ಖನನ ಕನಸು : ಐದು ಶೇಡ್‌ನ‌ಲ್ಲಿ ಹೀರೋ


Team Udayavani, May 10, 2019, 6:20 AM IST

Suchi-Khanana

“ನನಗೆ ಚಿಕ್ಕಂದಿನಿಂದಲೂ ಸಿನಿಮಾ ಹುಚ್ಚು. ಐದು ಸಾವಿರ ಜೇಬಲ್ಲಿಟ್ಟುಕೊಂಡು ಆ ದಿನಗಳಲ್ಲೇ ಮದ್ರಾಸ್‌ಗೆ ಹೋಗಿದ್ದೆ. ಹೋದವನಿಗೆ ಪರಿಚಯವಾದ ನಾಲ್ಕೈದು ಮಂದಿ ಮಾತು ನಂಬಿದವನಿಗೆ ಸಮಸ್ಯೆಯೂ ಆಯ್ತು. ಬಳಿಕ ಅವರ್ಯಾರೂ ಪತ್ತೆ ಇಲ್ಲ. ಅತ್ತ ಸಿನಿಮಾ ಆಸೆ ಹಾಗೆಯೇ ಇತ್ತು. ಆ ಆಸೆ ಈಗ ಮಗ ಆರ್ಯವರ್ಧನ್‌ ಮೂಲಕ ಈಡೇರಿದೆ’ – ಹೀಗೆ ಹೇಳುತ್ತಾ ಹೋದರು ನಿರ್ಮಾಪಕ ಶ್ರೀನಿವಾಸ್‌.

ಅವರು ಹೇಳಿದ್ದು, “ಖನನ’ ಚಿತ್ರದ ಮಾತುಕತೆಯಲ್ಲಿ. ಸಿನಿಮಾ ರಂಗದಲ್ಲಿ ಕೆಲಸ ಮಾಡುತ್ತಿರುವ ಶ್ರೀನಿವಾಸ್‌, ತಮ್ಮ ಪುತ್ರ ಆರ್ಯವರ್ಧನ್‌ ಅವರನ್ನು “ಖನನ’ ಚಿತ್ರದ ಮೂಲಕ ಹೀರೋ ಮಾಡಿ ತಮ್ಮ ಸಿನಿಮಾ ಆಸೆ ಈಡೇರಿಸಿಕೊಂಡ ಖುಷಿ. ಮೇ. 10 ರಂದು ಚಿತ್ರ ಬಿಡುಗಡೆಯಾಗುತ್ತಿದೆ. ಕನ್ನಡ, ತೆಲುಗು, ತಮಿಳು ಭಾಷೆಯಲ್ಲಿ ಏಕಕಾಲಕ್ಕೆ ಬಿಡುಗಡೆ ಮಾಡುವ ಕುರಿತು ಹೇಳಿಕೊಂಡ ಶ್ರೀನಿವಾಸ್‌, “ಇಷ್ಟಪಟ್ಟು ಮಾಡಿದ ಸಿನಿಮಾ. ಎಲ್ಲರೂ ಹಂಡ್ರೆಡ್‌ ಪರ್ಸೆಂಟ್‌ ಎಫ‌ರ್ಟ್‌ ಹಾಕಿದ್ದಾರೆ. ಹೊಸಬರ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರ ಇರಲಿ’ ಎಂದರು ಶ್ರೀನಿವಾಸ್‌.

ನಿರ್ದೇಶಕ ರಾಧ ಅವರಿಗೆ ಇದು ಮೊದಲ ಚಿತ್ರ. “ಸಸ್ಪೆನ್ಸ್‌ ಥ್ರಿಲ್ಲರ್‌ ಸಿನಿಮಾದಲ್ಲಿ ಎಲ್ಲಾ ಅಂಶಗಳೂ ಇವೆ. ನಾಯಕನಿಗೆ ಇಲ್ಲಿ ಐದು ಶೇಡ್‌ಗಳಿವೆ. ಒಂದೊಂದೊ ಶೇಡ್‌ ಕೂಡ ವಿಭಿನ್ನವಾಗಿದೆ. ತಾಂತ್ರಿಕತೆ ಇಲ್ಲಿ ಹೆಚ್ಚು ಗಮನ ಸೆಳೆಯಲಿದೆ. ಎಲ್ಲೂ ಕಾಂಪ್ರಮೈಸ್‌ ಆಗದೆ, ಚಿತ್ರ ಮಾಡಿದ್ದೇವೆ. ನೋಡುಗರ ತಾಳ್ಮೆಯನ್ನು ಮನಸ್ಸಲ್ಲಿಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಅಮೆರಿಕಾದಿಂದ ಇಂಡಿಯಾಗೆ ಬರುವ ನಾಯಕನಲ್ಲಿ ಕೆಲ ಬದಲಾವಣೆ­ಗಳಾಗುತ್ತವೆ. ಆ ಬದಲಾವಣೆಗಳೇ ಚಿತ್ರದ ಹೈಲೈಟ್‌. ಇಲ್ಲಿ ನಾಯಿ ಕೂಡ ಪ್ರಮುಖ ಪಾತ್ರ ವಹಿಸಿದೆ. ಅದರ ಪಾತ್ರ ಹೇಗಿದೆ ಎಂಬುದಕ್ಕೆ ಸಿನಿಮಾ ನೋಡಬೇಕು’ ಎಂದರು ನಿರ್ದೇಶಕ ರಾಧ.

