ಗಾನ ಪ್ರಿಯೆ ಸ್ನೇಹಾ

ಕನ್ನಡತಿಯ ಪರಭಾಷೆ ಗಾನ ಯಾನ

Team Udayavani, Mar 20, 2020, 10:42 AM IST

ಗಾನ ಪ್ರಿಯೆ ಸ್ನೇಹಾ

ಕನ್ನಡ ಚಿತ್ರರಂಗಕ್ಕೆ ದಿನ ಕಳೆದಂತೆ ನವ ನಟ, ನಟಿ, ತಂತ್ರಜ್ಞರಷ್ಟೇ ಅಲ್ಲ, ಹೊಸ ಗಾಯಕ, ಗಾಯಕಿಯರೂ ಎಂಟ್ರಿಯಾಗುತ್ತಿದ್ದಾರೆ. ಆ ಸಾಲಿಗೆ ಈಗಷ್ಟೇ ಹಾಡುವ ಮೂಲಕ ತನ್ನೊಳಗಿನ ಪ್ರತಿಭೆ ಹೊರಸೂಸಲು ಸಜ್ಜಾಗಿರುವ ಸ್ನೇಹಾ ಸಂಜೀವ ಹೊಸ ಸೇರ್ಪಡೆ. ಈಗಷ್ಟೇ ಸಿನಿಲೋಕ ಸ್ಪರ್ಶಿಸಿರುವ ಸ್ನೇಹಾ ಸಂಜೀವ ಅಪ್ಪಟ ಕನ್ನಡತಿ. ಕನ್ನಡದ ಜೊತೆ ತೆಲುಗು, ತಮಿಳು ಹಾಗು ಹಿಂದಿ ಭಾಷೆಯ ಹಾಡುಗಳನ್ನು ಹಾಡುವ ಮೂಲಕ ಪರಭಾಷೆ ಗಾಯಕಿ ಎನಿಸಿಕೊಂಡಿದ್ದಾರೆ. ಕೇವಲ ಸಿನಿಮಾ ಹಾಡುಗಳಷ್ಟೇ ಅಲ್ಲ, ಕನ್ನಡ ಹಾಗು ಹಿಂದಿ ಆಲ್ಬಂಗಳಿಗೂ ಸ್ನೇಹಾ ಧ್ವನಿಯಾಗಿದ್ದಾರೆ. ಅಂದಹಾಗೆ, ಸ್ನೇಹಾ ಮೂಲತಃ ಧಾರವಾಡದವರು. 10ನೇ ವಯಸ್ಸಲ್ಲಿ ಸಂಗೀತ ಲೋಕಕ್ಕೆ ಅಂಬೆಗಾಲಿಟ್ಟ ಅವರು, ಆರಂಭದ ದಿನದಲ್ಲಿ ವತ್ಸಲಾ ಕುಸನೂರ ಅವರ ಬಳಿ ಹಿಂದೂಸ್ತಾನಿ, ಶಾಸ್ತ್ರೀಯ ಸಂಗೀತ ಹಾಗು ಗ್ವಾಲಿಯರ್‌ ಘರನಾ ಕಲಿತಿದ್ದಾರೆ. ಸ್ನೇಹಾ ಅವರ ತಾಯಿ ಕೂಡ ಸಂಗೀತ ಪ್ರೇಮಿಯಾಗಿದ್ದು, ದೇವರ ನಾಮ, ಭಜನೆಯನ್ನು ಸುಶ್ರಾವ್ಯವಾಗಿ ಹಾಡುತ್ತಿದ್ದರಿಂದ ಅವರ ಪ್ರಭಾವ ಸ್ನೇಹಾ ಅವರಿಗೂ ಬೀರಿದೆ. ಹೀಗಾಗಿ ಸ್ನೇಹಾ ಚಿಕ್ಕಂದಿನಲ್ಲೇ ಮುಂಬೈನ ಗಂಧರ್ವ ಮಹಾಮಂಡಲ ವಿದ್ಯಾಲಯದಲ್ಲಿ ಸಂಗೀತ ಮಾಧ್ಯಮ ಪರೀಕ್ಷೆ ತೇರ್ಗಡೆಯಾಗಿ, ನಂತರ ಹಿರಿಯ ಸಂಗೀತ ಕಲಾವಿದರಾದ ಕಟಗೇರಿ ಅನಂತ್‌ ಆಚಾರ್ಯ ಬಳಿ ದಾಸವಾಣಿ ಕಲಿತಿದ್ದಲ್ಲದೆ, ಧಾರವಾಡದ ಕೆಇ ಬೋರ್ಡ್‌ ಶಾಲೆಯಲ್ಲಿ ಸಂಗೀತದಲ್ಲಿ ಬಿ.