ವ್ಯವಸ್ಥೆಗೆ ಹಿಡಿದ ಕನ್ನಡಿ ‘ಹೋಪ್‌’: ವಿಭಿನ್ನ ಪಾತ್ರದಲ್ಲಿ ಶ್ವೇತಾ


Team Udayavani, Jul 8, 2022, 11:37 AM IST

ವ್ಯವಸ್ಥೆಗೆ ಹಿಡಿದ ಕನ್ನಡಿ ‘ಹೋಪ್‌’: ವಿಭಿನ್ನ ಪಾತ್ರದಲ್ಲಿ ಶ್ವೇತಾ

“ನಮ್ಮ ರಾಜಕೀಯ ವ್ಯವಸ್ಥೆಯಲ್ಲಿ ಸರ್ಕಾರಿ ಅಧಿಕಾರಿಗಳ ವರ್ಗಾವಣೆ ಹೇಗೆಲ್ಲ ನಡೆಯುತ್ತದೆ. ಅದರಿಂದ ಆಡಳಿತದ ಮೇಲೆ ಏನೆಲ್ಲ ಪರಿಣಾಮ ಬೀರುತ್ತದೆ. ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸುವಾಗ ಏನೇನು, ಸಮಸ್ಯೆ-ಸವಾಲುಗಳನ್ನು ಎದುರಿಸುತ್ತಾರೆ. ವ್ಯವಸ್ಥೆಯೊಳಗೆ ಅವರ ಹೋರಾಟ ಹೇಗಿರುತ್ತದೆ ಅನ್ನೋದು ನನ್ನ ಪಾತ್ರ. ನಮ್ಮ ಸುತ್ತಮುತ್ತ ನಡೆಯುವ, ಆಗಾಗ ಮಾಧ್ಯಮಗಳಲ್ಲೂ ವರದಿಯಾಗುವ ಒಂದು ಗಂಭೀರ ವಿಷಯವನ್ನು ನನ್ನ ಪಾತ್ರದ ಮೂಲಕ ತೆರೆಮೇಲೆ ಹೇಳಲಾಗುತ್ತಿದೆ. ಎಲ್ಲರಿಗೂ ಕನೆಕ್ಟ್ ಆಗುವಂಥ ಸಬೆjಕ್ಟ್ ಮತ್ತು ಕ್ಯಾರೆಕ್ಟರ್‌ ಸಿನಿಮಾದಲ್ಲಿರುವುದರಿಂದ ಆಡಿಯನ್ಸ್‌ಗೆ ಈ ಸಿನಿಮಾ ಇಷ್ಟವಾಗುತ್ತದೆ ಎಂಬ “ಹೋಪ್‌’ ನಮಗೂ ಇದೆ’ ಇದು ಇಂದು ತೆರೆಗೆ ಬರುತ್ತಿರುವ “ಹೋಪ್‌’ ಸಿನಿಮಾದಲ್ಲಿ ತಮ್ಮ ಪಾತ್ರದ ಬಗ್ಗೆ ನಾಯಕಿ ಶ್ವೇತಾ ಶ್ರೀವಾತ್ಸವ್‌ ಮಾತು.

ಹೌದು, ಸುಮಾರು ಐದು ವರ್ಷದ ಬಳಿಕ ಶ್ವೇತಾ ಶ್ರೀವಾತ್ಸವ್‌ ನಾಯಕಿಯಾಗಿ ಅಭಿನಯಿಸಿರುವ ಪೊಲಿಟಿಕಲ್‌ ಥ್ರಿಲ್ಲರ್‌ ಕಥಾಹಂದರದ “ಹೋಪ್‌’ ಸಿನಿಮಾ ಈ ವಾರ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಇದೇ ವೇಳೆ ಮಾತಿಗೆ ಸಿಕ್ಕ ಶ್ವೇತಾ, “ಹೋಪ್‌’ ಸಿನಿಮಾದ ಬಗ್ಗೆ ಒಂದಷ್ಟು ವಿಷಯ ಹಂಚಿಕೊಂಡರು.

