ಕನಸು ಕಂಗಳ ಕಾಶಿಮಾ…; ಇವರು ಸೌತ್ ಇಂಡಿಯಾನ್ ಹೀರೋಯಿನ್


Team Udayavani, Feb 24, 2023, 10:55 AM IST

ಕನಸು ಕಂಗಳ ಕಾಶಿಮಾ…; ಇವರು ಸೌತ್ ಇಂಡಿಯಾನ್ ಹೀರೋಯಿನ್

ಒಂದೆಡೆ ಕನ್ನಡ ಚಿತ್ರರಂಗದಲ್ಲಿ ವರ್ಷದಿಂದ ವರ್ಷಕ್ಕೆ ಸಿನಿಮಾಗಳ ಸಂಖ್ಯೆ ಹೆಚ್ಚಾಗುತ್ತಿದೆ. ಮತ್ತೂಂದೆಡೆ ಈ ಸಿನಿಮಾಗಳ ಮೂಲಕ ಪ್ರತಿವರ್ಷ ಚಿತ್ರರಂಗಕ್ಕೆ ಪರಿಚಯವಾಗುವ ನವ ನಾಯಕಿಯರ ಸಂಖ್ಯೆ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗೆ ಚಿತ್ರರಂಗಕ್ಕೆ ಕಾಲಿಟ್ಟ ನವ ನಾಯಕಿಯರ ಪೈಕಿ ಕೆಲವೇ ಕೆಲವರು ಮಾತ್ರ ತಮ್ಮ ಸಿನಿಮಾ, ಪಾತ್ರ ಮತ್ತು ಅಭಿನಯದ ಮೂಲಕ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗುತ್ತಾರೆ. ಅಂಥ ನವ ನಾಯಕಿಯರಲ್ಲಿ ಪೈಕಿ ಸದ್ಯಕ್ಕೆ ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಗಮನ ಸೆಳೆಯುತ್ತಿರುವುದು ನಟಿ ಕಾಶಿಮಾ. ಈಗಾಗಲೇ ಕನ್ನಡದಲ್ಲಿ ಒಂದಷ್ಟು ಸಿನಿಮಾಗಳಲ್ಲಿ ಅಭಿನಯಿಸಿ ಭರವಸೆ ಮೂಡಿಸಿರುವ ಕಾಶಿಮಾ ನಟಿಸಿರುವ “ಸೌತ್‌ ಇಂಡಿಯನ್‌ ಹೀರೋ’ ಚಿತ್ರ ಇಂದು ತೆರೆಕಾಣುತ್ತಿದೆ

ಇನ್ನು, ಕಾಶಿಮಾ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದು, ಹಿರಿಯ ನಿರ್ದೇಶಕ ದಿನೇಶ್‌ ಬಾಬು ನಿರ್ದೇಶನದ “ಕಸ್ತೂರಿ ಮಹಲ್‌’ ಚಿತ್ರದ ಮೂಲಕ. “ಕಸ್ತೂರಿ ಮಹಲ್‌’ ಸಿನಿಮಾದಲ್ಲಿ ಅಭಿನಯಿಸುವ ಅವಕಾಶ ಗಿಟ್ಟಿಸಿಕೊಂಡ ಕಾಶಿಮಾಗೆ ಮೊದಲ ಸಿನಿಮಾವೇ ಸಾಕಷ್ಟು ಅನುಭವಗಳನ್ನು ತಂದುಕೊಟ್ಟಿತಂತೆ. ಈ ಬಗ್ಗೆ ಮಾತನಾಡುವ ಕಾಶಿಮಾ, “ಮೊದಲ ಸಿನಿಮಾದಲ್ಲೇ ದಿನೇಶ್‌ ಬಾಬು ಅವರಂಥ ಲೆಜೆಂಡರಿ ಡೈರೆಕ್ಟರ್‌, ಮತ್ತು ದೊಡ್ಡ ಸ್ಟಾರ್ ಜೊತೆಗೆ ಕೆಲಸ ಮಾಡುವ ಅನುಭವ ಸಿಕ್ಕಿತು. ಒಂದು ಸಿನಿಮಾದ ಕೆಲಸ ಹೇಗೆ ನಡೆಯುತ್ತದೆ. ಕಲಾವಿದರು ಹೇಗಿರುತ್ತಾರೆ. ಪಾತ್ರಕ್ಕೆ ನಮ್ಮ ತಯಾರಿ ಹೇಗಿರಬೇಕು, ಹೀಗೆ ಹತ್ತಾರು ವಿಷಯಗಳನ್ನು ಈ ಸಿನಿಮಾದಲ್ಲಿ ಕಲಿತುಕೊಂಡೆ’ ಎನ್ನುತ್ತಾರೆ.

