ಗಲ್ಲಿ ಮಾತು! ಹುಲಿರಾಯ ಬರ್ತಾನೆ ಜಾಗ ಬಿಡಿ


Team Udayavani, Oct 13, 2017, 6:40 AM IST

GALLI.jpg

“ನಾನು ಲೈಫ‌ಲ್ಲಿ ಸೋಲುಂಡು ನೋವಲ್ಲಿದ್ದಾಗ, ನಿರ್ಮಾಪಕ ಎಂ.ಎನ್‌.ಕುಮಾರ್‌ ನನ್ನ ಕೈ ಹಿಡಿದರು. “ನಾನಿದ್ದೇನೆ’ ಅಂದ್ರು, ಹೇಳಿದಂತೆ ನಡೆದುಕೊಂಡರು. ಅವರಿಗೆ ನಾನು ಋಣಿಯಾಗಿರಿ¤àನಿ…’

– ಹೀಗೆ ಹೇಳುವ ಮೂಲಕ ಮುಂದೊಂದು ದಿನ ನಾನು ಗೆದ್ದೇ ಗೆಲ್ತಿàನಿ ಅಂತ ವಿಶ್ವಾಸದಿಂದ ಹೇಳಿಕೊಂಡರು ನೀನಾಸಂ ಸತೀಶ್‌.

ಅವರು ಹೇಳಿದ್ದು, “ಟೈಗರ್‌ ಗಲ್ಲಿ’ ಬಗ್ಗೆ. ಅ.27 ರಂದು ಚಿತ್ರ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಈ ಸಿನಿಮಾ ಬಗ್ಗೆ ಮಾಹಿತಿ ಕೊಡಲೆಂದೇ ನಿರ್ದೇಶಕ ರವಿಶ್ರೀವತ್ಸ, ತಮ್ಮ ತಂಡದೊಂದಿಗೆ ಮಾಧ್ಯಮದೆದುರು ಕುಳಿತಿದ್ದರು. ನೀನಾಸಂ ಮೈಕ್‌ ಹಿಡಿದು ಮಾತಿಗಿಳಿದರು. “ನನ್ನ ಲೈಫ‌ಲ್ಲಿ “ಟೈಗರ್‌ ಗಲ್ಲಿ’ ತುಂಬಾ ಮುಖ್ಯವಾದ ಚಿತ್ರ. ಯಾಕೆಂದರೆ, “ರಾಕೆಟ್‌’ ಸೋತು ನೆಲಕಚ್ಚಿದ ವೇಳೆ ನಾನು ನೋವಲ್ಲಿದ್ದೆ. ಆಗ, ನಿರ್ಮಾಪಕರು ಈ ಚಿತ್ರ ಕೊಟ್ಟರು. ಹಾಗಾಗಿ ನಾನು ಎಷ್ಟೇ ಎತ್ತರಕ್ಕೆ ಬೆಳೆದರೂ ಹೀಗೇ ಇರಿ¤àನಿ. ನೋವಲ್ಲಿ ಸ್ಪಂದಿಸಿದವರನ್ನು ಎಂದಿಗೂ ಮರೆಯೋದಿಲ್ಲ. ಈ ಚಿತ್ರ ಮಾಡೋಕೆ ಕಾರಣ ಕಥೆ ಮತ್ತು ಪಾತ್ರ. ಎಲ್ಲದ್ದಕ್ಕೂ ಹೆಚ್ಚಾಗಿ ನಿರ್ದೇಶಕರು ನನಗೆ ಮೊದಲ ಚಿತ್ರದಲ್ಲಿ ನಟಿಸಲು ಅವಕಾಶ ಕೊಟ್ಟಿದ್ದು. ಕಥೆ ಹೇಳಿದಾಗ, ಆ ಪಾತ್ರ ಮಾಡೋಕ್ಕಾಗುತ್ತಾ ಎಂಬ ಪ್ರಶ್ನೆ ಎದುರಾಯ್ತು. ಆದರೂ ನಿರ್ದೇಶಕರು ಕೊಟ್ಟ ಪ್ರೋತ್ಸಾಹ, ಧೈರ್ಯದಿಂದ ಒಳ್ಳೇ ಚಿತ್ರದಲ್ಲಿ ಕೆಲಸ ಮಾಡಲು ಸಾಧ್ಯವಾಗಿದೆ. ನನಗೆ “ರಾಕೆಟ್‌’ನಲ್ಲಾಗಿದ್ದ ಸೋಲು, ನೋವು, ಅವಮಾನಗಳನ್ನೆಲ್ಲಾ ಈ ಚಿತ್ರದ ಮೂಲಕ ತೀರಿಸಿಕೊಳ್ಳುವ ನಂಬಿಕೆ ಇದೆ. ಇಲ್ಲಿ ಜ್ವರ ಇದ್ದರೂ ಎನರ್ಜಿ ಇಟ್ಟುಕೊಂಡು ಕೆಲಸ ಮಾಡಿದೆ. ಅದಕ್ಕೆ ಕಾರಣ, ಜತೆಯಲ್ಲಿದ್ದ ತಂಡ. ಇಲ್ಲಿ ಎಲ್ಲಾ ವರ್ಗಕ್ಕೂ ಇಷ್ಟವಾಗುವ ಅಂಶಗಳಿವೆ. ಭ್ರಷ್ಟಾಚಾರ ಸೇರಿದಂತೆ ಈಗಿನ ವಾಸ್ತವಾಂಶ ಚಿತ್ರದ ಹೈಲೈಟ್‌’ ಅಂದರು ಸತೀಶ್‌.

