ಘಟನೆಯ ನ್ನಿಟ್ಟುಕೊಂಡು ಸಿನಿಮಾ ಮಾಡುತ್ತಿದ್ದೇನೆ. ಕಥೆ ಕೇಳಿ ಶ್ರೀನಿಯವರು ಖುಷಿಯಾದರು. ಯಾವುದೇ ಬದಲಾವಣೆ ಮಾಡದೇ, ಅದಕ್ಕೆ ಚಿತ್ರಕತೆ, ಸಂಭಾಷಣೆ ರಚಿಸಿದರು. ಸಾಹಿತ್ಯದ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದರು. ಇದು ಪಕ್ಕಾ ಕಮರ್ಷಿಯಲ್ ಸಿನಿಮಾ. ಆದರೆ, ಯಾವುದೇ ಅಶ್ಲೀಲತೆ ಇಲ್ಲದೇ ಮನೆ ಮಂದಿಯೆಲ್ಲಾ ಕುಳಿತು ನೋಡುವ ಸಿನಿಮಾ. ನನಗೆ ಮೊದಲ ಸಿನಿಮಾದಲ್ಲೇ ವಿಶ್ವಾಸ ಮೂಡಿದೆ, ಇದೊಂದು ಒಳ್ಳೆಯ ಸಿನಿಮಾವಾಗುತ್ತದೆ ಎಂದು. ಮುಂದಿನ ದಿನಗಳಲ್ಲಿ ಮತ್ತಷ್ಟು ಸಿನಿಮಾ ಮಾಡುವ ಕನಸಿದೆ’ ಎನ್ನುತ್ತಾರೆ ನಿರ್ಮಾಪಕ ಕಾಶೀನಾಥ್.
ಚಿತ್ರದಲ್ಲಿ ಶುಭಾ ಪೂಂಜಾ, ಪದ್ಮಜಾರಾವ್, ಕಾಮಿಡಿಕಿಲಾಡಿ ಗೋವಿಂದೇಗೌಡ, ಕಾಮಿಡಿಕಿಲಾಡಿ ನಿರ್ದೇಶಕ ಶರಣಯ್ಯ, ಪ್ರಿಯಾಂಕ ಕಾಮತ್, ಸಂದೇಶ್ ಶೆಟ್ಟಿ ಅಜ್ರಿ ಸೇರಿದಂತೆ ಅನೇ ಕರು ನಟಿಸಿದ್ದಾರೆ. ಬೆಂಗಳೂರು, ಗದಗ, ಉಡುಪಿ ಸುತ್ತಮುತ್ತ ಚಿತ್ರೀಕರಣ ನಡೆಸಲು ಸಜ್ಜಾಗಿದೆ. ಈಗಾಗಲೇ ಹಾಡುಗಳ ಧ್ವನಿಮುದ್ರಣ ಮುಗಿಸಿರುವ ಚಿತ್ರತಂಡ ನಾಯಕ ಸಿಕ್ಕ ಕೂಡಲೇ ಶೂಟಿಂಗ್ ಗೆ ತೆರಳಲು ಸಿದ್ಧವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