ಆತ್ಮಹತ್ಯೆ ಮಹಾ ಪಾಪ


Team Udayavani, Sep 21, 2018, 6:00 AM IST

z-25.jpg

ಪರೀಕ್ಷೆ ಬರೆದು “ಫ‌ಲಿತಾಂಶ’ ಬಂದ ಬಳಿಕ ಅದೆಷ್ಟೋ ವಿದ್ಯಾರ್ಥಿಗಳು ಫೇಲ್‌ ಆದಾಗ ಅಥವಾ ಅಂಕಗಳು ಕಡಿಮೆ ಬಂದಾಗ ಪೋಷಕರು ಏನನ್ನುತ್ತಾರೋ, ಬೇರೆಯವರು ಹೇಗೆ ಕಾಣುತ್ತಾರೋ ಎಂಬ ಆತಂಕದಿಂದ ಆತ್ಮಹತ್ಯೆ ಮಾಡಿಕೊಂಡ ಉದಾಹರಣೆಗಳು ಸಾಕಷ್ಟಿವೆ. ಹಾಗೆ ಆತಂಕ ಪಟ್ಟು, ಬದುಕನ್ನೇ ಹಾಳು ಮಾಡಿಕೊಳ್ಳುವ ಮುನ್ನ, ಯೋಚಿಸಿ ಧೈರ್ಯದಿಂದ ಎಲ್ಲವನ್ನೂ ಮೆಟ್ಟಿನಿಲ್ಲಬೇಕು. ಯಾವುದೇ ಕಾರಣಕ್ಕೂ “ಆತ್ಮಹತ್ಯೆ ಬೇಡ’ ಎಂಬ ಸಂದೇಶ ಸಾರುವ ಕಿರುಚಿತ್ರವೊಂದು ಮೂಡಿಬಂದಿದೆ. ಆ ಕಿರುಚಿತ್ರದ ಹೆಸರು “ಫ‌ಲಿತಾಂಶ’. ರವಿ ಸಾಸನೂರ್‌ ಕಥೆ ಬರೆದು ಈ ಕಿರುಚಿತ್ರ ನಿರ್ದೇಶಿಸಿದ್ದಾರೆ. ಇದಕ್ಕೂ ಮುನ್ನ ನಿರ್ದೇಶಕರು ಕಿರುತೆರೆ ಮತ್ತು ಸಿನಿಮಾಗಳಲ್ಲಿ ಬರಹಗಾರರಾಗಿ ಕೆಲಸ ಮಾಡಿದ್ದಾರೆ. ಎಸ್‌.ಜಿ.ಆರ್‌. ಕ್ರಿಯೇಷನ್ಸ್‌ ಬ್ಯಾನರ್‌ನಲ್ಲಿ ತಯಾರಾಗಿರುವ “ಫ‌ಲಿತಾಂಶ’ ಕಿರುಚಿತ್ರದ ಸಣ್ಣ ಟ್ರೇಲರ್‌ ಬಿಡುಗಡೆ ಮಾಡಲಾಯಿತು.

ಈ ವೇಳೆ ಮಾತನಾಡಿದ ನಿರ್ದೇಶಕ ರವಿ ಸಾಸನೂರ್‌, “ಪ್ರತಿ ವರ್ಷ ಶಾಲೆ ವಿದ್ಯಾರ್ಥಿಗಳ ಫ‌ಲಿತಾಂಶ ಬಂದಾಗ, ಫೇಲ್‌ ಆದವರು, ಅಂಕ ಕಡಿಮೆ ಬಂದ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅಂತಹ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೆ ಆ ಹಾದಿ ಹಿಡಿಯಬಾರದು. ಮನಸ್ಸು ಬದಲಿಸಿ, ಛಲದಿಂದ ಚೆನ್ನಾಗಿ ಓದಿದರೆ, ಎಲ್ಲವನ್ನೂ ಗೆಲ್ಲಬಹುದು ಎಂಬ ಅಂಶದೊಂದಿಗೆ ಈ “ಫ‌ಲಿತಾಂಶ’ ಕಿರುಚಿತ್ರ ನಿರ್ದೇಶಿಸಿದ್ದಾಗಿ’ ಹೇಳುತ್ತಾರೆ ರವಿ ಸಾಸನೂರ್‌.

“ಈ ಕಿರುಚಿತ್ರ ಮಾಡುವ ಮುನ್ನ, ರಾಜ್ಯದ ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಿಗೆ ಭೇಟಿ ಕೊಟ್ಟು, ಕೆಲ ಶಾಲೆ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ, ಅವರ ಅನಿಸಿಕೆಗಳನ್ನು ಪಡೆದು ಕಿರುಚಿತ್ರ ಮಾಡಲಾಗಿದೆ. ಸುಮಾರು 5 ಸಾವಿರ ವಿದ್ಯಾರ್ಥಿಗಳು ಪತ್ರಗಳ ಮೂಲಕ ತಮ್ಮೊಳಗಿನ ಅನಿಸಿಕೆ ವ್ಯಕ್ತಪಡಿಸಿದ್ದಾರೆ. ಇದು ಕೇವಲ ಕಿರುಚಿತ್ರವಾಗದೆ, ಈ ಮೂಲಕ ಒಂದು ಸ್ಟ್ರಾಂಗ್‌ ಮೆಸೇಜ್‌ ತಲುಪಬೇಕೆಂಬ ಕಾರಣಕ್ಕೆ ನನ್ನ ತಂಡದೊಂದಿಗೆ ಚರ್ಚಿಸಿ, ಕಿರುಚಿತ್ರವನ್ನು ಶಾಲೆ ಪರಿಕ್ಷಾ ಮಂಡಳಿ ಮೂಲಕ ವಿದ್ಯಾರ್ಥಿಗಳಿಗೆ ತಲುಪಿಸುವ ಪ್ರಯತ್ನ ಮಾಡುವುದಾಗಿ’ ಹೇಳಿಕೊಂಡರು ನಿರ್ದೇಶಕರು.

ಸಂತೋಷ್‌ರಾಜ್‌ ಝಾವರೆ ಈ ಕಿರುಚಿತ್ರದ ಬೆನ್ನೆಲುಬು. ಅವರು ಇಲ್ಲಿ ಒಂದು ಪಾತ್ರ ಮಾಡುವುದರ ಜೊತೆಗೆ ನಿರ್ಮಾಣಕ್ಕೆ ಸಾಥ್‌ ನೀಡಿದ್ದಾರೆ. ಇನ್ನು, ಲಕ್ಷ್ಮೀ ಸಿದ್ದಯ್ಯ, ಲತಾ, ಆಕಾಶ್‌ ಸೇರಿದಂತೆ ಇತರರು ಚಿತ್ರದಲ್ಲಿ ನಟಿಸಿದ್ದಾರೆ. ಕಿರುಚಿತ್ರಕ್ಕೆ ದೀಪು ಹೊನ್ನಾಳಿ ಅವರ ಛಾಯಾಗ್ರಹಣವಿದೆ. ರಘು ಸಂಗೀತವಿದೆ. ಶಿವಕುಮಾರ್‌ ಸಂಕಲನ ಮಾಡಿದ್ದಾರೆ. ಶೈಲಜಾ ಮಂಜುನಾಥ, ಸಂತೋಷ್‌ ಝಾವರೆ ನಿರ್ಮಾಣವಿದೆ. ಹೇಮಂತ್‌, ಸಂತೋಷ್‌ ಜಯಣ್ಣ ಇತರರು “ಫ‌ಲಿತಾಂಶ’ಕ್ಕೆ ಶುಭಹಾರೈಸಿದ್ದಾರೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.