ನಿರ್ದೇಶಕ ರವಿ ಶ್ರೀವತ್ಸ ಅವರಿಗೆ, ನಿರ್ಮಾಪಕರು ಕೊಟ್ಟ ಸಾಥ್‌ನಿಂದಾಗಿಯೇ “ಟೈಗರ್‌ ಗಲ್ಲಿ’ ಆಗಲು ಕಾರಣವಂತೆ. “ಟೈಗರ್‌ ಗಲ್ಲಿ’ ಎಲ್ಲೋ ಒಂದು ಕಡೆ ಬೇರೆಯ ಮಜಾ ಕೊಟ್ಟ ಸಿನಿಮಾ. ಇದು ಬೇರೆ ರೀತಿಯಲ್ಲೇ ನೋಡುಗರನ್ನು ಕರೆದುಕೊಂಡು ಹೋಗುತ್ತೆ ಎಂಬ ಗ್ಯಾರಂಟಿ ಕೊಡ್ತೀನಿ. ಇದುವರೆಗೆ ನಾನು ಮಾಡಿದ ಚಿತ್ರಗಳು ಒನ್‌ಸೈಡೆಡ್‌ ಎಂಬ ಹಣೆಪಟ್ಟಿ ಪಡೆದಿದ್ದವು. ಆದರೆ, ಇದು ಹೊಸತನದ ಮನರಂಜನೆ ಕೊಡಲಿದೆ. ಇಲ್ಲಿ ಶಿವಮಣಿ, ಅಯ್ಯಪ್ಪ, ಗಿರಿರಾಜ್‌ರಂತಹ ತಂತ್ರಜ್ಞರ ಸಹಕಾರ ಮತ್ತು ಪ್ರೋತ್ಸಾಹ ಸಿಕ್ಕಿದ್ದರಿಂದ ಚಿತ್ರ ನನ್ನ ನಿರೀಕ್ಷೆ ಮೀರಿ ಮೂಡಿಬಂದಿದೆ.