ಎ.ಶಿಕ್ಷಣ ಮುಗಿಸಿ, ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಂಗೀತ ಡಿಪ್ಲೊಮೊ ಪೂರೈಸಿದ್ದಾರೆ. ಅನೇಕ ಸಂಗೀತ ಕಾರ್ಯಕ್ರಮ ನೀಡಿ ಪ್ರಶಸ್ತಿಗಳನ್ನೂ ಮುಡಿಗೇರಿಸಿಕೊಂಡಿದ್ದಾರೆ. ವಿದೇಶಗಳಲ್ಲೂ ಇವರ ಸಂಗೀತ ಕಾರ್ಯಕ್ರಮ ವಿಸ್ತರಿಸಿದೆ. ಕಳೆದ ಒಂದು ವರ್ಷದ ಹಿಂದೆ ಚಿತ್ರರಂಗಕ್ಕೂ ಕಾಲಿಟ್ಟ ಸ್ನೇಹಾ ಹಿನ್ನೆಲೆ ಗಾಯಕಿಯಾಗಿ ಗುರುತಿಸಿಕೊಳ್ಳುತ್ತಿದ್ದಾರೆ. “ಜಗ್ಗಿ ಜಗನ್ನಾಥ್‌’ ಚಿತ್ರದಲ್ಲಿ ಸಂಗೀತ ನಿರ್ದೇಶಕ ಎ.ಎಂ.ನೀಲ್‌ ಸಂಯೋಜನೆಯಲ್ಲಿ ಮೂಡಿಬಂದ ಹಾಡಿಗೆ ಧ್ವನಿಯಾಗಿದ್ದಲ್ಲದೆ, ನೀಲ್‌ ಸಂಗೀತ ನಿರ್ದೇಶನದಲ್ಲಿ ಹಿಂದಿ ಭಾಷೆಯಲ್ಲಿ ಮೂಡಿ ಬರಲಿರುವ “ತೇರೇಲಿಯೇ’ ಎಂಬ ವಿಡಿಯೋ ಆಲ್ಬಂ ಹಾಗು ಕನ್ನಡದಲ್ಲಿ ತಯಾರಾಗುತ್ತಿರುವ “ಖುಷಿ’ ವಿಡಿಯೋ ಆಲ್ಬಂನಲ್ಲಿ ಸ್ನೇಹಾ ಹಾಡಿದ್ದಾರೆ. ವಿಶೇಷವೆಂದರೆ, ಈ ಹಾಡಿನ ವಿಡಿಯೋ ಚಿತ್ರೀಕರಣ ಹಾಗು ಮಿಕ್ಸಿಂಗ್‌ ಕೂಡ ಎ.ಆರ್‌.ರೆಹಮಾನ್‌ ಸ್ಟುಡಿಯೋದಲ್ಲಿ ನಡೆದಿದೆ. ಆಲ್ಬಂಗೆ ಮಹಾದೇವ್‌ ಕುಲಕರ್ಣಿ ಮತ್ತು ವಿ. ವಿಜಯ ಅವರ ಸಾಹಿತ್ಯವಿದೆ. ಸದ್ಯಕ್ಕೆ ಸ್ವರ ತರಂಗ ಅಕಾಡೆಮಿ ಸಂಸ್ಥಾಪಕರಾದ ಪಂಡಿತ ಸಂಜೀವ ಕೋರ್ತಿ, ಮಹಾದೇವ್‌ ಕುಲಕರ್ಣಿ, ಸಮೀರ ಕುಲಕರ್ಣಿ ಅವರ ಪ್ರೋತ್ಸಾಹದಲ್ಲಿ ಸ್ನೇಹಾ ಗಾಯನ ಯಾನ ಶುರು ಮಾಡಿರುವ ಅವರಿಗೆ ಕನ್ನಡದಲ್ಲೇ ಒಳ್ಳೆಯ ಗಾಯಕಿ ಎನಿಸಿಕೊಳ್ಳುವ ಛಲವಿದೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.