ಪ್ರೇಕ್ಷಕರ ಮುಂದೆ ಸುಂದರಿ

ಜನ್ಮಾಂತರದ ಕಥೆ

Team Udayavani, May 31, 2019, 6:00 AM IST

v-23

ಕನ್ನಡದಲ್ಲಿ ಸಸ್ಪೆನ್ಸ್‌-ಥ್ರಿಲ್ಲರ್‌ ಸಿನಿಮಾಗಳಿಗೆ ಲೆಕ್ಕವಿಲ್ಲ. ಅದರಲ್ಲೂ ಜನ್ಮಾಂತರದ ಕಥೆಗಳು ಇಲ್ಲಿ ಬಂದು ಹೋಗಿವೆ. ಈಗ ಆ ಸಾಲಿಗೆ “ಸುವರ್ಣ ಸುಂದರಿ’ ಚಿತ್ರ ಸೇರ್ಪಡೆಯಾಗುತ್ತಿದೆ. ಹೌದು, ಕಳೆದ ಎರಡು ವರ್ಷಗಳಿಂದಲೂ ಚಿತ್ರೀಕರಣ ನಡೆಸಿ, ಬಿಡುಗಡೆಯ ತಯಾರಿಯಲ್ಲಿದ್ದ ಚಿತ್ರ ಇಂದು ತೆರೆಗೆ ಬರುತ್ತಿದೆ. ಈ ಚಿತ್ರದ ವಿಶೇಷವೆಂದರೆ, ಬಹಳ ಸಮಯದ ನಂತರ ಪಂಚಭಾಷೆ ತಾರೆ ಜಯಪ್ರದಾ ಅವರು ಕನ್ನಡ ಪ್ರೇಕ್ಷಕರ ಎದುರು ಕಾಣಿಸಿಕೊಳ್ಳುತ್ತಿದ್ದಾರೆ. ಹಾಗಾದರೆ, ಸುವರ್ಣ ಸುಂದರಿ ಅವರೇನಾ? ಈ ಪ್ರಶ್ನೆಗೆ ಸಿನಿಮಾ ನೋಡಬೇಕು. ಜಯಪ್ರದಾ ಈ ಚಿತ್ರದ ಹೈಲೈಟ್‌. ಆಗಿದ್ದರೂ, ಅವರೊಂದಿಗೆ ಅನೇಕ ಅಂಶಗಳು ಹೈಲೈಟ್‌ ಆಗಿರಲಿವೆ ಎಂಬುದು ಚಿತ್ರತಂಡದ ಮಾತು.

