ರಗಡ್‌ ಲುಕ್‌ನಲ್ಲಿ ಸುದ್ದಿಯಾದ ಸುದೀಪ್‌ 


Team Udayavani, Dec 21, 2018, 6:00 AM IST

69.jpg

ಸುದೀಪ್‌ ನಾಯಕರಾಗಿರುವ, ಬಹುನಿರೀಕ್ಷಿತ “ಪೈಲ್ವಾನ್‌’ ಚಿತ್ರದ ಒಂದೊಂದೇ ಸ್ಟಿಲ್‌ಗ‌ಳು ಬಿಡುಗಡೆಯಾಗುತ್ತಿದೆ. ಈ ಮೂಲಕ ಚಿತ್ರತಂಡ ಅಭಿಮಾನಿಗಳ ಕುತೂಹಲ ತಣಿಸುವ ಪ್ರಯತ್ನ ಮಾಡುತ್ತಿದೆ. ಈಗಾಗಲೇ ಸುದೀಪ್‌ ಅವರ ಬಾಡಿ ಬಿಲ್ಡ್‌ ಮಾಡಿರುವ ಫೋಟೋ ಬಿಟ್ಟಿತ್ತು. ಇದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಈಗ ಸುದೀಪ್‌ “ಪೈಲ್ವಾನ್‌’ ಚಿತ್ರದ ಮತ್ತೂಂದು ಗೆಟಪ್‌ ಬಿಟ್ಟಿದೆ. ಅದು ಸುದೀಪ್‌ ಕುಸ್ತಿ ಅಖಾಡದಲ್ಲಿ ತೊಡೆ ತಟ್ಟಿ ನಿಂತಿರುವ ಫೋಟೋ. ಇದು ಸಿನಿಮಾದ ಬಗೆಗಿನ ಕುತೂಹಲವನ್ನು ಹೆಚ್ಚಿಸಿದೆ. ಈ ಹಿಂದೆ “ಹೆಬ್ಬುಲಿ’ ಚಿತ್ರವನ್ನು ನಿರ್ದೇಶಿಸಿದ್ದ ಕೃಷ್ಣ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಬಾರಿ ನಿರ್ದೇಶನದ ಜೊತೆಗೆ ನಿರ್ಮಾಣ ಕೂಡಾ ಅವರದ್ದೇ. 

