ಇಂದಿನಿಂದ ಶಂಕರನ ಆಟ ಶುರು

ಜಬರ್‌ದಸ್ತ್ ಆ್ಯಕ್ಷನ್‌

Team Udayavani, Nov 8, 2019, 5:20 AM IST

cc-30

ಜಬರ್‌ದಸ್ತ್ ಶಂಕರ – ಹಲವು ದಿನಗಳಿಂದ ಕರಾವಳಿಯಲ್ಲಿ ಕೇಳಿಬರುತ್ತಿರುವ ಹೆಸರಿದು. ಆ ಹೆಸರಿನೊಳಗೇನಿದೆ ಎಂದು ನೋಡುವ ಸಮಯ ಈಗ ಬಂದಿದೆ! ಹೀಗೆಂದರೆ ನಿಮಗೆ ಆಶ್ಚರ್ಯವಾಗಬಹುದು. ನಾವು ಹೇಳುತ್ತಿರುವುದು “ಜಬರ್‌ದಸ್ತ್ ಶಂಕರ’ ಸಿನಿಮಾ ಬಗ್ಗೆ. ಈಗಾಗಲೇ ಹಾಡು, ಟ್ರೇಲರ್‌ ಮೂಲಕ ಪ್ರೇಕ್ಷಕರನ್ನು ರಂಜಿಸಿರುವ “ಜಬರ್‌ದಸ್ತ್ ಶಂಕರ’ ಚಿತ್ರ ಇಂದು (ನ.08) ತೆರೆಕಾಣುತ್ತಿದೆ. ದೇವದಾಸ್‌ ಕಾಪಿಕಾಡ್‌ ನಿರ್ದೇಶನದ ಈ ಚಿತ್ರದಲ್ಲಿ ಅರ್ಜುನ್‌ ಕಾಪಿಕಾಡ್‌ ನಾಯಕರಾಗಿದ್ದಾರೆ. ಈಗಾಗಲೇ ಹಲವು ತುಳು ಸಿನಿಮಾಗಳ ಮೂಲಕ ತುಳು ಚಿತ್ರರಂಗದಲ್ಲಿ ಗಟ್ಟಿ ನೆಲೆಕಂಡುಕೊಂಡಿರುವ ಅರ್ಜುನ್‌, ಈಗ “ಜಬರ್‌ದಸ್ತ್ ಶಂಕರ’ ಚಿತ್ರದ ಮೇಲೆ ದೊಡ್ಡ ನಿರೀಕ್ಷೆ ಇಟ್ಟಿದ್ದಾರೆ.