ಇದು ಮೂರು ಜನ್ಮಗಳ ಸಸ್ಪೆನ್ಸ್‌-ಥ್ರಿಲ್ಲರ್‌ ಕಥೆ ಹೊಂದಿರುವ ಚಿತ್ರ. ಈ ಚಿತ್ರದಲ್ಲಿ ಜಯಪ್ರದಾ ಅವರೊಂದಿಗೆ, ಪೂರ್ಣ, ಸಾಕ್ಷಿ, ಇಂದ್ರ, ರಾಮ್‌, ಮುದ್ದು ಕುಮಾರಿ, ಸಾಯಿಕುಮಾರ್‌, ತಿಲಕ್‌, ಅವಿನಾಶ್‌, ಜೈ ಜಗದೀಶ್‌, ಸತ್ಯ ಪ್ರಕಾಶ್‌ ಸೇರಿದಂತೆ ಅನೇಕ ನಟ,ನಟಿಯರು ಕಾಣಿಸಿಕೊಂಡಿದ್ದಾರೆ. “ಸುವರ್ಣ ಸುಂದರಿ’ಯ ಇನ್ನೊಂದು ವಿಶೇಷವೆಂದರೆ, ಇದು ಕನ್ನಡ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ಏಕಕಾಲಕ್ಕೆ ಮೂಡಿಬರುತ್ತಿದೆ. ಇನ್ನು, “ಎಸ್‌.ಟೀಂ ಪಿಕ್ಚರ್ಸ್‌’ ಬ್ಯಾನರ್‌ನಲ್ಲಿ ಎಂ. ಎಲ್‌ ಲಕ್ಷ್ಮೀ ಚಿತ್ರವನ್ನು ನಿರ್ಮಿಸಿದ್ದಾರೆ. ಎಂ.ಎಸ್‌.ಎನ್‌ ಸೂರ್ಯ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಚಿತ್ರದ ಬಗ್ಗೆ ನಿರ್ದೇಶಕ ಎಂ.ಎಸ್‌.ಎನ್‌ ಸೂರ್ಯ, ಅವರಿಗೆ ಇನ್ನಿಲ್ಲದ ಭರವಸೆ ಇದೆ. “ಈ ಚಿತ್ರದಲ್ಲಿ ಇಎಫ್ಎಕ್ಸ್‌ ಸಾಕಷ್ಟು ಪ್ರಭಾವ ಬೀರಲಿದೆ. ಆ ಕೆಲಸಕ್ಕಾಗಿ ಸುಮಾರು ಒಂದು ವರ್ಷ ಸಮಯ ಹಿಡಿದಿದೆ. ಹಾಗಾಗಿಯೇ ಚಿತ್ರ ತಡವಾಗಿದೆ. ಇನ್ನು, ಎಲ್ಲವನ್ನೂ ಸಮಾಧಾನದಿಂದ, ಚೆನ್ನಾಗಿ ಕೆಲಸ ಮಾಡಿದ್ದರಿಂದಲೇ ಪ್ರತಿಯೊಂದು ದೃಶ್ಯವೂ ಸಹ ಅದ್ಭುತವಾಗಿ ಮೂಡಿಬಂದಿದೆ. ಚಿತ್ರದ ಕಾನ್ಸೆಪ್ಟ್, ನಿರೂಪಣೆ ಎಲ್ಲವೂ ಹೊಸ ಫೀಲ್‌ ಕೊಡುವ ಮೂಲಕ ನೋಡುಗರಿಗೊಂದು ಮನರಂಜನಾತ್ಮಕ ಚಿತ್ರವಾಗಿ ಹೊರಹೊಮ್ಮಲಿದೆ. ಇಲ್ಲಿ ಮನರಂಜನೆ ಜೊತೆಗೆ ಪಕ್ಕಾ ಕಮರ್ಷಿಯಲ್‌ ಅಂಶಗಳೂ ಇಲ್ಲಿವೆ’ ಎಂಬುದು ನಿರ್ದೇಶಕರ ಮಾತು.

ಆರಂಭದಲ್ಲಿ ಬಿಡುಗಡೆಯಾದ “ಸುವರ್ಣ ಸುಂದರಿ’ ಚಿತ್ರದ ಟ್ರೇಲರ್‌ ಮತ್ತು ಆಡಿಯೋಗೆ ಒಳ್ಳೆಯ ಮೆಚ್ಚುಗೆ ಸಿಕ್ಕಿತ್ತು. ಅದೇ ಮೆಚ್ಚುಗೆ ಚಿತ್ರಕ್ಕೂ ಸಿಗಲಿದೆ ಎಂಬುದು ಚಿತ್ರತಂಡದ ನಂಬಿಕೆ ಸಾಯಿ ಕಾರ್ತಿಕ್‌ ಸಂಗೀತವಿದೆ ಯುವ ಮಹಂತಿ ಛಾಯಾಗ್ರಹಣವಿದೆ. ಪ್ರವೀಣ್‌ ಪುಡಿ ಸಂಕಲನವಿದೆ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

Ritanya Vijay; ದುನಿಯಾ ವಿಜಯ್‌ ಮಗಳು ರಿತನ್ಯಾ ಗ್ರ್ಯಾಂಡ್ ಎಂಟ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.