ಅಮೇರಿಕಾದಲ್ಲಿ ಮಾತು ಕೊಟ್ಟು, ಬೆಂಗಳೂರಲ್ಲಿ ಈಡೇರಿಸಿದ್ರು


Team Udayavani, Nov 17, 2017, 6:00 AM IST

AMERICA.jpg

ಕಳೆದ ವರ್ಷ ಅಮೇರಿಕಾದಲ್ಲಿ ನಡೆದ ಅಕ್ಕ ಸಮ್ಮೇಳನಕ್ಕೆ ಹೋದ ಸಂದರ್ಭದಲ್ಲೇ ನೃತ್ಯ ನಿರ್ದೇಶಕ ಇಮ್ರಾನ್‌ ಸರ್ದಾರಿಯಾ, ತಾವು ನಿರ್ದೇಶಿಸುತ್ತಿರುವ ಹೊಸ ಚಿತ್ರದ ಬಗ್ಗೆ ಅಂಬರೀಶ್‌ಗೆ ಹೇಳಿದ್ದರಂತೆ. ಆಗಲೇ ಚಿತ್ರದ ಟೀಸರ್‌ ಬಿಡುಗಡೆ ಮಾಡುವುದಕ್ಕೆ ಬರಬೇಕು ಎಂದು ಆಹ್ವಾನಿಸಿದ್ದರಂತೆ. “ಆಯ್ತು ಹೋಗ್ಲಾ …’ ಎಂದು ಪ್ರಾಮಿಸ್‌ ಮಾಡಿದ್ದ ಅಂಬರೀಶ್‌, ಈಗ ಅದನ್ನು ಉಳಿಸಿಕೊಂಡಿದ್ದಾರೆ. ಇತ್ತೀಚೆಗೆ “ಉಪ್ಪು ಹುಳಿ ಖಾರ’ ಚಿತ್ರದ ಪಾತ್ರಗಳ ಟೀಸರ್‌ ಬಿಡುಗಡೆ ಸಮಾರಂಭ ನಡೆಯಿತು. ಆ ಸಮಾರಂಭಕ್ಕೆ ಅಂಬರೀಶ್‌ ಅವರೇ ಮುಖ್ಯ ಅತಿಥಿಯಾಗಿ ಬಂದಿದ್ದರು. ಅವರ ಜೊತೆಗೆ ಇನ್‌ಫೋಸಿಸ್‌ನ ಉಪಾಧ್ಯಕ್ಷರಾದ ರಾಮ್‌ದಾಸ್‌ ಕಾಮತ್‌ ಸಹ ಇದ್ದರು. ಅಂದು ಒಟ್ಟು ನಾಲ್ಕು ಟೀಸರ್‌ಗಳು ಬಿಡುಗಡೆಯಾದವು.

ಮೊದಲು ಚಿತ್ರದ ಮೂವರು ನಾಯಕರು ಮತ್ತು ನಾಯಕಿಯರನ್ನು ಪರಿಚಯಿಸುವ ಮೂವರು ಟೀಸರ್‌ಗಳು ಬಿಡುಗಡೆಗೊಂಡವು. ನಂತರ ಮಾಲಾಶ್ರೀ ಅವರ ಇನ್ನೊಂದು ಟೀಸರ್‌ ಬಿಡುಗಡೆಯಾಯಿತು. ನಂತರ ಮಾತನಾಡಿದ ಮಾಲಾಶ್ರೀ, ತಮ್ಮನ್ನು ಈ ಚಿತ್ರದಲ್ಲಿ ಬಹಳ ವಿಭಿನ್ನವಾಗಿ ತೋರಿಸಿದ್ದಾರೆ ಎಂದು ಹೇಳಿದರು. “ನಾನು ಇದುವರೆಗೂ ಹಲವು ಚಿತ್ರಗಳಲ್ಲಿ ಪೊಲೀಸ್‌ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದೇನೆ. ಈ ಚಿತ್ರದಲ್ಲೂ ಪೊಲೀಸ್‌ ಅಧಿಕಾರಿಯ ಪಾತ್ರವಾದರೂ, ವಿಭಿನ್ನವಾದ ಪಾತ್ರವಿದೆ. ಇಮ್ರಾನ್‌ ಹೇಳಿದಂಗೆ ಮಾಡಿದ್ದೀನಿ. ನಾನು ಈ ಚಿತ್ರದಲ್ಲಿ ಹೇಗೆ ಮಾಡಿದ್ದೀನಿ ಅಂತ ನೀವೆಲ್ಲಾ ಹೇಳಬೇಕು. ಹೊಸಬರ ಜೊತೆಗೆ ಕೆಲಸ ಮಾಡಿದ್ದು ಖುಷಿ ಕೊಟ್ಟಿತು. ಇನ್ನು ಈ ಚಿತ್ರದಲ್ಲಿ ಇಮ್ರಾನ್‌ ನನ್ನಿಂದ ಎರಡು ಸ್ಟೆಪ್‌ ಹಾಕಿಸಿದ್ದಾರೆ. ಹೇಗಿದೆ ಎಂಬುದು ನೀವೇ ನೋಡಿ’ ಎಂದು ಮಾಲಾಶ್ರೀ ಅವರು ಮೈಕು ಕೆಳಗಿಟ್ಟರು.

ಟೀಸರ್‌ ನೋಡಿ ನೀರು ಕುಡಿಬೇಕು ಎಂದೇ ಮಾತು ಶುರು ಮಾಡಿದರು ಅಂಬರೀಶ್‌. “ಟೀಸರ್‌ ನೋಡಿ ಖುಷಿಯಾಯಿತು. ಅಮೇರಿಕಾಗೆ ಹೋದಾಗ ಇಮ್ರಾನ್‌ ಹೇಳಿದ್ದರು. ಅದರಂತೆ ಬಂದೆ. ಅನುಶ್ರೀ ಟಿವಿಗಿಂಥ ಹತ್ತುಪಟ್ಟು ಚೆನ್ನಾಗಿ ಕಾಣಿಸುತ್ತಾರೆ. ಕನ್ನಡ ಚಿತ್ರರಂಗಕ್ಕೆ ತುಂಬಾ ಹೊಸಬರು ಬರುತ್ತಿದ್ದಾರೆ. ಹೊಸಬರು ಬರಬೇಕು. ಚಿತ್ರರಂಗವನ್ನು ಬೆಳೆಸಬೇಕು’ ಎಂದು ಅಂಬರೀಶ್‌ ಹಾರೈಸಿದರು.

ಅದಕ್ಕೂ ಮುನ್ನ ಶರತ್‌, ಅನುಶ್ರೀ, ಶಶಿ, ಜಯಶ್ರೀ, ಧನು ಮುಂತಾದವರು ಮಾತಾಡಿ ತಮ್ಮ ಪ್ರಯತ್ನಕ್ಕೆ ಶುಭ ಕೋರಿದರು. ಇಮ್ರಾನ್‌ ಮತ್ತು ನಿರ್ಮಾಪಕ ರಮೇಶ್‌ ರೆಡ್ಡಿ ಸಹ ಚಿತ್ರಕ್ಕೆ ಹಾರೈಸಿ ಎಂದು ಕೇಳುತ್ತಾ ಮಾತು ಮುಗಿಸಿದರು.

ಟಾಪ್ ನ್ಯೂಸ್

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.