“ಕಾಲೇಜ್‌ ದಿನಗಳಲ್ಲಿಯೇ ಮಾಡೆಲಿಂಗ್‌ನಲ್ಲಿ ಭಾಗವಹಿಸುತ್ತಿದ್ದರಿಂದ, ಅಲ್ಲಿ ಒಂದಷ್ಟು ಅನುಭವವಿತ್ತು. ಆದರೆ ಸಿನಿಮಾ ಇಂಡಸ್ಟ್ರಿ ಮಾತ್ರ ನನಗೆ ಸಂಪೂರ್ಣ ಹೊಸದಾಗಿತ್ತು. ಸಿನಿಮಾದ ಬಗ್ಗೆ ಅಷ್ಟಾಗಿ ಗೊತ್ತಿರಲಿಲ್ಲ. ಒಂದು ಸಿನಿಮಾ ಹೇಗೆ ಆಗುತ್ತದೆ, ಅದರ ಕೆಲಸಗಳು ಹೇಗೆ ನಡೆಯುತ್ತದೆ ಎನ್ನುವುದರ ಬಗ್ಗೆ ನನಗೇನೂ ಗೊತ್ತಿರಲಿಲ್ಲ. ಹೀಗಾಗಿ ಮೊದಲು ಸಿನಿಮಾದ ಆಫ‌ರ್‌ ಬಂದಾಗ, ಸಿನಿಮಾ ಹೇಗೋ.., ಏನೋ? ಎಂಬ ಸಣ್ಣ ಭಯವಂತೂ ಇದ್ದೇ ಇತ್ತು. ಆದರೆ ಮೊದಲ ಸಿನಿಮಾದಲ್ಲೇ ಒಳ್ಳೆಯ ಪ್ರೊಡಕ್ಷನ್‌ ಹೌಸ್‌, ಡೈರೆಕ್ಟರ್‌, ಕೋ ಆರ್ಟಿಸ್ಟ್‌, ಒಳ್ಳೆಯ ಟೀಮ್‌ ಸಿಕ್ಕಿದ್ದರಿಂದ, ಎಲ್ಲವನ್ನೂ ಕಲಿತುಕೊಳ್ಳಲು ಸಹಾಯವಾಯ್ತು’ ಎನ್ನುತ್ತಾರೆ ಕಾಶಿಮಾ.

ಕಾಶಿಮಾ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು ನಾಲ್ಕು ವರ್ಷವಾಯಿತು. ಈ ನಾಲ್ಕು ವರ್ಷಗಳಲ್ಲಿ ಕಾಶಿಮಾ, ಕನ್ನಡದಲ್ಲಿ “ಕಸ್ತೂರಿ ಮಹಲ್‌’, “ಟೆಂಪರ್‌’, “ಸೌಥ್‌ ಇಂಡಿಯನ್‌ ಹೀರೋ’ ಸೇರಿದಂತೆ ಮೂರು ಸಿನಿಮಾಗಳಲ್ಲಿ ಮತ್ತು ತೆಲುಗಿನಲ್ಲಿ “ಕಲಾಪುರಂ’ ಎಂಬ ಸಿನಿಮಾದಲ್ಲಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಅದರಲ್ಲೂ ಒಂದೇ ವರ್ಷದಲ್ಲಿ ಕಾಶಿಮಾ ನಾಯಕಿಯಾಗಿರುವ ಮೂರು ಸಿನಿಮಾಗಳು ತೆರೆಕಂಡಿವೆ.

ಇತ್ತೀಚೆಗೆ ಕಾಶಿಮಾ ನಾಯಕಿಯಾಗಿ ಅಭಿನಯಿಸಿದ್ದ “ಸೌಥ್‌ ಇಂಡಿಯನ್‌ ಹೀರೋ’ ಸಿನಿಮಾ ಕೂಡ ತೆರೆಕಂಡಿದ್ದು, ಈ ಸಿನಿಮಾದಲ್ಲಿ ಕಾಶಿಮಾ ಪಾತ್ರದ ಬಗ್ಗೆ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

 ಜಿ.ಎಸ್‌. ಕಾರ್ತಿಕ ಸುಧನ್‌

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

nalkane ayama kannada movie

Sandalwood; ‘ನಾಲ್ಕನೇ ಆಯಾಮ’ ಮೇಲೆ ಗೌತಮ್‌ ಕನಸು: ಇಂದು ತೆರೆಗೆ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

Actor Dwarakish: ಸಕಲ ಗೌರವಗಳೊಂದಿಗೆ ನಟ ದ್ವಾರಕೀಶ್‌ ಅಂತ್ಯಕ್ರಿಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.