“ನನ್ನ ಮಗಳ ಆರೈಕೆ, ಲಾಲನೆ-ಪಾಲನೆಗಾಗಿ ಎರಡು-ಮೂರು ವರ್ಷ ತೆಗೆದಿಡಬೇಕಾಯ್ತು. ಅದೆಲ್ಲ ಆದ ನಂತರವೂ ಮತ್ತೆ ಸಿನಿಮಾದಲ್ಲಿ ಆ್ಯಕ್ಟಿವ್‌ ಆಗಬೇಕು ಅಂದುಕೊಂಡಾಗ ನನಗೆ ಸಿಕ್ಕ ಸಬ್ಜೆಕ್ಟ್ “ಹೋಪ್‌’ ಸಿನಿಮಾದ್ದು. ನನ್ನ ಸಿನಿಮಾ ಕೆರಿಯರ್‌ನಲ್ಲಿ ಇಲ್ಲಿಯವರೆಗೆ ಮಾಡಿದ ಪಾತ್ರಗಳಿಗಿಂತ ಸಂಪೂರ್ಣ ವಿಭಿನ್ನವಾಗಿರುವಂಥ ಸಬ್ಜೆಕ್ಟ್ ಮತ್ತು ಕ್ಯಾರೆಕ್ಟರ್‌ ಎರಡೂ ಈ ಸಿನಿಮಾದಲ್ಲಿದೆ. ಇದರಲ್ಲಿ ನಾನು ಸಿವಿಲ್‌ ಸರ್ವೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದೇನೆ. ತನ್ನ ಕೆಲಸವನ್ನು ಅತ್ಯಂತ ನಿಷ್ಠೆಯಿಂದ ಮಾಡುವ ದಕ್ಷ ಅಧಿಕಾರಿ ಪಾತ್ರ ನನ್ನದು. ತುಂಬ ಯಾವುದಕ್ಕೂ ಸ್ಟ್ರಾಂಗ್‌ ಆಗಿರುವಂಥ, ಬೇರೆ ಬೇರೆ ಶೇಡ್‌ ಇರುವಂಥ, ಒಂದಷ್ಟು ಮಹಿಳೆಯರಿಗೆ ಮಾದರಿ ಆಗಿರುವಂಥ ಪಾತ್ರ ಈ ಸಿನಿಮಾದಲ್ಲಿ ಸಿಕ್ಕಿದೆ’ ಎನ್ನುತ್ತಾರೆ ಶ್ವೇತಾ.

“ಗೋಲ್ಡಿ ಪ್ರೊಡಕ್ಷನ್ಸ್‌’ ಬ್ಯಾನರ್‌ನಲ್ಲಿ ವರ್ಷಾ ಸಂಜೀವ್‌ ನಿರ್ಮಾಣದಲ್ಲಿ ಮೂಡಿಬಂದಿರುವ “ಹೋಪ್‌’ ಚಿತ್ರಕ್ಕೆ ಅಂಬರೀಶ್‌ ಎಂ. ನಿರ್ದೇಶನವಿದೆ. “ಅಭಿಜಿತ್‌ ಎಂಟರ್‌ಪ್ರೈಸಸ್‌’ ಚಿತ್ರದ ಬಿಡುಗಡೆ ಮಾಡುತ್ತಿದ್ದು, ಸುಮಾರು 80ಕ್ಕೂ ಹೆಚ್ಚಿನ ಕೇಂದ್ರಗಳಲ್ಲಿ “ಹೋಪ್‌’ ತೆರೆಗೆ ಬರುತ್ತಿದೆ.

ಚಿತ್ರದಲ್ಲಿ ಶ್ವೇತಾ ಶ್ರೀವಾತ್ಸವ್‌ ಅವರೊಂದಿಗೆ ಸುಮಲತಾ ಅಂಬರೀಶ್‌, ಪ್ರಮೋದ್‌ ಶೆಟ್ಟಿ, ಪ್ರಕಾಶ್‌ ಬೆಳವಾಡಿ, ಗೋಪಾಲಕೃಷ್ಣ ದೇಶಪಾಂಡೆ, ಅಶ್ವಿ‌ನ್‌ ಹಾಸನ್‌ ಮೊದಲಾದ ವರು ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ “ಹೋಪ್‌’ ಟ್ರೇಲರ್‌ ಗಮನ ಸೆಳೆಯುತ್ತಿದ್ದು, ಸಿನಿಮಾ ಥಿಯೇಟರ್‌ನಲ್ಲಿ ಹೇಗಿರಲಿದೆ ಅನ್ನೋದು ಈ ವಾರಾಂತ್ಯದಲ್ಲಿ ಗೊತ್ತಾಗಲಿದೆ.

ಜಿ.ಎಸ್‌.ಕಾರ್ತಿಕ ಸುಧನ್‌

ಟಾಪ್ ನ್ಯೂಸ್

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.