ದೂರದ ಮಾತು
ಏನಾಗಲಿ ಮುಂದೆ ಸಾಗು ನೀ
Team Udayavani, Feb 7, 2020, 7:03 AM IST
ಇತ್ತೀಚೆಗಷ್ಟೆ ನಟ ಯಶ್ ಕೈಯಲ್ಲಿ ಬಿಡುಗಡೆಯಾಗಿದ್ದ “ಸಾಗುತ ದೂರ, ದೂರ’ ಚಿತ್ರದ ಟ್ರೇಲರ್ಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದೇ ಖುಷಿಯಲ್ಲಿರುವ ಚಿತ್ರತಂಡ ಇದೀಗ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಅಂತಿಮ ಹಂತದ ತಯಾರಿಯಲ್ಲಿದ್ದು, ಪ್ರಚಾರ ಕಾರ್ಯದ ಭಾಗವಾಗಿ ಚಿತ್ರತಂಡ ಚಿತ್ರದ ಆಡಿಯೋವನ್ನು ಹೊರತಂದಿದೆ. ನಟಿ ರಾಗಿಣಿ ದ್ವಿವೇದಿ, ಲಹರಿ ವೇಲು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ “ಸಾಗುತ ದೂರ, ದೂರ’ ಚಿತ್ರದ ಹಾಡುಗಳನ್ನು ಹೊರತಂದರು.
ಇದೇ ವೇಳೆ ಮಾತನಾಡಿದ ನಟಿ ರಾಗಿಣಿ, “ಸಿನಿಮಾದ ಟೈಟಲ್ ಕೇಳ್ಳೋದಕ್ಕೆ ಚೆನ್ನಾಗಿದೆ. ಟೀಸರ್, ಟ್ರೇಲರ್ಗಳನ್ನು ನೋಡಿದಾಗ ಸಿನಿಮಾದಲ್ಲಿ ಬೇರೆ ಏನೂ ವಿಷಯವಿದೆ ಅನ್ನೋ ಕುತೂಹಲ ಮೂಡುತ್ತದೆ. ಸಿನಿಮಾದ ಟೀಸರ್, ಟ್ರೇಲರ್ಗಳಲ್ಲಿ ಕಾಣುವ ಪಾತ್ರಗಳಲ್ಲಿ ಎಲ್ಲರೂ ಚೆನ್ನಾಗಿ ಕಾಣುತ್ತಿದ್ದಾರೆ. ಸಿನಿಮಾಕ್ಕೆ ಮತ್ತು ಅದರಲ್ಲಿ ಕೆಲಸ ಮಾಡಿದ ಎಲ್ಲರಿಗೂ ಒಳ್ಳೆಯದಾಗಲಿ’ ಎಂದು ಚಿತ್ರಕ್ಕೆ ಮತ್ತು ಚಿತ್ರತಂಡಕ್ಕೆ ಶುಭ ಹಾರೈಸಿದರು. ಈ ಹಿಂದೆ “ಜಾತ್ರೆ’ ಚಿತ್ರವನ್ನು ನಿರ್ದೇಶಿಸಿದ್ದ ರವಿತೇಜ “ಸಾಗುತ ದೂರ, ದೂರ…’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.
ಚಿತ್ರದ ಕಥಾಹಂದರದ ಬಗ್ಗೆ ಮಾತನಾಡಿದ ರವಿತೇಜ, “ಸಾಕಷ್ಟು ಕನಸುಗಳನ್ನು ಇಟ್ಟುಕೊಂಡು, ಶ್ರಮಪಟ್ಟು ಈ ಸಿನಿಮಾವನ್ನು ಮಾಡಿದ್ದೇವೆ. ತಾಯಿಯ ಸಂಬಂಧ ಮತ್ತು ಭಾವನೆಗಳೇ ಈ ಸಿನಿಮಾದ ಜೀವಾಳ. ಪ್ರತಿಯೊಬ್ಬರಿಗೂ ಕನೆಕ್ಟ್ ಆಗುವಂಥ ಸಂಗತಿಗಳು ಸಿನಿಮಾದಲ್ಲಿರುವುದರಿಂದ, ಎಲ್ಲ ವರ್ಗದ ಆಡಿಯನ್ಸ್ಗೂ ಸಿನಿಮಾ ಇಷ್ಟವಾಗಲಿದೆ. ಚಿತ್ರದ ಪ್ರತಿ ಸನ್ನಿವೇಶಗಳನ್ನು ನೈಜವಾಗಿ ತೆರೆಮೇಲೆ ತಂದಿದ್ದೇವೆ’ ಎಂದು ಚಿತ್ರದ ಕಥಾಹಂದರ ಮತ್ತು ತಮ್ಮ ಚಿತ್ರ ಸಾಗಿಬಂದ ರೀತಿಯನ್ನು ತೆರೆದಿಟ್ಟರು. ಕಾರ್ಯಕ್ರಮದಲ್ಲಿ ಹಾಜರಿದ್ದ ಚಿತ್ರದ ಕಲಾವಿದರು, ತಂತ್ರಜ್ಞರು, ನಿರ್ಮಾಪಕರು ಚಿತ್ರದ ಬಗ್ಗೆ ತಮ್ಮ ಅನಿಸಿಕೆ-ಅಭಿಪ್ರಾಯಗಳನ್ನು ಹಂಚಿಕೊಂಡರು.
“ಖುಷಿ ಕನಸು ಕ್ರಿಯೇಷನ್ಸ್’ ಬ್ಯಾನರ್ನಲ್ಲಿ ದಿವ್ಯಾ ಪೂಜಾರಿ, ಅಮಿತ ಪೂಜಾರಿ ನಿರ್ಮಿಸಿರುವ “ಸಾಗುತ ದೂರ, ದೂರ…’ ಚಿತ್ರದಲ್ಲಿ ಅಪೇಕ್ಷಾ ಪುರೋಹಿತ್, ಜಾಹ್ನವಿ ಜ್ಯೊತಿ, ಮಹೇಶ, ದೀಕ್ಷಿತ್ ಶೆಟ್ಟಿ, ಉಷಾ ಭಂಡಾರಿ, ಆರತಿ, ಭರತ, ರಜಿನಿ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರದ ಹಾಡುಗಳಿಗೆ ಮಣಿಕಾಂತ ಕದ್ರಿ ಸಂಗೀತ ಸಂಯೋಜಿಸಿದ್ದಾರೆ. ಚಿಕ್ಕಮಗಳೂರು, ಬೆಂಗಳೂರು ಮೊದಲಾದ ಕಡೆಗಳ ಚಿತ್ರೀಕರಣ ನಡೆಸಲಾಗಿರುವ “ಸಾಗುತ ದೂರ, ದೂರ…’ ಚಿತ್ರ ಇದೇ ಫೆಬ್ರವರಿ 14ರಂದು ತೆರೆಗೆ ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್
Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್ ನಿರ್ದೇಶನದ ಸಿನಿಮಾ
Ritanya Vijay; ದುನಿಯಾ ವಿಜಯ್ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ
DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್ನಲ್ಲಿ ಡೆವಿಲ್ ಬರೋದು ಪಕ್ಕಾ: ದರ್ಶನ್
Kannada Cinema; ರಿಲೀಸ್ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್ಗೆ ಯಶ ನಾಯಕಿ
MUST WATCH
ಹೊಸ ಸೇರ್ಪಡೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