ಸಾಮಾಜಿಕ ಕಳಕಳಿಯ ಚಿತ್ರ


Team Udayavani, Dec 21, 2018, 6:00 AM IST

70.jpg

ಚಿತ್ರರಂಗಕ್ಕೆ ಈಗಾಗಲೇ ಎಲ್ಲಾ ಕ್ಷೇತ್ರಗಳಿಂದಲೂ ಆಗಮಿಸಿದ ವರ್ಗವಿದೆ. ಆ ಸಾಲಿಗೆ ಪ್ರೊಫೆಸರ್‌ವೊಬ್ಬರ ಹೊಸ ಆಗಮನವಾಗಿದೆ. ಅವರ ಹೆಸರು ಡಾ.ದೇವರಾಜ್‌. ಇದೇ ಮೊದಲ ಸಲ ಕಥೆ, ಚಿತ್ರಕಥೆ, ಸಾಹಿತ್ಯ, ಸಂಗೀತ ಮಾಡುವುದರ ಜೊತೆಗೆ ನಿರ್ದೇಶಕರೂ ಆಗಿದ್ದಾರೆ. ಚೊಚ್ಚಲ ನಿರ್ದೇಶನದ ಚಿತ್ರಕ್ಕೆ “ಸಪ್ಲಿಮೆಂಟರಿ’ ಎಂದು ಹೆಸರಿಡಲಾಗಿದೆ. ಈಗಾಗಲೇ ಸದ್ದಿಲ್ಲದೆ ಚಿತ್ರ ಮುಗಿಸಿರುವ ನಿರ್ದೇಶಕರು, ಇತ್ತೀಚೆಗೆ ಟೀಸರ್‌ ತೋರಿಸುವುದರ ಜೊತೆಗೆ ಹಾಡುಗಳನ್ನು ಬಿಡುಗಡೆ ಮಾಡಿದರು. ಅಂದು ಹಿರಿಯ ನಿರ್ದೇಶಕ ಭಗವಾನ್‌ ಆಡಿಯೋ ಸಿಡಿ ಬಿಡುಗಡೆ ಮಾಡಿ ಶುಭಹಾರೈಸಿದರು. ಕಿರುತೆರೆ ನಟರಾದ ವಿಜಯ್‌ ಸೂರ್ಯ, ಚಂದುಗೌಡ ಸಾಕ್ಷಿಯಾದರು.

ಮೊದಲು ಮಾತಿಗಿಳಿದ ನಿರ್ದೇಶಕರು, “ವ್ಯಕ್ತಿ ತನ್ನ ಬದುಕಿನಲ್ಲಿ ಫೇಲ್‌ ಆಗಿಬಿಟ್ಟರೆ, ಅವನಿಗೆ ಮತ್ತೂಂದು ಅವಕಾಶ ಇದ್ದೇ ಇರುತ್ತೆ. ಅದೇ “ಸಪ್ಲಿಮೆಂಟರಿ’. ಅಲ್ಲಿ ತನ್ನ ಬದುಕಿನ ಏರಿಳಿತ, ನೋವು-ನಲಿವು, ಕಷ್ಟ,ನಷ್ಟಗಳನ್ನೆಲ್ಲಾ ಸರಿಯಾಗಿಸುವ ಅವಕಾಶ ಇರುತ್ತೆ. ಪ್ರತಿಯೊಬ್ಬರ ಲೈಫ‌ಲ್ಲೂ ಸಪ್ಲಿಮೆಂಟರಿ ಎಂಬುದಿರುತ್ತೆ. ಆ ನಂತರ ಸರಿಯಾಗಿ ಆಲೋಚನೆ ಮಾಡಿದರೆ ಮಾತ್ರ ಅಲ್ಲಿ ಪಾಸ್‌ ಆಗಲು ಸಾಧ್ಯವಿದೆ. ಇಲ್ಲಿ ಗುರು ಮತ್ತು ಶಿಷ್ಯನ ಸಂಬಂಧ ಇಟ್ಟುಕೊಂಡು ಕಥೆ ಹೆಣೆದಿದ್ದೇನೆ. ಇದು ಈಗಿನ ಯುವಕರಿಗೆ ಹೇಳಿಮಾಡಿಸಿದ ಕಥೆ. ಈಗಿನ ವಾಟ್ಸಾಪ್‌, ಫೇಸ್‌ಬುಕ್‌ನಲ್ಲೇ ಕಾಲ ಕಳೆಯುವ ಯುವ ಸಮೂಹಕ್ಕೊಂದು ಸಂದೇಶವಿದೆ. ಹಾಗಂತ ನೀತಿ ಪಾಠವಿಲ್ಲ. ಮನರಂಜನೆ ಜೊತೆಗೊಂದು ಸಂದೇಶವಿದೆ. ಚಿತ್ರದಲ್ಲಿ ಆರು ಹಾಡುಗಳಿವೆ. ಆ ಪೈಕಿ ನಾಲ್ಕು ಹಾಡುಗಳಿಗೆ ನಾನು ಸಂಗೀತ ನೀಡಿದ್ದೇನೆ. ನಿರ್ಮಾಪಕ ಮಹೇಂದ್ರ ಮುನ್ನೋತ್‌ ಅವರ ಸಹಕಾರ ಇರದೇ ಇದ್ದರೆ, ಈ ಚಿತ್ರ ಇಲ್ಲಿಯವರೆಗೆ ಬರುತ್ತಿರಲಿಲ್ಲ’ ಎಂದು ಹೇಳಿಕೊಂಡರು ದೇವರಾಜ್‌.