ತುಳು ಚಿತ್ರರಂಗದಲ್ಲಿ ಇತ್ತೀಚೆಗೆ ಬಂದ ಬಹುತೇಕ ಸಿನಿಮಾಗಳು ಕೇವಲ ಕಾಮಿಡಿ ಸುತ್ತವೇ ಸುತ್ತುವ ಮೂಲಕ ಪ್ರೇಕ್ಷಕರಿಗೆ ಏಕತಾನತೆ ಕಾಡಿದ್ದು ಸುಳ್ಳಲ್ಲ. ನೋಡಿದ ಕಾಮಿಡಿಯನ್ನೇ ಹೊಸ ರೀತಿಯಲ್ಲಿ ಎಷ್ಟು ದಿನ ನೋಡಲು ಸಾಧ್ಯ ಎಂಬ ಮಾತು ಕೂಡಾ ಕೇಳಿ ಬಂದಿತ್ತು. ಆದರೆ, “ಜಬರ್‌ದಸ್ತ್ ಶಂಕರ’ ಚಿತ್ರ ಆ ಅಪವಾದದಿಂದ ಮುಕ್ತವಾಗಿದೆ. ಇದು ಕೇವಲ ಕಾಮಿಡಿಗೆ ಸೀಮಿತವಾಗದೇ, ಆ್ಯಕ್ಷನ್‌ ಹಾಗೂ ಸೆಂಟಿಮೆಂಟ್‌ ಅಂಶಗಳಿಗೂ ಹೆಚ್ಚಿನ ಒತ್ತು ನೀಡಲಾಗಿದೆ. ಈ ಬಗ್ಗೆ ಮಾತನಾಡುವ ನಿರ್ದೇಶಕ ದೇವದಾಸ್‌ ಕಾಪಿಕಾಡ್‌, “ಇದು ಕೇವಲ ತುಳು ಸಿನಿಮಾ ಎಂಬ ತಲೆಯಲ್ಲಿಟ್ಟುಕೊಂಡು ಮಾಡಿಲ್ಲ. ದೊಡ್ಡ ಮಟ್ಟದಲ್ಲೇ ಚಿತ್ರೀಕರಣ ಮಾಡಲಾಗಿದೆ. ಮುಖ್ಯವಾಗಿ ಚಿತ್ರದಲ್ಲಿ ಐದು ಫೈಟ್‌ಗಳಿವೆ. ಜೊತೆಗೆ ಕಾಮಿಡಿ, ಸೆಂಟಿಮೆಂಟ್‌ ಇದೆ. ಸತ್ಯ-ಧರ್ಮ ಕುರಿತಾದ ವಿಷಯವೂ ಇದೆ. ಮೊದಲರ್ಧ ತುಂಬಾ ಜಾಲಿಯಾಗಿ ಸಾಗುವ ಸಿನಿಮಾ, ದ್ವಿತೀಯಾರ್ಧದಲ್ಲಿ ಹೊಸ ಟ್ವಿಸ್ಟ್‌ ತೆರೆದುಕೊಳ್ಳುತ್ತದೆ. ತುಳು ಸಿನಿಮಾಗಳು ಕಾಮಿಡಿಗೆ ಸೀಮಿತವಾಗುತ್ತವೆ ಎಂಬ ಅಪವಾದದಿಂದ ಈ ಸಿನಿಮಾ ಮುಕ್ತವಾಗಿದೆ’ ಎಂದು ತಮ್ಮ ಸಿನಿಮಾ ಬಗ್ಗೆ ಹೇಳುತ್ತಾರೆ. ನಾಯಕ ಅರ್ಜುನ್‌ ಕಾಪಿಕಾಡ್‌ ಕೇವಲ ನಟನೆಗಷ್ಟೇ ಅಂಟಿಕೊಳ್ಳದೇ, ಸಿನಿಮಾದ ಇತರ ವಿಭಾಗಗಳಲ್ಲೂ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ ಸಿನಿಮಾ ಪ್ರೀತಿ ಮೆರೆಯುತ್ತಿದ್ದಾರೆ ಎಂದು ಮಗನ ಬಗ್ಗೆ ಖುಷಿಯಿಂದ ಹೇಳುತ್ತಾರೆ ದೇವದಾಸ್‌. ಮನರಂಜನೆಯನ್ನು ಬಯಸಿ, ಚಿತ್ರಮಂದಿರಕ್ಕೆ ಬಂದ ಪ್ರೇಕ್ಷಕರಿಗೆ “ಜಬರ್‌ದಸ್ತ್ ಶಂಕರ’ ಯಾವ ಕಾರಣಕ್ಕೂ ಮೋಸ ಮಾಡೋದಿಲ್ಲ ಎಂಬ ಭರವಸೆಯನ್ನು ನೀಡಲು ದೇವದಾಸ್‌ ಮರೆಯುವುದಿಲ್ಲ. ಜಲನಿಧಿ ಫಿಲಂಸ್‌ ಲಾಂಛನ ದಲ್ಲಿ ತಯಾರಾದ ಅನಿಲ್‌ ಕುಮಾರ್‌, ಲೋಕೇಶ್‌ ಕೋಟ್ಯಾನ್‌, ರಾಜೇಶ್‌ ಕುಡ್ಲ ನಿರ್ಮಾಣದಲ್ಲಿ ಈ ಚಿತ್ರ ತಯಾರಾಗಿದೆ.

ಚಿತ್ರ ಕೇವಲ ಕರಾವಳಿಯಲ್ಲಷ್ಟೇ ಅಲ್ಲದೇ, ಮುಂಬೈ, ದುಬೈ, ಬೆಂಗಳೂರು, ಮೈಸೂರು, ಗೋವಾ, ಹುಬ್ಬಳ್ಳಿ, ಶಿವಮೊಗ್ಗ, ತೀರ್ಥಹಳ್ಳಿ , ಮಡಿಕೇರಿ ಮತ್ತು ದೆಹಲಿಯಲ್ಲಿ ತೆರೆಕಾಣಲಿದೆ. ತಾರಾಗಣದಲ್ಲಿ ಅರ್ಜುನ್‌ ಕಾಪಿಕಾಡ್‌, ನೀತಾ ಅಶೋಕ್‌, ರಾಶಿ ಬಿ. ಸಾಯಿ ಕೃಷ್ಣ, ಸತೀಶ್‌ ಬಂದಲೆ, ಗೋಪಿನಾಥ ಭಟ್‌ ನಟಿಸಿದ್ದಾರೆ. ಚಿತ್ರಕ್ಕೆ ಮಣಿಕಾಂತ್‌ ಕದ್ರಿ ಸಂಗೀತವಿದೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.