ನನ್ನ ಗುರು ಕೆ.ವಿ. ರಾಜು ಅವರ ಸಲಹೆ ಮತ್ತು ಕೆಲ ಬದಲಾವಣೆಗಳು ಚಿತ್ರದ ವೇಗಕ್ಕೆ ಕಾರಣವಾಗಿವೆ. ಇಲ್ಲಿ ಪ್ರತಿಯೊಂದು ಪಾತ್ರಕ್ಕೂ ಆದ್ಯತೆ ಇದೆ. ಎಲ್ಲವೂ ಅಬ್ಬರಿಸಿ, ಬೊಬ್ಬರಿಸುತ್ತವೆ. ಸತೀಶ್‌ ಒಳ್ಳೆಯ ನಟ, ಅವರಿಗೆ ಇಲ್ಲಿ ಬೇರೆಯದ್ದೇ ಇಮೇಜ್‌ ಸಿಗಲಿದೆ. ಉಳಿದಂತೆ ಭಾವನಾ ರಾವ್‌, ರೋಷಣಿ, ಪೂಜಾ ಲೋಕೇಶ್‌, ಲಕ್ಷ್ಮೀದೇವಿ, ಯಮುನಾ ಶ್ರೀನಿಧಿ ಹಾಗು ನಿರ್ಮಾಪಕ ಯೋಗಿ ಇತರರ ಪಾತ್ರಗಳು ಕೂಡ ಗಮನಸೆಳೆಯುತ್ತವೆ. ಒಂದಂತೂ ನಿಜ, ಈ ಚಿತ್ರ ನೋಡಿದವರಿಗೆ, ನಾನು ಇರಬೇಕಿತ್ತು ಅನಿಸೋದಂತೂ ಗ್ಯಾರಂಟಿ’ ಅಂದರು ರವಿ ಶ್ರೀವತ್ಸ.

ಶಿವಮಣಿ ಅವರಿಗೆ ಇಲ್ಲೊಂದು ವಿಶೇಷ ಪಾತ್ರ ಸಿಕ್ಕಿದೆಯಂತೆ. ಇನ್ನು ಮುಂದೆ ಅವರು ನಿರ್ದೇಶನದ ಜತೆಗೆ ನಟನೆ ಮುಂದುವರೆಸಿಕೊಂಡು ಹೋಗುತ್ತಾರಂತೆ. “ಜಟ್ಟ’ ಗಿರಿರಾಜ್‌ ಅವರಿಗಿಲ್ಲಿ ಹೊಸ ಬಗೆಯ ಪಾತ್ರ ಸಿಕ್ಕಿದೆಯಂತೆ.

ಕಮರ್ಷಿಯಲ್‌ ಚಿತ್ರದಲ್ಲಿ ಕೆಲಸ ಮಾಡಿದ ಖುಷಿ ಅವರದು. ಅಯ್ಯಪ್ಪ ಅವರಿಗೆ ಈ ಚಿತ್ರದ ಕಥೆಯಲ್ಲಿರುವ ಕಮರ್ಷಿಯಲ್‌ ಅಂಶ ನೋಡಿ ಎಷ್ಟೊಂದು ಎನರ್ಜಿ ಇರುವಂತಹ ಸಬೆjಕ್ಟ್ ಅನ್ನು ಮಿಸ್‌ ಮಾಡಿಕೊಳ್ಳಬಾರದು ಅಂತ ಅವರೊಂದು ಪಾತ್ರ ಮಾಡಿದ್ದಾರಂತೆ. ಉಳಿದಂತೆ ಪೂಜಾ ಇಲ್ಲಿ ಜಡ್ಜ್ ಆಗಿ ಕಾಣಿಸಿಕೊಂಡರೆ, ಭಾವನಾರಾವ್‌ ಇಲ್ಲಿ ಬೋಲ್ಡ್‌ ಹುಡುಗಿಯ ಪಾತ್ರ ಮಾಡಿದ್ದಾರೆ, ಮೈಸೂರಿನ ಹೊಸ ಹುಡುಗಿ ಪೊಲೀಸ್‌ ಅಧಿಕಾರಿಯಾಗಿ ನಟಿಸಿದ್ದಾರಂತೆ. ಸಾಯಿಕೃಷ್ಣ ಅವರಿಗೆ ನಿರ್ದೇಶಕರು ವಿಲನ್‌ ಪಾತ್ರ ಕೊಟ್ಟಿದ್ದಾರಂತೆ. ಈ ಚಿತ್ರವನ್ನು ಜಾಕ್‌ ಮಂಜು ಅವರು ವಿತರಣೆ ಮಾಡುತ್ತಿದ್ದಾರೆ. ಸುಮಾರು 150ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ತೆರೆಗೆ ತರುವ ಯೋಚನೆ ಅವರದು.

– ವಿಜಯ್‌ ಭರಮಸಾಗರ

ಟಾಪ್ ನ್ಯೂಸ್

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.