ನಿರ್ಮಾಪಕ ಮಹೇಂದ್ರ ಮುನ್ನೋತ್‌ ಅವರಿಗೆ ಒಳ್ಳೆಯ ತಂಡದ ಜೊತೆ ಕೆಲಸ ಮಾಡಿದ ತೃಪ್ತಿ ಇದೆಯಂತೆ. “ಸಿನಿಮಾ ಮನರಂಜನೆ ಕ್ಷೇತ್ರ. ಇದು ಅದರೊಂದಿಗೆ ಸಾಗುವ ಚಿತ್ರವಾದರೂ, ಇಲ್ಲೊಂದು ಪವರ್‌ಫ‌ುಲ್‌ ಆಗಿರುವ ಸಂದೇಶವಿದೆ. ಸಾಮಾಜಿಕ ಕಳಕಳಿ ಇಟ್ಟುಕೊಂಡು ಮಾಡಿರುವ ಚಿತ್ರವಿದು. ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಧೈರ್ಯ ತುಂಬುವಂತಹ ಅನೇಕ ಅಂಶಗಳು ಇಲ್ಲಿವೆ. ಜೊತೆಗೆ ಪೋಷಕರಿಗೂ ಅರ್ಥವಾಗಿಸುವ ಕಥೆ ಇಲ್ಲಿದೆ. ನನ್ನ ಚಿತ್ರರಂಗದ ಜೀವನದ ಸಪ್ಲಿಮೆಂಟರಿ ಇದು’ ಎಂಬುದು ಮಹೇಂದ್ರ ಮುನ್ನೋತ್‌ ಮಾತು.

ನಾಯಕ ಖುಷ್‌ ಅವರಿಗೆ ಇದು ಮೊದಲ ಚಿತ್ರ. ಅವರಿಗಿಲ್ಲಿ ಸಾಕಷ್ಟು ಅಂಶಗಳನ್ನು ತಿಳಿದುಕೊಳ್ಳಲು ಸಾಧ್ಯವಾಗಿದೆಯಂತೆ. “ಸಪ್ಲಿಮೆಂಟರಿ’ ಅಂದರೆ ಎಕ್ಸಾಂ ಕುರಿತು ಅಲ್ಲ. ಬದುಕಿನ ಸಪ್ಲಿಮೆಂಟರಿ ವಿಷಯವೂ ಇಲ್ಲಿದೆ. ಎಕ್ಸಾಂ ಫೇಲ್‌ ಆದವರು, ಲವ್ವಲ್ಲಿ ಫೇಲ್‌ ಆದವರು, ಬಿಜಿನೆಸ್‌ನಲ್ಲಿ ಫೇಲ್‌ ಆದವರು ಸೇರಿದಂತೆ ಬದುಕಿನ ಅನೇಕ ಘಟ್ಟಗಳಲ್ಲಿ ಫೇಲ್‌ ಆದವರ ಕುರಿತ ವಿಷಯವೂ ಇಲ್ಲಿದೆ’ ಎಂದರು ಅವರು.

ನಾಯಕಿ ಶ್ರದ್ಧಾಭಟ್‌ ಅವರಿಗೆ ಇದು ಎರಡನೇ ಚಿತ್ರವಂತೆ. ಅವರಿಗಿಲ್ಲಿ ಎರಡು ಶೇಡ್‌ ಇರುವ ಪಾತ್ರ ಸಿಕ್ಕಿದೆಯಂತೆ. ಸಂಗೀತ ನಿರ್ದೇಶಕ ರಾಘವ್‌ ಸುಭಾಷ್‌ ಅವರು ಎರಡು ಹಾಡುಗಳಿಗೆ ಸಂಗೀತ ನೀಡಿದ ಬಗ್ಗೆ ಹೇಳಿಕೊಂಡರು. ಅಂದು ಭಗವಾನ್‌, ವಿಜಯ್‌ ಸೂರ್ಯ, ಚಂದುಗೌಡ ಸೇರಿದಂತೆ ಇತರರು ಚಿತ್ರಕ್ಕೆ ಶುಭಕೋರಿದರು.

ಟಾಪ್ ನ್ಯೂಸ್

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

DEVIL; ಹೆಚ್ಚು ದಿನ ವಿಶ್ರಾಂತಿಯಿಲ್ಲ, ಅಕ್ಟೋಬರ್‌ನಲ್ಲಿ ಡೆವಿಲ್‌ ಬರೋದು ಪಕ್ಕಾ: ದರ್ಶನ್‌

Kiran Raj, Yasha Shivakumar starer Bharjari Gandu movie

Kannada Cinema; ರಿಲೀಸ್‌ ಅಖಾಡದಲ್ಲಿ ‘ಭರ್ಜರಿ ಗಂಡು’; ಕಿರಣ್‌ಗೆ ಯಶ ನಾಯಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.