ನಾಯಕ ಆರ್ಯವರ್ಧನ್‌ ಅವರಿಗೆ ಇದು ನಾಯಕರಾಗಿ ಮೊದಲ ಚಿತ್ರ. ಈ ಹಿಂದೆ “ಮಾರ್ಚ್‌ 22′ ಚಿತ್ರದಲ್ಲಿ ನಟಿಸಿದ್ದರೂ, ಅವರಿಗೆ ಇದೊಂದು ಹೊಸ ಅನುಭವ ಕಟ್ಟಿಕೊಟ್ಟಿದೆಯಂತೆ. ಈ ಸಿನಿಮಾ ಮೂಲಕ ಜೀವನದ ಪಾಠ ಕಲಿತಿದ್ದೇನೆ ಎನ್ನುವ ಆರ್ಯವರ್ಧನ್‌, ನಂಬಿಕೆ, ವಿಶ್ವಾಸ, ಪ್ರೀತಿ ಇವೆಲ್ಲವುಗಳಿಗಿಂತ ಮನುಷ್ಯನಿಗೆ ಮುಖ್ಯವಾಗಿ ಬದುಕಲ್ಲಿ ಬೇಕಿರುವುದು ಸ್ವಾತಂತ್ರ್ಯ. ಆ ವಿಷಯ ಇಲ್ಲಿ ಮುಖ್ಯವಾಗಿದೆ. ಇಲ್ಲಿ ಮನರಂಜನೆ ಇದೆ, ಪ್ರೀತಿ ಇದೆ, ದ್ವೇಷವಿದೆ, ಮೋಸವೂ ಇದೆ. ಅದರಾಚೆಗೆ ಹೊಸ ವಿಷಯಗಳೂ ಇವೆ’ ಎಂದು ವಿವರ ಕೊಡುತ್ತಾರೆ ಆರ್ಯವರ್ಧನ್‌.

ನಾಯಕಿ ಕರಿಷ್ಮಾ ಬರುಹ ಅವರಿಗೆ ಇದು ಮೊದಲ ಸಿನಿಮಾ. ಅಸ್ಸಾಂ ಮೂಲದ ಕರಿಷ್ಮಾ ಅವರಿಗೆ ಕಥೆ, ಪಾತ್ರ ಹೊಸದಾಗಿದೆ ಅಂತ ಅನಿಸಿದ್ದೇ ತಡ, ಸಿನಿಮಾಗೆ ಗ್ರೀನ್‌ ಸಿಗ್ನಲ್‌ ಕೊಟ್ಟರಂತೆ. ಇಲ್ಲಿ ಸಾಕಷ್ಟು ಏರಿಳಿತಗಳಿವೆ. ಅದೇ ಸಿನಿಮಾದ ಪ್ಲಸ್‌ ಪಾಯಿಂಟ್‌. ಭಾಷೆ ಬರದ ನನಗೆ, ಇಡೀ ಚಿತ್ರತಂಡ ಎಲ್ಲವನ್ನೂ ತಿಳಿಹೇಳಿಕೊಟ್ಟು ಮಾಡಿಸಿದ್ದಾರೆ ಎಂಬುದು ಅವರ ಮಾತು.

ಇನ್ನು ಯುವ ಕಿಶೋರ್‌ ಇಲ್ಲಿ ನೆಗೆಟಿವ್‌ ಶೇಡ್‌ ಪಾತ್ರ ಮಾಡಿದ್ದಾರಂತೆ. ಒಂದು ರೀತಿಯ ಸೈಲೆಂಟ್‌ ಕಿಲ್ಲರ್‌ ಪಾತ್ರ ಎಂಬುದು ಅವರ ಹೇಳಿಕೆ. ಮಹೇಶ್‌ ಸಿದ್ದು, ಕಾಸ್ಟ್ಯೂಮ್ ಡಿಸೈನರ್‌ ರಂಜಿತಾ, ನಾರಾಯಣ್‌ ಸೇರಿದಂತೆ ಹಲವರು ಮಾತಾಡಿದರು. ಚಿತ್ರಕ್ಕೆ ರಮೇಶ್‌ ತಿರುಪತಿ ಕ್ಯಾಮೆರಾ ಹಿಡಿದರೆ, ಕುನ್ನಿ ಗುಡಿಪಾಟಿ ಸಂಗೀತವಿದೆ.

ಟಾಪ್ ನ್ಯೂಸ್

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.