ಪ್ರಚಾರ ಶುರು!
Team Udayavani, Apr 6, 2018, 4:10 PM IST
ಚಿತ್ರರಂಗದಲ್ಲಿ ಆಗಾಗ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. “ಅಭಯ ಹಸ್ತ’ ಚಿತ್ರದಲ್ಲೂ ಅಂಥದ್ದೊಂದು ಪ್ರಯೋಗ ನಡೆದಿದೆ. ಈ ಚಿತ್ರದಲ್ಲೊಂದು ಐಟಂ ಸಾಂಗ್ ಇದೆ. ಅದರಲ್ಲೇನು ವಿಶೇಷ ಎಂಬ ಪ್ರಶ್ನೆ ಎದುರಾಗಬಹುದು. ಆ ಐಟಂ ಹಾಡಿಗೆ ಸಂಗೀತವಿದೆ. ಆದರೆ, ಸಾಹಿತ್ಯವಿಲ್ಲದೆಯೇ ಚಿತ್ರೀಕರಿಸಲಾಗಿದೆ. ಚಿತ್ರದ ಹಾಡೊಂದಕ್ಕೆ ಶಿವರಾಜಕುಮಾರ್ ದನಿಯಾಗಿದ್ದಾರೆ.
ಪುನೀತ್ ರಾಜ್ಕುಮಾರ್ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಹೀಗೆ ಇನ್ನೂ ಹಲವು ವಿಶೇಷತೆಗಳೊಂದಿಗೆ “ಅಭಯ ಹಸ್ತ’ ಚಿತ್ರ ಪ್ರಚಾರಕ್ಕೆ ಅಣಿಯಾಗಿದೆ. ಇತ್ತೀಚೆಗೆ ಚಿತ್ರತಂಡ ಆಡಿಯೋ ಸಿಡಿ ಬಿಡುಗಡೆ ಮಾಡಿಕೊಂಡಿದೆ. ಹಿರಿಯ ನಿರ್ದೇಶಕ ಭಗವಾನ್ ಹಾಡು ಬಿಡುಗಡೆ ಮಾಡಿದರು. ಹಿರಿಯ ಸಾಹಿತಿ ಡಾ.ದೊಡ್ಡೆರಂಗೇಗೌಡ, ಸಾಯಿಪ್ರಕಾಶ್ ಸೇರಿದಂತೆ ಇತರರು ಹಾಡುಗಳ ಬಿಡುಗಡೆ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿ ಚಿತ್ರ ತಂಡಕ್ಕೆ ಶುಭ ಕೋರಿದರು.
ನಿರ್ದೇಶಕ ಪಿ.ಬಿ. ನವೀನ್, “ಶಿಕ್ಷಣ ಕ್ಷೇತ್ರದಲ್ಲಿ ಆಗುತ್ತಿರುವ ಭ್ರಷ್ಟಾಚಾರ ಕುರಿತು ಇಲ್ಲಿ ಹೇಳಲಾಗಿದೆ. ಈಗಿನ ವ್ಯವಸ್ಥೆಗೆ ತಕ್ಕಂತೆ ಚಿತ್ರ ಮಾಡಿದ್ದೇನೆ. ಬೆಂಗಳೂರು ಸೇರಿದಂತೆ ಇತರೆಡೆ ಚಿತ್ರೀಕರಣ ನಡೆಸಲಾಗಿದೆ. ಚಿತ್ರದ ವಿಶೇಷವೆಂದರೆ, ಕಾಶಿನಾಥ್ ಅವರಿಲ್ಲಿ ಒಳ್ಳೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ವಿವರ ಕೊಟ್ಟರು.
ದೊಡ್ಡರಂಗೇಗೌಡ ಅವರಿಲ್ಲಿ ಗೀತೆಯೊಂದನ್ನು ಬರೆದಿದ್ದು, ಭಕ್ತಿಗೆ ದೇವರು, ಪ್ರಿಯತಮಗೆ ಪ್ರೀತಿ ಎಂಬ ಅಂಶಗಳ ಮೂಲಕ ಚಿತ್ರ ಮೂಡಿಬಂದಿದೆ ಎಂದರು ಅವರು. ನಟ ಅನಿರುದ್ಧ, ವಾಣಿಜ್ಯ ಮಂಡಳಿ ಉಪಾಧ್ಯಕ್ಷ ಉಮೇಶ್ಬಣಕಾರ್ ಚಿತ್ರತಂಡದ ಪ್ರಯತ್ನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ನಿರ್ಮಾಪಕ ಡಾ.ಪಿ.ಸತೀಶ್ಕುಮಾರ್ವೆುಹ್ತಾ, ಸಂಗೀತ ನಿರ್ದೇಶಕರಾದ ಕಾರ್ತಿಕ್ ವೆಂಕಟೇಶ್-ಪ್ರವೀಣ್ ತಮ್ಮ ಕೆಲಸದ ಬಗ್ಗೆ ಮಾತನಾಡಿದರು. ಕಲಾವಿದರಾದ ಶಿವರಂಜನ್, ಉಗ್ರಂ ಶಿವು, ಉಗ್ರಂ ರೆಡ್ಡಿ, ಸಂದೀಪ್ ಮಲಾನಿ, ಪಿ.ಬಿ. ರಂಜನ್, ಮಂಜು, ಮಂಡ್ಯ ಶ್ರೀಧರ್, ಪೂಜಾ, ಐಶ್ವರ್ಯ, ಖುಷಿ ಇವರೆಲ್ಲರೂ ಎರಡೆರೆಡು ಮಾತನಾಡುವ ಹೊತ್ತಿಗೆ ಹಾಡುಗಳ ಬಿಡಗಡೆ ಕಾರ್ಯಕ್ರಮಕ್ಕೆ ಅಂತ್ಯ ಹಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್
Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್ ನಿರ್ದೇಶನದ ಸಿನಿಮಾ
Ritanya Vijay; ದುನಿಯಾ ವಿಜಯ್ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ
DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್ನಲ್ಲಿ ಡೆವಿಲ್ ಬರೋದು ಪಕ್ಕಾ: ದರ್ಶನ್
Kannada Cinema; ರಿಲೀಸ್ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್ಗೆ ಯಶ ನಾಯಕಿ
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