“ಪೈಲ್ವಾನ್‌’ ಚಿತ್ರ ಹಲವು ವಿಶೇಷತೆಗಳಿಗೆ ಕಾರಣವಾಗಿದೆ. ಮೊದಲನೇಯದಾಗಿ ಸುದೀಪ್‌ ತಮ್ಮ ಇಷ್ಟು ವರ್ಷದ ಕೆರಿಯರ್‌ನಲ್ಲಿ ಮೊದಲ ಬಾರಿಗೆ ಬರೀ ಮೈಯಲ್ಲಿ ಕಾಣಿಸಿಕೊಂಡಿದ್ದು ಒಂದಾದರೆ, ಈ ಚಿತ್ರಕ್ಕಾಗಿ ಜಿಮ್‌ಗೆ ಹೋಗಿ ಬಾಡಿ ಬಿಲ್ಡ್‌ ಮಾಡಿದ್ದು. ನೀವು ಗಮನಿಸಿದಂತೆ ಸುದೀಪ್‌ ಯಾವ ಚಿತ್ರದಲ್ಲಿ ಅಂಗಿಬಿಚ್ಚಿ ಬರೀ ಮೈಯಲ್ಲಿ ಕಾಣಿಸಿಕೊಂಡಿಲ್ಲ. ಆದರೆ, “ಪೈಲ್ವಾನ್‌’ ಕಥೆ ಇಷ್ಟಪಟ್ಟ ಅವರು ಕುಸ್ತಿ ಅಖಾಡಕ್ಕಿಳಿಯಲು ನಿರ್ಧರಿಸಿ ಜಿಮ್‌ ಬಾಗಿಲು ಕೂಡಾ ಬಡಿದಿದ್ದಾರೆ. ಈ ಚಿತ್ರದ ಮತ್ತೂಂದು ವಿಶೇಷವೆಂದರೆ ಬಾಲಿವುಡ್‌ ನಟ ಸುನೀಲ್‌ ಶೆಟ್ಟಿ ಈ ಚಿತ್ರದ ಮೂಲಕ ಕನ್ನಡಕ್ಕೆ ಎಂಟ್ರಿಕೊಡುತ್ತಿದ್ದಾರೆ. ಇನ್ನು, “ಪೈಲ್ವಾನ್‌’ ಚಿತ್ರ ಹಲವು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಕನ್ನಡದ ಜೊತೆಗೆ ತಮಿಳು, ತೆಲುಗು, ಮಲಯಾಳಂ, ಮರಾಠಿ, ಭೋಜ್‌ಪುರಿ ಹಾಗೂ ಬೆಂಗಾಳಿಯಲ್ಲಿ ಬಿಡುಗಡೆಯಾಗಲಿದೆ. ಇದರ ಜೊತೆಗೆ ಹಿಂದಿ ಸೇರಿದಂತೆ ಇನ್ನಿತರ ಭಾಷೆಗಳಿಗೆ ಡಬ್‌ ಆಗಲಿದೆ ಎಂದು ಮಾಹಿತಿ ನೀಡುತ್ತಾರೆ ನಿರ್ದೇಶಕ ಕೃಷ್ಣ. ಈ ಚಿತ್ರಕ್ಕಾಗಿ 20 ಕ್ಕೂ ಹೆಚ್ಚು ಸೆಟ್‌ಗಳನ್ನು ಹಾಕಲಾಗಿದ್ದು, ಅಭಿಮಾನಿಗಳಿಗೆ ಖುಷಿ ನೀಡುವಂತಿದೆಯಂತೆ. 

ಅಂದಹಾಗೆ, ಇದು ಅದ್ಧೂರಿ ಬಜೆಟ್‌ನ ಚಿತ್ರವಾಗಿದ್ದು, 45 ಕೋಟಿಗೂ ಅಧಿಕ ಬಜೆಟ್‌ನಲ್ಲಿ ನಿರ್ಮಾಣವಾಗುತ್ತಿದೆಯಂತೆ. ಚಿತ್ರದ ಕಥೆ ಡಿಮ್ಯಾಂಡ್‌ ಮಾಡಿದ್ದರಿಂದ ಅಷ್ಟೊಂದು ಬಜೆಟ್‌ ನೀಡಬೇಕಾಯಿತು ಎನ್ನುವುದು ನಿರ್ದೇಶಕ-ನಿರ್ಮಾಪಕ ಕೃಷ್ಣ ಅವರ ಮಾತು. ಸುದೀಪ್‌ ಕೂಡಾ ಈ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟಿದ್ದು, ಚಿತ್ರ ಕೊಟ್ಟ ಅನುಭವದ ಬಗ್ಗೆ ಟ್ವಿಟರ್‌ನಲ್ಲಿ ಪತ್ರವೊಂದನ್ನು ಬರೆದುಕೊಂಡಿದ್ದರು. ಸುದೀಪ್‌ ಅವರ ವೃತ್ತಿ ಜೀವನದಲ್ಲೇ “ಪೈಲ್ವಾನ್‌’ ಒಂದು ವಿಶಿಷ್ಟ ಅನುಭವ ಕೊಟ್ಟ ಸಿನಿಮಾವಂತೆ. ಅದೇನೇ ಆದರೂ ಅಭಿಮಾನಿಗಳು “ಪೈಲ್ವಾನ್‌’ ಗೆಟಪ್‌ಗೆ ಫಿದಾ ಆಗಿರೋದು ನಿಜ. 

ಟಾಪ್ ನ್ಯೂಸ್

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.